Homeಕರ್ನಾಟಕCAA, NRC ವಿರುದ್ಧ ಕಲಬುರಗಿಯಲ್ಲಿ ಬೀದಿಗಿಳಿದ ವೈದ್ಯರು..

CAA, NRC ವಿರುದ್ಧ ಕಲಬುರಗಿಯಲ್ಲಿ ಬೀದಿಗಿಳಿದ ವೈದ್ಯರು..

- Advertisement -
- Advertisement -

ಕೇಂದ್ರ ಸರ್ಕಾರದ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರುದ್ಧ ವಿದ್ಯಾರ್ಥಿಗಳು, ಪ್ರಗತಿಪರರು, ದಲಿತರು, ಮಹಿಳೆಯರು, ವಕೀಲರು ಪ್ರತಿಭಟನೆ ದಾಖಲಿಸಿದ್ದಾಯಿತು. ಈಗ ಅವರ ಸಾಲಿಗೆ ವೈದ್ಯರೂ ಸಹ ಸೇರಿದ್ದು ಇಂತಹ ಅಸಾಂವಿಧಾನಿಕ ಕಾಯ್ದೆ ಬೇಡ ಎಂದು ಕಲಬುರಗಿಯಲ್ಲಿ ಇಂದು ವೈಧ್ಯರ ಸಮೂಹ ಬೀದಿಗಿಳಿದಿದೆ.

ಮೆಡಿಕಲ್‌ ಫೆಟರ್ನಿಟಿ ಸಂಘಟನೆಯ ವತಿಯಿಂದ ಕಲಬುರಗಿಯ ತಿಮ್ಮಾಪುರ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಮೆರವಣಿಗೆ ನಡೆಸಿದ 500ಕ್ಕೂ ಹೆಚ್ಚು ವೈದ್ಯರು ಈ ಕಾಯ್ದೆಗಳಿಗೆ ನಮ್ಮ ವಿರೋಧವಿದೆ ಎಂಬ ಸಂದೇಶವನ್ನು ಸಾರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಡಾ.ಸೀಮಾ ದೇಶಪಾಂಡೆ ಮಾತನಾಡಿ ಸರ್ಕಾರದಲ್ಲಿರುವವರು ಕಷ್ಟದಲ್ಲಿರುವವರೆಇಗೆ ಸಹಾಯ ಮಾಡುವ ಬದಲು ಎನ್‌ಪಿಆರ್‌, ಎನ್‌ಆರ್‌ಸಿ ಕಾಯ್ದೆಗಳನ್ನು ತಂದು ತೊಂದರೆ ಕೊಡುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ಕ್ಷೇತ್ರ ಕುಸಿಯುತ್ತಿದ್ದು, ನಾವು ಭರವಸೆ ಕಳೆದುಕೊಂಡಿದ್ದೇವೆ. ಭಾರತದ ಆರ್ಥಿಕತೆ ಮರಣಶಯ್ಯೆಯಲ್ಲಿದೆ. ಭಾರತದ ಆರೋಗ್ಯ ಸ್ಥಿತಿಯು ಕುಸಿಯುತ್ತಿದೆ. ರೋಗಿಗಳು ಹಣವಿಲ್ಲದೇ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಸರ್ಕಾರ ಜನರ ಸಮಸ್ಯೆಗಳನ್ನು ಮಾತಾಡುವುದನ್ನು, ಬಿಟ್ಟು ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಸಿಎಎ, ಎನ್‌ಆರ್‌ಸಿಯಂತಹ ಕಾಯ್ದೆಗಳನ್ನು ತರುತ್ತಿರುವುದಕ್ಕೆ ಜವಾಬ್ದಾರಿಯುವ ವೈದ್ಯರಾಗಿ ನಮ್ಮ ವಿರೋಧವಿದೆ ಎಂದಿದ್ದಾರೆ.

ಎನ್‌ಪಿಆರ್‌ ಜನವಿರೋಧಿಗಳಾಗಿವೆ. ಇದರ ವಿರುದ್ಧ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ನಾವು ಭಾರತದ ಜನರು. ಇಂತಹ ಕಾಯ್ದೆಗಳಿಗೆ ಬದಲಾಗಿ ಭಾರತದ ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸುವತ್ತ ಸರ್ಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಅಶ್ವಕುಲ್ಲಾಖಾನ್‌, ಭಗತ್‌ ಸಿಂಗ್‌, ರಾಮ್‌ ಪ್ರಸಾದ್‌ ಬಿಸ್ಮಿಲ್ಲಾ, ಸುಭಾಸ್‌ ಚಂದ್ರ ಬೋಸ್‌ರಂತಹ ವಿವಿಧ ಧರ್ಮದ ಹೋರಾಟಗಾರರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮ ಪ್ರಾಣಕೊಟ್ಟಿದ್ದಾರೆ. ಅಂತಹ ದೇಶದಲ್ಲಿ ಧರ್ಮದ ಆಧಾರದಲ್ಲಿ ಜನರನ್ನು ಒಡೆಯುವುದು ಸರಿಯಿಲ್ಲ ಎಂದರು. ನಾವು ರೋಗಿಗಳನ್ನು ನೋಡುತ್ತೇವೆಯೇ ಹೊರತು ಅವರ ಧರ್ಮವನ್ನಲ್ಲ. ನಾವು ನೈತಿಕತೆ ಹೊಂದಿದ್ದೇವೆ. ಅದಕ್ಕಾಗಿ ನಾವು ಆಡಳಿತ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದೇವೆ ಎಂದರು.

