Homeಮುಖಪುಟಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

ಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

- Advertisement -
- Advertisement -

ವೈರಸ್ ಹರಡುವ ಭಯದಿಂದ ಮನೆಗೆ ಹೋಗಲು ಸಾಧ್ಯವಿಲ್ಲದೇ ಅಥಿತಿ ಗೃಹದಲ್ಲಿ ಉಳಿದು ಕೊರೊನಾ ರೋಗಿಗಳಿಗೆ ಆರೈಕೆ ಮಾಡುತ್ತಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಅಥಿತಿ ಗೃಹಗಳ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಕೊರೊನಾ ವೈರಸ್ ರೋಗಿಗಳ ಆರೈಕೆಯನ್ನು ವಹಿಸಿಕೊಂಡಿರುವ ಈ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಕಾರ್ಯಕರ್ತರ ಗುಂಪು ತಮ್ಮ ಲಿಖಿತ ದೂರಿನಲ್ಲಿ ವೈದ್ಯರು ಜಿಲ್ಲೆಯ ಸರ್ಕಾರಿ ಶಾಲೆಯ ಕ್ವಾರ್ಟರ್ಸ್ ಹಂಚಿಕೆ ಮಾಡಿದ್ದಾರೆ, ಅದು ಶುಚಿಯಾಗಿಲ್ಲ ಎಂದು ಹೇಳಿದ್ದಾರೆ. ಶಾಲೆಯು ಕೊರೊನಾ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯ ಸಮೀಪದಲ್ಲಿದೆ.

ಇವರು ಎರಡು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಒಂದನ್ನು ಬುಧವಾರ ಮುಂಜಾನೆ 3 ಗಂಟೆಗೆ ಮತ್ತು ಇನ್ನೊಂದನ್ನು ಅದೇ ದಿನ ಊಟದ ಸಮಯದಲ್ಲಿ ಚಿತ್ರೀಕರಿಸಲಾಗಿದೆ, ಇದರಲ್ಲಿ ಈ ಕ್ವಾರ್ಟರ್ಸ್ ಎಷ್ಟು ಭಯಾನಕವಾಗಿದೆ ಎಂಬುದನ್ನು ತಿಳಿಸಿದೆ.

ಮೊದಲನೇ ವಿಡಿಯೊದಲ್ಲಿ “ಇದು ಮುಂಜಾನೆ 3 ಗಂಟೆ. ವಿದ್ಯುತ್ ಇಲ್ಲ; ಒಂದೇ ಕೋಣೆಗೆ ನಾಲ್ಕು ಮಂಚ‌ಗಳಿವೆ. ಇದು ಪಂಚತಾರಾ ವರ್ಗ ಆದರೆ ಫ್ಯಾನ್ ಕೂಡ ಕೆಲಸ ಮಾಡುತ್ತಿಲ್ಲ. ಸಾಮಾನ್ಯ ಸ್ನಾನಗೃಹಗಳನ್ನು ಇಲ್ಲಿ ತೋರಿಸುತ್ತೇನೆ. ಮೂತ್ರಾಲಯಗಳಿಗೆ ಪೈಪ್‌ಗಳಿಲ್ಲ ಮತ್ತು ಶೌಚಾಲಯಗಳು ಉಸಿರುಗಟ್ಟಿರುತ್ತವೆ” ಎಂದು ಹೇಳುವುದನ್ನು ಕೇಳಬಹುದು. ಎರಡನೆಯ ವೀಡಿಯೊ ಅವರಿಗೆ ಪೂರೈಸಲಾಗುತ್ತಿರುವ ಆಹಾರವನ್ನು ತೋರಿಸುತ್ತದೆ.

“ಈ ಆಹಾರವನ್ನು ಮಧ್ಯಾನ್ಹದ ಊಟಕ್ಕೆ ನೀಡಲಾಗುತ್ತಿದೆ. ಎಲ್ಲವನ್ನೂ ಒಟ್ಟಿಗೆ ಜೋಡಿಸಿ ಪಾಲಿಥೀನ್‌ ಪ್ಲಾಸ್ಟಿಕಿನಲ್ಲಿ ಪ್ಯಾಕ್ ಮಾಡಲಾಗಿದೆ. ಇದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರವಾಗಿದೆ” ಎಂದು ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಮೂರನೆಯ ವೀಡಿಯೊವನ್ನು ಬುಧವಾರ ಬೆಳಿಗ್ಗೆ ಚಿತ್ರೀಕರಿಸಲಾಗಿದ್ದು, ರಕ್ಷಣಾತ್ಮಕ ಸಾಧನಗಳನ್ನು ಧರಿಸಿದ ವೈದ್ಯರು ಆರೋಗ್ಯ ಕಾರ್ಯಕರ್ತರು ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ವಿವರಿಸುತ್ತಾರೆ.

