Homeಕರೋನಾ ತಲ್ಲಣಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎನ್ನುತ್ತಾರೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು.

- Advertisement -
- Advertisement -

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis ) ಕುರಿತ ಹಲವು ಪ್ರಶ್ನೆಗಳಿಗೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು ಸರಳವಾಗಿ ವಿವರಿಸಿದ್ದಾರೆ..

ಮ್ಯೂಕರ್‌ಮೈಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಯಾರಿಗೆ ಮತ್ತು ಹೇಗೆ ಹರಡುತ್ತೆ?

ಬ್ಲ್ಯಾಕ್ ಫಂಗಸ್ ಇದು ಮೂಗಿನಿಂದ ಶುರುವಾಗಿ ಕಣ್ಣು ಮತ್ತು ಮೆದುಳಿಗೆ ಹರಡುತ್ತೆ. ಸಕ್ಕರೆ ಕಾಯಿಲೆಗಳಿದ್ದವರಲ್ಲಿ ಸಕ್ಕರೆಯ ಅಂಶ ಅಧಿಕವಾದಾಗ, ನಿಯಂತ್ರಣ ತಪ್ಪಿದಾಗ ಇದು ಕಾಣಿಸಿಕೊಳ್ಳಬಹುದು. ಜೊತೆಗೆ ಸಕ್ಕರೆ ಕಾಯಿಲೆಯ ಜೊತೆಗೆ ಕಿಡ್ನಿ ವೈಫಲ್ಯವಿದ್ದವರಿಗೆ ಇದು ಕಾಣಿಸಿಕೊಳ್ಳುವ ಸಂಭವವಿದೆ. ಇದು ಹೊಸ ಕಾಯಿಲೆಯೇನಲ್ಲ, ಮುಂಚಿನಿಂದಲೂ ನೋಡುತ್ತಾ ಬಂದಿದ್ದೇವೆ.

ಕೋವಿಡ್‌ಗೂ ಬ್ಲ್ಯಾಕ್ ಫಂಗಸ್‌ಗೂ ಸಂಬಂಧವಿದೆಯೇ?

ಕೋವಿಡ್‌ ಸಂದರ್ಭದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಏಕೆಂದರೆ ಕೋವಿಡ್‌ ಬಂದವರಲ್ಲಿ ಸಕ್ಕರೆ ಕಾಯಿಲೆ ಇದ್ದವರಿಗೆ ಸಕ್ಕರೆಯ ಪ್ರಮಾಣ ನಿಯಂತ್ರಿಸಲಾಗದ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಕೋವಿಡ್‌ಗೆ ನೀಡುವ ಔಷಧಗಳಿಂದಲೂ ರಕ್ತದ ಸಕ್ಕರೆಯ ಅಂಶ ಏರು-ಪೇರಾಗಬಹುದು. ಹಾಗಾಗಿ ಸಕ್ಕರೆ ಕಾಯಿಲೆ ಇರುವವರು ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಬಹಳ ಮುಖ್ಯ. ಕೋವಿಡ್‌ ಬಂದವರಿಗೆ ಆಮ್ಲಜನಕ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅದಕ್ಕೆ ಬಳಸುವ ಆಮ್ಲಜನಕ ನಾಳಗಳು ಸ್ವಚ್ಛವಾಗಿಲ್ಲದಿದ್ದಲ್ಲಿ ಆಗಲೂ ಸಹ ಮೂಗಿನ ಮೂಲಕ ಈ ಬ್ಲಾಕ್ ಫಂಗಸ್ ಹರಡಿಕೊಳ್ಳಬಹುದು. ಹಾಗಾಗಿ ಮನೆಯಲ್ಲಿಯೇ ಆಕ್ಸಿಜನ್ ಕೊಡುವ ಸಂದರ್ಭ ಬಂದಲ್ಲಿ ಈ ಆಕ್ಸಿಜನ್ ನೇಷಲ್ ಟ್ಯೂಬ್ ಸ್ವಚ್ಛತೆಗೆ ಗಮನ ಕೊಡಬೇಕು. ಮೂರನೇಯದಾಗಿ ಕೋವಿಡ್ ಕಾಯಿಲೆ ಕಾಣಿಸಿಕೊಂಡ ಸಂದರ್ಭದಲ್ಲಿ ನಮ್ಮ ಇಮ್ಯುನಿಟಿ (ರೋಗ ನಿರೋಧಕತೆ) ಸ್ವಲ್ಪ ತಗ್ಗಿರುತ್ತೆ. ಈ ಸಂದರ್ಭದಲ್ಲಿ ಬ್ಲಾಕ್ ಫಂಗಸ್ ಅಂಟಿಕೊಳ್ಳಬಹುದು. ಆದರೆ ಈ ರೋಗ ಒಬ್ಬರಿಂದ ಒಬ್ಬರಿಗೆ ಗಾಳಿಯಲ್ಲಿ ಹರಡುವುದಿಲ್ಲ.

