Homeಮುಖಪುಟಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

ಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

- Advertisement -
- Advertisement -

ವೈರಸ್ ಹರಡುವ ಭಯದಿಂದ ಮನೆಗೆ ಹೋಗಲು ಸಾಧ್ಯವಿಲ್ಲದೇ ಅಥಿತಿ ಗೃಹದಲ್ಲಿ ಉಳಿದು ಕೊರೊನಾ ರೋಗಿಗಳಿಗೆ ಆರೈಕೆ ಮಾಡುತ್ತಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಅಥಿತಿ ಗೃಹಗಳ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಕೊರೊನಾ ವೈರಸ್ ರೋಗಿಗಳ ಆರೈಕೆಯನ್ನು ವಹಿಸಿಕೊಂಡಿರುವ ಈ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಕಾರ್ಯಕರ್ತರ ಗುಂಪು ತಮ್ಮ ಲಿಖಿತ ದೂರಿನಲ್ಲಿ ವೈದ್ಯರು ಜಿಲ್ಲೆಯ ಸರ್ಕಾರಿ ಶಾಲೆಯ ಕ್ವಾರ್ಟರ್ಸ್ ಹಂಚಿಕೆ ಮಾಡಿದ್ದಾರೆ, ಅದು ಶುಚಿಯಾಗಿಲ್ಲ ಎಂದು ಹೇಳಿದ್ದಾರೆ. ಶಾಲೆಯು ಕೊರೊನಾ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯ ಸಮೀಪದಲ್ಲಿದೆ.

ಇವರು ಎರಡು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಒಂದನ್ನು ಬುಧವಾರ ಮುಂಜಾನೆ 3 ಗಂಟೆಗೆ ಮತ್ತು ಇನ್ನೊಂದನ್ನು ಅದೇ ದಿನ ಊಟದ ಸಮಯದಲ್ಲಿ ಚಿತ್ರೀಕರಿಸಲಾಗಿದೆ, ಇದರಲ್ಲಿ ಈ ಕ್ವಾರ್ಟರ್ಸ್ ಎಷ್ಟು ಭಯಾನಕವಾಗಿದೆ ಎಂಬುದನ್ನು ತಿಳಿಸಿದೆ.

ಮೊದಲನೇ ವಿಡಿಯೊದಲ್ಲಿ “ಇದು ಮುಂಜಾನೆ 3 ಗಂಟೆ. ವಿದ್ಯುತ್ ಇಲ್ಲ; ಒಂದೇ ಕೋಣೆಗೆ ನಾಲ್ಕು ಮಂಚ‌ಗಳಿವೆ. ಇದು ಪಂಚತಾರಾ ವರ್ಗ ಆದರೆ ಫ್ಯಾನ್ ಕೂಡ ಕೆಲಸ ಮಾಡುತ್ತಿಲ್ಲ. ಸಾಮಾನ್ಯ ಸ್ನಾನಗೃಹಗಳನ್ನು ಇಲ್ಲಿ ತೋರಿಸುತ್ತೇನೆ. ಮೂತ್ರಾಲಯಗಳಿಗೆ ಪೈಪ್‌ಗಳಿಲ್ಲ ಮತ್ತು ಶೌಚಾಲಯಗಳು ಉಸಿರುಗಟ್ಟಿರುತ್ತವೆ” ಎಂದು ಹೇಳುವುದನ್ನು ಕೇಳಬಹುದು. ಎರಡನೆಯ ವೀಡಿಯೊ ಅವರಿಗೆ ಪೂರೈಸಲಾಗುತ್ತಿರುವ ಆಹಾರವನ್ನು ತೋರಿಸುತ್ತದೆ.

“ಈ ಆಹಾರವನ್ನು ಮಧ್ಯಾನ್ಹದ ಊಟಕ್ಕೆ ನೀಡಲಾಗುತ್ತಿದೆ. ಎಲ್ಲವನ್ನೂ ಒಟ್ಟಿಗೆ ಜೋಡಿಸಿ ಪಾಲಿಥೀನ್‌ ಪ್ಲಾಸ್ಟಿಕಿನಲ್ಲಿ ಪ್ಯಾಕ್ ಮಾಡಲಾಗಿದೆ. ಇದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರವಾಗಿದೆ” ಎಂದು ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಮೂರನೆಯ ವೀಡಿಯೊವನ್ನು ಬುಧವಾರ ಬೆಳಿಗ್ಗೆ ಚಿತ್ರೀಕರಿಸಲಾಗಿದ್ದು, ರಕ್ಷಣಾತ್ಮಕ ಸಾಧನಗಳನ್ನು ಧರಿಸಿದ ವೈದ್ಯರು ಆರೋಗ್ಯ ಕಾರ್ಯಕರ್ತರು ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ವಿವರಿಸುತ್ತಾರೆ.

