Homeಕರ್ನಾಟಕCAA, NRC ವಿರುದ್ಧ ಕಲಬುರಗಿಯಲ್ಲಿ ಬೀದಿಗಿಳಿದ ವೈದ್ಯರು..

CAA, NRC ವಿರುದ್ಧ ಕಲಬುರಗಿಯಲ್ಲಿ ಬೀದಿಗಿಳಿದ ವೈದ್ಯರು..

- Advertisement -
- Advertisement -

ಕೇಂದ್ರ ಸರ್ಕಾರದ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರುದ್ಧ ವಿದ್ಯಾರ್ಥಿಗಳು, ಪ್ರಗತಿಪರರು, ದಲಿತರು, ಮಹಿಳೆಯರು, ವಕೀಲರು ಪ್ರತಿಭಟನೆ ದಾಖಲಿಸಿದ್ದಾಯಿತು. ಈಗ ಅವರ ಸಾಲಿಗೆ ವೈದ್ಯರೂ ಸಹ ಸೇರಿದ್ದು ಇಂತಹ ಅಸಾಂವಿಧಾನಿಕ ಕಾಯ್ದೆ ಬೇಡ ಎಂದು ಕಲಬುರಗಿಯಲ್ಲಿ ಇಂದು ವೈಧ್ಯರ ಸಮೂಹ ಬೀದಿಗಿಳಿದಿದೆ.

ಮೆಡಿಕಲ್‌ ಫೆಟರ್ನಿಟಿ ಸಂಘಟನೆಯ ವತಿಯಿಂದ ಕಲಬುರಗಿಯ ತಿಮ್ಮಾಪುರ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಮೆರವಣಿಗೆ ನಡೆಸಿದ 500ಕ್ಕೂ ಹೆಚ್ಚು ವೈದ್ಯರು ಈ ಕಾಯ್ದೆಗಳಿಗೆ ನಮ್ಮ ವಿರೋಧವಿದೆ ಎಂಬ ಸಂದೇಶವನ್ನು ಸಾರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಡಾ.ಸೀಮಾ ದೇಶಪಾಂಡೆ ಮಾತನಾಡಿ ಸರ್ಕಾರದಲ್ಲಿರುವವರು ಕಷ್ಟದಲ್ಲಿರುವವರೆಇಗೆ ಸಹಾಯ ಮಾಡುವ ಬದಲು ಎನ್‌ಪಿಆರ್‌, ಎನ್‌ಆರ್‌ಸಿ ಕಾಯ್ದೆಗಳನ್ನು ತಂದು ತೊಂದರೆ ಕೊಡುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ಕ್ಷೇತ್ರ ಕುಸಿಯುತ್ತಿದ್ದು, ನಾವು ಭರವಸೆ ಕಳೆದುಕೊಂಡಿದ್ದೇವೆ. ಭಾರತದ ಆರ್ಥಿಕತೆ ಮರಣಶಯ್ಯೆಯಲ್ಲಿದೆ. ಭಾರತದ ಆರೋಗ್ಯ ಸ್ಥಿತಿಯು ಕುಸಿಯುತ್ತಿದೆ. ರೋಗಿಗಳು ಹಣವಿಲ್ಲದೇ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಸರ್ಕಾರ ಜನರ ಸಮಸ್ಯೆಗಳನ್ನು ಮಾತಾಡುವುದನ್ನು, ಬಿಟ್ಟು ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಸಿಎಎ, ಎನ್‌ಆರ್‌ಸಿಯಂತಹ ಕಾಯ್ದೆಗಳನ್ನು ತರುತ್ತಿರುವುದಕ್ಕೆ ಜವಾಬ್ದಾರಿಯುವ ವೈದ್ಯರಾಗಿ ನಮ್ಮ ವಿರೋಧವಿದೆ ಎಂದಿದ್ದಾರೆ.

ಎನ್‌ಪಿಆರ್‌ ಜನವಿರೋಧಿಗಳಾಗಿವೆ. ಇದರ ವಿರುದ್ಧ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ನಾವು ಭಾರತದ ಜನರು. ಇಂತಹ ಕಾಯ್ದೆಗಳಿಗೆ ಬದಲಾಗಿ ಭಾರತದ ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸುವತ್ತ ಸರ್ಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಅಶ್ವಕುಲ್ಲಾಖಾನ್‌, ಭಗತ್‌ ಸಿಂಗ್‌, ರಾಮ್‌ ಪ್ರಸಾದ್‌ ಬಿಸ್ಮಿಲ್ಲಾ, ಸುಭಾಸ್‌ ಚಂದ್ರ ಬೋಸ್‌ರಂತಹ ವಿವಿಧ ಧರ್ಮದ ಹೋರಾಟಗಾರರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮ ಪ್ರಾಣಕೊಟ್ಟಿದ್ದಾರೆ. ಅಂತಹ ದೇಶದಲ್ಲಿ ಧರ್ಮದ ಆಧಾರದಲ್ಲಿ ಜನರನ್ನು ಒಡೆಯುವುದು ಸರಿಯಿಲ್ಲ ಎಂದರು. ನಾವು ರೋಗಿಗಳನ್ನು ನೋಡುತ್ತೇವೆಯೇ ಹೊರತು ಅವರ ಧರ್ಮವನ್ನಲ್ಲ. ನಾವು ನೈತಿಕತೆ ಹೊಂದಿದ್ದೇವೆ. ಅದಕ್ಕಾಗಿ ನಾವು ಆಡಳಿತ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದೇವೆ ಎಂದರು.