ಬ್ಲ್ಯಾಕ್ ಫಂಗಸ್‌ನ ಲಕ್ಷಣಗಳೇನು?

ಮೂಗು ಕಟ್ಟಿಕೊಳ್ಳುವುದು, ಮೂಗಿನಿಂದ ರಕ್ತ ಅಥವಾ ಕಪ್ಪು ಬಣ್ಣದ ಗೊಣ್ಣೆ ಬರುವುದು, ಮುಖದ ಊತ, ಕಣ್ಣು ಮತ್ತು ಮೂಗಿನ ಸುತ್ತ ನೋವು ಬರುವುದು, ಮೂಗು ಅಥವಾ ಬಾಯಿಯೊಳಗೆ ಕಪ್ಪು ಬಣ್ಣದ ಗಾಯ ಕಾಣಿಸಿಕೊಳ್ಳುವುದು. ಕಣ್ಣಿನ ದೃಷ್ಟಿ ಕಡಿಮೆಯಾಗುವುದು, ಡಬಲ್ ವಿಷನ್ (ಎರಡೆರಡು ಕಾಣುವುದು), ಕಣ್ಣು ಉಬ್ಬಿ ಮುಂದೆ ಬರುವುದು ಮತ್ತು ತಲೆ ನೋವು.

ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆಯೇನು?

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು. ಈ ಮೇಲಿನ ಗುಣಲಕ್ಷಣಗಳು ಕಂಡಬಂದಲ್ಲಿ ತಕ್ಷಣ ಇಎನ್‌ಟಿ (ಕಣ್ಣು, ಮೂಗು, ಗಂಟಲು ತಜ್ಞರು) ವೈದ್ಯರನ್ನು ಕಾಣಬೇಕು.

ನಾವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು?

ಡಯಾಬಿಟೀಸ್ ಇದ್ದವರು ಅದನ್ನು ನಿಯಂತ್ರಣದಲ್ಲಿಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು‌- ಅಂದರೆ ಆರೋಗ್ಯಕರ ಜೀವನಶೈಲಿ, ನಿಯಮಿತ ವ್ಯಾಯಾಮ.
(ಅನಗತ್ಯವಾಗಿ, ಅನಗತ್ಯ ಸಂದರ್ಭದಲ್ಲಿ, ಅನಗತ್ಯ ಪ್ರಮಾಣದಲ್ಲಿ ಸ್ಟಿರಾಯ್ಡ್‌ಗಳನ್ನು ವೈದ್ಯರು ಕೊಡಬಾರದು).

ಮಣ್ಣಿನಿಂದ‌ ಈ ಬ್ಲ್ಯಾಕ್ ಫಂಗಸ್ ಇನ್ಫೆಕ್ಷನ್ ಆಗತ್ತೆ ಅಂತಾರೆ. ಇದು ನಿಜವೆ?

ಈ ಮ್ಯುಕೋರ್‌ನ ಬೀಜಗಳು (spores) ಎಲ್ಲೆಡೆ ಇರುತ್ತವೆ. ಮಣ್ಣಿನಲ್ಲೂ ಸಹಾ.. ಹಾಗಾಗಿ ಎಚ್ಚರಿಕೆಯಿಂದಿರಬೇಕು.

ಕೋವಿಡ್ ನಂತರ ಎಷ್ಟು ಸಮಯ ಈ ಬ್ಲಾಕ್‌ ಫಂಗಸ್ ಬರದಂತೆ ಎಚ್ಚರ ವಹಿಸಬೇಕು?

ಇಂತಿಷ್ಟು ಕಾಲ ಎಂದು ಈಗಲೇ ಹೇಳಲಾಗದು. ಒಂದು ಸದೃಢ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬೇಕೆಂದು ಕೆಲಸ ಮಾಡಬೇಕು.

ಈ ಕುರಿತು ನಿಮಗೆ ಸಂದೇಹಗಳಿದ್ದಲ್ಲಿ, ಸಲಹೆ ಮತ್ತು ಚಿಕಿತ್ಸೆಯ ಕುರಿತು ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಕೆಸಿವಿಟಿ ಹೆಲ್ಫ್‌ಲೈನ್‌ ಅನ್ನು (08047166115) ಸಂಪರ್ಕಿಸಬಹುದು.

ಈ ಕುರಿತು ವೈದ್ಯರು ಮಾತನಾಡಿರುವ ವಿಡಿಯೋ ನೋಡಿ:


ಇದನ್ನೂ ಓದಿ; ಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...