Homeಕರ್ನಾಟಕCAA, NRC ವಿರುದ್ಧ ಕಲಬುರಗಿಯಲ್ಲಿ ಬೀದಿಗಿಳಿದ ವೈದ್ಯರು..

CAA, NRC ವಿರುದ್ಧ ಕಲಬುರಗಿಯಲ್ಲಿ ಬೀದಿಗಿಳಿದ ವೈದ್ಯರು..

- Advertisement -
- Advertisement -

ಕೇಂದ್ರ ಸರ್ಕಾರದ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರುದ್ಧ ವಿದ್ಯಾರ್ಥಿಗಳು, ಪ್ರಗತಿಪರರು, ದಲಿತರು, ಮಹಿಳೆಯರು, ವಕೀಲರು ಪ್ರತಿಭಟನೆ ದಾಖಲಿಸಿದ್ದಾಯಿತು. ಈಗ ಅವರ ಸಾಲಿಗೆ ವೈದ್ಯರೂ ಸಹ ಸೇರಿದ್ದು ಇಂತಹ ಅಸಾಂವಿಧಾನಿಕ ಕಾಯ್ದೆ ಬೇಡ ಎಂದು ಕಲಬುರಗಿಯಲ್ಲಿ ಇಂದು ವೈಧ್ಯರ ಸಮೂಹ ಬೀದಿಗಿಳಿದಿದೆ.

ಮೆಡಿಕಲ್‌ ಫೆಟರ್ನಿಟಿ ಸಂಘಟನೆಯ ವತಿಯಿಂದ ಕಲಬುರಗಿಯ ತಿಮ್ಮಾಪುರ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಮೆರವಣಿಗೆ ನಡೆಸಿದ 500ಕ್ಕೂ ಹೆಚ್ಚು ವೈದ್ಯರು ಈ ಕಾಯ್ದೆಗಳಿಗೆ ನಮ್ಮ ವಿರೋಧವಿದೆ ಎಂಬ ಸಂದೇಶವನ್ನು ಸಾರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಡಾ.ಸೀಮಾ ದೇಶಪಾಂಡೆ ಮಾತನಾಡಿ ಸರ್ಕಾರದಲ್ಲಿರುವವರು ಕಷ್ಟದಲ್ಲಿರುವವರೆಇಗೆ ಸಹಾಯ ಮಾಡುವ ಬದಲು ಎನ್‌ಪಿಆರ್‌, ಎನ್‌ಆರ್‌ಸಿ ಕಾಯ್ದೆಗಳನ್ನು ತಂದು ತೊಂದರೆ ಕೊಡುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ಕ್ಷೇತ್ರ ಕುಸಿಯುತ್ತಿದ್ದು, ನಾವು ಭರವಸೆ ಕಳೆದುಕೊಂಡಿದ್ದೇವೆ. ಭಾರತದ ಆರ್ಥಿಕತೆ ಮರಣಶಯ್ಯೆಯಲ್ಲಿದೆ. ಭಾರತದ ಆರೋಗ್ಯ ಸ್ಥಿತಿಯು ಕುಸಿಯುತ್ತಿದೆ. ರೋಗಿಗಳು ಹಣವಿಲ್ಲದೇ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಸರ್ಕಾರ ಜನರ ಸಮಸ್ಯೆಗಳನ್ನು ಮಾತಾಡುವುದನ್ನು, ಬಿಟ್ಟು ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಸಿಎಎ, ಎನ್‌ಆರ್‌ಸಿಯಂತಹ ಕಾಯ್ದೆಗಳನ್ನು ತರುತ್ತಿರುವುದಕ್ಕೆ ಜವಾಬ್ದಾರಿಯುವ ವೈದ್ಯರಾಗಿ ನಮ್ಮ ವಿರೋಧವಿದೆ ಎಂದಿದ್ದಾರೆ.

ಎನ್‌ಪಿಆರ್‌ ಜನವಿರೋಧಿಗಳಾಗಿವೆ. ಇದರ ವಿರುದ್ಧ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ನಾವು ಭಾರತದ ಜನರು. ಇಂತಹ ಕಾಯ್ದೆಗಳಿಗೆ ಬದಲಾಗಿ ಭಾರತದ ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸುವತ್ತ ಸರ್ಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಅಶ್ವಕುಲ್ಲಾಖಾನ್‌, ಭಗತ್‌ ಸಿಂಗ್‌, ರಾಮ್‌ ಪ್ರಸಾದ್‌ ಬಿಸ್ಮಿಲ್ಲಾ, ಸುಭಾಸ್‌ ಚಂದ್ರ ಬೋಸ್‌ರಂತಹ ವಿವಿಧ ಧರ್ಮದ ಹೋರಾಟಗಾರರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮ ಪ್ರಾಣಕೊಟ್ಟಿದ್ದಾರೆ. ಅಂತಹ ದೇಶದಲ್ಲಿ ಧರ್ಮದ ಆಧಾರದಲ್ಲಿ ಜನರನ್ನು ಒಡೆಯುವುದು ಸರಿಯಿಲ್ಲ ಎಂದರು. ನಾವು ರೋಗಿಗಳನ್ನು ನೋಡುತ್ತೇವೆಯೇ ಹೊರತು ಅವರ ಧರ್ಮವನ್ನಲ್ಲ. ನಾವು ನೈತಿಕತೆ ಹೊಂದಿದ್ದೇವೆ. ಅದಕ್ಕಾಗಿ ನಾವು ಆಡಳಿತ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದೇವೆ ಎಂದರು.