ಮೊಹಮ್ಮದ್‌ ಇರ್ಫಾನ್‌ ಮಾತನಾಡಿ ನಮ್ಮ ಸ್ವಾತಂತ್ಯಕ್ಕಾಗಿ ಈ ಹೋರಾಟ ಆರಂಭವಾಗಿದೆ. ಇದಕ್ಕೆ ಅಂತ್ಯವಿಲ್ಲ. ಕಾಯ್ದೆಯನ್ನು ಓದದೇ ಕೆಲವರು ಅದರ ಪರವಾಗಿ ಪ್ರತಿಭಟಿಸುತ್ತಿದ್ದಾರೆ. ಆದರೆ ನಾವು ವೈದ್ಯರು, ಸಮಾಜದ ಪರಿಸ್ಥಿತಿಯನ್ನು ಅರಿತವರು ಈ ಕಾಯ್ದೆಯನ್ನು ಸಂಪೂರ್ಣವಾಗಿ ಓದಿದ್ದೇವೆ. ಇದು  ಅಸಾಂವಿಧಾನಿಕವಾದುದು, ಜನರನ್ನು ವಿಭಜಿಸುವುದಾಗಿದೆ. ಇದನ್ನು ನೋಡಿ ಸುಮ್ಮನೇ ಕೂರಲು ಸಾಧ್ಯವಿಲ್ಲ. ಅದಕ್ಕೆ ಬೀದಿಗಿಳಿದಿದ್ದೇವೆ ಎಂದರು.

ಜಾಮಿಯಾ, ಜೆಎನ್‌ಯು ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಅವರಿಗೆ ಬೆಂಬಲ ನೀಡುತ್ತೇವೆ. ಅವರಿಗೆ ಶರಣು ಹೇಳುತ್ತೇವೆ. ವಿಷಯ ಸುಪ್ರೀಂ ಕೋರ್ಟಿನಲ್ಲಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆಯಿದೆ. ಒಂದು ವೇಳೆ ಅಲ್ಲಿಯೂ ಈ ಕಾಯ್ದೆ ಜಾರಿಯಾದರೆ ನಾವು ದೆಹಲಿ ಚಲೋ ಕರೆ ಕೊಡುತ್ತೇವೆ ಎಂದರು.

ಡಾ. ರಾಹುಲ್‌ ತಮನ್‌ ಮಾತನಾಡಿ ಈಗಾಗಲೇ ಪೌರತ್ವಕ್ಕೆ ಕೆಲವು ನಿಯಮ, ಕಾಯ್ದೆ ಇದೆ. ಅದಕ್ಕೆ ತಿದ್ದುಪಡಿ ತಂದು ಅವರು ಮುಸ್ಲಿಂ ಜನರ ವಿರುದ್ಧವಿದ್ದೇವೆ ಎಂಬುದನ್ನು ತೋರಿಸಲು ಮುಂದಾಗಿದ್ದಾರೆ. ಅವರು ಬಡವರು, ದಲಿತರು, ಒಬಿಸಿ, ಮಹಿಳೆಯರ ವಿರುದ್ಧವಿದ್ದಾರೆ. ಅಸ್ಸಾಂನಲ್ಲಿ 19 ಲಕ್ಷ ಜನರನ್ನು ಬಂಧನಕೇಂದ್ರದಲ್ಲಿಟ್ಟಿದ್ದಾರೆ. ಅದರಲ್ಲಿ 5 ಲಕ್ಷ ಜನರು ಮಾತ್ರ ಮುಸ್ಲಿಮರಾಗಿದ್ದು ಉಳಿದ 14 ಲಕ್ಷ ಬೇರೆ ಜಾತಿ ಧರ್ಮದವರೇ ಆಗಿದ್ದಾರೆ. ಹಾಗಾಗಿ ಎಲ್ಲಾ ಜನರು ಈ ಕಾಯ್ದೆಯನ್ನು ವಿರೋಧಿಸಬೇಕು ಎಂದರು.

ಪ್ರಜಾಪ್ರಭುತ್ವದ ರೀತಿಯಲ್ಲಿ ಆಯ್ಕೆಯಾದ ಕ್ರಿಮಿನಲ್‌ಗಳು ಪಾರ್ಲಿಮೆಂಟ್‌ನಲ್ಲಿದ್ದಾರೆ. ಅವರು ಪ್ರಾಮಾಣಿಕ ಜನರ ದಾಖಲೆ ಕೇಳಿ ಜೈಲಿಗಟ್ಟುವ ಹುನ್ನಾರ ನಡೆಸಿದ್ದಾರೆ. ವಸುಧೈವ ಕುಟುಂಬಕಂ ಎಂಬ ಸಂಸ್ಕೃತಿ ನಮ್ಮದು. ಈ ಭೂಮಿ ಮೇಲೆ ಇರುವ ಎಲ್ಲರೂ ನಮ್ಮ ಕುಟುಂಬದವರೇ.. ಆದರೆ ಸರ್ಕಾರ ಧರ್ಮಧ ಆಧಾರದಲ್ಲಿ ನಮ್ಮನ್ನು ಒಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತದಲ್ಲಿ ಒಂದು ಲಕ್ಷ ಶಿಶುಗಳು ಹುಟ್ಟುವ ಮೊದಲೇ ಸಾವಿಗೀಡಾಗುತ್ತಿವೆ. ಇದರ ಬಗ್ಗೆ ಯೋಚಿಸಬೇಕು. ಹಸಿವಿನ ಸೂಚ್ಯಂಕದಲ್ಲಿ ನಮ್ಮ ದೇಶ 115ನೇ ರ್‍ಯಾಂಕ್‌ನಲ್ಲಿದೆ. ಇಂತಹ ಸಂದರ್ಭದಲ್ಲಿ ನಮ್ಮ ಆದ್ಯತೆಯೇನು ಎಂದು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...