Homeಕರೋನಾ ತಲ್ಲಣಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎನ್ನುತ್ತಾರೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು.

- Advertisement -
- Advertisement -

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis ) ಕುರಿತ ಹಲವು ಪ್ರಶ್ನೆಗಳಿಗೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು ಸರಳವಾಗಿ ವಿವರಿಸಿದ್ದಾರೆ..

ಮ್ಯೂಕರ್‌ಮೈಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಯಾರಿಗೆ ಮತ್ತು ಹೇಗೆ ಹರಡುತ್ತೆ?

ಬ್ಲ್ಯಾಕ್ ಫಂಗಸ್ ಇದು ಮೂಗಿನಿಂದ ಶುರುವಾಗಿ ಕಣ್ಣು ಮತ್ತು ಮೆದುಳಿಗೆ ಹರಡುತ್ತೆ. ಸಕ್ಕರೆ ಕಾಯಿಲೆಗಳಿದ್ದವರಲ್ಲಿ ಸಕ್ಕರೆಯ ಅಂಶ ಅಧಿಕವಾದಾಗ, ನಿಯಂತ್ರಣ ತಪ್ಪಿದಾಗ ಇದು ಕಾಣಿಸಿಕೊಳ್ಳಬಹುದು. ಜೊತೆಗೆ ಸಕ್ಕರೆ ಕಾಯಿಲೆಯ ಜೊತೆಗೆ ಕಿಡ್ನಿ ವೈಫಲ್ಯವಿದ್ದವರಿಗೆ ಇದು ಕಾಣಿಸಿಕೊಳ್ಳುವ ಸಂಭವವಿದೆ. ಇದು ಹೊಸ ಕಾಯಿಲೆಯೇನಲ್ಲ, ಮುಂಚಿನಿಂದಲೂ ನೋಡುತ್ತಾ ಬಂದಿದ್ದೇವೆ.

ಕೋವಿಡ್‌ಗೂ ಬ್ಲ್ಯಾಕ್ ಫಂಗಸ್‌ಗೂ ಸಂಬಂಧವಿದೆಯೇ?

ಕೋವಿಡ್‌ ಸಂದರ್ಭದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಏಕೆಂದರೆ ಕೋವಿಡ್‌ ಬಂದವರಲ್ಲಿ ಸಕ್ಕರೆ ಕಾಯಿಲೆ ಇದ್ದವರಿಗೆ ಸಕ್ಕರೆಯ ಪ್ರಮಾಣ ನಿಯಂತ್ರಿಸಲಾಗದ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಕೋವಿಡ್‌ಗೆ ನೀಡುವ ಔಷಧಗಳಿಂದಲೂ ರಕ್ತದ ಸಕ್ಕರೆಯ ಅಂಶ ಏರು-ಪೇರಾಗಬಹುದು. ಹಾಗಾಗಿ ಸಕ್ಕರೆ ಕಾಯಿಲೆ ಇರುವವರು ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಬಹಳ ಮುಖ್ಯ. ಕೋವಿಡ್‌ ಬಂದವರಿಗೆ ಆಮ್ಲಜನಕ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅದಕ್ಕೆ ಬಳಸುವ ಆಮ್ಲಜನಕ ನಾಳಗಳು ಸ್ವಚ್ಛವಾಗಿಲ್ಲದಿದ್ದಲ್ಲಿ ಆಗಲೂ ಸಹ ಮೂಗಿನ ಮೂಲಕ ಈ ಬ್ಲಾಕ್ ಫಂಗಸ್ ಹರಡಿಕೊಳ್ಳಬಹುದು. ಹಾಗಾಗಿ ಮನೆಯಲ್ಲಿಯೇ ಆಕ್ಸಿಜನ್ ಕೊಡುವ ಸಂದರ್ಭ ಬಂದಲ್ಲಿ ಈ ಆಕ್ಸಿಜನ್ ನೇಷಲ್ ಟ್ಯೂಬ್ ಸ್ವಚ್ಛತೆಗೆ ಗಮನ ಕೊಡಬೇಕು. ಮೂರನೇಯದಾಗಿ ಕೋವಿಡ್ ಕಾಯಿಲೆ ಕಾಣಿಸಿಕೊಂಡ ಸಂದರ್ಭದಲ್ಲಿ ನಮ್ಮ ಇಮ್ಯುನಿಟಿ (ರೋಗ ನಿರೋಧಕತೆ) ಸ್ವಲ್ಪ ತಗ್ಗಿರುತ್ತೆ. ಈ ಸಂದರ್ಭದಲ್ಲಿ ಬ್ಲಾಕ್ ಫಂಗಸ್ ಅಂಟಿಕೊಳ್ಳಬಹುದು. ಆದರೆ ಈ ರೋಗ ಒಬ್ಬರಿಂದ ಒಬ್ಬರಿಗೆ ಗಾಳಿಯಲ್ಲಿ ಹರಡುವುದಿಲ್ಲ.

