Homeಕರೋನಾ ತಲ್ಲಣಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎನ್ನುತ್ತಾರೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು.

- Advertisement -
- Advertisement -

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis ) ಕುರಿತ ಹಲವು ಪ್ರಶ್ನೆಗಳಿಗೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು ಸರಳವಾಗಿ ವಿವರಿಸಿದ್ದಾರೆ..

ಮ್ಯೂಕರ್‌ಮೈಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಯಾರಿಗೆ ಮತ್ತು ಹೇಗೆ ಹರಡುತ್ತೆ?

ಬ್ಲ್ಯಾಕ್ ಫಂಗಸ್ ಇದು ಮೂಗಿನಿಂದ ಶುರುವಾಗಿ ಕಣ್ಣು ಮತ್ತು ಮೆದುಳಿಗೆ ಹರಡುತ್ತೆ. ಸಕ್ಕರೆ ಕಾಯಿಲೆಗಳಿದ್ದವರಲ್ಲಿ ಸಕ್ಕರೆಯ ಅಂಶ ಅಧಿಕವಾದಾಗ, ನಿಯಂತ್ರಣ ತಪ್ಪಿದಾಗ ಇದು ಕಾಣಿಸಿಕೊಳ್ಳಬಹುದು. ಜೊತೆಗೆ ಸಕ್ಕರೆ ಕಾಯಿಲೆಯ ಜೊತೆಗೆ ಕಿಡ್ನಿ ವೈಫಲ್ಯವಿದ್ದವರಿಗೆ ಇದು ಕಾಣಿಸಿಕೊಳ್ಳುವ ಸಂಭವವಿದೆ. ಇದು ಹೊಸ ಕಾಯಿಲೆಯೇನಲ್ಲ, ಮುಂಚಿನಿಂದಲೂ ನೋಡುತ್ತಾ ಬಂದಿದ್ದೇವೆ.

ಕೋವಿಡ್‌ಗೂ ಬ್ಲ್ಯಾಕ್ ಫಂಗಸ್‌ಗೂ ಸಂಬಂಧವಿದೆಯೇ?

ಕೋವಿಡ್‌ ಸಂದರ್ಭದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಏಕೆಂದರೆ ಕೋವಿಡ್‌ ಬಂದವರಲ್ಲಿ ಸಕ್ಕರೆ ಕಾಯಿಲೆ ಇದ್ದವರಿಗೆ ಸಕ್ಕರೆಯ ಪ್ರಮಾಣ ನಿಯಂತ್ರಿಸಲಾಗದ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಕೋವಿಡ್‌ಗೆ ನೀಡುವ ಔಷಧಗಳಿಂದಲೂ ರಕ್ತದ ಸಕ್ಕರೆಯ ಅಂಶ ಏರು-ಪೇರಾಗಬಹುದು. ಹಾಗಾಗಿ ಸಕ್ಕರೆ ಕಾಯಿಲೆ ಇರುವವರು ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಬಹಳ ಮುಖ್ಯ. ಕೋವಿಡ್‌ ಬಂದವರಿಗೆ ಆಮ್ಲಜನಕ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅದಕ್ಕೆ ಬಳಸುವ ಆಮ್ಲಜನಕ ನಾಳಗಳು ಸ್ವಚ್ಛವಾಗಿಲ್ಲದಿದ್ದಲ್ಲಿ ಆಗಲೂ ಸಹ ಮೂಗಿನ ಮೂಲಕ ಈ ಬ್ಲಾಕ್ ಫಂಗಸ್ ಹರಡಿಕೊಳ್ಳಬಹುದು. ಹಾಗಾಗಿ ಮನೆಯಲ್ಲಿಯೇ ಆಕ್ಸಿಜನ್ ಕೊಡುವ ಸಂದರ್ಭ ಬಂದಲ್ಲಿ ಈ ಆಕ್ಸಿಜನ್ ನೇಷಲ್ ಟ್ಯೂಬ್ ಸ್ವಚ್ಛತೆಗೆ ಗಮನ ಕೊಡಬೇಕು. ಮೂರನೇಯದಾಗಿ ಕೋವಿಡ್ ಕಾಯಿಲೆ ಕಾಣಿಸಿಕೊಂಡ ಸಂದರ್ಭದಲ್ಲಿ ನಮ್ಮ ಇಮ್ಯುನಿಟಿ (ರೋಗ ನಿರೋಧಕತೆ) ಸ್ವಲ್ಪ ತಗ್ಗಿರುತ್ತೆ. ಈ ಸಂದರ್ಭದಲ್ಲಿ ಬ್ಲಾಕ್ ಫಂಗಸ್ ಅಂಟಿಕೊಳ್ಳಬಹುದು. ಆದರೆ ಈ ರೋಗ ಒಬ್ಬರಿಂದ ಒಬ್ಬರಿಗೆ ಗಾಳಿಯಲ್ಲಿ ಹರಡುವುದಿಲ್ಲ.

