Homeಕರೋನಾ ತಲ್ಲಣಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎನ್ನುತ್ತಾರೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು.

- Advertisement -
- Advertisement -

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis ) ಕುರಿತ ಹಲವು ಪ್ರಶ್ನೆಗಳಿಗೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು ಸರಳವಾಗಿ ವಿವರಿಸಿದ್ದಾರೆ..

ಮ್ಯೂಕರ್‌ಮೈಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಯಾರಿಗೆ ಮತ್ತು ಹೇಗೆ ಹರಡುತ್ತೆ?

ಬ್ಲ್ಯಾಕ್ ಫಂಗಸ್ ಇದು ಮೂಗಿನಿಂದ ಶುರುವಾಗಿ ಕಣ್ಣು ಮತ್ತು ಮೆದುಳಿಗೆ ಹರಡುತ್ತೆ. ಸಕ್ಕರೆ ಕಾಯಿಲೆಗಳಿದ್ದವರಲ್ಲಿ ಸಕ್ಕರೆಯ ಅಂಶ ಅಧಿಕವಾದಾಗ, ನಿಯಂತ್ರಣ ತಪ್ಪಿದಾಗ ಇದು ಕಾಣಿಸಿಕೊಳ್ಳಬಹುದು. ಜೊತೆಗೆ ಸಕ್ಕರೆ ಕಾಯಿಲೆಯ ಜೊತೆಗೆ ಕಿಡ್ನಿ ವೈಫಲ್ಯವಿದ್ದವರಿಗೆ ಇದು ಕಾಣಿಸಿಕೊಳ್ಳುವ ಸಂಭವವಿದೆ. ಇದು ಹೊಸ ಕಾಯಿಲೆಯೇನಲ್ಲ, ಮುಂಚಿನಿಂದಲೂ ನೋಡುತ್ತಾ ಬಂದಿದ್ದೇವೆ.

ಕೋವಿಡ್‌ಗೂ ಬ್ಲ್ಯಾಕ್ ಫಂಗಸ್‌ಗೂ ಸಂಬಂಧವಿದೆಯೇ?

ಕೋವಿಡ್‌ ಸಂದರ್ಭದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಏಕೆಂದರೆ ಕೋವಿಡ್‌ ಬಂದವರಲ್ಲಿ ಸಕ್ಕರೆ ಕಾಯಿಲೆ ಇದ್ದವರಿಗೆ ಸಕ್ಕರೆಯ ಪ್ರಮಾಣ ನಿಯಂತ್ರಿಸಲಾಗದ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಕೋವಿಡ್‌ಗೆ ನೀಡುವ ಔಷಧಗಳಿಂದಲೂ ರಕ್ತದ ಸಕ್ಕರೆಯ ಅಂಶ ಏರು-ಪೇರಾಗಬಹುದು. ಹಾಗಾಗಿ ಸಕ್ಕರೆ ಕಾಯಿಲೆ ಇರುವವರು ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಬಹಳ ಮುಖ್ಯ. ಕೋವಿಡ್‌ ಬಂದವರಿಗೆ ಆಮ್ಲಜನಕ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅದಕ್ಕೆ ಬಳಸುವ ಆಮ್ಲಜನಕ ನಾಳಗಳು ಸ್ವಚ್ಛವಾಗಿಲ್ಲದಿದ್ದಲ್ಲಿ ಆಗಲೂ ಸಹ ಮೂಗಿನ ಮೂಲಕ ಈ ಬ್ಲಾಕ್ ಫಂಗಸ್ ಹರಡಿಕೊಳ್ಳಬಹುದು. ಹಾಗಾಗಿ ಮನೆಯಲ್ಲಿಯೇ ಆಕ್ಸಿಜನ್ ಕೊಡುವ ಸಂದರ್ಭ ಬಂದಲ್ಲಿ ಈ ಆಕ್ಸಿಜನ್ ನೇಷಲ್ ಟ್ಯೂಬ್ ಸ್ವಚ್ಛತೆಗೆ ಗಮನ ಕೊಡಬೇಕು. ಮೂರನೇಯದಾಗಿ ಕೋವಿಡ್ ಕಾಯಿಲೆ ಕಾಣಿಸಿಕೊಂಡ ಸಂದರ್ಭದಲ್ಲಿ ನಮ್ಮ ಇಮ್ಯುನಿಟಿ (ರೋಗ ನಿರೋಧಕತೆ) ಸ್ವಲ್ಪ ತಗ್ಗಿರುತ್ತೆ. ಈ ಸಂದರ್ಭದಲ್ಲಿ ಬ್ಲಾಕ್ ಫಂಗಸ್ ಅಂಟಿಕೊಳ್ಳಬಹುದು. ಆದರೆ ಈ ರೋಗ ಒಬ್ಬರಿಂದ ಒಬ್ಬರಿಗೆ ಗಾಳಿಯಲ್ಲಿ ಹರಡುವುದಿಲ್ಲ.

