Homeಮುಖಪುಟಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

ಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

- Advertisement -
- Advertisement -

ವೈರಸ್ ಹರಡುವ ಭಯದಿಂದ ಮನೆಗೆ ಹೋಗಲು ಸಾಧ್ಯವಿಲ್ಲದೇ ಅಥಿತಿ ಗೃಹದಲ್ಲಿ ಉಳಿದು ಕೊರೊನಾ ರೋಗಿಗಳಿಗೆ ಆರೈಕೆ ಮಾಡುತ್ತಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಅಥಿತಿ ಗೃಹಗಳ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಕೊರೊನಾ ವೈರಸ್ ರೋಗಿಗಳ ಆರೈಕೆಯನ್ನು ವಹಿಸಿಕೊಂಡಿರುವ ಈ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಕಾರ್ಯಕರ್ತರ ಗುಂಪು ತಮ್ಮ ಲಿಖಿತ ದೂರಿನಲ್ಲಿ ವೈದ್ಯರು ಜಿಲ್ಲೆಯ ಸರ್ಕಾರಿ ಶಾಲೆಯ ಕ್ವಾರ್ಟರ್ಸ್ ಹಂಚಿಕೆ ಮಾಡಿದ್ದಾರೆ, ಅದು ಶುಚಿಯಾಗಿಲ್ಲ ಎಂದು ಹೇಳಿದ್ದಾರೆ. ಶಾಲೆಯು ಕೊರೊನಾ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯ ಸಮೀಪದಲ್ಲಿದೆ.

ಇವರು ಎರಡು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಒಂದನ್ನು ಬುಧವಾರ ಮುಂಜಾನೆ 3 ಗಂಟೆಗೆ ಮತ್ತು ಇನ್ನೊಂದನ್ನು ಅದೇ ದಿನ ಊಟದ ಸಮಯದಲ್ಲಿ ಚಿತ್ರೀಕರಿಸಲಾಗಿದೆ, ಇದರಲ್ಲಿ ಈ ಕ್ವಾರ್ಟರ್ಸ್ ಎಷ್ಟು ಭಯಾನಕವಾಗಿದೆ ಎಂಬುದನ್ನು ತಿಳಿಸಿದೆ.

ಮೊದಲನೇ ವಿಡಿಯೊದಲ್ಲಿ “ಇದು ಮುಂಜಾನೆ 3 ಗಂಟೆ. ವಿದ್ಯುತ್ ಇಲ್ಲ; ಒಂದೇ ಕೋಣೆಗೆ ನಾಲ್ಕು ಮಂಚ‌ಗಳಿವೆ. ಇದು ಪಂಚತಾರಾ ವರ್ಗ ಆದರೆ ಫ್ಯಾನ್ ಕೂಡ ಕೆಲಸ ಮಾಡುತ್ತಿಲ್ಲ. ಸಾಮಾನ್ಯ ಸ್ನಾನಗೃಹಗಳನ್ನು ಇಲ್ಲಿ ತೋರಿಸುತ್ತೇನೆ. ಮೂತ್ರಾಲಯಗಳಿಗೆ ಪೈಪ್‌ಗಳಿಲ್ಲ ಮತ್ತು ಶೌಚಾಲಯಗಳು ಉಸಿರುಗಟ್ಟಿರುತ್ತವೆ” ಎಂದು ಹೇಳುವುದನ್ನು ಕೇಳಬಹುದು. ಎರಡನೆಯ ವೀಡಿಯೊ ಅವರಿಗೆ ಪೂರೈಸಲಾಗುತ್ತಿರುವ ಆಹಾರವನ್ನು ತೋರಿಸುತ್ತದೆ.

“ಈ ಆಹಾರವನ್ನು ಮಧ್ಯಾನ್ಹದ ಊಟಕ್ಕೆ ನೀಡಲಾಗುತ್ತಿದೆ. ಎಲ್ಲವನ್ನೂ ಒಟ್ಟಿಗೆ ಜೋಡಿಸಿ ಪಾಲಿಥೀನ್‌ ಪ್ಲಾಸ್ಟಿಕಿನಲ್ಲಿ ಪ್ಯಾಕ್ ಮಾಡಲಾಗಿದೆ. ಇದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರವಾಗಿದೆ” ಎಂದು ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಮೂರನೆಯ ವೀಡಿಯೊವನ್ನು ಬುಧವಾರ ಬೆಳಿಗ್ಗೆ ಚಿತ್ರೀಕರಿಸಲಾಗಿದ್ದು, ರಕ್ಷಣಾತ್ಮಕ ಸಾಧನಗಳನ್ನು ಧರಿಸಿದ ವೈದ್ಯರು ಆರೋಗ್ಯ ಕಾರ್ಯಕರ್ತರು ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ವಿವರಿಸುತ್ತಾರೆ.

