Homeಕರೋನಾ ತಲ್ಲಣಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎನ್ನುತ್ತಾರೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು.

- Advertisement -
- Advertisement -

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis ) ಕುರಿತ ಹಲವು ಪ್ರಶ್ನೆಗಳಿಗೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು ಸರಳವಾಗಿ ವಿವರಿಸಿದ್ದಾರೆ..

ಮ್ಯೂಕರ್‌ಮೈಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಯಾರಿಗೆ ಮತ್ತು ಹೇಗೆ ಹರಡುತ್ತೆ?

ಬ್ಲ್ಯಾಕ್ ಫಂಗಸ್ ಇದು ಮೂಗಿನಿಂದ ಶುರುವಾಗಿ ಕಣ್ಣು ಮತ್ತು ಮೆದುಳಿಗೆ ಹರಡುತ್ತೆ. ಸಕ್ಕರೆ ಕಾಯಿಲೆಗಳಿದ್ದವರಲ್ಲಿ ಸಕ್ಕರೆಯ ಅಂಶ ಅಧಿಕವಾದಾಗ, ನಿಯಂತ್ರಣ ತಪ್ಪಿದಾಗ ಇದು ಕಾಣಿಸಿಕೊಳ್ಳಬಹುದು. ಜೊತೆಗೆ ಸಕ್ಕರೆ ಕಾಯಿಲೆಯ ಜೊತೆಗೆ ಕಿಡ್ನಿ ವೈಫಲ್ಯವಿದ್ದವರಿಗೆ ಇದು ಕಾಣಿಸಿಕೊಳ್ಳುವ ಸಂಭವವಿದೆ. ಇದು ಹೊಸ ಕಾಯಿಲೆಯೇನಲ್ಲ, ಮುಂಚಿನಿಂದಲೂ ನೋಡುತ್ತಾ ಬಂದಿದ್ದೇವೆ.

ಕೋವಿಡ್‌ಗೂ ಬ್ಲ್ಯಾಕ್ ಫಂಗಸ್‌ಗೂ ಸಂಬಂಧವಿದೆಯೇ?

ಕೋವಿಡ್‌ ಸಂದರ್ಭದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಏಕೆಂದರೆ ಕೋವಿಡ್‌ ಬಂದವರಲ್ಲಿ ಸಕ್ಕರೆ ಕಾಯಿಲೆ ಇದ್ದವರಿಗೆ ಸಕ್ಕರೆಯ ಪ್ರಮಾಣ ನಿಯಂತ್ರಿಸಲಾಗದ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಕೋವಿಡ್‌ಗೆ ನೀಡುವ ಔಷಧಗಳಿಂದಲೂ ರಕ್ತದ ಸಕ್ಕರೆಯ ಅಂಶ ಏರು-ಪೇರಾಗಬಹುದು. ಹಾಗಾಗಿ ಸಕ್ಕರೆ ಕಾಯಿಲೆ ಇರುವವರು ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಬಹಳ ಮುಖ್ಯ. ಕೋವಿಡ್‌ ಬಂದವರಿಗೆ ಆಮ್ಲಜನಕ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅದಕ್ಕೆ ಬಳಸುವ ಆಮ್ಲಜನಕ ನಾಳಗಳು ಸ್ವಚ್ಛವಾಗಿಲ್ಲದಿದ್ದಲ್ಲಿ ಆಗಲೂ ಸಹ ಮೂಗಿನ ಮೂಲಕ ಈ ಬ್ಲಾಕ್ ಫಂಗಸ್ ಹರಡಿಕೊಳ್ಳಬಹುದು. ಹಾಗಾಗಿ ಮನೆಯಲ್ಲಿಯೇ ಆಕ್ಸಿಜನ್ ಕೊಡುವ ಸಂದರ್ಭ ಬಂದಲ್ಲಿ ಈ ಆಕ್ಸಿಜನ್ ನೇಷಲ್ ಟ್ಯೂಬ್ ಸ್ವಚ್ಛತೆಗೆ ಗಮನ ಕೊಡಬೇಕು. ಮೂರನೇಯದಾಗಿ ಕೋವಿಡ್ ಕಾಯಿಲೆ ಕಾಣಿಸಿಕೊಂಡ ಸಂದರ್ಭದಲ್ಲಿ ನಮ್ಮ ಇಮ್ಯುನಿಟಿ (ರೋಗ ನಿರೋಧಕತೆ) ಸ್ವಲ್ಪ ತಗ್ಗಿರುತ್ತೆ. ಈ ಸಂದರ್ಭದಲ್ಲಿ ಬ್ಲಾಕ್ ಫಂಗಸ್ ಅಂಟಿಕೊಳ್ಳಬಹುದು. ಆದರೆ ಈ ರೋಗ ಒಬ್ಬರಿಂದ ಒಬ್ಬರಿಗೆ ಗಾಳಿಯಲ್ಲಿ ಹರಡುವುದಿಲ್ಲ.