ಮೊಹಮ್ಮದ್‌ ಇರ್ಫಾನ್‌ ಮಾತನಾಡಿ ನಮ್ಮ ಸ್ವಾತಂತ್ಯಕ್ಕಾಗಿ ಈ ಹೋರಾಟ ಆರಂಭವಾಗಿದೆ. ಇದಕ್ಕೆ ಅಂತ್ಯವಿಲ್ಲ. ಕಾಯ್ದೆಯನ್ನು ಓದದೇ ಕೆಲವರು ಅದರ ಪರವಾಗಿ ಪ್ರತಿಭಟಿಸುತ್ತಿದ್ದಾರೆ. ಆದರೆ ನಾವು ವೈದ್ಯರು, ಸಮಾಜದ ಪರಿಸ್ಥಿತಿಯನ್ನು ಅರಿತವರು ಈ ಕಾಯ್ದೆಯನ್ನು ಸಂಪೂರ್ಣವಾಗಿ ಓದಿದ್ದೇವೆ. ಇದು  ಅಸಾಂವಿಧಾನಿಕವಾದುದು, ಜನರನ್ನು ವಿಭಜಿಸುವುದಾಗಿದೆ. ಇದನ್ನು ನೋಡಿ ಸುಮ್ಮನೇ ಕೂರಲು ಸಾಧ್ಯವಿಲ್ಲ. ಅದಕ್ಕೆ ಬೀದಿಗಿಳಿದಿದ್ದೇವೆ ಎಂದರು.

ಜಾಮಿಯಾ, ಜೆಎನ್‌ಯು ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಅವರಿಗೆ ಬೆಂಬಲ ನೀಡುತ್ತೇವೆ. ಅವರಿಗೆ ಶರಣು ಹೇಳುತ್ತೇವೆ. ವಿಷಯ ಸುಪ್ರೀಂ ಕೋರ್ಟಿನಲ್ಲಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆಯಿದೆ. ಒಂದು ವೇಳೆ ಅಲ್ಲಿಯೂ ಈ ಕಾಯ್ದೆ ಜಾರಿಯಾದರೆ ನಾವು ದೆಹಲಿ ಚಲೋ ಕರೆ ಕೊಡುತ್ತೇವೆ ಎಂದರು.

ಡಾ. ರಾಹುಲ್‌ ತಮನ್‌ ಮಾತನಾಡಿ ಈಗಾಗಲೇ ಪೌರತ್ವಕ್ಕೆ ಕೆಲವು ನಿಯಮ, ಕಾಯ್ದೆ ಇದೆ. ಅದಕ್ಕೆ ತಿದ್ದುಪಡಿ ತಂದು ಅವರು ಮುಸ್ಲಿಂ ಜನರ ವಿರುದ್ಧವಿದ್ದೇವೆ ಎಂಬುದನ್ನು ತೋರಿಸಲು ಮುಂದಾಗಿದ್ದಾರೆ. ಅವರು ಬಡವರು, ದಲಿತರು, ಒಬಿಸಿ, ಮಹಿಳೆಯರ ವಿರುದ್ಧವಿದ್ದಾರೆ. ಅಸ್ಸಾಂನಲ್ಲಿ 19 ಲಕ್ಷ ಜನರನ್ನು ಬಂಧನಕೇಂದ್ರದಲ್ಲಿಟ್ಟಿದ್ದಾರೆ. ಅದರಲ್ಲಿ 5 ಲಕ್ಷ ಜನರು ಮಾತ್ರ ಮುಸ್ಲಿಮರಾಗಿದ್ದು ಉಳಿದ 14 ಲಕ್ಷ ಬೇರೆ ಜಾತಿ ಧರ್ಮದವರೇ ಆಗಿದ್ದಾರೆ. ಹಾಗಾಗಿ ಎಲ್ಲಾ ಜನರು ಈ ಕಾಯ್ದೆಯನ್ನು ವಿರೋಧಿಸಬೇಕು ಎಂದರು.

ಪ್ರಜಾಪ್ರಭುತ್ವದ ರೀತಿಯಲ್ಲಿ ಆಯ್ಕೆಯಾದ ಕ್ರಿಮಿನಲ್‌ಗಳು ಪಾರ್ಲಿಮೆಂಟ್‌ನಲ್ಲಿದ್ದಾರೆ. ಅವರು ಪ್ರಾಮಾಣಿಕ ಜನರ ದಾಖಲೆ ಕೇಳಿ ಜೈಲಿಗಟ್ಟುವ ಹುನ್ನಾರ ನಡೆಸಿದ್ದಾರೆ. ವಸುಧೈವ ಕುಟುಂಬಕಂ ಎಂಬ ಸಂಸ್ಕೃತಿ ನಮ್ಮದು. ಈ ಭೂಮಿ ಮೇಲೆ ಇರುವ ಎಲ್ಲರೂ ನಮ್ಮ ಕುಟುಂಬದವರೇ.. ಆದರೆ ಸರ್ಕಾರ ಧರ್ಮಧ ಆಧಾರದಲ್ಲಿ ನಮ್ಮನ್ನು ಒಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತದಲ್ಲಿ ಒಂದು ಲಕ್ಷ ಶಿಶುಗಳು ಹುಟ್ಟುವ ಮೊದಲೇ ಸಾವಿಗೀಡಾಗುತ್ತಿವೆ. ಇದರ ಬಗ್ಗೆ ಯೋಚಿಸಬೇಕು. ಹಸಿವಿನ ಸೂಚ್ಯಂಕದಲ್ಲಿ ನಮ್ಮ ದೇಶ 115ನೇ ರ್‍ಯಾಂಕ್‌ನಲ್ಲಿದೆ. ಇಂತಹ ಸಂದರ್ಭದಲ್ಲಿ ನಮ್ಮ ಆದ್ಯತೆಯೇನು ಎಂದು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...