Homeಕರ್ನಾಟಕಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಡಾ.ಎಚ್‌.ವಿ.ವಾಸು ಅವರು ಮೊಟ್ಟೆಯ ಅಗತ್ಯತೆಯನ್ನು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕೋಳಿ ಮೊಟ್ಟೆ ಕೊಡುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬೀದರ್‌ ನಗರದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಅಕ್ಕನಾಗಲಾಂಬಿಕಾ ಮಹಿಳಾ ಗಣ ಹಾಗೂ ಲಿಂಗಾಯತ ಸಮಾಜದ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಪ್ರತಿಭಟನೆಯಲ್ಲಿ ಮಾತನಾಡಿರುವ ಬಸವ ಮಂಟಪದ ಪ್ರಧಾನ ಸಂಚಾಲಕರಾದ ಮಾತೆ ಸತ್ಯಾದೇವಿ, “ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1 ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕೋಳಿಮೊಟ್ಟೆ ಕೊಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಮೊಟ್ಟೆ ಮಾಂಸಾಹಾರ, ಇದರಿಂದ ಮಕ್ಕಳ ಮಾನಸಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸುವ ಕಳಕಳಿ ಇದ್ದಲ್ಲಿ ಹಣ್ಣು, ದ್ವಿದಳ ಧಾನ್ಯಗಳು ಮತ್ತು ಮೊಳಕೆ ಕಾಳು ಕೊಡುವ ವ್ಯವಸ್ಥೆ ಮಾಡಲಿ” ಎಂದು ಸಲಹೆ ನೀಡಿದ್ದಾರೆ.

“ಶಾಲೆಯಲ್ಲಿ ಮುಗ್ಧ ಮಕ್ಕಳಿಗೆ ಕೋಳಿಮೊಟ್ಟೆ ನೀಡಿದರೆ ಉದ್ದೇಶಪೂರ್ವಕವಾಗಿ ಮಾಂಸಾಹಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಮೊಟ್ಟೆ ತಿನ್ನುವ ಮಕ್ಕಳು ಮತ್ತು ತಿನ್ನದ ಮಕ್ಕಳೆಂದು ಶಾಲೆಯಲ್ಲಿ ನೀವೇ ಭೇದಭಾವ ಮೂಡಿಸಿದಂತಾಗುತ್ತದೆ. ಜೈನ ಮತ್ತು ಲಿಂಗಾಯತ ಧರ್ಮದ ಪ್ರಕಾರ ಮೊಟ್ಟೆ ಮಾಂಸಾಹಾರ ಪದ್ಧತಿಯಾಗಿದೆ. ಇದರಿಂದ ಸಸ್ಯಾಹಾರಿ ಪದ್ಧತಿ ಅಳವಡಿಸಿಕೊಂಡವರಿಗೆ ಇದು ಅವಮಾನ ಮಾಡಿದಂತಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿರ್ಣಯವನ್ನು ಹಿಂಪಡೆಯಬೇಕು” ಎಂದು ಮಾತಾಜಿ ಆಗ್ರಹಿಸಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬಾರದು ಎಂದು ಆಗ್ರಹಿಸುತ್ತಿರುವುದು ವಿಜ್ಞಾನಕ್ಕೆ ವಿರುದ್ಧವಾದದ್ದು ಎನ್ನುತ್ತಾರೆ ವೈದ್ಯರು. ಮಕ್ಕಳಿಗೆ ಮೊಟ್ಟೆ ಅಗತ್ಯ ಎಂದು ಜನಪರ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಎಚ್‌.ವಿ.ವಾಸು ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡಿದ್ದಾರೆ.

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರ ಅಭಿಪ್ರಾಯ

2008ನೇ ಇಸವಿಯಿಂದ ನಾನು ಮತ್ತು ನರೇಂದ್ರ ನಾಯಕ್‌ ಅಂಥವರೆಲ್ಲ ಸೇರಿ ಶಾಲಾ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಕೆಂದು ಬೇಡಿಕೆ ಇಡಲಾರಂಭಿಸಿದೆವು. ಅಂದು ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಆಗಿನಿಂದಲೂ ಮೊಟ್ಟೆ ಕೊಡುವುದಕ್ಕೆ ವಿರೋಧ ನಡೆಯುತ್ತಲೇ ಇದೆ. ಅಂದೇ ಕೇಂದ್ರ ಸರ್ಕಾರ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ಕೊಡಲು ಹಣ ನೀಡಲು ಶುರುಮಾಡಿತು. ಅಲ್ಲಿಗೆ ಹದಿಮೂರು ವರ್ಷಗಳಾಯಿತು. ಅಂದಿನಿಂದಲೇ ಈ ಸ್ವಾಮೀಜಿಗಳು ಸಮಸ್ಯೆಯನ್ನು ಉಂಟುಮಾಡಲು ಆರಂಭಿಸಿದರು.

ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ. ಕರ್ನಾಟಕ ರಾಜ್ಯದಲ್ಲಿ ಮೊಟ್ಟೆ ಪ್ರಸ್ತಾಪ 2007- 2008ರಲ್ಲಿ ಬಂದಾಗಿನಿಂದಲೂ ಈ ಸ್ವಾಮೀಜಿಗಳು ಸಮಸ್ಯೆ ಮಾಡುತ್ತಲೇ ಇದ್ದಾರೆ. ಕರ್ನಾಟಕದಲ್ಲಿ ಮಕ್ಕಳ ಅಪೌಷ್ಟಿಕತೆ ಶೇ. 37ರಷ್ಟಿದೆ. ಹಿಂದುಳಿದ ಜಿಲ್ಲೆಗಳಲ್ಲಿ ಕುಪೋಷಣೆಯ ಪ್ರಮಾಣ ಇನ್ನೂ ಹೆಚ್ಚಿದೆ.


ಇದನ್ನೂ ಓದಿರಿ: ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ


ಹಿಂದುಳಿದ ಜಿಲ್ಲೆಗಳಲ್ಲಿ ಮೊಟ್ಟೆಯನ್ನು ಸರ್ಕಾರ ಕೊಡಬೇಕೆಂದು ನಿರ್ಧರಿಸಿದ್ದು ವೈಜ್ಞಾನಿಕ ಕಾರಣದಿಂದ. ಮಕ್ಕಳಲ್ಲಿ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆ ಕುಂಠಿತವಾಗಿದೆ. ಈ ಕಾರಣದಿಂದಾಗಿ ಮೊಟ್ಟೆ ಕೊಡಬೇಕೆಂದು ಸರ್ಕಾರ ವೈಜ್ಞಾನಿಕ ಆಧಾರದಲ್ಲಿ, ತಜ್ಞರ ಶಿಫಾರಸ್ಸಿನಂತೆ ಕ್ರಮ ಕೈಗೊಡಿದೆ. ಮೊಟ್ಟೆಗಳನ್ನು ಕೊಡುವುದು ಜನರು ಕಟ್ಟುತ್ತಿರುವ ತೆರಿಗೆ ಹಣದಲ್ಲೇ ಹೊರತು ಸ್ವಾಮೀಜಿಯ ಹಣದಲ್ಲಿ ಅಲ್ಲ. ಸುಪ್ರಿಂಕೋರ್ಟ್ ಆದೇಶದ ಅನ್ವಯ ಮಧ್ಯಾಹ್ನದ ಬಿಸಿಯೂಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿಕೊಂಡು ಎಲ್ಲ ರಾಜ್ಯಗಳಲ್ಲಿ ನೀಡುತ್ತಿವೆ.

ಈ ಹದಿಮೂರು ವರ್ಷಗಳಲ್ಲಿ ವೈದ್ಯರು, ವೈಜ್ಞಾನಿಕ ಕಾರ್ಯಕರ್ತರು ಈ ರಾಜ್ಯದ ಮಕ್ಕಳ ಹಿತಾಸಕ್ತಿಯನ್ನು ಕಾಪಾಡಲು ಒತ್ತಡ ಹಾಕಿರುವುದಕ್ಕೆ ಬೆಲೆಯೇ ಇಲ್ಲವಾ? ಈ ಮೂರ್ನಾಲ್ಕು ಸ್ವಾಮೀಜಿಗಳು ಹೇಳಿದ್ದಕ್ಕಷ್ಟೇ ಬೆಲೆ ಎನ್ನುವುದಕ್ಕೆ ಅರ್ಥವೇನಿದೆ? ಮಕ್ಕಳಿಗೆ ನೀಡುವ ಮೊಟ್ಟೆಗೆ ಪರ್ಯಾಯವಿಲ್ಲ. ಯಾವುದೇ ಸಸ್ಯಾಹಾರವು, ಮಾಂಸಾಹಾರಕ್ಕೆ ಪರ್ಯಾಯ ಅಲ್ಲವೇ ಅಲ್ಲ. ಯಾವುದೇ ಸಸ್ಯಾಹಾರದಲ್ಲಿ ಮಕ್ಕಳಿಗೆ ಬೇಕಾದಷ್ಟು ಪ್ರೋಟೀನ್ ಸಿಗುವುದಿಲ್ಲ. ಈ ರಾಜ್ಯದಲ್ಲಿ ಶೇ. 80ರಿಂದ 88ರಷ್ಟು ಜನರು ಮಾಂಸಾಹಾರ ತಿನ್ನುವವರು. ಶೇ. 12ರಿಂದ 20ರಷ್ಟು ಜನರು ಮನೆಯಲ್ಲಿ ಸಸ್ಯಾಹಾರಿಗಳು. ಇವರ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಡಿ.