ಬ್ಲ್ಯಾಕ್ ಫಂಗಸ್‌ನ ಲಕ್ಷಣಗಳೇನು?

ಮೂಗು ಕಟ್ಟಿಕೊಳ್ಳುವುದು, ಮೂಗಿನಿಂದ ರಕ್ತ ಅಥವಾ ಕಪ್ಪು ಬಣ್ಣದ ಗೊಣ್ಣೆ ಬರುವುದು, ಮುಖದ ಊತ, ಕಣ್ಣು ಮತ್ತು ಮೂಗಿನ ಸುತ್ತ ನೋವು ಬರುವುದು, ಮೂಗು ಅಥವಾ ಬಾಯಿಯೊಳಗೆ ಕಪ್ಪು ಬಣ್ಣದ ಗಾಯ ಕಾಣಿಸಿಕೊಳ್ಳುವುದು. ಕಣ್ಣಿನ ದೃಷ್ಟಿ ಕಡಿಮೆಯಾಗುವುದು, ಡಬಲ್ ವಿಷನ್ (ಎರಡೆರಡು ಕಾಣುವುದು), ಕಣ್ಣು ಉಬ್ಬಿ ಮುಂದೆ ಬರುವುದು ಮತ್ತು ತಲೆ ನೋವು.

ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆಯೇನು?

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು. ಈ ಮೇಲಿನ ಗುಣಲಕ್ಷಣಗಳು ಕಂಡಬಂದಲ್ಲಿ ತಕ್ಷಣ ಇಎನ್‌ಟಿ (ಕಣ್ಣು, ಮೂಗು, ಗಂಟಲು ತಜ್ಞರು) ವೈದ್ಯರನ್ನು ಕಾಣಬೇಕು.

ನಾವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು?

ಡಯಾಬಿಟೀಸ್ ಇದ್ದವರು ಅದನ್ನು ನಿಯಂತ್ರಣದಲ್ಲಿಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು‌- ಅಂದರೆ ಆರೋಗ್ಯಕರ ಜೀವನಶೈಲಿ, ನಿಯಮಿತ ವ್ಯಾಯಾಮ.
(ಅನಗತ್ಯವಾಗಿ, ಅನಗತ್ಯ ಸಂದರ್ಭದಲ್ಲಿ, ಅನಗತ್ಯ ಪ್ರಮಾಣದಲ್ಲಿ ಸ್ಟಿರಾಯ್ಡ್‌ಗಳನ್ನು ವೈದ್ಯರು ಕೊಡಬಾರದು).

ಮಣ್ಣಿನಿಂದ‌ ಈ ಬ್ಲ್ಯಾಕ್ ಫಂಗಸ್ ಇನ್ಫೆಕ್ಷನ್ ಆಗತ್ತೆ ಅಂತಾರೆ. ಇದು ನಿಜವೆ?

ಈ ಮ್ಯುಕೋರ್‌ನ ಬೀಜಗಳು (spores) ಎಲ್ಲೆಡೆ ಇರುತ್ತವೆ. ಮಣ್ಣಿನಲ್ಲೂ ಸಹಾ.. ಹಾಗಾಗಿ ಎಚ್ಚರಿಕೆಯಿಂದಿರಬೇಕು.

ಕೋವಿಡ್ ನಂತರ ಎಷ್ಟು ಸಮಯ ಈ ಬ್ಲಾಕ್‌ ಫಂಗಸ್ ಬರದಂತೆ ಎಚ್ಚರ ವಹಿಸಬೇಕು?

ಇಂತಿಷ್ಟು ಕಾಲ ಎಂದು ಈಗಲೇ ಹೇಳಲಾಗದು. ಒಂದು ಸದೃಢ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬೇಕೆಂದು ಕೆಲಸ ಮಾಡಬೇಕು.

ಈ ಕುರಿತು ನಿಮಗೆ ಸಂದೇಹಗಳಿದ್ದಲ್ಲಿ, ಸಲಹೆ ಮತ್ತು ಚಿಕಿತ್ಸೆಯ ಕುರಿತು ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಕೆಸಿವಿಟಿ ಹೆಲ್ಫ್‌ಲೈನ್‌ ಅನ್ನು (08047166115) ಸಂಪರ್ಕಿಸಬಹುದು.

ಈ ಕುರಿತು ವೈದ್ಯರು ಮಾತನಾಡಿರುವ ವಿಡಿಯೋ ನೋಡಿ:


ಇದನ್ನೂ ಓದಿ; ಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...