Homeಮುಖಪುಟಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

ಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

- Advertisement -
- Advertisement -

ವೈರಸ್ ಹರಡುವ ಭಯದಿಂದ ಮನೆಗೆ ಹೋಗಲು ಸಾಧ್ಯವಿಲ್ಲದೇ ಅಥಿತಿ ಗೃಹದಲ್ಲಿ ಉಳಿದು ಕೊರೊನಾ ರೋಗಿಗಳಿಗೆ ಆರೈಕೆ ಮಾಡುತ್ತಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಅಥಿತಿ ಗೃಹಗಳ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಕೊರೊನಾ ವೈರಸ್ ರೋಗಿಗಳ ಆರೈಕೆಯನ್ನು ವಹಿಸಿಕೊಂಡಿರುವ ಈ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಕಾರ್ಯಕರ್ತರ ಗುಂಪು ತಮ್ಮ ಲಿಖಿತ ದೂರಿನಲ್ಲಿ ವೈದ್ಯರು ಜಿಲ್ಲೆಯ ಸರ್ಕಾರಿ ಶಾಲೆಯ ಕ್ವಾರ್ಟರ್ಸ್ ಹಂಚಿಕೆ ಮಾಡಿದ್ದಾರೆ, ಅದು ಶುಚಿಯಾಗಿಲ್ಲ ಎಂದು ಹೇಳಿದ್ದಾರೆ. ಶಾಲೆಯು ಕೊರೊನಾ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯ ಸಮೀಪದಲ್ಲಿದೆ.

ಇವರು ಎರಡು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಒಂದನ್ನು ಬುಧವಾರ ಮುಂಜಾನೆ 3 ಗಂಟೆಗೆ ಮತ್ತು ಇನ್ನೊಂದನ್ನು ಅದೇ ದಿನ ಊಟದ ಸಮಯದಲ್ಲಿ ಚಿತ್ರೀಕರಿಸಲಾಗಿದೆ, ಇದರಲ್ಲಿ ಈ ಕ್ವಾರ್ಟರ್ಸ್ ಎಷ್ಟು ಭಯಾನಕವಾಗಿದೆ ಎಂಬುದನ್ನು ತಿಳಿಸಿದೆ.

ಮೊದಲನೇ ವಿಡಿಯೊದಲ್ಲಿ “ಇದು ಮುಂಜಾನೆ 3 ಗಂಟೆ. ವಿದ್ಯುತ್ ಇಲ್ಲ; ಒಂದೇ ಕೋಣೆಗೆ ನಾಲ್ಕು ಮಂಚ‌ಗಳಿವೆ. ಇದು ಪಂಚತಾರಾ ವರ್ಗ ಆದರೆ ಫ್ಯಾನ್ ಕೂಡ ಕೆಲಸ ಮಾಡುತ್ತಿಲ್ಲ. ಸಾಮಾನ್ಯ ಸ್ನಾನಗೃಹಗಳನ್ನು ಇಲ್ಲಿ ತೋರಿಸುತ್ತೇನೆ. ಮೂತ್ರಾಲಯಗಳಿಗೆ ಪೈಪ್‌ಗಳಿಲ್ಲ ಮತ್ತು ಶೌಚಾಲಯಗಳು ಉಸಿರುಗಟ್ಟಿರುತ್ತವೆ” ಎಂದು ಹೇಳುವುದನ್ನು ಕೇಳಬಹುದು. ಎರಡನೆಯ ವೀಡಿಯೊ ಅವರಿಗೆ ಪೂರೈಸಲಾಗುತ್ತಿರುವ ಆಹಾರವನ್ನು ತೋರಿಸುತ್ತದೆ.

“ಈ ಆಹಾರವನ್ನು ಮಧ್ಯಾನ್ಹದ ಊಟಕ್ಕೆ ನೀಡಲಾಗುತ್ತಿದೆ. ಎಲ್ಲವನ್ನೂ ಒಟ್ಟಿಗೆ ಜೋಡಿಸಿ ಪಾಲಿಥೀನ್‌ ಪ್ಲಾಸ್ಟಿಕಿನಲ್ಲಿ ಪ್ಯಾಕ್ ಮಾಡಲಾಗಿದೆ. ಇದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರವಾಗಿದೆ” ಎಂದು ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಮೂರನೆಯ ವೀಡಿಯೊವನ್ನು ಬುಧವಾರ ಬೆಳಿಗ್ಗೆ ಚಿತ್ರೀಕರಿಸಲಾಗಿದ್ದು, ರಕ್ಷಣಾತ್ಮಕ ಸಾಧನಗಳನ್ನು ಧರಿಸಿದ ವೈದ್ಯರು ಆರೋಗ್ಯ ಕಾರ್ಯಕರ್ತರು ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ವಿವರಿಸುತ್ತಾರೆ.

