Homeಮುಖಪುಟಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

ಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

- Advertisement -
- Advertisement -

ವೈರಸ್ ಹರಡುವ ಭಯದಿಂದ ಮನೆಗೆ ಹೋಗಲು ಸಾಧ್ಯವಿಲ್ಲದೇ ಅಥಿತಿ ಗೃಹದಲ್ಲಿ ಉಳಿದು ಕೊರೊನಾ ರೋಗಿಗಳಿಗೆ ಆರೈಕೆ ಮಾಡುತ್ತಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಅಥಿತಿ ಗೃಹಗಳ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಕೊರೊನಾ ವೈರಸ್ ರೋಗಿಗಳ ಆರೈಕೆಯನ್ನು ವಹಿಸಿಕೊಂಡಿರುವ ಈ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಕಾರ್ಯಕರ್ತರ ಗುಂಪು ತಮ್ಮ ಲಿಖಿತ ದೂರಿನಲ್ಲಿ ವೈದ್ಯರು ಜಿಲ್ಲೆಯ ಸರ್ಕಾರಿ ಶಾಲೆಯ ಕ್ವಾರ್ಟರ್ಸ್ ಹಂಚಿಕೆ ಮಾಡಿದ್ದಾರೆ, ಅದು ಶುಚಿಯಾಗಿಲ್ಲ ಎಂದು ಹೇಳಿದ್ದಾರೆ. ಶಾಲೆಯು ಕೊರೊನಾ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯ ಸಮೀಪದಲ್ಲಿದೆ.

ಇವರು ಎರಡು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಒಂದನ್ನು ಬುಧವಾರ ಮುಂಜಾನೆ 3 ಗಂಟೆಗೆ ಮತ್ತು ಇನ್ನೊಂದನ್ನು ಅದೇ ದಿನ ಊಟದ ಸಮಯದಲ್ಲಿ ಚಿತ್ರೀಕರಿಸಲಾಗಿದೆ, ಇದರಲ್ಲಿ ಈ ಕ್ವಾರ್ಟರ್ಸ್ ಎಷ್ಟು ಭಯಾನಕವಾಗಿದೆ ಎಂಬುದನ್ನು ತಿಳಿಸಿದೆ.

ಮೊದಲನೇ ವಿಡಿಯೊದಲ್ಲಿ “ಇದು ಮುಂಜಾನೆ 3 ಗಂಟೆ. ವಿದ್ಯುತ್ ಇಲ್ಲ; ಒಂದೇ ಕೋಣೆಗೆ ನಾಲ್ಕು ಮಂಚ‌ಗಳಿವೆ. ಇದು ಪಂಚತಾರಾ ವರ್ಗ ಆದರೆ ಫ್ಯಾನ್ ಕೂಡ ಕೆಲಸ ಮಾಡುತ್ತಿಲ್ಲ. ಸಾಮಾನ್ಯ ಸ್ನಾನಗೃಹಗಳನ್ನು ಇಲ್ಲಿ ತೋರಿಸುತ್ತೇನೆ. ಮೂತ್ರಾಲಯಗಳಿಗೆ ಪೈಪ್‌ಗಳಿಲ್ಲ ಮತ್ತು ಶೌಚಾಲಯಗಳು ಉಸಿರುಗಟ್ಟಿರುತ್ತವೆ” ಎಂದು ಹೇಳುವುದನ್ನು ಕೇಳಬಹುದು. ಎರಡನೆಯ ವೀಡಿಯೊ ಅವರಿಗೆ ಪೂರೈಸಲಾಗುತ್ತಿರುವ ಆಹಾರವನ್ನು ತೋರಿಸುತ್ತದೆ.

“ಈ ಆಹಾರವನ್ನು ಮಧ್ಯಾನ್ಹದ ಊಟಕ್ಕೆ ನೀಡಲಾಗುತ್ತಿದೆ. ಎಲ್ಲವನ್ನೂ ಒಟ್ಟಿಗೆ ಜೋಡಿಸಿ ಪಾಲಿಥೀನ್‌ ಪ್ಲಾಸ್ಟಿಕಿನಲ್ಲಿ ಪ್ಯಾಕ್ ಮಾಡಲಾಗಿದೆ. ಇದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರವಾಗಿದೆ” ಎಂದು ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಮೂರನೆಯ ವೀಡಿಯೊವನ್ನು ಬುಧವಾರ ಬೆಳಿಗ್ಗೆ ಚಿತ್ರೀಕರಿಸಲಾಗಿದ್ದು, ರಕ್ಷಣಾತ್ಮಕ ಸಾಧನಗಳನ್ನು ಧರಿಸಿದ ವೈದ್ಯರು ಆರೋಗ್ಯ ಕಾರ್ಯಕರ್ತರು ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ವಿವರಿಸುತ್ತಾರೆ.