“ಮಲಗುವ ವ್ಯವಸ್ಥೆ ಎಂದರೆ ದೊಡ್ಡ ತರಗತಿ ಕೋಣೆಗಳಿರುವ ಶಾಲೆ ಇದೆ; ಪ್ರತಿ ಕೋಣೆಯಲ್ಲಿ ನಾಲ್ಕು ಹಾಸಿಗೆಗಳಿವೆ. ಇದು ಸಕ್ರಿಯ ಸಂಪರ್ಕತಡೆಯ ನಿಯಮಗಳಿಗೆ ವಿರುದ್ಧವಾಗಿದೆ. ನಾವು ಉಸಿರುಗಟ್ಟುವ ಸ್ನಾನಗೃಹಗಳ ಬಗ್ಗೆ ದೂರು ನೀಡಿದಾಗ ಅವರು ಮೊಬೈಲ್ ಶೌಚಾಲಯವನ್ನು ತಂದಿದ್ದಾರೆ. ಇಲ್ಲಿ ರಾತ್ರಿ ವಿದ್ಯುತ್ ಇರುವುದಿಲ್ಲ. ನಿನ್ನೆ ರಾತ್ರಿ ನಮಗೆ 20 ಲೀಟರ್ ನೀರಿನ ಬಾಟಲಿಯನ್ನು ನೀಡಿ ಹಂಚಿಕೊಳ್ಳಬೇಕೆಂದು ತಿಳಿಸಲಾಗಿದೆ” ಎಂದು ವೈದ್ಯರು ಹೇಳುತ್ತಾರೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ವೀಡಿಯೊಗಳು ಮತ್ತು ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ “ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದರು. “ನಾನು ಈ ಸ್ಥಳವನ್ನು ನಾನೇ ಪರಿಶೀಲಿಸಿದ್ದೇನೆ ಹಾಗೂ ಸೌಲಭ್ಯಗಳನ್ನು ನಾನು ಗುರುತಿಸಲಿಲ್ಲ. ಆಡಳಿತದ ಸಹಾಯಕ್ಕಾಗಿ ನಾವು ಅವರನ್ನು ಹತ್ತಿರದ ಅತಿಥಿಗೃಹಕ್ಕೆ ಸ್ಥಳಾಂತರಿಸಿದ್ದೇವೆ. ಅವರಿಗೆ ದೈನಂದಿನ ಪರಿಸ್ಥಿತಿ ಅಥವಾ ಆಹಾರದ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಾವು ಖಚಿತಪಡಿಸುತ್ತೇನೆ”ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ ಎಸ್.ಕೆ.ಶರ್ಮಾ ಹೇಳಿದ್ದಾರೆ. ಅಲ್ಲದೆ ಅಲ್ಲಿಯೆ ಅಡಿಗೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಆದ್ದರಿಂದ ವೈದ್ಯರು ಬಿಸಿ ಆಹಾರವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಹಲಾವಾರು ಪಕ್ಷಗಳ ನಾಯಕರು ಕಳವಳಗಳ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ “ವೈದ್ಯರ ಸುರಕ್ಷತೆ ಮತ್ತು ಘನತೆ ಅಲ್ಲಗೆಳೆಯುವಂತದ್ದಲ್ಲ” ಎಂದು ಘೋಷಿಸಿದ ನಂತರ ಸರ್ಕಾರ ಕಾರ್ಯನಿರ್ವಾಹಕ ಆದೇಶವನ್ನು ಜಾರಿಗೊಳಿಸಿ, ವೈದ್ಯರ ಮೇಲೆ ದಾಳಿ ಮಾಡುವುದನ್ನು ಜಾಮೀನು ರಹಿತ ಅಪರಾಧವಾಗಿ ಮಾಡಿ, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಹಾಕಲಾಗುವುದು ಎಂದು ಕಾನೂನು ತಿದ್ದುಪಡಿ ಮಾಡಿದೆ.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...