Homeಕರ್ನಾಟಕಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಡಾ.ಎಚ್‌.ವಿ.ವಾಸು ಅವರು ಮೊಟ್ಟೆಯ ಅಗತ್ಯತೆಯನ್ನು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕೋಳಿ ಮೊಟ್ಟೆ ಕೊಡುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬೀದರ್‌ ನಗರದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಅಕ್ಕನಾಗಲಾಂಬಿಕಾ ಮಹಿಳಾ ಗಣ ಹಾಗೂ ಲಿಂಗಾಯತ ಸಮಾಜದ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಪ್ರತಿಭಟನೆಯಲ್ಲಿ ಮಾತನಾಡಿರುವ ಬಸವ ಮಂಟಪದ ಪ್ರಧಾನ ಸಂಚಾಲಕರಾದ ಮಾತೆ ಸತ್ಯಾದೇವಿ, “ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1 ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕೋಳಿಮೊಟ್ಟೆ ಕೊಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಮೊಟ್ಟೆ ಮಾಂಸಾಹಾರ, ಇದರಿಂದ ಮಕ್ಕಳ ಮಾನಸಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸುವ ಕಳಕಳಿ ಇದ್ದಲ್ಲಿ ಹಣ್ಣು, ದ್ವಿದಳ ಧಾನ್ಯಗಳು ಮತ್ತು ಮೊಳಕೆ ಕಾಳು ಕೊಡುವ ವ್ಯವಸ್ಥೆ ಮಾಡಲಿ” ಎಂದು ಸಲಹೆ ನೀಡಿದ್ದಾರೆ.

“ಶಾಲೆಯಲ್ಲಿ ಮುಗ್ಧ ಮಕ್ಕಳಿಗೆ ಕೋಳಿಮೊಟ್ಟೆ ನೀಡಿದರೆ ಉದ್ದೇಶಪೂರ್ವಕವಾಗಿ ಮಾಂಸಾಹಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಮೊಟ್ಟೆ ತಿನ್ನುವ ಮಕ್ಕಳು ಮತ್ತು ತಿನ್ನದ ಮಕ್ಕಳೆಂದು ಶಾಲೆಯಲ್ಲಿ ನೀವೇ ಭೇದಭಾವ ಮೂಡಿಸಿದಂತಾಗುತ್ತದೆ. ಜೈನ ಮತ್ತು ಲಿಂಗಾಯತ ಧರ್ಮದ ಪ್ರಕಾರ ಮೊಟ್ಟೆ ಮಾಂಸಾಹಾರ ಪದ್ಧತಿಯಾಗಿದೆ. ಇದರಿಂದ ಸಸ್ಯಾಹಾರಿ ಪದ್ಧತಿ ಅಳವಡಿಸಿಕೊಂಡವರಿಗೆ ಇದು ಅವಮಾನ ಮಾಡಿದಂತಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿರ್ಣಯವನ್ನು ಹಿಂಪಡೆಯಬೇಕು” ಎಂದು ಮಾತಾಜಿ ಆಗ್ರಹಿಸಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬಾರದು ಎಂದು ಆಗ್ರಹಿಸುತ್ತಿರುವುದು ವಿಜ್ಞಾನಕ್ಕೆ ವಿರುದ್ಧವಾದದ್ದು ಎನ್ನುತ್ತಾರೆ ವೈದ್ಯರು. ಮಕ್ಕಳಿಗೆ ಮೊಟ್ಟೆ ಅಗತ್ಯ ಎಂದು ಜನಪರ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಎಚ್‌.ವಿ.ವಾಸು ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡಿದ್ದಾರೆ.

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರ ಅಭಿಪ್ರಾಯ

2008ನೇ ಇಸವಿಯಿಂದ ನಾನು ಮತ್ತು ನರೇಂದ್ರ ನಾಯಕ್‌ ಅಂಥವರೆಲ್ಲ ಸೇರಿ ಶಾಲಾ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಕೆಂದು ಬೇಡಿಕೆ ಇಡಲಾರಂಭಿಸಿದೆವು. ಅಂದು ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಆಗಿನಿಂದಲೂ ಮೊಟ್ಟೆ ಕೊಡುವುದಕ್ಕೆ ವಿರೋಧ ನಡೆಯುತ್ತಲೇ ಇದೆ. ಅಂದೇ ಕೇಂದ್ರ ಸರ್ಕಾರ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ಕೊಡಲು ಹಣ ನೀಡಲು ಶುರುಮಾಡಿತು. ಅಲ್ಲಿಗೆ ಹದಿಮೂರು ವರ್ಷಗಳಾಯಿತು. ಅಂದಿನಿಂದಲೇ ಈ ಸ್ವಾಮೀಜಿಗಳು ಸಮಸ್ಯೆಯನ್ನು ಉಂಟುಮಾಡಲು ಆರಂಭಿಸಿದರು.

ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ. ಕರ್ನಾಟಕ ರಾಜ್ಯದಲ್ಲಿ ಮೊಟ್ಟೆ ಪ್ರಸ್ತಾಪ 2007- 2008ರಲ್ಲಿ ಬಂದಾಗಿನಿಂದಲೂ ಈ ಸ್ವಾಮೀಜಿಗಳು ಸಮಸ್ಯೆ ಮಾಡುತ್ತಲೇ ಇದ್ದಾರೆ. ಕರ್ನಾಟಕದಲ್ಲಿ ಮಕ್ಕಳ ಅಪೌಷ್ಟಿಕತೆ ಶೇ. 37ರಷ್ಟಿದೆ. ಹಿಂದುಳಿದ ಜಿಲ್ಲೆಗಳಲ್ಲಿ ಕುಪೋಷಣೆಯ ಪ್ರಮಾಣ ಇನ್ನೂ ಹೆಚ್ಚಿದೆ.


ಇದನ್ನೂ ಓದಿರಿ: ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ


ಹಿಂದುಳಿದ ಜಿಲ್ಲೆಗಳಲ್ಲಿ ಮೊಟ್ಟೆಯನ್ನು ಸರ್ಕಾರ ಕೊಡಬೇಕೆಂದು ನಿರ್ಧರಿಸಿದ್ದು ವೈಜ್ಞಾನಿಕ ಕಾರಣದಿಂದ. ಮಕ್ಕಳಲ್ಲಿ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆ ಕುಂಠಿತವಾಗಿದೆ. ಈ ಕಾರಣದಿಂದಾಗಿ ಮೊಟ್ಟೆ ಕೊಡಬೇಕೆಂದು ಸರ್ಕಾರ ವೈಜ್ಞಾನಿಕ ಆಧಾರದಲ್ಲಿ, ತಜ್ಞರ ಶಿಫಾರಸ್ಸಿನಂತೆ ಕ್ರಮ ಕೈಗೊಡಿದೆ. ಮೊಟ್ಟೆಗಳನ್ನು ಕೊಡುವುದು ಜನರು ಕಟ್ಟುತ್ತಿರುವ ತೆರಿಗೆ ಹಣದಲ್ಲೇ ಹೊರತು ಸ್ವಾಮೀಜಿಯ ಹಣದಲ್ಲಿ ಅಲ್ಲ. ಸುಪ್ರಿಂಕೋರ್ಟ್ ಆದೇಶದ ಅನ್ವಯ ಮಧ್ಯಾಹ್ನದ ಬಿಸಿಯೂಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿಕೊಂಡು ಎಲ್ಲ ರಾಜ್ಯಗಳಲ್ಲಿ ನೀಡುತ್ತಿವೆ.

ಈ ಹದಿಮೂರು ವರ್ಷಗಳಲ್ಲಿ ವೈದ್ಯರು, ವೈಜ್ಞಾನಿಕ ಕಾರ್ಯಕರ್ತರು ಈ ರಾಜ್ಯದ ಮಕ್ಕಳ ಹಿತಾಸಕ್ತಿಯನ್ನು ಕಾಪಾಡಲು ಒತ್ತಡ ಹಾಕಿರುವುದಕ್ಕೆ ಬೆಲೆಯೇ ಇಲ್ಲವಾ? ಈ ಮೂರ್ನಾಲ್ಕು ಸ್ವಾಮೀಜಿಗಳು ಹೇಳಿದ್ದಕ್ಕಷ್ಟೇ ಬೆಲೆ ಎನ್ನುವುದಕ್ಕೆ ಅರ್ಥವೇನಿದೆ? ಮಕ್ಕಳಿಗೆ ನೀಡುವ ಮೊಟ್ಟೆಗೆ ಪರ್ಯಾಯವಿಲ್ಲ. ಯಾವುದೇ ಸಸ್ಯಾಹಾರವು, ಮಾಂಸಾಹಾರಕ್ಕೆ ಪರ್ಯಾಯ ಅಲ್ಲವೇ ಅಲ್ಲ. ಯಾವುದೇ ಸಸ್ಯಾಹಾರದಲ್ಲಿ ಮಕ್ಕಳಿಗೆ ಬೇಕಾದಷ್ಟು ಪ್ರೋಟೀನ್ ಸಿಗುವುದಿಲ್ಲ. ಈ ರಾಜ್ಯದಲ್ಲಿ ಶೇ. 80ರಿಂದ 88ರಷ್ಟು ಜನರು ಮಾಂಸಾಹಾರ ತಿನ್ನುವವರು. ಶೇ. 12ರಿಂದ 20ರಷ್ಟು ಜನರು ಮನೆಯಲ್ಲಿ ಸಸ್ಯಾಹಾರಿಗಳು. ಇವರ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಡಿ.

