Homeಕರ್ನಾಟಕಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಡಾ.ಎಚ್‌.ವಿ.ವಾಸು ಅವರು ಮೊಟ್ಟೆಯ ಅಗತ್ಯತೆಯನ್ನು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕೋಳಿ ಮೊಟ್ಟೆ ಕೊಡುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬೀದರ್‌ ನಗರದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಅಕ್ಕನಾಗಲಾಂಬಿಕಾ ಮಹಿಳಾ ಗಣ ಹಾಗೂ ಲಿಂಗಾಯತ ಸಮಾಜದ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಪ್ರತಿಭಟನೆಯಲ್ಲಿ ಮಾತನಾಡಿರುವ ಬಸವ ಮಂಟಪದ ಪ್ರಧಾನ ಸಂಚಾಲಕರಾದ ಮಾತೆ ಸತ್ಯಾದೇವಿ, “ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1 ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕೋಳಿಮೊಟ್ಟೆ ಕೊಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಮೊಟ್ಟೆ ಮಾಂಸಾಹಾರ, ಇದರಿಂದ ಮಕ್ಕಳ ಮಾನಸಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸುವ ಕಳಕಳಿ ಇದ್ದಲ್ಲಿ ಹಣ್ಣು, ದ್ವಿದಳ ಧಾನ್ಯಗಳು ಮತ್ತು ಮೊಳಕೆ ಕಾಳು ಕೊಡುವ ವ್ಯವಸ್ಥೆ ಮಾಡಲಿ” ಎಂದು ಸಲಹೆ ನೀಡಿದ್ದಾರೆ.

“ಶಾಲೆಯಲ್ಲಿ ಮುಗ್ಧ ಮಕ್ಕಳಿಗೆ ಕೋಳಿಮೊಟ್ಟೆ ನೀಡಿದರೆ ಉದ್ದೇಶಪೂರ್ವಕವಾಗಿ ಮಾಂಸಾಹಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಮೊಟ್ಟೆ ತಿನ್ನುವ ಮಕ್ಕಳು ಮತ್ತು ತಿನ್ನದ ಮಕ್ಕಳೆಂದು ಶಾಲೆಯಲ್ಲಿ ನೀವೇ ಭೇದಭಾವ ಮೂಡಿಸಿದಂತಾಗುತ್ತದೆ. ಜೈನ ಮತ್ತು ಲಿಂಗಾಯತ ಧರ್ಮದ ಪ್ರಕಾರ ಮೊಟ್ಟೆ ಮಾಂಸಾಹಾರ ಪದ್ಧತಿಯಾಗಿದೆ. ಇದರಿಂದ ಸಸ್ಯಾಹಾರಿ ಪದ್ಧತಿ ಅಳವಡಿಸಿಕೊಂಡವರಿಗೆ ಇದು ಅವಮಾನ ಮಾಡಿದಂತಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿರ್ಣಯವನ್ನು ಹಿಂಪಡೆಯಬೇಕು” ಎಂದು ಮಾತಾಜಿ ಆಗ್ರಹಿಸಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬಾರದು ಎಂದು ಆಗ್ರಹಿಸುತ್ತಿರುವುದು ವಿಜ್ಞಾನಕ್ಕೆ ವಿರುದ್ಧವಾದದ್ದು ಎನ್ನುತ್ತಾರೆ ವೈದ್ಯರು. ಮಕ್ಕಳಿಗೆ ಮೊಟ್ಟೆ ಅಗತ್ಯ ಎಂದು ಜನಪರ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಹಾಗೂ ಎಚ್‌.ವಿ.ವಾಸು ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡಿದ್ದಾರೆ.

ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರ ಅಭಿಪ್ರಾಯ

2008ನೇ ಇಸವಿಯಿಂದ ನಾನು ಮತ್ತು ನರೇಂದ್ರ ನಾಯಕ್‌ ಅಂಥವರೆಲ್ಲ ಸೇರಿ ಶಾಲಾ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಕೆಂದು ಬೇಡಿಕೆ ಇಡಲಾರಂಭಿಸಿದೆವು. ಅಂದು ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಆಗಿನಿಂದಲೂ ಮೊಟ್ಟೆ ಕೊಡುವುದಕ್ಕೆ ವಿರೋಧ ನಡೆಯುತ್ತಲೇ ಇದೆ. ಅಂದೇ ಕೇಂದ್ರ ಸರ್ಕಾರ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ಕೊಡಲು ಹಣ ನೀಡಲು ಶುರುಮಾಡಿತು. ಅಲ್ಲಿಗೆ ಹದಿಮೂರು ವರ್ಷಗಳಾಯಿತು. ಅಂದಿನಿಂದಲೇ ಈ ಸ್ವಾಮೀಜಿಗಳು ಸಮಸ್ಯೆಯನ್ನು ಉಂಟುಮಾಡಲು ಆರಂಭಿಸಿದರು.

ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ. ಕರ್ನಾಟಕ ರಾಜ್ಯದಲ್ಲಿ ಮೊಟ್ಟೆ ಪ್ರಸ್ತಾಪ 2007- 2008ರಲ್ಲಿ ಬಂದಾಗಿನಿಂದಲೂ ಈ ಸ್ವಾಮೀಜಿಗಳು ಸಮಸ್ಯೆ ಮಾಡುತ್ತಲೇ ಇದ್ದಾರೆ. ಕರ್ನಾಟಕದಲ್ಲಿ ಮಕ್ಕಳ ಅಪೌಷ್ಟಿಕತೆ ಶೇ. 37ರಷ್ಟಿದೆ. ಹಿಂದುಳಿದ ಜಿಲ್ಲೆಗಳಲ್ಲಿ ಕುಪೋಷಣೆಯ ಪ್ರಮಾಣ ಇನ್ನೂ ಹೆಚ್ಚಿದೆ.


ಇದನ್ನೂ ಓದಿರಿ: ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ


ಹಿಂದುಳಿದ ಜಿಲ್ಲೆಗಳಲ್ಲಿ ಮೊಟ್ಟೆಯನ್ನು ಸರ್ಕಾರ ಕೊಡಬೇಕೆಂದು ನಿರ್ಧರಿಸಿದ್ದು ವೈಜ್ಞಾನಿಕ ಕಾರಣದಿಂದ. ಮಕ್ಕಳಲ್ಲಿ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆ ಕುಂಠಿತವಾಗಿದೆ. ಈ ಕಾರಣದಿಂದಾಗಿ ಮೊಟ್ಟೆ ಕೊಡಬೇಕೆಂದು ಸರ್ಕಾರ ವೈಜ್ಞಾನಿಕ ಆಧಾರದಲ್ಲಿ, ತಜ್ಞರ ಶಿಫಾರಸ್ಸಿನಂತೆ ಕ್ರಮ ಕೈಗೊಡಿದೆ. ಮೊಟ್ಟೆಗಳನ್ನು ಕೊಡುವುದು ಜನರು ಕಟ್ಟುತ್ತಿರುವ ತೆರಿಗೆ ಹಣದಲ್ಲೇ ಹೊರತು ಸ್ವಾಮೀಜಿಯ ಹಣದಲ್ಲಿ ಅಲ್ಲ. ಸುಪ್ರಿಂಕೋರ್ಟ್ ಆದೇಶದ ಅನ್ವಯ ಮಧ್ಯಾಹ್ನದ ಬಿಸಿಯೂಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿಕೊಂಡು ಎಲ್ಲ ರಾಜ್ಯಗಳಲ್ಲಿ ನೀಡುತ್ತಿವೆ.

ಈ ಹದಿಮೂರು ವರ್ಷಗಳಲ್ಲಿ ವೈದ್ಯರು, ವೈಜ್ಞಾನಿಕ ಕಾರ್ಯಕರ್ತರು ಈ ರಾಜ್ಯದ ಮಕ್ಕಳ ಹಿತಾಸಕ್ತಿಯನ್ನು ಕಾಪಾಡಲು ಒತ್ತಡ ಹಾಕಿರುವುದಕ್ಕೆ ಬೆಲೆಯೇ ಇಲ್ಲವಾ? ಈ ಮೂರ್ನಾಲ್ಕು ಸ್ವಾಮೀಜಿಗಳು ಹೇಳಿದ್ದಕ್ಕಷ್ಟೇ ಬೆಲೆ ಎನ್ನುವುದಕ್ಕೆ ಅರ್ಥವೇನಿದೆ? ಮಕ್ಕಳಿಗೆ ನೀಡುವ ಮೊಟ್ಟೆಗೆ ಪರ್ಯಾಯವಿಲ್ಲ. ಯಾವುದೇ ಸಸ್ಯಾಹಾರವು, ಮಾಂಸಾಹಾರಕ್ಕೆ ಪರ್ಯಾಯ ಅಲ್ಲವೇ ಅಲ್ಲ. ಯಾವುದೇ ಸಸ್ಯಾಹಾರದಲ್ಲಿ ಮಕ್ಕಳಿಗೆ ಬೇಕಾದಷ್ಟು ಪ್ರೋಟೀನ್ ಸಿಗುವುದಿಲ್ಲ. ಈ ರಾಜ್ಯದಲ್ಲಿ ಶೇ. 80ರಿಂದ 88ರಷ್ಟು ಜನರು ಮಾಂಸಾಹಾರ ತಿನ್ನುವವರು. ಶೇ. 12ರಿಂದ 20ರಷ್ಟು ಜನರು ಮನೆಯಲ್ಲಿ ಸಸ್ಯಾಹಾರಿಗಳು. ಇವರ ಮಕ್ಕಳಿಗೆ ಮೊಟ್ಟೆಯನ್ನು ಕೊಡಬೇಡಿ.

