Homeಕರೋನಾ ತಲ್ಲಣಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎನ್ನುತ್ತಾರೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು.

- Advertisement -
- Advertisement -

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis ) ಕುರಿತ ಹಲವು ಪ್ರಶ್ನೆಗಳಿಗೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು ಸರಳವಾಗಿ ವಿವರಿಸಿದ್ದಾರೆ..

ಮ್ಯೂಕರ್‌ಮೈಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಯಾರಿಗೆ ಮತ್ತು ಹೇಗೆ ಹರಡುತ್ತೆ?

ಬ್ಲ್ಯಾಕ್ ಫಂಗಸ್ ಇದು ಮೂಗಿನಿಂದ ಶುರುವಾಗಿ ಕಣ್ಣು ಮತ್ತು ಮೆದುಳಿಗೆ ಹರಡುತ್ತೆ. ಸಕ್ಕರೆ ಕಾಯಿಲೆಗಳಿದ್ದವರಲ್ಲಿ ಸಕ್ಕರೆಯ ಅಂಶ ಅಧಿಕವಾದಾಗ, ನಿಯಂತ್ರಣ ತಪ್ಪಿದಾಗ ಇದು ಕಾಣಿಸಿಕೊಳ್ಳಬಹುದು. ಜೊತೆಗೆ ಸಕ್ಕರೆ ಕಾಯಿಲೆಯ ಜೊತೆಗೆ ಕಿಡ್ನಿ ವೈಫಲ್ಯವಿದ್ದವರಿಗೆ ಇದು ಕಾಣಿಸಿಕೊಳ್ಳುವ ಸಂಭವವಿದೆ. ಇದು ಹೊಸ ಕಾಯಿಲೆಯೇನಲ್ಲ, ಮುಂಚಿನಿಂದಲೂ ನೋಡುತ್ತಾ ಬಂದಿದ್ದೇವೆ.

ಕೋವಿಡ್‌ಗೂ ಬ್ಲ್ಯಾಕ್ ಫಂಗಸ್‌ಗೂ ಸಂಬಂಧವಿದೆಯೇ?

ಕೋವಿಡ್‌ ಸಂದರ್ಭದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಏಕೆಂದರೆ ಕೋವಿಡ್‌ ಬಂದವರಲ್ಲಿ ಸಕ್ಕರೆ ಕಾಯಿಲೆ ಇದ್ದವರಿಗೆ ಸಕ್ಕರೆಯ ಪ್ರಮಾಣ ನಿಯಂತ್ರಿಸಲಾಗದ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಕೋವಿಡ್‌ಗೆ ನೀಡುವ ಔಷಧಗಳಿಂದಲೂ ರಕ್ತದ ಸಕ್ಕರೆಯ ಅಂಶ ಏರು-ಪೇರಾಗಬಹುದು. ಹಾಗಾಗಿ ಸಕ್ಕರೆ ಕಾಯಿಲೆ ಇರುವವರು ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಬಹಳ ಮುಖ್ಯ. ಕೋವಿಡ್‌ ಬಂದವರಿಗೆ ಆಮ್ಲಜನಕ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅದಕ್ಕೆ ಬಳಸುವ ಆಮ್ಲಜನಕ ನಾಳಗಳು ಸ್ವಚ್ಛವಾಗಿಲ್ಲದಿದ್ದಲ್ಲಿ ಆಗಲೂ ಸಹ ಮೂಗಿನ ಮೂಲಕ ಈ ಬ್ಲಾಕ್ ಫಂಗಸ್ ಹರಡಿಕೊಳ್ಳಬಹುದು. ಹಾಗಾಗಿ ಮನೆಯಲ್ಲಿಯೇ ಆಕ್ಸಿಜನ್ ಕೊಡುವ ಸಂದರ್ಭ ಬಂದಲ್ಲಿ ಈ ಆಕ್ಸಿಜನ್ ನೇಷಲ್ ಟ್ಯೂಬ್ ಸ್ವಚ್ಛತೆಗೆ ಗಮನ ಕೊಡಬೇಕು. ಮೂರನೇಯದಾಗಿ ಕೋವಿಡ್ ಕಾಯಿಲೆ ಕಾಣಿಸಿಕೊಂಡ ಸಂದರ್ಭದಲ್ಲಿ ನಮ್ಮ ಇಮ್ಯುನಿಟಿ (ರೋಗ ನಿರೋಧಕತೆ) ಸ್ವಲ್ಪ ತಗ್ಗಿರುತ್ತೆ. ಈ ಸಂದರ್ಭದಲ್ಲಿ ಬ್ಲಾಕ್ ಫಂಗಸ್ ಅಂಟಿಕೊಳ್ಳಬಹುದು. ಆದರೆ ಈ ರೋಗ ಒಬ್ಬರಿಂದ ಒಬ್ಬರಿಗೆ ಗಾಳಿಯಲ್ಲಿ ಹರಡುವುದಿಲ್ಲ.

