Homeಕರ್ನಾಟಕಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಡಾ.ಎಚ್‌.ವಿ.ವಾಸು ಅವರು ಮೊಟ್ಟೆಯ ಅಗತ್ಯತೆಯನ್ನು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕೋಳಿ ಮೊಟ್ಟೆ ಕೊಡುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬೀದರ್‌ ನಗರದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಅಕ್ಕನಾಗಲಾಂಬಿಕಾ ಮಹಿಳಾ ಗಣ ಹಾಗೂ ಲಿಂಗಾಯತ ಸಮಾಜದ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಪ್ರತಿಭಟನೆಯಲ್ಲಿ ಮಾತನಾಡಿರುವ ಬಸವ ಮಂಟಪದ ಪ್ರಧಾನ ಸಂಚಾಲಕರಾದ ಮಾತೆ ಸತ್ಯಾದೇವಿ, “ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1 ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕೋಳಿಮೊಟ್ಟೆ ಕೊಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಮೊಟ್ಟೆ ಮಾಂಸಾಹಾರ, ಇದರಿಂದ ಮಕ್ಕಳ ಮಾನಸಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸುವ ಕಳಕಳಿ ಇದ್ದಲ್ಲಿ ಹಣ್ಣು, ದ್ವಿದಳ ಧಾನ್ಯಗಳು ಮತ್ತು ಮೊಳಕೆ ಕಾಳು ಕೊಡುವ ವ್ಯವಸ್ಥೆ ಮಾಡಲಿ” ಎಂದು ಸಲಹೆ ನೀಡಿದ್ದಾರೆ.

“ಶಾಲೆಯಲ್ಲಿ ಮುಗ್ಧ ಮಕ್ಕಳಿಗೆ ಕೋಳಿಮೊಟ್ಟೆ ನೀಡಿದರೆ ಉದ್ದೇಶಪೂರ್ವಕವಾಗಿ ಮಾಂಸಾಹಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಮೊಟ್ಟೆ ತಿನ್ನುವ ಮಕ್ಕಳು ಮತ್ತು ತಿನ್ನದ ಮಕ್ಕಳೆಂದು ಶಾಲೆಯಲ್ಲಿ ನೀವೇ ಭೇದಭಾವ ಮೂಡಿಸಿದಂತಾಗುತ್ತದೆ. ಜೈನ ಮತ್ತು ಲಿಂಗಾಯತ ಧರ್ಮದ ಪ್ರಕಾರ ಮೊಟ್ಟೆ ಮಾಂಸಾಹಾರ ಪದ್ಧತಿಯಾಗಿದೆ. ಇದರಿಂದ ಸಸ್ಯಾಹಾರಿ ಪದ್ಧತಿ ಅಳವಡಿಸಿಕೊಂಡವರಿಗೆ ಇದು ಅವಮಾನ ಮಾಡಿದಂತಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿರ್ಣಯವನ್ನು ಹಿಂಪಡೆಯಬೇಕು” ಎಂದು ಮಾತಾಜಿ ಆಗ್ರಹಿಸಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬಾರದು ಎಂದು ಆಗ್ರಹಿಸುತ್ತಿರುವುದು ವಿಜ್ಞಾನಕ್ಕೆ ವಿರುದ್ಧವಾದದ್ದು ಎನ್ನುತ್ತಾರೆ ವೈದ್ಯರು. ಮಕ್ಕಳಿಗೆ ಮೊಟ್ಟೆ ಅಗತ್ಯ ಎಂದು ಜನಪರ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಎಚ್‌.ವಿ.ವಾಸು ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡಿದ್ದಾರೆ.

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರ ಅಭಿಪ್ರಾಯ

2008ನೇ ಇಸವಿಯಿಂದ ನಾನು ಮತ್ತು ನರೇಂದ್ರ ನಾಯಕ್‌ ಅಂಥವರೆಲ್ಲ ಸೇರಿ ಶಾಲಾ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಕೆಂದು ಬೇಡಿಕೆ ಇಡಲಾರಂಭಿಸಿದೆವು. ಅಂದು ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಆಗಿನಿಂದಲೂ ಮೊಟ್ಟೆ ಕೊಡುವುದಕ್ಕೆ ವಿರೋಧ ನಡೆಯುತ್ತಲೇ ಇದೆ. ಅಂದೇ ಕೇಂದ್ರ ಸರ್ಕಾರ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ಕೊಡಲು ಹಣ ನೀಡಲು ಶುರುಮಾಡಿತು. ಅಲ್ಲಿಗೆ ಹದಿಮೂರು ವರ್ಷಗಳಾಯಿತು. ಅಂದಿನಿಂದಲೇ ಈ ಸ್ವಾಮೀಜಿಗಳು ಸಮಸ್ಯೆಯನ್ನು ಉಂಟುಮಾಡಲು ಆರಂಭಿಸಿದರು.

ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ. ಕರ್ನಾಟಕ ರಾಜ್ಯದಲ್ಲಿ ಮೊಟ್ಟೆ ಪ್ರಸ್ತಾಪ 2007- 2008ರಲ್ಲಿ ಬಂದಾಗಿನಿಂದಲೂ ಈ ಸ್ವಾಮೀಜಿಗಳು ಸಮಸ್ಯೆ ಮಾಡುತ್ತಲೇ ಇದ್ದಾರೆ. ಕರ್ನಾಟಕದಲ್ಲಿ ಮಕ್ಕಳ ಅಪೌಷ್ಟಿಕತೆ ಶೇ. 37ರಷ್ಟಿದೆ. ಹಿಂದುಳಿದ ಜಿಲ್ಲೆಗಳಲ್ಲಿ ಕುಪೋಷಣೆಯ ಪ್ರಮಾಣ ಇನ್ನೂ ಹೆಚ್ಚಿದೆ.


ಇದನ್ನೂ ಓದಿರಿ: ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ


ಹಿಂದುಳಿದ ಜಿಲ್ಲೆಗಳಲ್ಲಿ ಮೊಟ್ಟೆಯನ್ನು ಸರ್ಕಾರ ಕೊಡಬೇಕೆಂದು ನಿರ್ಧರಿಸಿದ್ದು ವೈಜ್ಞಾನಿಕ ಕಾರಣದಿಂದ. ಮಕ್ಕಳಲ್ಲಿ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆ ಕುಂಠಿತವಾಗಿದೆ. ಈ ಕಾರಣದಿಂದಾಗಿ ಮೊಟ್ಟೆ ಕೊಡಬೇಕೆಂದು ಸರ್ಕಾರ ವೈಜ್ಞಾನಿಕ ಆಧಾರದಲ್ಲಿ, ತಜ್ಞರ ಶಿಫಾರಸ್ಸಿನಂತೆ ಕ್ರಮ ಕೈಗೊಡಿದೆ. ಮೊಟ್ಟೆಗಳನ್ನು ಕೊಡುವುದು ಜನರು ಕಟ್ಟುತ್ತಿರುವ ತೆರಿಗೆ ಹಣದಲ್ಲೇ ಹೊರತು ಸ್ವಾಮೀಜಿಯ ಹಣದಲ್ಲಿ ಅಲ್ಲ. ಸುಪ್ರಿಂಕೋರ್ಟ್ ಆದೇಶದ ಅನ್ವಯ ಮಧ್ಯಾಹ್ನದ ಬಿಸಿಯೂಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿಕೊಂಡು ಎಲ್ಲ ರಾಜ್ಯಗಳಲ್ಲಿ ನೀಡುತ್ತಿವೆ.

ಈ ಹದಿಮೂರು ವರ್ಷಗಳಲ್ಲಿ ವೈದ್ಯರು, ವೈಜ್ಞಾನಿಕ ಕಾರ್ಯಕರ್ತರು ಈ ರಾಜ್ಯದ ಮಕ್ಕಳ ಹಿತಾಸಕ್ತಿಯನ್ನು ಕಾಪಾಡಲು ಒತ್ತಡ ಹಾಕಿರುವುದಕ್ಕೆ ಬೆಲೆಯೇ ಇಲ್ಲವಾ? ಈ ಮೂರ್ನಾಲ್ಕು ಸ್ವಾಮೀಜಿಗಳು ಹೇಳಿದ್ದಕ್ಕಷ್ಟೇ ಬೆಲೆ ಎನ್ನುವುದಕ್ಕೆ ಅರ್ಥವೇನಿದೆ? ಮಕ್ಕಳಿಗೆ ನೀಡುವ ಮೊಟ್ಟೆಗೆ ಪರ್ಯಾಯವಿಲ್ಲ. ಯಾವುದೇ ಸಸ್ಯಾಹಾರವು, ಮಾಂಸಾಹಾರಕ್ಕೆ ಪರ್ಯಾಯ ಅಲ್ಲವೇ ಅಲ್ಲ. ಯಾವುದೇ ಸಸ್ಯಾಹಾರದಲ್ಲಿ ಮಕ್ಕಳಿಗೆ ಬೇಕಾದಷ್ಟು ಪ್ರೋಟೀನ್ ಸಿಗುವುದಿಲ್ಲ. ಈ ರಾಜ್ಯದಲ್ಲಿ ಶೇ. 80ರಿಂದ 88ರಷ್ಟು ಜನರು ಮಾಂಸಾಹಾರ ತಿನ್ನುವವರು. ಶೇ. 12ರಿಂದ 20ರಷ್ಟು ಜನರು ಮನೆಯಲ್ಲಿ ಸಸ್ಯಾಹಾರಿಗಳು. ಇವರ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಡಿ.