ಮದನ್‌ ಮೋಹನ್‌ ಅವರು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದಾಗ ಇದೇ ರಾಜ್ಯ ಸರ್ಕಾರ ಸರ್ವೇ ಮಾಡಿತ್ತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗಲೇ ಮಾಡಿದ್ದ ಸರ್ವೇ ಅದು. ಶೇ. 95ರಷ್ಟು ಮಕ್ಕಳು ನಮಗೆ ಹಾಲು ಬೇಡ, ಮೊಟ್ಟೆ ಬೇಕು ಎಂದು ಹೇಳಿದರು. ವಿಜ್ಞಾನಿಗಳು, ವೈದ್ಯರು, ಪ್ರಜ್ಞಾವಂತರು, ಸ್ವತಃ ಮಕ್ಕಳೇ ತಮಗೆ ಮೊಟ್ಟೆ ಬೇಕು ಎಂದು ಹೇಳಿರುವಾಗ, ಐದು ದಿನಗಳು ಮೊಟ್ಟೆ ನೀಡಲು ಬೇಕಾದಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡುವಾಗ ಇವರ್‍ಯಾರು ನಾಲ್ಕು ಜನ ಮೊಟ್ಟೆ ಬೇಡ ಎನ್ನುವವರು? ಈ ಹದಿಮೂರು ವರ್ಷಗಳಿಂದ ಇವರ ಬುದ್ಧಿ ಸರಿ ಇರಲಿಲ್ಲವಾ?

“ಬೇಡ ಎನ್ನುವವರ ಮಕ್ಕಳಿಗೆ ಮೊಟ್ಟೆ ಕೊಡಬೇಡಿ, ನಮ್ಮ ಮಕ್ಕಳಿಗೆ ಕೊಡಿ” ಎಂದು ಪೋಷಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ. ತಮ್ಮ ಮಕ್ಕಳಿಗೆ ಮೊಟ್ಟೆ ಬೇಡ ಎನ್ನವವವರಿಗೆ ಕೊಡುವುದು ಬೇಡ ಬಿಡಿ. ಬೇಕಿದ್ದವರಿಗೆ ಕೊಡಬಹುದಲ್ಲ! ಅದಕ್ಕೆ ಅಡ್ಡಿ ಬರುವುದಕ್ಕೆ ಇವರಿಗೆ ಅಧಿಕಾರ ಕೊಟ್ಟಿವವರು ಯಾರು?

***

ಡಾ.ಎಚ್‌.ವಿ.ವಾಸು ಅವರ ಅಭಿಪ್ರಾಯ

ಹಸಿವು ಮತ್ತು ಅಪೌಷ್ಟಿಕತೆ ನಮ್ಮ ದೇಶದಲ್ಲಿ ಇಂದಿಗೂ ಮುಂದುವರೆಯುತ್ತಿರುವುದು ಆರ್ಥಿಕ ದಾರಿದ್ರ್ಯದಿಂದ ಅಲ್ಲ. ಬೌದ್ಧಿಕ ಮತ್ತು ಸಾಂಸ್ಕೃತಿಕ ದಾರಿದ್ರ್ಯದಿಂದ ಮತ್ತು ಹುನ್ನಾರಗಳ ಕಾರಣದಿಂದ.

ಕೋಟಿಗಟ್ಟಲೆ ಮಕ್ಕಳು ಕ್ಯಾಲೊರಿ ಅಪೌಷ್ಟಿಕತೆಯಿಂದ ಬಾಧಿತರಾಗಿದ್ದರೆ, ಕೋಟಿ ಕೋಟಿ ಜನರು ಅತಿ ಹೆಚ್ಚು ಶರ್ಕರಪಿಷ್ಟವನ್ನು ಮಾತ್ರ ತಿಂದು ಪ್ರೋಟೀನ್ ಹಾಗೂ ಇನ್ನಿತರ ಪೌಷ್ಟಿಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ಬಡವರೂ ಡಯಾಬಿಟಿಕ್ ಆಗುವುದು ನಮ್ಮ ದೇಶದಲ್ಲಿ ಮಾತ್ರ ಎನಿಸುತ್ತದೆ.

ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ.

ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...