ಬ್ಲ್ಯಾಕ್ ಫಂಗಸ್‌ನ ಲಕ್ಷಣಗಳೇನು?

ಮೂಗು ಕಟ್ಟಿಕೊಳ್ಳುವುದು, ಮೂಗಿನಿಂದ ರಕ್ತ ಅಥವಾ ಕಪ್ಪು ಬಣ್ಣದ ಗೊಣ್ಣೆ ಬರುವುದು, ಮುಖದ ಊತ, ಕಣ್ಣು ಮತ್ತು ಮೂಗಿನ ಸುತ್ತ ನೋವು ಬರುವುದು, ಮೂಗು ಅಥವಾ ಬಾಯಿಯೊಳಗೆ ಕಪ್ಪು ಬಣ್ಣದ ಗಾಯ ಕಾಣಿಸಿಕೊಳ್ಳುವುದು. ಕಣ್ಣಿನ ದೃಷ್ಟಿ ಕಡಿಮೆಯಾಗುವುದು, ಡಬಲ್ ವಿಷನ್ (ಎರಡೆರಡು ಕಾಣುವುದು), ಕಣ್ಣು ಉಬ್ಬಿ ಮುಂದೆ ಬರುವುದು ಮತ್ತು ತಲೆ ನೋವು.

ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆಯೇನು?

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು. ಈ ಮೇಲಿನ ಗುಣಲಕ್ಷಣಗಳು ಕಂಡಬಂದಲ್ಲಿ ತಕ್ಷಣ ಇಎನ್‌ಟಿ (ಕಣ್ಣು, ಮೂಗು, ಗಂಟಲು ತಜ್ಞರು) ವೈದ್ಯರನ್ನು ಕಾಣಬೇಕು.

ನಾವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು?

ಡಯಾಬಿಟೀಸ್ ಇದ್ದವರು ಅದನ್ನು ನಿಯಂತ್ರಣದಲ್ಲಿಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು‌- ಅಂದರೆ ಆರೋಗ್ಯಕರ ಜೀವನಶೈಲಿ, ನಿಯಮಿತ ವ್ಯಾಯಾಮ.
(ಅನಗತ್ಯವಾಗಿ, ಅನಗತ್ಯ ಸಂದರ್ಭದಲ್ಲಿ, ಅನಗತ್ಯ ಪ್ರಮಾಣದಲ್ಲಿ ಸ್ಟಿರಾಯ್ಡ್‌ಗಳನ್ನು ವೈದ್ಯರು ಕೊಡಬಾರದು).

ಮಣ್ಣಿನಿಂದ‌ ಈ ಬ್ಲ್ಯಾಕ್ ಫಂಗಸ್ ಇನ್ಫೆಕ್ಷನ್ ಆಗತ್ತೆ ಅಂತಾರೆ. ಇದು ನಿಜವೆ?

ಈ ಮ್ಯುಕೋರ್‌ನ ಬೀಜಗಳು (spores) ಎಲ್ಲೆಡೆ ಇರುತ್ತವೆ. ಮಣ್ಣಿನಲ್ಲೂ ಸಹಾ.. ಹಾಗಾಗಿ ಎಚ್ಚರಿಕೆಯಿಂದಿರಬೇಕು.

ಕೋವಿಡ್ ನಂತರ ಎಷ್ಟು ಸಮಯ ಈ ಬ್ಲಾಕ್‌ ಫಂಗಸ್ ಬರದಂತೆ ಎಚ್ಚರ ವಹಿಸಬೇಕು?

ಇಂತಿಷ್ಟು ಕಾಲ ಎಂದು ಈಗಲೇ ಹೇಳಲಾಗದು. ಒಂದು ಸದೃಢ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬೇಕೆಂದು ಕೆಲಸ ಮಾಡಬೇಕು.

ಈ ಕುರಿತು ನಿಮಗೆ ಸಂದೇಹಗಳಿದ್ದಲ್ಲಿ, ಸಲಹೆ ಮತ್ತು ಚಿಕಿತ್ಸೆಯ ಕುರಿತು ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಕೆಸಿವಿಟಿ ಹೆಲ್ಫ್‌ಲೈನ್‌ ಅನ್ನು (08047166115) ಸಂಪರ್ಕಿಸಬಹುದು.

ಈ ಕುರಿತು ವೈದ್ಯರು ಮಾತನಾಡಿರುವ ವಿಡಿಯೋ ನೋಡಿ:


ಇದನ್ನೂ ಓದಿ; ಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...