“ಮಲಗುವ ವ್ಯವಸ್ಥೆ ಎಂದರೆ ದೊಡ್ಡ ತರಗತಿ ಕೋಣೆಗಳಿರುವ ಶಾಲೆ ಇದೆ; ಪ್ರತಿ ಕೋಣೆಯಲ್ಲಿ ನಾಲ್ಕು ಹಾಸಿಗೆಗಳಿವೆ. ಇದು ಸಕ್ರಿಯ ಸಂಪರ್ಕತಡೆಯ ನಿಯಮಗಳಿಗೆ ವಿರುದ್ಧವಾಗಿದೆ. ನಾವು ಉಸಿರುಗಟ್ಟುವ ಸ್ನಾನಗೃಹಗಳ ಬಗ್ಗೆ ದೂರು ನೀಡಿದಾಗ ಅವರು ಮೊಬೈಲ್ ಶೌಚಾಲಯವನ್ನು ತಂದಿದ್ದಾರೆ. ಇಲ್ಲಿ ರಾತ್ರಿ ವಿದ್ಯುತ್ ಇರುವುದಿಲ್ಲ. ನಿನ್ನೆ ರಾತ್ರಿ ನಮಗೆ 20 ಲೀಟರ್ ನೀರಿನ ಬಾಟಲಿಯನ್ನು ನೀಡಿ ಹಂಚಿಕೊಳ್ಳಬೇಕೆಂದು ತಿಳಿಸಲಾಗಿದೆ” ಎಂದು ವೈದ್ಯರು ಹೇಳುತ್ತಾರೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ವೀಡಿಯೊಗಳು ಮತ್ತು ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ “ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದರು. “ನಾನು ಈ ಸ್ಥಳವನ್ನು ನಾನೇ ಪರಿಶೀಲಿಸಿದ್ದೇನೆ ಹಾಗೂ ಸೌಲಭ್ಯಗಳನ್ನು ನಾನು ಗುರುತಿಸಲಿಲ್ಲ. ಆಡಳಿತದ ಸಹಾಯಕ್ಕಾಗಿ ನಾವು ಅವರನ್ನು ಹತ್ತಿರದ ಅತಿಥಿಗೃಹಕ್ಕೆ ಸ್ಥಳಾಂತರಿಸಿದ್ದೇವೆ. ಅವರಿಗೆ ದೈನಂದಿನ ಪರಿಸ್ಥಿತಿ ಅಥವಾ ಆಹಾರದ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಾವು ಖಚಿತಪಡಿಸುತ್ತೇನೆ”ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ ಎಸ್.ಕೆ.ಶರ್ಮಾ ಹೇಳಿದ್ದಾರೆ. ಅಲ್ಲದೆ ಅಲ್ಲಿಯೆ ಅಡಿಗೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಆದ್ದರಿಂದ ವೈದ್ಯರು ಬಿಸಿ ಆಹಾರವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಹಲಾವಾರು ಪಕ್ಷಗಳ ನಾಯಕರು ಕಳವಳಗಳ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ “ವೈದ್ಯರ ಸುರಕ್ಷತೆ ಮತ್ತು ಘನತೆ ಅಲ್ಲಗೆಳೆಯುವಂತದ್ದಲ್ಲ” ಎಂದು ಘೋಷಿಸಿದ ನಂತರ ಸರ್ಕಾರ ಕಾರ್ಯನಿರ್ವಾಹಕ ಆದೇಶವನ್ನು ಜಾರಿಗೊಳಿಸಿ, ವೈದ್ಯರ ಮೇಲೆ ದಾಳಿ ಮಾಡುವುದನ್ನು ಜಾಮೀನು ರಹಿತ ಅಪರಾಧವಾಗಿ ಮಾಡಿ, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಹಾಕಲಾಗುವುದು ಎಂದು ಕಾನೂನು ತಿದ್ದುಪಡಿ ಮಾಡಿದೆ.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...