ಮದನ್‌ ಮೋಹನ್‌ ಅವರು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದಾಗ ಇದೇ ರಾಜ್ಯ ಸರ್ಕಾರ ಸರ್ವೇ ಮಾಡಿತ್ತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗಲೇ ಮಾಡಿದ್ದ ಸರ್ವೇ ಅದು. ಶೇ. 95ರಷ್ಟು ಮಕ್ಕಳು ನಮಗೆ ಹಾಲು ಬೇಡ, ಮೊಟ್ಟೆ ಬೇಕು ಎಂದು ಹೇಳಿದರು. ವಿಜ್ಞಾನಿಗಳು, ವೈದ್ಯರು, ಪ್ರಜ್ಞಾವಂತರು, ಸ್ವತಃ ಮಕ್ಕಳೇ ತಮಗೆ ಮೊಟ್ಟೆ ಬೇಕು ಎಂದು ಹೇಳಿರುವಾಗ, ಐದು ದಿನಗಳು ಮೊಟ್ಟೆ ನೀಡಲು ಬೇಕಾದಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡುವಾಗ ಇವರ್‍ಯಾರು ನಾಲ್ಕು ಜನ ಮೊಟ್ಟೆ ಬೇಡ ಎನ್ನುವವರು? ಈ ಹದಿಮೂರು ವರ್ಷಗಳಿಂದ ಇವರ ಬುದ್ಧಿ ಸರಿ ಇರಲಿಲ್ಲವಾ?

“ಬೇಡ ಎನ್ನುವವರ ಮಕ್ಕಳಿಗೆ ಮೊಟ್ಟೆ ಕೊಡಬೇಡಿ, ನಮ್ಮ ಮಕ್ಕಳಿಗೆ ಕೊಡಿ” ಎಂದು ಪೋಷಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ. ತಮ್ಮ ಮಕ್ಕಳಿಗೆ ಮೊಟ್ಟೆ ಬೇಡ ಎನ್ನವವವರಿಗೆ ಕೊಡುವುದು ಬೇಡ ಬಿಡಿ. ಬೇಕಿದ್ದವರಿಗೆ ಕೊಡಬಹುದಲ್ಲ! ಅದಕ್ಕೆ ಅಡ್ಡಿ ಬರುವುದಕ್ಕೆ ಇವರಿಗೆ ಅಧಿಕಾರ ಕೊಟ್ಟಿವವರು ಯಾರು?

***

ಡಾ.ಎಚ್‌.ವಿ.ವಾಸು ಅವರ ಅಭಿಪ್ರಾಯ

ಹಸಿವು ಮತ್ತು ಅಪೌಷ್ಟಿಕತೆ ನಮ್ಮ ದೇಶದಲ್ಲಿ ಇಂದಿಗೂ ಮುಂದುವರೆಯುತ್ತಿರುವುದು ಆರ್ಥಿಕ ದಾರಿದ್ರ್ಯದಿಂದ ಅಲ್ಲ. ಬೌದ್ಧಿಕ ಮತ್ತು ಸಾಂಸ್ಕೃತಿಕ ದಾರಿದ್ರ್ಯದಿಂದ ಮತ್ತು ಹುನ್ನಾರಗಳ ಕಾರಣದಿಂದ.

ಕೋಟಿಗಟ್ಟಲೆ ಮಕ್ಕಳು ಕ್ಯಾಲೊರಿ ಅಪೌಷ್ಟಿಕತೆಯಿಂದ ಬಾಧಿತರಾಗಿದ್ದರೆ, ಕೋಟಿ ಕೋಟಿ ಜನರು ಅತಿ ಹೆಚ್ಚು ಶರ್ಕರಪಿಷ್ಟವನ್ನು ಮಾತ್ರ ತಿಂದು ಪ್ರೋಟೀನ್ ಹಾಗೂ ಇನ್ನಿತರ ಪೌಷ್ಟಿಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ಬಡವರೂ ಡಯಾಬಿಟಿಕ್ ಆಗುವುದು ನಮ್ಮ ದೇಶದಲ್ಲಿ ಮಾತ್ರ ಎನಿಸುತ್ತದೆ.

ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ.

ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...