Homeಮುಖಪುಟಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

ಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

- Advertisement -
- Advertisement -

ವೈರಸ್ ಹರಡುವ ಭಯದಿಂದ ಮನೆಗೆ ಹೋಗಲು ಸಾಧ್ಯವಿಲ್ಲದೇ ಅಥಿತಿ ಗೃಹದಲ್ಲಿ ಉಳಿದು ಕೊರೊನಾ ರೋಗಿಗಳಿಗೆ ಆರೈಕೆ ಮಾಡುತ್ತಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಅಥಿತಿ ಗೃಹಗಳ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಕೊರೊನಾ ವೈರಸ್ ರೋಗಿಗಳ ಆರೈಕೆಯನ್ನು ವಹಿಸಿಕೊಂಡಿರುವ ಈ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಕಾರ್ಯಕರ್ತರ ಗುಂಪು ತಮ್ಮ ಲಿಖಿತ ದೂರಿನಲ್ಲಿ ವೈದ್ಯರು ಜಿಲ್ಲೆಯ ಸರ್ಕಾರಿ ಶಾಲೆಯ ಕ್ವಾರ್ಟರ್ಸ್ ಹಂಚಿಕೆ ಮಾಡಿದ್ದಾರೆ, ಅದು ಶುಚಿಯಾಗಿಲ್ಲ ಎಂದು ಹೇಳಿದ್ದಾರೆ. ಶಾಲೆಯು ಕೊರೊನಾ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯ ಸಮೀಪದಲ್ಲಿದೆ.

ಇವರು ಎರಡು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಒಂದನ್ನು ಬುಧವಾರ ಮುಂಜಾನೆ 3 ಗಂಟೆಗೆ ಮತ್ತು ಇನ್ನೊಂದನ್ನು ಅದೇ ದಿನ ಊಟದ ಸಮಯದಲ್ಲಿ ಚಿತ್ರೀಕರಿಸಲಾಗಿದೆ, ಇದರಲ್ಲಿ ಈ ಕ್ವಾರ್ಟರ್ಸ್ ಎಷ್ಟು ಭಯಾನಕವಾಗಿದೆ ಎಂಬುದನ್ನು ತಿಳಿಸಿದೆ.

ಮೊದಲನೇ ವಿಡಿಯೊದಲ್ಲಿ “ಇದು ಮುಂಜಾನೆ 3 ಗಂಟೆ. ವಿದ್ಯುತ್ ಇಲ್ಲ; ಒಂದೇ ಕೋಣೆಗೆ ನಾಲ್ಕು ಮಂಚ‌ಗಳಿವೆ. ಇದು ಪಂಚತಾರಾ ವರ್ಗ ಆದರೆ ಫ್ಯಾನ್ ಕೂಡ ಕೆಲಸ ಮಾಡುತ್ತಿಲ್ಲ. ಸಾಮಾನ್ಯ ಸ್ನಾನಗೃಹಗಳನ್ನು ಇಲ್ಲಿ ತೋರಿಸುತ್ತೇನೆ. ಮೂತ್ರಾಲಯಗಳಿಗೆ ಪೈಪ್‌ಗಳಿಲ್ಲ ಮತ್ತು ಶೌಚಾಲಯಗಳು ಉಸಿರುಗಟ್ಟಿರುತ್ತವೆ” ಎಂದು ಹೇಳುವುದನ್ನು ಕೇಳಬಹುದು. ಎರಡನೆಯ ವೀಡಿಯೊ ಅವರಿಗೆ ಪೂರೈಸಲಾಗುತ್ತಿರುವ ಆಹಾರವನ್ನು ತೋರಿಸುತ್ತದೆ.

“ಈ ಆಹಾರವನ್ನು ಮಧ್ಯಾನ್ಹದ ಊಟಕ್ಕೆ ನೀಡಲಾಗುತ್ತಿದೆ. ಎಲ್ಲವನ್ನೂ ಒಟ್ಟಿಗೆ ಜೋಡಿಸಿ ಪಾಲಿಥೀನ್‌ ಪ್ಲಾಸ್ಟಿಕಿನಲ್ಲಿ ಪ್ಯಾಕ್ ಮಾಡಲಾಗಿದೆ. ಇದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರವಾಗಿದೆ” ಎಂದು ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಮೂರನೆಯ ವೀಡಿಯೊವನ್ನು ಬುಧವಾರ ಬೆಳಿಗ್ಗೆ ಚಿತ್ರೀಕರಿಸಲಾಗಿದ್ದು, ರಕ್ಷಣಾತ್ಮಕ ಸಾಧನಗಳನ್ನು ಧರಿಸಿದ ವೈದ್ಯರು ಆರೋಗ್ಯ ಕಾರ್ಯಕರ್ತರು ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ವಿವರಿಸುತ್ತಾರೆ.