“ಮಲಗುವ ವ್ಯವಸ್ಥೆ ಎಂದರೆ ದೊಡ್ಡ ತರಗತಿ ಕೋಣೆಗಳಿರುವ ಶಾಲೆ ಇದೆ; ಪ್ರತಿ ಕೋಣೆಯಲ್ಲಿ ನಾಲ್ಕು ಹಾಸಿಗೆಗಳಿವೆ. ಇದು ಸಕ್ರಿಯ ಸಂಪರ್ಕತಡೆಯ ನಿಯಮಗಳಿಗೆ ವಿರುದ್ಧವಾಗಿದೆ. ನಾವು ಉಸಿರುಗಟ್ಟುವ ಸ್ನಾನಗೃಹಗಳ ಬಗ್ಗೆ ದೂರು ನೀಡಿದಾಗ ಅವರು ಮೊಬೈಲ್ ಶೌಚಾಲಯವನ್ನು ತಂದಿದ್ದಾರೆ. ಇಲ್ಲಿ ರಾತ್ರಿ ವಿದ್ಯುತ್ ಇರುವುದಿಲ್ಲ. ನಿನ್ನೆ ರಾತ್ರಿ ನಮಗೆ 20 ಲೀಟರ್ ನೀರಿನ ಬಾಟಲಿಯನ್ನು ನೀಡಿ ಹಂಚಿಕೊಳ್ಳಬೇಕೆಂದು ತಿಳಿಸಲಾಗಿದೆ” ಎಂದು ವೈದ್ಯರು ಹೇಳುತ್ತಾರೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ವೀಡಿಯೊಗಳು ಮತ್ತು ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ “ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದರು. “ನಾನು ಈ ಸ್ಥಳವನ್ನು ನಾನೇ ಪರಿಶೀಲಿಸಿದ್ದೇನೆ ಹಾಗೂ ಸೌಲಭ್ಯಗಳನ್ನು ನಾನು ಗುರುತಿಸಲಿಲ್ಲ. ಆಡಳಿತದ ಸಹಾಯಕ್ಕಾಗಿ ನಾವು ಅವರನ್ನು ಹತ್ತಿರದ ಅತಿಥಿಗೃಹಕ್ಕೆ ಸ್ಥಳಾಂತರಿಸಿದ್ದೇವೆ. ಅವರಿಗೆ ದೈನಂದಿನ ಪರಿಸ್ಥಿತಿ ಅಥವಾ ಆಹಾರದ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಾವು ಖಚಿತಪಡಿಸುತ್ತೇನೆ”ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ ಎಸ್.ಕೆ.ಶರ್ಮಾ ಹೇಳಿದ್ದಾರೆ. ಅಲ್ಲದೆ ಅಲ್ಲಿಯೆ ಅಡಿಗೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಆದ್ದರಿಂದ ವೈದ್ಯರು ಬಿಸಿ ಆಹಾರವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಹಲಾವಾರು ಪಕ್ಷಗಳ ನಾಯಕರು ಕಳವಳಗಳ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ “ವೈದ್ಯರ ಸುರಕ್ಷತೆ ಮತ್ತು ಘನತೆ ಅಲ್ಲಗೆಳೆಯುವಂತದ್ದಲ್ಲ” ಎಂದು ಘೋಷಿಸಿದ ನಂತರ ಸರ್ಕಾರ ಕಾರ್ಯನಿರ್ವಾಹಕ ಆದೇಶವನ್ನು ಜಾರಿಗೊಳಿಸಿ, ವೈದ್ಯರ ಮೇಲೆ ದಾಳಿ ಮಾಡುವುದನ್ನು ಜಾಮೀನು ರಹಿತ ಅಪರಾಧವಾಗಿ ಮಾಡಿ, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಹಾಕಲಾಗುವುದು ಎಂದು ಕಾನೂನು ತಿದ್ದುಪಡಿ ಮಾಡಿದೆ.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...