ಮೊಹಮ್ಮದ್‌ ಇರ್ಫಾನ್‌ ಮಾತನಾಡಿ ನಮ್ಮ ಸ್ವಾತಂತ್ಯಕ್ಕಾಗಿ ಈ ಹೋರಾಟ ಆರಂಭವಾಗಿದೆ. ಇದಕ್ಕೆ ಅಂತ್ಯವಿಲ್ಲ. ಕಾಯ್ದೆಯನ್ನು ಓದದೇ ಕೆಲವರು ಅದರ ಪರವಾಗಿ ಪ್ರತಿಭಟಿಸುತ್ತಿದ್ದಾರೆ. ಆದರೆ ನಾವು ವೈದ್ಯರು, ಸಮಾಜದ ಪರಿಸ್ಥಿತಿಯನ್ನು ಅರಿತವರು ಈ ಕಾಯ್ದೆಯನ್ನು ಸಂಪೂರ್ಣವಾಗಿ ಓದಿದ್ದೇವೆ. ಇದು  ಅಸಾಂವಿಧಾನಿಕವಾದುದು, ಜನರನ್ನು ವಿಭಜಿಸುವುದಾಗಿದೆ. ಇದನ್ನು ನೋಡಿ ಸುಮ್ಮನೇ ಕೂರಲು ಸಾಧ್ಯವಿಲ್ಲ. ಅದಕ್ಕೆ ಬೀದಿಗಿಳಿದಿದ್ದೇವೆ ಎಂದರು.

ಜಾಮಿಯಾ, ಜೆಎನ್‌ಯು ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಅವರಿಗೆ ಬೆಂಬಲ ನೀಡುತ್ತೇವೆ. ಅವರಿಗೆ ಶರಣು ಹೇಳುತ್ತೇವೆ. ವಿಷಯ ಸುಪ್ರೀಂ ಕೋರ್ಟಿನಲ್ಲಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆಯಿದೆ. ಒಂದು ವೇಳೆ ಅಲ್ಲಿಯೂ ಈ ಕಾಯ್ದೆ ಜಾರಿಯಾದರೆ ನಾವು ದೆಹಲಿ ಚಲೋ ಕರೆ ಕೊಡುತ್ತೇವೆ ಎಂದರು.

ಡಾ. ರಾಹುಲ್‌ ತಮನ್‌ ಮಾತನಾಡಿ ಈಗಾಗಲೇ ಪೌರತ್ವಕ್ಕೆ ಕೆಲವು ನಿಯಮ, ಕಾಯ್ದೆ ಇದೆ. ಅದಕ್ಕೆ ತಿದ್ದುಪಡಿ ತಂದು ಅವರು ಮುಸ್ಲಿಂ ಜನರ ವಿರುದ್ಧವಿದ್ದೇವೆ ಎಂಬುದನ್ನು ತೋರಿಸಲು ಮುಂದಾಗಿದ್ದಾರೆ. ಅವರು ಬಡವರು, ದಲಿತರು, ಒಬಿಸಿ, ಮಹಿಳೆಯರ ವಿರುದ್ಧವಿದ್ದಾರೆ. ಅಸ್ಸಾಂನಲ್ಲಿ 19 ಲಕ್ಷ ಜನರನ್ನು ಬಂಧನಕೇಂದ್ರದಲ್ಲಿಟ್ಟಿದ್ದಾರೆ. ಅದರಲ್ಲಿ 5 ಲಕ್ಷ ಜನರು ಮಾತ್ರ ಮುಸ್ಲಿಮರಾಗಿದ್ದು ಉಳಿದ 14 ಲಕ್ಷ ಬೇರೆ ಜಾತಿ ಧರ್ಮದವರೇ ಆಗಿದ್ದಾರೆ. ಹಾಗಾಗಿ ಎಲ್ಲಾ ಜನರು ಈ ಕಾಯ್ದೆಯನ್ನು ವಿರೋಧಿಸಬೇಕು ಎಂದರು.

ಪ್ರಜಾಪ್ರಭುತ್ವದ ರೀತಿಯಲ್ಲಿ ಆಯ್ಕೆಯಾದ ಕ್ರಿಮಿನಲ್‌ಗಳು ಪಾರ್ಲಿಮೆಂಟ್‌ನಲ್ಲಿದ್ದಾರೆ. ಅವರು ಪ್ರಾಮಾಣಿಕ ಜನರ ದಾಖಲೆ ಕೇಳಿ ಜೈಲಿಗಟ್ಟುವ ಹುನ್ನಾರ ನಡೆಸಿದ್ದಾರೆ. ವಸುಧೈವ ಕುಟುಂಬಕಂ ಎಂಬ ಸಂಸ್ಕೃತಿ ನಮ್ಮದು. ಈ ಭೂಮಿ ಮೇಲೆ ಇರುವ ಎಲ್ಲರೂ ನಮ್ಮ ಕುಟುಂಬದವರೇ.. ಆದರೆ ಸರ್ಕಾರ ಧರ್ಮಧ ಆಧಾರದಲ್ಲಿ ನಮ್ಮನ್ನು ಒಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತದಲ್ಲಿ ಒಂದು ಲಕ್ಷ ಶಿಶುಗಳು ಹುಟ್ಟುವ ಮೊದಲೇ ಸಾವಿಗೀಡಾಗುತ್ತಿವೆ. ಇದರ ಬಗ್ಗೆ ಯೋಚಿಸಬೇಕು. ಹಸಿವಿನ ಸೂಚ್ಯಂಕದಲ್ಲಿ ನಮ್ಮ ದೇಶ 115ನೇ ರ್‍ಯಾಂಕ್‌ನಲ್ಲಿದೆ. ಇಂತಹ ಸಂದರ್ಭದಲ್ಲಿ ನಮ್ಮ ಆದ್ಯತೆಯೇನು ಎಂದು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...