“ಮಲಗುವ ವ್ಯವಸ್ಥೆ ಎಂದರೆ ದೊಡ್ಡ ತರಗತಿ ಕೋಣೆಗಳಿರುವ ಶಾಲೆ ಇದೆ; ಪ್ರತಿ ಕೋಣೆಯಲ್ಲಿ ನಾಲ್ಕು ಹಾಸಿಗೆಗಳಿವೆ. ಇದು ಸಕ್ರಿಯ ಸಂಪರ್ಕತಡೆಯ ನಿಯಮಗಳಿಗೆ ವಿರುದ್ಧವಾಗಿದೆ. ನಾವು ಉಸಿರುಗಟ್ಟುವ ಸ್ನಾನಗೃಹಗಳ ಬಗ್ಗೆ ದೂರು ನೀಡಿದಾಗ ಅವರು ಮೊಬೈಲ್ ಶೌಚಾಲಯವನ್ನು ತಂದಿದ್ದಾರೆ. ಇಲ್ಲಿ ರಾತ್ರಿ ವಿದ್ಯುತ್ ಇರುವುದಿಲ್ಲ. ನಿನ್ನೆ ರಾತ್ರಿ ನಮಗೆ 20 ಲೀಟರ್ ನೀರಿನ ಬಾಟಲಿಯನ್ನು ನೀಡಿ ಹಂಚಿಕೊಳ್ಳಬೇಕೆಂದು ತಿಳಿಸಲಾಗಿದೆ” ಎಂದು ವೈದ್ಯರು ಹೇಳುತ್ತಾರೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ವೀಡಿಯೊಗಳು ಮತ್ತು ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ “ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದರು. “ನಾನು ಈ ಸ್ಥಳವನ್ನು ನಾನೇ ಪರಿಶೀಲಿಸಿದ್ದೇನೆ ಹಾಗೂ ಸೌಲಭ್ಯಗಳನ್ನು ನಾನು ಗುರುತಿಸಲಿಲ್ಲ. ಆಡಳಿತದ ಸಹಾಯಕ್ಕಾಗಿ ನಾವು ಅವರನ್ನು ಹತ್ತಿರದ ಅತಿಥಿಗೃಹಕ್ಕೆ ಸ್ಥಳಾಂತರಿಸಿದ್ದೇವೆ. ಅವರಿಗೆ ದೈನಂದಿನ ಪರಿಸ್ಥಿತಿ ಅಥವಾ ಆಹಾರದ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಾವು ಖಚಿತಪಡಿಸುತ್ತೇನೆ”ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ ಎಸ್.ಕೆ.ಶರ್ಮಾ ಹೇಳಿದ್ದಾರೆ. ಅಲ್ಲದೆ ಅಲ್ಲಿಯೆ ಅಡಿಗೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಆದ್ದರಿಂದ ವೈದ್ಯರು ಬಿಸಿ ಆಹಾರವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಹಲಾವಾರು ಪಕ್ಷಗಳ ನಾಯಕರು ಕಳವಳಗಳ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ “ವೈದ್ಯರ ಸುರಕ್ಷತೆ ಮತ್ತು ಘನತೆ ಅಲ್ಲಗೆಳೆಯುವಂತದ್ದಲ್ಲ” ಎಂದು ಘೋಷಿಸಿದ ನಂತರ ಸರ್ಕಾರ ಕಾರ್ಯನಿರ್ವಾಹಕ ಆದೇಶವನ್ನು ಜಾರಿಗೊಳಿಸಿ, ವೈದ್ಯರ ಮೇಲೆ ದಾಳಿ ಮಾಡುವುದನ್ನು ಜಾಮೀನು ರಹಿತ ಅಪರಾಧವಾಗಿ ಮಾಡಿ, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಹಾಕಲಾಗುವುದು ಎಂದು ಕಾನೂನು ತಿದ್ದುಪಡಿ ಮಾಡಿದೆ.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...