Homeಕರ್ನಾಟಕಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಡಾ.ಎಚ್‌.ವಿ.ವಾಸು ಅವರು ಮೊಟ್ಟೆಯ ಅಗತ್ಯತೆಯನ್ನು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕೋಳಿ ಮೊಟ್ಟೆ ಕೊಡುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬೀದರ್‌ ನಗರದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಅಕ್ಕನಾಗಲಾಂಬಿಕಾ ಮಹಿಳಾ ಗಣ ಹಾಗೂ ಲಿಂಗಾಯತ ಸಮಾಜದ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಪ್ರತಿಭಟನೆಯಲ್ಲಿ ಮಾತನಾಡಿರುವ ಬಸವ ಮಂಟಪದ ಪ್ರಧಾನ ಸಂಚಾಲಕರಾದ ಮಾತೆ ಸತ್ಯಾದೇವಿ, “ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1 ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕೋಳಿಮೊಟ್ಟೆ ಕೊಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಮೊಟ್ಟೆ ಮಾಂಸಾಹಾರ, ಇದರಿಂದ ಮಕ್ಕಳ ಮಾನಸಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸುವ ಕಳಕಳಿ ಇದ್ದಲ್ಲಿ ಹಣ್ಣು, ದ್ವಿದಳ ಧಾನ್ಯಗಳು ಮತ್ತು ಮೊಳಕೆ ಕಾಳು ಕೊಡುವ ವ್ಯವಸ್ಥೆ ಮಾಡಲಿ” ಎಂದು ಸಲಹೆ ನೀಡಿದ್ದಾರೆ.

“ಶಾಲೆಯಲ್ಲಿ ಮುಗ್ಧ ಮಕ್ಕಳಿಗೆ ಕೋಳಿಮೊಟ್ಟೆ ನೀಡಿದರೆ ಉದ್ದೇಶಪೂರ್ವಕವಾಗಿ ಮಾಂಸಾಹಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಮೊಟ್ಟೆ ತಿನ್ನುವ ಮಕ್ಕಳು ಮತ್ತು ತಿನ್ನದ ಮಕ್ಕಳೆಂದು ಶಾಲೆಯಲ್ಲಿ ನೀವೇ ಭೇದಭಾವ ಮೂಡಿಸಿದಂತಾಗುತ್ತದೆ. ಜೈನ ಮತ್ತು ಲಿಂಗಾಯತ ಧರ್ಮದ ಪ್ರಕಾರ ಮೊಟ್ಟೆ ಮಾಂಸಾಹಾರ ಪದ್ಧತಿಯಾಗಿದೆ. ಇದರಿಂದ ಸಸ್ಯಾಹಾರಿ ಪದ್ಧತಿ ಅಳವಡಿಸಿಕೊಂಡವರಿಗೆ ಇದು ಅವಮಾನ ಮಾಡಿದಂತಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿರ್ಣಯವನ್ನು ಹಿಂಪಡೆಯಬೇಕು” ಎಂದು ಮಾತಾಜಿ ಆಗ್ರಹಿಸಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬಾರದು ಎಂದು ಆಗ್ರಹಿಸುತ್ತಿರುವುದು ವಿಜ್ಞಾನಕ್ಕೆ ವಿರುದ್ಧವಾದದ್ದು ಎನ್ನುತ್ತಾರೆ ವೈದ್ಯರು. ಮಕ್ಕಳಿಗೆ ಮೊಟ್ಟೆ ಅಗತ್ಯ ಎಂದು ಜನಪರ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಎಚ್‌.ವಿ.ವಾಸು ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡಿದ್ದಾರೆ.

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರ ಅಭಿಪ್ರಾಯ

2008ನೇ ಇಸವಿಯಿಂದ ನಾನು ಮತ್ತು ನರೇಂದ್ರ ನಾಯಕ್‌ ಅಂಥವರೆಲ್ಲ ಸೇರಿ ಶಾಲಾ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಕೆಂದು ಬೇಡಿಕೆ ಇಡಲಾರಂಭಿಸಿದೆವು. ಅಂದು ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಆಗಿನಿಂದಲೂ ಮೊಟ್ಟೆ ಕೊಡುವುದಕ್ಕೆ ವಿರೋಧ ನಡೆಯುತ್ತಲೇ ಇದೆ. ಅಂದೇ ಕೇಂದ್ರ ಸರ್ಕಾರ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ಕೊಡಲು ಹಣ ನೀಡಲು ಶುರುಮಾಡಿತು. ಅಲ್ಲಿಗೆ ಹದಿಮೂರು ವರ್ಷಗಳಾಯಿತು. ಅಂದಿನಿಂದಲೇ ಈ ಸ್ವಾಮೀಜಿಗಳು ಸಮಸ್ಯೆಯನ್ನು ಉಂಟುಮಾಡಲು ಆರಂಭಿಸಿದರು.

ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ. ಕರ್ನಾಟಕ ರಾಜ್ಯದಲ್ಲಿ ಮೊಟ್ಟೆ ಪ್ರಸ್ತಾಪ 2007- 2008ರಲ್ಲಿ ಬಂದಾಗಿನಿಂದಲೂ ಈ ಸ್ವಾಮೀಜಿಗಳು ಸಮಸ್ಯೆ ಮಾಡುತ್ತಲೇ ಇದ್ದಾರೆ. ಕರ್ನಾಟಕದಲ್ಲಿ ಮಕ್ಕಳ ಅಪೌಷ್ಟಿಕತೆ ಶೇ. 37ರಷ್ಟಿದೆ. ಹಿಂದುಳಿದ ಜಿಲ್ಲೆಗಳಲ್ಲಿ ಕುಪೋಷಣೆಯ ಪ್ರಮಾಣ ಇನ್ನೂ ಹೆಚ್ಚಿದೆ.


ಇದನ್ನೂ ಓದಿರಿ: ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ


ಹಿಂದುಳಿದ ಜಿಲ್ಲೆಗಳಲ್ಲಿ ಮೊಟ್ಟೆಯನ್ನು ಸರ್ಕಾರ ಕೊಡಬೇಕೆಂದು ನಿರ್ಧರಿಸಿದ್ದು ವೈಜ್ಞಾನಿಕ ಕಾರಣದಿಂದ. ಮಕ್ಕಳಲ್ಲಿ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆ ಕುಂಠಿತವಾಗಿದೆ. ಈ ಕಾರಣದಿಂದಾಗಿ ಮೊಟ್ಟೆ ಕೊಡಬೇಕೆಂದು ಸರ್ಕಾರ ವೈಜ್ಞಾನಿಕ ಆಧಾರದಲ್ಲಿ, ತಜ್ಞರ ಶಿಫಾರಸ್ಸಿನಂತೆ ಕ್ರಮ ಕೈಗೊಡಿದೆ. ಮೊಟ್ಟೆಗಳನ್ನು ಕೊಡುವುದು ಜನರು ಕಟ್ಟುತ್ತಿರುವ ತೆರಿಗೆ ಹಣದಲ್ಲೇ ಹೊರತು ಸ್ವಾಮೀಜಿಯ ಹಣದಲ್ಲಿ ಅಲ್ಲ. ಸುಪ್ರಿಂಕೋರ್ಟ್ ಆದೇಶದ ಅನ್ವಯ ಮಧ್ಯಾಹ್ನದ ಬಿಸಿಯೂಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿಕೊಂಡು ಎಲ್ಲ ರಾಜ್ಯಗಳಲ್ಲಿ ನೀಡುತ್ತಿವೆ.

ಈ ಹದಿಮೂರು ವರ್ಷಗಳಲ್ಲಿ ವೈದ್ಯರು, ವೈಜ್ಞಾನಿಕ ಕಾರ್ಯಕರ್ತರು ಈ ರಾಜ್ಯದ ಮಕ್ಕಳ ಹಿತಾಸಕ್ತಿಯನ್ನು ಕಾಪಾಡಲು ಒತ್ತಡ ಹಾಕಿರುವುದಕ್ಕೆ ಬೆಲೆಯೇ ಇಲ್ಲವಾ? ಈ ಮೂರ್ನಾಲ್ಕು ಸ್ವಾಮೀಜಿಗಳು ಹೇಳಿದ್ದಕ್ಕಷ್ಟೇ ಬೆಲೆ ಎನ್ನುವುದಕ್ಕೆ ಅರ್ಥವೇನಿದೆ? ಮಕ್ಕಳಿಗೆ ನೀಡುವ ಮೊಟ್ಟೆಗೆ ಪರ್ಯಾಯವಿಲ್ಲ. ಯಾವುದೇ ಸಸ್ಯಾಹಾರವು, ಮಾಂಸಾಹಾರಕ್ಕೆ ಪರ್ಯಾಯ ಅಲ್ಲವೇ ಅಲ್ಲ. ಯಾವುದೇ ಸಸ್ಯಾಹಾರದಲ್ಲಿ ಮಕ್ಕಳಿಗೆ ಬೇಕಾದಷ್ಟು ಪ್ರೋಟೀನ್ ಸಿಗುವುದಿಲ್ಲ. ಈ ರಾಜ್ಯದಲ್ಲಿ ಶೇ. 80ರಿಂದ 88ರಷ್ಟು ಜನರು ಮಾಂಸಾಹಾರ ತಿನ್ನುವವರು. ಶೇ. 12ರಿಂದ 20ರಷ್ಟು ಜನರು ಮನೆಯಲ್ಲಿ ಸಸ್ಯಾಹಾರಿಗಳು. ಇವರ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಡಿ.