ಬ್ಲ್ಯಾಕ್ ಫಂಗಸ್‌ನ ಲಕ್ಷಣಗಳೇನು?

ಮೂಗು ಕಟ್ಟಿಕೊಳ್ಳುವುದು, ಮೂಗಿನಿಂದ ರಕ್ತ ಅಥವಾ ಕಪ್ಪು ಬಣ್ಣದ ಗೊಣ್ಣೆ ಬರುವುದು, ಮುಖದ ಊತ, ಕಣ್ಣು ಮತ್ತು ಮೂಗಿನ ಸುತ್ತ ನೋವು ಬರುವುದು, ಮೂಗು ಅಥವಾ ಬಾಯಿಯೊಳಗೆ ಕಪ್ಪು ಬಣ್ಣದ ಗಾಯ ಕಾಣಿಸಿಕೊಳ್ಳುವುದು. ಕಣ್ಣಿನ ದೃಷ್ಟಿ ಕಡಿಮೆಯಾಗುವುದು, ಡಬಲ್ ವಿಷನ್ (ಎರಡೆರಡು ಕಾಣುವುದು), ಕಣ್ಣು ಉಬ್ಬಿ ಮುಂದೆ ಬರುವುದು ಮತ್ತು ತಲೆ ನೋವು.

ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆಯೇನು?

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು. ಈ ಮೇಲಿನ ಗುಣಲಕ್ಷಣಗಳು ಕಂಡಬಂದಲ್ಲಿ ತಕ್ಷಣ ಇಎನ್‌ಟಿ (ಕಣ್ಣು, ಮೂಗು, ಗಂಟಲು ತಜ್ಞರು) ವೈದ್ಯರನ್ನು ಕಾಣಬೇಕು.

ನಾವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು?

ಡಯಾಬಿಟೀಸ್ ಇದ್ದವರು ಅದನ್ನು ನಿಯಂತ್ರಣದಲ್ಲಿಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು‌- ಅಂದರೆ ಆರೋಗ್ಯಕರ ಜೀವನಶೈಲಿ, ನಿಯಮಿತ ವ್ಯಾಯಾಮ.
(ಅನಗತ್ಯವಾಗಿ, ಅನಗತ್ಯ ಸಂದರ್ಭದಲ್ಲಿ, ಅನಗತ್ಯ ಪ್ರಮಾಣದಲ್ಲಿ ಸ್ಟಿರಾಯ್ಡ್‌ಗಳನ್ನು ವೈದ್ಯರು ಕೊಡಬಾರದು).

ಮಣ್ಣಿನಿಂದ‌ ಈ ಬ್ಲ್ಯಾಕ್ ಫಂಗಸ್ ಇನ್ಫೆಕ್ಷನ್ ಆಗತ್ತೆ ಅಂತಾರೆ. ಇದು ನಿಜವೆ?

ಈ ಮ್ಯುಕೋರ್‌ನ ಬೀಜಗಳು (spores) ಎಲ್ಲೆಡೆ ಇರುತ್ತವೆ. ಮಣ್ಣಿನಲ್ಲೂ ಸಹಾ.. ಹಾಗಾಗಿ ಎಚ್ಚರಿಕೆಯಿಂದಿರಬೇಕು.

ಕೋವಿಡ್ ನಂತರ ಎಷ್ಟು ಸಮಯ ಈ ಬ್ಲಾಕ್‌ ಫಂಗಸ್ ಬರದಂತೆ ಎಚ್ಚರ ವಹಿಸಬೇಕು?

ಇಂತಿಷ್ಟು ಕಾಲ ಎಂದು ಈಗಲೇ ಹೇಳಲಾಗದು. ಒಂದು ಸದೃಢ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬೇಕೆಂದು ಕೆಲಸ ಮಾಡಬೇಕು.

ಈ ಕುರಿತು ನಿಮಗೆ ಸಂದೇಹಗಳಿದ್ದಲ್ಲಿ, ಸಲಹೆ ಮತ್ತು ಚಿಕಿತ್ಸೆಯ ಕುರಿತು ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಕೆಸಿವಿಟಿ ಹೆಲ್ಫ್‌ಲೈನ್‌ ಅನ್ನು (08047166115) ಸಂಪರ್ಕಿಸಬಹುದು.

ಈ ಕುರಿತು ವೈದ್ಯರು ಮಾತನಾಡಿರುವ ವಿಡಿಯೋ ನೋಡಿ:


ಇದನ್ನೂ ಓದಿ; ಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...