ಮದನ್‌ ಮೋಹನ್‌ ಅವರು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದಾಗ ಇದೇ ರಾಜ್ಯ ಸರ್ಕಾರ ಸರ್ವೇ ಮಾಡಿತ್ತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗಲೇ ಮಾಡಿದ್ದ ಸರ್ವೇ ಅದು. ಶೇ. 95ರಷ್ಟು ಮಕ್ಕಳು ನಮಗೆ ಹಾಲು ಬೇಡ, ಮೊಟ್ಟೆ ಬೇಕು ಎಂದು ಹೇಳಿದರು. ವಿಜ್ಞಾನಿಗಳು, ವೈದ್ಯರು, ಪ್ರಜ್ಞಾವಂತರು, ಸ್ವತಃ ಮಕ್ಕಳೇ ತಮಗೆ ಮೊಟ್ಟೆ ಬೇಕು ಎಂದು ಹೇಳಿರುವಾಗ, ಐದು ದಿನಗಳು ಮೊಟ್ಟೆ ನೀಡಲು ಬೇಕಾದಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡುವಾಗ ಇವರ್‍ಯಾರು ನಾಲ್ಕು ಜನ ಮೊಟ್ಟೆ ಬೇಡ ಎನ್ನುವವರು? ಈ ಹದಿಮೂರು ವರ್ಷಗಳಿಂದ ಇವರ ಬುದ್ಧಿ ಸರಿ ಇರಲಿಲ್ಲವಾ?

“ಬೇಡ ಎನ್ನುವವರ ಮಕ್ಕಳಿಗೆ ಮೊಟ್ಟೆ ಕೊಡಬೇಡಿ, ನಮ್ಮ ಮಕ್ಕಳಿಗೆ ಕೊಡಿ” ಎಂದು ಪೋಷಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ. ತಮ್ಮ ಮಕ್ಕಳಿಗೆ ಮೊಟ್ಟೆ ಬೇಡ ಎನ್ನವವವರಿಗೆ ಕೊಡುವುದು ಬೇಡ ಬಿಡಿ. ಬೇಕಿದ್ದವರಿಗೆ ಕೊಡಬಹುದಲ್ಲ! ಅದಕ್ಕೆ ಅಡ್ಡಿ ಬರುವುದಕ್ಕೆ ಇವರಿಗೆ ಅಧಿಕಾರ ಕೊಟ್ಟಿವವರು ಯಾರು?

***

ಡಾ.ಎಚ್‌.ವಿ.ವಾಸು ಅವರ ಅಭಿಪ್ರಾಯ

ಹಸಿವು ಮತ್ತು ಅಪೌಷ್ಟಿಕತೆ ನಮ್ಮ ದೇಶದಲ್ಲಿ ಇಂದಿಗೂ ಮುಂದುವರೆಯುತ್ತಿರುವುದು ಆರ್ಥಿಕ ದಾರಿದ್ರ್ಯದಿಂದ ಅಲ್ಲ. ಬೌದ್ಧಿಕ ಮತ್ತು ಸಾಂಸ್ಕೃತಿಕ ದಾರಿದ್ರ್ಯದಿಂದ ಮತ್ತು ಹುನ್ನಾರಗಳ ಕಾರಣದಿಂದ.

ಕೋಟಿಗಟ್ಟಲೆ ಮಕ್ಕಳು ಕ್ಯಾಲೊರಿ ಅಪೌಷ್ಟಿಕತೆಯಿಂದ ಬಾಧಿತರಾಗಿದ್ದರೆ, ಕೋಟಿ ಕೋಟಿ ಜನರು ಅತಿ ಹೆಚ್ಚು ಶರ್ಕರಪಿಷ್ಟವನ್ನು ಮಾತ್ರ ತಿಂದು ಪ್ರೋಟೀನ್ ಹಾಗೂ ಇನ್ನಿತರ ಪೌಷ್ಟಿಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ಬಡವರೂ ಡಯಾಬಿಟಿಕ್ ಆಗುವುದು ನಮ್ಮ ದೇಶದಲ್ಲಿ ಮಾತ್ರ ಎನಿಸುತ್ತದೆ.

ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ.

ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...