Homeಕರ್ನಾಟಕCAA, NRC ವಿರುದ್ಧ ಕಲಬುರಗಿಯಲ್ಲಿ ಬೀದಿಗಿಳಿದ ವೈದ್ಯರು..

CAA, NRC ವಿರುದ್ಧ ಕಲಬುರಗಿಯಲ್ಲಿ ಬೀದಿಗಿಳಿದ ವೈದ್ಯರು..

- Advertisement -
- Advertisement -

ಕೇಂದ್ರ ಸರ್ಕಾರದ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರುದ್ಧ ವಿದ್ಯಾರ್ಥಿಗಳು, ಪ್ರಗತಿಪರರು, ದಲಿತರು, ಮಹಿಳೆಯರು, ವಕೀಲರು ಪ್ರತಿಭಟನೆ ದಾಖಲಿಸಿದ್ದಾಯಿತು. ಈಗ ಅವರ ಸಾಲಿಗೆ ವೈದ್ಯರೂ ಸಹ ಸೇರಿದ್ದು ಇಂತಹ ಅಸಾಂವಿಧಾನಿಕ ಕಾಯ್ದೆ ಬೇಡ ಎಂದು ಕಲಬುರಗಿಯಲ್ಲಿ ಇಂದು ವೈಧ್ಯರ ಸಮೂಹ ಬೀದಿಗಿಳಿದಿದೆ.

ಮೆಡಿಕಲ್‌ ಫೆಟರ್ನಿಟಿ ಸಂಘಟನೆಯ ವತಿಯಿಂದ ಕಲಬುರಗಿಯ ತಿಮ್ಮಾಪುರ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಮೆರವಣಿಗೆ ನಡೆಸಿದ 500ಕ್ಕೂ ಹೆಚ್ಚು ವೈದ್ಯರು ಈ ಕಾಯ್ದೆಗಳಿಗೆ ನಮ್ಮ ವಿರೋಧವಿದೆ ಎಂಬ ಸಂದೇಶವನ್ನು ಸಾರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಡಾ.ಸೀಮಾ ದೇಶಪಾಂಡೆ ಮಾತನಾಡಿ ಸರ್ಕಾರದಲ್ಲಿರುವವರು ಕಷ್ಟದಲ್ಲಿರುವವರೆಇಗೆ ಸಹಾಯ ಮಾಡುವ ಬದಲು ಎನ್‌ಪಿಆರ್‌, ಎನ್‌ಆರ್‌ಸಿ ಕಾಯ್ದೆಗಳನ್ನು ತಂದು ತೊಂದರೆ ಕೊಡುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ಕ್ಷೇತ್ರ ಕುಸಿಯುತ್ತಿದ್ದು, ನಾವು ಭರವಸೆ ಕಳೆದುಕೊಂಡಿದ್ದೇವೆ. ಭಾರತದ ಆರ್ಥಿಕತೆ ಮರಣಶಯ್ಯೆಯಲ್ಲಿದೆ. ಭಾರತದ ಆರೋಗ್ಯ ಸ್ಥಿತಿಯು ಕುಸಿಯುತ್ತಿದೆ. ರೋಗಿಗಳು ಹಣವಿಲ್ಲದೇ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಸರ್ಕಾರ ಜನರ ಸಮಸ್ಯೆಗಳನ್ನು ಮಾತಾಡುವುದನ್ನು, ಬಿಟ್ಟು ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಸಿಎಎ, ಎನ್‌ಆರ್‌ಸಿಯಂತಹ ಕಾಯ್ದೆಗಳನ್ನು ತರುತ್ತಿರುವುದಕ್ಕೆ ಜವಾಬ್ದಾರಿಯುವ ವೈದ್ಯರಾಗಿ ನಮ್ಮ ವಿರೋಧವಿದೆ ಎಂದಿದ್ದಾರೆ.

ಎನ್‌ಪಿಆರ್‌ ಜನವಿರೋಧಿಗಳಾಗಿವೆ. ಇದರ ವಿರುದ್ಧ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ನಾವು ಭಾರತದ ಜನರು. ಇಂತಹ ಕಾಯ್ದೆಗಳಿಗೆ ಬದಲಾಗಿ ಭಾರತದ ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸುವತ್ತ ಸರ್ಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಅಶ್ವಕುಲ್ಲಾಖಾನ್‌, ಭಗತ್‌ ಸಿಂಗ್‌, ರಾಮ್‌ ಪ್ರಸಾದ್‌ ಬಿಸ್ಮಿಲ್ಲಾ, ಸುಭಾಸ್‌ ಚಂದ್ರ ಬೋಸ್‌ರಂತಹ ವಿವಿಧ ಧರ್ಮದ ಹೋರಾಟಗಾರರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮ ಪ್ರಾಣಕೊಟ್ಟಿದ್ದಾರೆ. ಅಂತಹ ದೇಶದಲ್ಲಿ ಧರ್ಮದ ಆಧಾರದಲ್ಲಿ ಜನರನ್ನು ಒಡೆಯುವುದು ಸರಿಯಿಲ್ಲ ಎಂದರು. ನಾವು ರೋಗಿಗಳನ್ನು ನೋಡುತ್ತೇವೆಯೇ ಹೊರತು ಅವರ ಧರ್ಮವನ್ನಲ್ಲ. ನಾವು ನೈತಿಕತೆ ಹೊಂದಿದ್ದೇವೆ. ಅದಕ್ಕಾಗಿ ನಾವು ಆಡಳಿತ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದೇವೆ ಎಂದರು.