ಬ್ಲ್ಯಾಕ್ ಫಂಗಸ್‌ನ ಲಕ್ಷಣಗಳೇನು?

ಮೂಗು ಕಟ್ಟಿಕೊಳ್ಳುವುದು, ಮೂಗಿನಿಂದ ರಕ್ತ ಅಥವಾ ಕಪ್ಪು ಬಣ್ಣದ ಗೊಣ್ಣೆ ಬರುವುದು, ಮುಖದ ಊತ, ಕಣ್ಣು ಮತ್ತು ಮೂಗಿನ ಸುತ್ತ ನೋವು ಬರುವುದು, ಮೂಗು ಅಥವಾ ಬಾಯಿಯೊಳಗೆ ಕಪ್ಪು ಬಣ್ಣದ ಗಾಯ ಕಾಣಿಸಿಕೊಳ್ಳುವುದು. ಕಣ್ಣಿನ ದೃಷ್ಟಿ ಕಡಿಮೆಯಾಗುವುದು, ಡಬಲ್ ವಿಷನ್ (ಎರಡೆರಡು ಕಾಣುವುದು), ಕಣ್ಣು ಉಬ್ಬಿ ಮುಂದೆ ಬರುವುದು ಮತ್ತು ತಲೆ ನೋವು.

ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆಯೇನು?

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು. ಈ ಮೇಲಿನ ಗುಣಲಕ್ಷಣಗಳು ಕಂಡಬಂದಲ್ಲಿ ತಕ್ಷಣ ಇಎನ್‌ಟಿ (ಕಣ್ಣು, ಮೂಗು, ಗಂಟಲು ತಜ್ಞರು) ವೈದ್ಯರನ್ನು ಕಾಣಬೇಕು.

ನಾವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು?

ಡಯಾಬಿಟೀಸ್ ಇದ್ದವರು ಅದನ್ನು ನಿಯಂತ್ರಣದಲ್ಲಿಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು‌- ಅಂದರೆ ಆರೋಗ್ಯಕರ ಜೀವನಶೈಲಿ, ನಿಯಮಿತ ವ್ಯಾಯಾಮ.
(ಅನಗತ್ಯವಾಗಿ, ಅನಗತ್ಯ ಸಂದರ್ಭದಲ್ಲಿ, ಅನಗತ್ಯ ಪ್ರಮಾಣದಲ್ಲಿ ಸ್ಟಿರಾಯ್ಡ್‌ಗಳನ್ನು ವೈದ್ಯರು ಕೊಡಬಾರದು).

ಮಣ್ಣಿನಿಂದ‌ ಈ ಬ್ಲ್ಯಾಕ್ ಫಂಗಸ್ ಇನ್ಫೆಕ್ಷನ್ ಆಗತ್ತೆ ಅಂತಾರೆ. ಇದು ನಿಜವೆ?

ಈ ಮ್ಯುಕೋರ್‌ನ ಬೀಜಗಳು (spores) ಎಲ್ಲೆಡೆ ಇರುತ್ತವೆ. ಮಣ್ಣಿನಲ್ಲೂ ಸಹಾ.. ಹಾಗಾಗಿ ಎಚ್ಚರಿಕೆಯಿಂದಿರಬೇಕು.

ಕೋವಿಡ್ ನಂತರ ಎಷ್ಟು ಸಮಯ ಈ ಬ್ಲಾಕ್‌ ಫಂಗಸ್ ಬರದಂತೆ ಎಚ್ಚರ ವಹಿಸಬೇಕು?

ಇಂತಿಷ್ಟು ಕಾಲ ಎಂದು ಈಗಲೇ ಹೇಳಲಾಗದು. ಒಂದು ಸದೃಢ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬೇಕೆಂದು ಕೆಲಸ ಮಾಡಬೇಕು.

ಈ ಕುರಿತು ನಿಮಗೆ ಸಂದೇಹಗಳಿದ್ದಲ್ಲಿ, ಸಲಹೆ ಮತ್ತು ಚಿಕಿತ್ಸೆಯ ಕುರಿತು ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಕೆಸಿವಿಟಿ ಹೆಲ್ಫ್‌ಲೈನ್‌ ಅನ್ನು (08047166115) ಸಂಪರ್ಕಿಸಬಹುದು.

ಈ ಕುರಿತು ವೈದ್ಯರು ಮಾತನಾಡಿರುವ ವಿಡಿಯೋ ನೋಡಿ:


ಇದನ್ನೂ ಓದಿ; ಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...