ಬ್ಲ್ಯಾಕ್ ಫಂಗಸ್‌ನ ಲಕ್ಷಣಗಳೇನು?

ಮೂಗು ಕಟ್ಟಿಕೊಳ್ಳುವುದು, ಮೂಗಿನಿಂದ ರಕ್ತ ಅಥವಾ ಕಪ್ಪು ಬಣ್ಣದ ಗೊಣ್ಣೆ ಬರುವುದು, ಮುಖದ ಊತ, ಕಣ್ಣು ಮತ್ತು ಮೂಗಿನ ಸುತ್ತ ನೋವು ಬರುವುದು, ಮೂಗು ಅಥವಾ ಬಾಯಿಯೊಳಗೆ ಕಪ್ಪು ಬಣ್ಣದ ಗಾಯ ಕಾಣಿಸಿಕೊಳ್ಳುವುದು. ಕಣ್ಣಿನ ದೃಷ್ಟಿ ಕಡಿಮೆಯಾಗುವುದು, ಡಬಲ್ ವಿಷನ್ (ಎರಡೆರಡು ಕಾಣುವುದು), ಕಣ್ಣು ಉಬ್ಬಿ ಮುಂದೆ ಬರುವುದು ಮತ್ತು ತಲೆ ನೋವು.

ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆಯೇನು?

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು. ಈ ಮೇಲಿನ ಗುಣಲಕ್ಷಣಗಳು ಕಂಡಬಂದಲ್ಲಿ ತಕ್ಷಣ ಇಎನ್‌ಟಿ (ಕಣ್ಣು, ಮೂಗು, ಗಂಟಲು ತಜ್ಞರು) ವೈದ್ಯರನ್ನು ಕಾಣಬೇಕು.

ನಾವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು?

ಡಯಾಬಿಟೀಸ್ ಇದ್ದವರು ಅದನ್ನು ನಿಯಂತ್ರಣದಲ್ಲಿಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು‌- ಅಂದರೆ ಆರೋಗ್ಯಕರ ಜೀವನಶೈಲಿ, ನಿಯಮಿತ ವ್ಯಾಯಾಮ.
(ಅನಗತ್ಯವಾಗಿ, ಅನಗತ್ಯ ಸಂದರ್ಭದಲ್ಲಿ, ಅನಗತ್ಯ ಪ್ರಮಾಣದಲ್ಲಿ ಸ್ಟಿರಾಯ್ಡ್‌ಗಳನ್ನು ವೈದ್ಯರು ಕೊಡಬಾರದು).

ಮಣ್ಣಿನಿಂದ‌ ಈ ಬ್ಲ್ಯಾಕ್ ಫಂಗಸ್ ಇನ್ಫೆಕ್ಷನ್ ಆಗತ್ತೆ ಅಂತಾರೆ. ಇದು ನಿಜವೆ?

ಈ ಮ್ಯುಕೋರ್‌ನ ಬೀಜಗಳು (spores) ಎಲ್ಲೆಡೆ ಇರುತ್ತವೆ. ಮಣ್ಣಿನಲ್ಲೂ ಸಹಾ.. ಹಾಗಾಗಿ ಎಚ್ಚರಿಕೆಯಿಂದಿರಬೇಕು.

ಕೋವಿಡ್ ನಂತರ ಎಷ್ಟು ಸಮಯ ಈ ಬ್ಲಾಕ್‌ ಫಂಗಸ್ ಬರದಂತೆ ಎಚ್ಚರ ವಹಿಸಬೇಕು?

ಇಂತಿಷ್ಟು ಕಾಲ ಎಂದು ಈಗಲೇ ಹೇಳಲಾಗದು. ಒಂದು ಸದೃಢ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬೇಕೆಂದು ಕೆಲಸ ಮಾಡಬೇಕು.

ಈ ಕುರಿತು ನಿಮಗೆ ಸಂದೇಹಗಳಿದ್ದಲ್ಲಿ, ಸಲಹೆ ಮತ್ತು ಚಿಕಿತ್ಸೆಯ ಕುರಿತು ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಕೆಸಿವಿಟಿ ಹೆಲ್ಫ್‌ಲೈನ್‌ ಅನ್ನು (08047166115) ಸಂಪರ್ಕಿಸಬಹುದು.

ಈ ಕುರಿತು ವೈದ್ಯರು ಮಾತನಾಡಿರುವ ವಿಡಿಯೋ ನೋಡಿ:


ಇದನ್ನೂ ಓದಿ; ಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...