ಮೊಹಮ್ಮದ್‌ ಇರ್ಫಾನ್‌ ಮಾತನಾಡಿ ನಮ್ಮ ಸ್ವಾತಂತ್ಯಕ್ಕಾಗಿ ಈ ಹೋರಾಟ ಆರಂಭವಾಗಿದೆ. ಇದಕ್ಕೆ ಅಂತ್ಯವಿಲ್ಲ. ಕಾಯ್ದೆಯನ್ನು ಓದದೇ ಕೆಲವರು ಅದರ ಪರವಾಗಿ ಪ್ರತಿಭಟಿಸುತ್ತಿದ್ದಾರೆ. ಆದರೆ ನಾವು ವೈದ್ಯರು, ಸಮಾಜದ ಪರಿಸ್ಥಿತಿಯನ್ನು ಅರಿತವರು ಈ ಕಾಯ್ದೆಯನ್ನು ಸಂಪೂರ್ಣವಾಗಿ ಓದಿದ್ದೇವೆ. ಇದು  ಅಸಾಂವಿಧಾನಿಕವಾದುದು, ಜನರನ್ನು ವಿಭಜಿಸುವುದಾಗಿದೆ. ಇದನ್ನು ನೋಡಿ ಸುಮ್ಮನೇ ಕೂರಲು ಸಾಧ್ಯವಿಲ್ಲ. ಅದಕ್ಕೆ ಬೀದಿಗಿಳಿದಿದ್ದೇವೆ ಎಂದರು.

ಜಾಮಿಯಾ, ಜೆಎನ್‌ಯು ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಅವರಿಗೆ ಬೆಂಬಲ ನೀಡುತ್ತೇವೆ. ಅವರಿಗೆ ಶರಣು ಹೇಳುತ್ತೇವೆ. ವಿಷಯ ಸುಪ್ರೀಂ ಕೋರ್ಟಿನಲ್ಲಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆಯಿದೆ. ಒಂದು ವೇಳೆ ಅಲ್ಲಿಯೂ ಈ ಕಾಯ್ದೆ ಜಾರಿಯಾದರೆ ನಾವು ದೆಹಲಿ ಚಲೋ ಕರೆ ಕೊಡುತ್ತೇವೆ ಎಂದರು.

ಡಾ. ರಾಹುಲ್‌ ತಮನ್‌ ಮಾತನಾಡಿ ಈಗಾಗಲೇ ಪೌರತ್ವಕ್ಕೆ ಕೆಲವು ನಿಯಮ, ಕಾಯ್ದೆ ಇದೆ. ಅದಕ್ಕೆ ತಿದ್ದುಪಡಿ ತಂದು ಅವರು ಮುಸ್ಲಿಂ ಜನರ ವಿರುದ್ಧವಿದ್ದೇವೆ ಎಂಬುದನ್ನು ತೋರಿಸಲು ಮುಂದಾಗಿದ್ದಾರೆ. ಅವರು ಬಡವರು, ದಲಿತರು, ಒಬಿಸಿ, ಮಹಿಳೆಯರ ವಿರುದ್ಧವಿದ್ದಾರೆ. ಅಸ್ಸಾಂನಲ್ಲಿ 19 ಲಕ್ಷ ಜನರನ್ನು ಬಂಧನಕೇಂದ್ರದಲ್ಲಿಟ್ಟಿದ್ದಾರೆ. ಅದರಲ್ಲಿ 5 ಲಕ್ಷ ಜನರು ಮಾತ್ರ ಮುಸ್ಲಿಮರಾಗಿದ್ದು ಉಳಿದ 14 ಲಕ್ಷ ಬೇರೆ ಜಾತಿ ಧರ್ಮದವರೇ ಆಗಿದ್ದಾರೆ. ಹಾಗಾಗಿ ಎಲ್ಲಾ ಜನರು ಈ ಕಾಯ್ದೆಯನ್ನು ವಿರೋಧಿಸಬೇಕು ಎಂದರು.

ಪ್ರಜಾಪ್ರಭುತ್ವದ ರೀತಿಯಲ್ಲಿ ಆಯ್ಕೆಯಾದ ಕ್ರಿಮಿನಲ್‌ಗಳು ಪಾರ್ಲಿಮೆಂಟ್‌ನಲ್ಲಿದ್ದಾರೆ. ಅವರು ಪ್ರಾಮಾಣಿಕ ಜನರ ದಾಖಲೆ ಕೇಳಿ ಜೈಲಿಗಟ್ಟುವ ಹುನ್ನಾರ ನಡೆಸಿದ್ದಾರೆ. ವಸುಧೈವ ಕುಟುಂಬಕಂ ಎಂಬ ಸಂಸ್ಕೃತಿ ನಮ್ಮದು. ಈ ಭೂಮಿ ಮೇಲೆ ಇರುವ ಎಲ್ಲರೂ ನಮ್ಮ ಕುಟುಂಬದವರೇ.. ಆದರೆ ಸರ್ಕಾರ ಧರ್ಮಧ ಆಧಾರದಲ್ಲಿ ನಮ್ಮನ್ನು ಒಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತದಲ್ಲಿ ಒಂದು ಲಕ್ಷ ಶಿಶುಗಳು ಹುಟ್ಟುವ ಮೊದಲೇ ಸಾವಿಗೀಡಾಗುತ್ತಿವೆ. ಇದರ ಬಗ್ಗೆ ಯೋಚಿಸಬೇಕು. ಹಸಿವಿನ ಸೂಚ್ಯಂಕದಲ್ಲಿ ನಮ್ಮ ದೇಶ 115ನೇ ರ್‍ಯಾಂಕ್‌ನಲ್ಲಿದೆ. ಇಂತಹ ಸಂದರ್ಭದಲ್ಲಿ ನಮ್ಮ ಆದ್ಯತೆಯೇನು ಎಂದು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...