“ಮಲಗುವ ವ್ಯವಸ್ಥೆ ಎಂದರೆ ದೊಡ್ಡ ತರಗತಿ ಕೋಣೆಗಳಿರುವ ಶಾಲೆ ಇದೆ; ಪ್ರತಿ ಕೋಣೆಯಲ್ಲಿ ನಾಲ್ಕು ಹಾಸಿಗೆಗಳಿವೆ. ಇದು ಸಕ್ರಿಯ ಸಂಪರ್ಕತಡೆಯ ನಿಯಮಗಳಿಗೆ ವಿರುದ್ಧವಾಗಿದೆ. ನಾವು ಉಸಿರುಗಟ್ಟುವ ಸ್ನಾನಗೃಹಗಳ ಬಗ್ಗೆ ದೂರು ನೀಡಿದಾಗ ಅವರು ಮೊಬೈಲ್ ಶೌಚಾಲಯವನ್ನು ತಂದಿದ್ದಾರೆ. ಇಲ್ಲಿ ರಾತ್ರಿ ವಿದ್ಯುತ್ ಇರುವುದಿಲ್ಲ. ನಿನ್ನೆ ರಾತ್ರಿ ನಮಗೆ 20 ಲೀಟರ್ ನೀರಿನ ಬಾಟಲಿಯನ್ನು ನೀಡಿ ಹಂಚಿಕೊಳ್ಳಬೇಕೆಂದು ತಿಳಿಸಲಾಗಿದೆ” ಎಂದು ವೈದ್ಯರು ಹೇಳುತ್ತಾರೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ವೀಡಿಯೊಗಳು ಮತ್ತು ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ “ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದರು. “ನಾನು ಈ ಸ್ಥಳವನ್ನು ನಾನೇ ಪರಿಶೀಲಿಸಿದ್ದೇನೆ ಹಾಗೂ ಸೌಲಭ್ಯಗಳನ್ನು ನಾನು ಗುರುತಿಸಲಿಲ್ಲ. ಆಡಳಿತದ ಸಹಾಯಕ್ಕಾಗಿ ನಾವು ಅವರನ್ನು ಹತ್ತಿರದ ಅತಿಥಿಗೃಹಕ್ಕೆ ಸ್ಥಳಾಂತರಿಸಿದ್ದೇವೆ. ಅವರಿಗೆ ದೈನಂದಿನ ಪರಿಸ್ಥಿತಿ ಅಥವಾ ಆಹಾರದ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಾವು ಖಚಿತಪಡಿಸುತ್ತೇನೆ”ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ ಎಸ್.ಕೆ.ಶರ್ಮಾ ಹೇಳಿದ್ದಾರೆ. ಅಲ್ಲದೆ ಅಲ್ಲಿಯೆ ಅಡಿಗೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಆದ್ದರಿಂದ ವೈದ್ಯರು ಬಿಸಿ ಆಹಾರವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಹಲಾವಾರು ಪಕ್ಷಗಳ ನಾಯಕರು ಕಳವಳಗಳ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ “ವೈದ್ಯರ ಸುರಕ್ಷತೆ ಮತ್ತು ಘನತೆ ಅಲ್ಲಗೆಳೆಯುವಂತದ್ದಲ್ಲ” ಎಂದು ಘೋಷಿಸಿದ ನಂತರ ಸರ್ಕಾರ ಕಾರ್ಯನಿರ್ವಾಹಕ ಆದೇಶವನ್ನು ಜಾರಿಗೊಳಿಸಿ, ವೈದ್ಯರ ಮೇಲೆ ದಾಳಿ ಮಾಡುವುದನ್ನು ಜಾಮೀನು ರಹಿತ ಅಪರಾಧವಾಗಿ ಮಾಡಿ, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಹಾಕಲಾಗುವುದು ಎಂದು ಕಾನೂನು ತಿದ್ದುಪಡಿ ಮಾಡಿದೆ.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...