ಮದನ್‌ ಮೋಹನ್‌ ಅವರು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದಾಗ ಇದೇ ರಾಜ್ಯ ಸರ್ಕಾರ ಸರ್ವೇ ಮಾಡಿತ್ತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗಲೇ ಮಾಡಿದ್ದ ಸರ್ವೇ ಅದು. ಶೇ. 95ರಷ್ಟು ಮಕ್ಕಳು ನಮಗೆ ಹಾಲು ಬೇಡ, ಮೊಟ್ಟೆ ಬೇಕು ಎಂದು ಹೇಳಿದರು. ವಿಜ್ಞಾನಿಗಳು, ವೈದ್ಯರು, ಪ್ರಜ್ಞಾವಂತರು, ಸ್ವತಃ ಮಕ್ಕಳೇ ತಮಗೆ ಮೊಟ್ಟೆ ಬೇಕು ಎಂದು ಹೇಳಿರುವಾಗ, ಐದು ದಿನಗಳು ಮೊಟ್ಟೆ ನೀಡಲು ಬೇಕಾದಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡುವಾಗ ಇವರ್‍ಯಾರು ನಾಲ್ಕು ಜನ ಮೊಟ್ಟೆ ಬೇಡ ಎನ್ನುವವರು? ಈ ಹದಿಮೂರು ವರ್ಷಗಳಿಂದ ಇವರ ಬುದ್ಧಿ ಸರಿ ಇರಲಿಲ್ಲವಾ?

“ಬೇಡ ಎನ್ನುವವರ ಮಕ್ಕಳಿಗೆ ಮೊಟ್ಟೆ ಕೊಡಬೇಡಿ, ನಮ್ಮ ಮಕ್ಕಳಿಗೆ ಕೊಡಿ” ಎಂದು ಪೋಷಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ. ತಮ್ಮ ಮಕ್ಕಳಿಗೆ ಮೊಟ್ಟೆ ಬೇಡ ಎನ್ನವವವರಿಗೆ ಕೊಡುವುದು ಬೇಡ ಬಿಡಿ. ಬೇಕಿದ್ದವರಿಗೆ ಕೊಡಬಹುದಲ್ಲ! ಅದಕ್ಕೆ ಅಡ್ಡಿ ಬರುವುದಕ್ಕೆ ಇವರಿಗೆ ಅಧಿಕಾರ ಕೊಟ್ಟಿವವರು ಯಾರು?

***

ಡಾ.ಎಚ್‌.ವಿ.ವಾಸು ಅವರ ಅಭಿಪ್ರಾಯ

ಹಸಿವು ಮತ್ತು ಅಪೌಷ್ಟಿಕತೆ ನಮ್ಮ ದೇಶದಲ್ಲಿ ಇಂದಿಗೂ ಮುಂದುವರೆಯುತ್ತಿರುವುದು ಆರ್ಥಿಕ ದಾರಿದ್ರ್ಯದಿಂದ ಅಲ್ಲ. ಬೌದ್ಧಿಕ ಮತ್ತು ಸಾಂಸ್ಕೃತಿಕ ದಾರಿದ್ರ್ಯದಿಂದ ಮತ್ತು ಹುನ್ನಾರಗಳ ಕಾರಣದಿಂದ.

ಕೋಟಿಗಟ್ಟಲೆ ಮಕ್ಕಳು ಕ್ಯಾಲೊರಿ ಅಪೌಷ್ಟಿಕತೆಯಿಂದ ಬಾಧಿತರಾಗಿದ್ದರೆ, ಕೋಟಿ ಕೋಟಿ ಜನರು ಅತಿ ಹೆಚ್ಚು ಶರ್ಕರಪಿಷ್ಟವನ್ನು ಮಾತ್ರ ತಿಂದು ಪ್ರೋಟೀನ್ ಹಾಗೂ ಇನ್ನಿತರ ಪೌಷ್ಟಿಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ಬಡವರೂ ಡಯಾಬಿಟಿಕ್ ಆಗುವುದು ನಮ್ಮ ದೇಶದಲ್ಲಿ ಮಾತ್ರ ಎನಿಸುತ್ತದೆ.

ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ.

ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...