“ಮಲಗುವ ವ್ಯವಸ್ಥೆ ಎಂದರೆ ದೊಡ್ಡ ತರಗತಿ ಕೋಣೆಗಳಿರುವ ಶಾಲೆ ಇದೆ; ಪ್ರತಿ ಕೋಣೆಯಲ್ಲಿ ನಾಲ್ಕು ಹಾಸಿಗೆಗಳಿವೆ. ಇದು ಸಕ್ರಿಯ ಸಂಪರ್ಕತಡೆಯ ನಿಯಮಗಳಿಗೆ ವಿರುದ್ಧವಾಗಿದೆ. ನಾವು ಉಸಿರುಗಟ್ಟುವ ಸ್ನಾನಗೃಹಗಳ ಬಗ್ಗೆ ದೂರು ನೀಡಿದಾಗ ಅವರು ಮೊಬೈಲ್ ಶೌಚಾಲಯವನ್ನು ತಂದಿದ್ದಾರೆ. ಇಲ್ಲಿ ರಾತ್ರಿ ವಿದ್ಯುತ್ ಇರುವುದಿಲ್ಲ. ನಿನ್ನೆ ರಾತ್ರಿ ನಮಗೆ 20 ಲೀಟರ್ ನೀರಿನ ಬಾಟಲಿಯನ್ನು ನೀಡಿ ಹಂಚಿಕೊಳ್ಳಬೇಕೆಂದು ತಿಳಿಸಲಾಗಿದೆ” ಎಂದು ವೈದ್ಯರು ಹೇಳುತ್ತಾರೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ವೀಡಿಯೊಗಳು ಮತ್ತು ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ “ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದರು. “ನಾನು ಈ ಸ್ಥಳವನ್ನು ನಾನೇ ಪರಿಶೀಲಿಸಿದ್ದೇನೆ ಹಾಗೂ ಸೌಲಭ್ಯಗಳನ್ನು ನಾನು ಗುರುತಿಸಲಿಲ್ಲ. ಆಡಳಿತದ ಸಹಾಯಕ್ಕಾಗಿ ನಾವು ಅವರನ್ನು ಹತ್ತಿರದ ಅತಿಥಿಗೃಹಕ್ಕೆ ಸ್ಥಳಾಂತರಿಸಿದ್ದೇವೆ. ಅವರಿಗೆ ದೈನಂದಿನ ಪರಿಸ್ಥಿತಿ ಅಥವಾ ಆಹಾರದ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಾವು ಖಚಿತಪಡಿಸುತ್ತೇನೆ”ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ ಎಸ್.ಕೆ.ಶರ್ಮಾ ಹೇಳಿದ್ದಾರೆ. ಅಲ್ಲದೆ ಅಲ್ಲಿಯೆ ಅಡಿಗೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಆದ್ದರಿಂದ ವೈದ್ಯರು ಬಿಸಿ ಆಹಾರವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಹಲಾವಾರು ಪಕ್ಷಗಳ ನಾಯಕರು ಕಳವಳಗಳ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ “ವೈದ್ಯರ ಸುರಕ್ಷತೆ ಮತ್ತು ಘನತೆ ಅಲ್ಲಗೆಳೆಯುವಂತದ್ದಲ್ಲ” ಎಂದು ಘೋಷಿಸಿದ ನಂತರ ಸರ್ಕಾರ ಕಾರ್ಯನಿರ್ವಾಹಕ ಆದೇಶವನ್ನು ಜಾರಿಗೊಳಿಸಿ, ವೈದ್ಯರ ಮೇಲೆ ದಾಳಿ ಮಾಡುವುದನ್ನು ಜಾಮೀನು ರಹಿತ ಅಪರಾಧವಾಗಿ ಮಾಡಿ, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಹಾಕಲಾಗುವುದು ಎಂದು ಕಾನೂನು ತಿದ್ದುಪಡಿ ಮಾಡಿದೆ.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ?


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...