Homeಕರೋನಾ ತಲ್ಲಣಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎನ್ನುತ್ತಾರೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು.

- Advertisement -
- Advertisement -

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis ) ಕುರಿತ ಹಲವು ಪ್ರಶ್ನೆಗಳಿಗೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು ಸರಳವಾಗಿ ವಿವರಿಸಿದ್ದಾರೆ..

ಮ್ಯೂಕರ್‌ಮೈಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಯಾರಿಗೆ ಮತ್ತು ಹೇಗೆ ಹರಡುತ್ತೆ?

ಬ್ಲ್ಯಾಕ್ ಫಂಗಸ್ ಇದು ಮೂಗಿನಿಂದ ಶುರುವಾಗಿ ಕಣ್ಣು ಮತ್ತು ಮೆದುಳಿಗೆ ಹರಡುತ್ತೆ. ಸಕ್ಕರೆ ಕಾಯಿಲೆಗಳಿದ್ದವರಲ್ಲಿ ಸಕ್ಕರೆಯ ಅಂಶ ಅಧಿಕವಾದಾಗ, ನಿಯಂತ್ರಣ ತಪ್ಪಿದಾಗ ಇದು ಕಾಣಿಸಿಕೊಳ್ಳಬಹುದು. ಜೊತೆಗೆ ಸಕ್ಕರೆ ಕಾಯಿಲೆಯ ಜೊತೆಗೆ ಕಿಡ್ನಿ ವೈಫಲ್ಯವಿದ್ದವರಿಗೆ ಇದು ಕಾಣಿಸಿಕೊಳ್ಳುವ ಸಂಭವವಿದೆ. ಇದು ಹೊಸ ಕಾಯಿಲೆಯೇನಲ್ಲ, ಮುಂಚಿನಿಂದಲೂ ನೋಡುತ್ತಾ ಬಂದಿದ್ದೇವೆ.

ಕೋವಿಡ್‌ಗೂ ಬ್ಲ್ಯಾಕ್ ಫಂಗಸ್‌ಗೂ ಸಂಬಂಧವಿದೆಯೇ?

ಕೋವಿಡ್‌ ಸಂದರ್ಭದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಏಕೆಂದರೆ ಕೋವಿಡ್‌ ಬಂದವರಲ್ಲಿ ಸಕ್ಕರೆ ಕಾಯಿಲೆ ಇದ್ದವರಿಗೆ ಸಕ್ಕರೆಯ ಪ್ರಮಾಣ ನಿಯಂತ್ರಿಸಲಾಗದ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಕೋವಿಡ್‌ಗೆ ನೀಡುವ ಔಷಧಗಳಿಂದಲೂ ರಕ್ತದ ಸಕ್ಕರೆಯ ಅಂಶ ಏರು-ಪೇರಾಗಬಹುದು. ಹಾಗಾಗಿ ಸಕ್ಕರೆ ಕಾಯಿಲೆ ಇರುವವರು ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಬಹಳ ಮುಖ್ಯ. ಕೋವಿಡ್‌ ಬಂದವರಿಗೆ ಆಮ್ಲಜನಕ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅದಕ್ಕೆ ಬಳಸುವ ಆಮ್ಲಜನಕ ನಾಳಗಳು ಸ್ವಚ್ಛವಾಗಿಲ್ಲದಿದ್ದಲ್ಲಿ ಆಗಲೂ ಸಹ ಮೂಗಿನ ಮೂಲಕ ಈ ಬ್ಲಾಕ್ ಫಂಗಸ್ ಹರಡಿಕೊಳ್ಳಬಹುದು. ಹಾಗಾಗಿ ಮನೆಯಲ್ಲಿಯೇ ಆಕ್ಸಿಜನ್ ಕೊಡುವ ಸಂದರ್ಭ ಬಂದಲ್ಲಿ ಈ ಆಕ್ಸಿಜನ್ ನೇಷಲ್ ಟ್ಯೂಬ್ ಸ್ವಚ್ಛತೆಗೆ ಗಮನ ಕೊಡಬೇಕು. ಮೂರನೇಯದಾಗಿ ಕೋವಿಡ್ ಕಾಯಿಲೆ ಕಾಣಿಸಿಕೊಂಡ ಸಂದರ್ಭದಲ್ಲಿ ನಮ್ಮ ಇಮ್ಯುನಿಟಿ (ರೋಗ ನಿರೋಧಕತೆ) ಸ್ವಲ್ಪ ತಗ್ಗಿರುತ್ತೆ. ಈ ಸಂದರ್ಭದಲ್ಲಿ ಬ್ಲಾಕ್ ಫಂಗಸ್ ಅಂಟಿಕೊಳ್ಳಬಹುದು. ಆದರೆ ಈ ರೋಗ ಒಬ್ಬರಿಂದ ಒಬ್ಬರಿಗೆ ಗಾಳಿಯಲ್ಲಿ ಹರಡುವುದಿಲ್ಲ.