ಮದನ್‌ ಮೋಹನ್‌ ಅವರು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದಾಗ ಇದೇ ರಾಜ್ಯ ಸರ್ಕಾರ ಸರ್ವೇ ಮಾಡಿತ್ತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗಲೇ ಮಾಡಿದ್ದ ಸರ್ವೇ ಅದು. ಶೇ. 95ರಷ್ಟು ಮಕ್ಕಳು ನಮಗೆ ಹಾಲು ಬೇಡ, ಮೊಟ್ಟೆ ಬೇಕು ಎಂದು ಹೇಳಿದರು. ವಿಜ್ಞಾನಿಗಳು, ವೈದ್ಯರು, ಪ್ರಜ್ಞಾವಂತರು, ಸ್ವತಃ ಮಕ್ಕಳೇ ತಮಗೆ ಮೊಟ್ಟೆ ಬೇಕು ಎಂದು ಹೇಳಿರುವಾಗ, ಐದು ದಿನಗಳು ಮೊಟ್ಟೆ ನೀಡಲು ಬೇಕಾದಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡುವಾಗ ಇವರ್‍ಯಾರು ನಾಲ್ಕು ಜನ ಮೊಟ್ಟೆ ಬೇಡ ಎನ್ನುವವರು? ಈ ಹದಿಮೂರು ವರ್ಷಗಳಿಂದ ಇವರ ಬುದ್ಧಿ ಸರಿ ಇರಲಿಲ್ಲವಾ?

“ಬೇಡ ಎನ್ನುವವರ ಮಕ್ಕಳಿಗೆ ಮೊಟ್ಟೆ ಕೊಡಬೇಡಿ, ನಮ್ಮ ಮಕ್ಕಳಿಗೆ ಕೊಡಿ” ಎಂದು ಪೋಷಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ. ತಮ್ಮ ಮಕ್ಕಳಿಗೆ ಮೊಟ್ಟೆ ಬೇಡ ಎನ್ನವವವರಿಗೆ ಕೊಡುವುದು ಬೇಡ ಬಿಡಿ. ಬೇಕಿದ್ದವರಿಗೆ ಕೊಡಬಹುದಲ್ಲ! ಅದಕ್ಕೆ ಅಡ್ಡಿ ಬರುವುದಕ್ಕೆ ಇವರಿಗೆ ಅಧಿಕಾರ ಕೊಟ್ಟಿವವರು ಯಾರು?

***

ಡಾ.ಎಚ್‌.ವಿ.ವಾಸು ಅವರ ಅಭಿಪ್ರಾಯ

ಹಸಿವು ಮತ್ತು ಅಪೌಷ್ಟಿಕತೆ ನಮ್ಮ ದೇಶದಲ್ಲಿ ಇಂದಿಗೂ ಮುಂದುವರೆಯುತ್ತಿರುವುದು ಆರ್ಥಿಕ ದಾರಿದ್ರ್ಯದಿಂದ ಅಲ್ಲ. ಬೌದ್ಧಿಕ ಮತ್ತು ಸಾಂಸ್ಕೃತಿಕ ದಾರಿದ್ರ್ಯದಿಂದ ಮತ್ತು ಹುನ್ನಾರಗಳ ಕಾರಣದಿಂದ.

ಕೋಟಿಗಟ್ಟಲೆ ಮಕ್ಕಳು ಕ್ಯಾಲೊರಿ ಅಪೌಷ್ಟಿಕತೆಯಿಂದ ಬಾಧಿತರಾಗಿದ್ದರೆ, ಕೋಟಿ ಕೋಟಿ ಜನರು ಅತಿ ಹೆಚ್ಚು ಶರ್ಕರಪಿಷ್ಟವನ್ನು ಮಾತ್ರ ತಿಂದು ಪ್ರೋಟೀನ್ ಹಾಗೂ ಇನ್ನಿತರ ಪೌಷ್ಟಿಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ಬಡವರೂ ಡಯಾಬಿಟಿಕ್ ಆಗುವುದು ನಮ್ಮ ದೇಶದಲ್ಲಿ ಮಾತ್ರ ಎನಿಸುತ್ತದೆ.

ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ.

ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...