ಬ್ಲ್ಯಾಕ್ ಫಂಗಸ್‌ನ ಲಕ್ಷಣಗಳೇನು?

ಮೂಗು ಕಟ್ಟಿಕೊಳ್ಳುವುದು, ಮೂಗಿನಿಂದ ರಕ್ತ ಅಥವಾ ಕಪ್ಪು ಬಣ್ಣದ ಗೊಣ್ಣೆ ಬರುವುದು, ಮುಖದ ಊತ, ಕಣ್ಣು ಮತ್ತು ಮೂಗಿನ ಸುತ್ತ ನೋವು ಬರುವುದು, ಮೂಗು ಅಥವಾ ಬಾಯಿಯೊಳಗೆ ಕಪ್ಪು ಬಣ್ಣದ ಗಾಯ ಕಾಣಿಸಿಕೊಳ್ಳುವುದು. ಕಣ್ಣಿನ ದೃಷ್ಟಿ ಕಡಿಮೆಯಾಗುವುದು, ಡಬಲ್ ವಿಷನ್ (ಎರಡೆರಡು ಕಾಣುವುದು), ಕಣ್ಣು ಉಬ್ಬಿ ಮುಂದೆ ಬರುವುದು ಮತ್ತು ತಲೆ ನೋವು.

ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆಯೇನು?

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು. ಈ ಮೇಲಿನ ಗುಣಲಕ್ಷಣಗಳು ಕಂಡಬಂದಲ್ಲಿ ತಕ್ಷಣ ಇಎನ್‌ಟಿ (ಕಣ್ಣು, ಮೂಗು, ಗಂಟಲು ತಜ್ಞರು) ವೈದ್ಯರನ್ನು ಕಾಣಬೇಕು.

ನಾವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು?

ಡಯಾಬಿಟೀಸ್ ಇದ್ದವರು ಅದನ್ನು ನಿಯಂತ್ರಣದಲ್ಲಿಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು‌- ಅಂದರೆ ಆರೋಗ್ಯಕರ ಜೀವನಶೈಲಿ, ನಿಯಮಿತ ವ್ಯಾಯಾಮ.
(ಅನಗತ್ಯವಾಗಿ, ಅನಗತ್ಯ ಸಂದರ್ಭದಲ್ಲಿ, ಅನಗತ್ಯ ಪ್ರಮಾಣದಲ್ಲಿ ಸ್ಟಿರಾಯ್ಡ್‌ಗಳನ್ನು ವೈದ್ಯರು ಕೊಡಬಾರದು).

ಮಣ್ಣಿನಿಂದ‌ ಈ ಬ್ಲ್ಯಾಕ್ ಫಂಗಸ್ ಇನ್ಫೆಕ್ಷನ್ ಆಗತ್ತೆ ಅಂತಾರೆ. ಇದು ನಿಜವೆ?

ಈ ಮ್ಯುಕೋರ್‌ನ ಬೀಜಗಳು (spores) ಎಲ್ಲೆಡೆ ಇರುತ್ತವೆ. ಮಣ್ಣಿನಲ್ಲೂ ಸಹಾ.. ಹಾಗಾಗಿ ಎಚ್ಚರಿಕೆಯಿಂದಿರಬೇಕು.

ಕೋವಿಡ್ ನಂತರ ಎಷ್ಟು ಸಮಯ ಈ ಬ್ಲಾಕ್‌ ಫಂಗಸ್ ಬರದಂತೆ ಎಚ್ಚರ ವಹಿಸಬೇಕು?

ಇಂತಿಷ್ಟು ಕಾಲ ಎಂದು ಈಗಲೇ ಹೇಳಲಾಗದು. ಒಂದು ಸದೃಢ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬೇಕೆಂದು ಕೆಲಸ ಮಾಡಬೇಕು.

ಈ ಕುರಿತು ನಿಮಗೆ ಸಂದೇಹಗಳಿದ್ದಲ್ಲಿ, ಸಲಹೆ ಮತ್ತು ಚಿಕಿತ್ಸೆಯ ಕುರಿತು ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಕೆಸಿವಿಟಿ ಹೆಲ್ಫ್‌ಲೈನ್‌ ಅನ್ನು (08047166115) ಸಂಪರ್ಕಿಸಬಹುದು.

ಈ ಕುರಿತು ವೈದ್ಯರು ಮಾತನಾಡಿರುವ ವಿಡಿಯೋ ನೋಡಿ:


ಇದನ್ನೂ ಓದಿ; ಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...