Homeಕರೋನಾ ತಲ್ಲಣಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ನಮ್ಮ ಪ್ರತಿಭಟನೆ ಆಯುರ್ವೇದ ಚಿಕಿತ್ಸಾ ಪದ್ಧತಿಯ ವಿರುದ್ಧವಲ್ಲ. ಪದೇ ಪದೇ ವೈದ್ಯ ಸಮೂಹವನ್ನು ಅವಮಾನಿಸುತ್ತಿರುವ ಬಾಬಾ ರಾಮ್‌ ದೇವ್‌ ವಿರುದ್ಧ...

- Advertisement -
- Advertisement -

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿದೆ. ಬಾಬಾ ರಾಮ್‌ ದೇವ್‌ ಅವರ ಇಂಗ್ಲೀಷ್‌ ಮೆಡಿಸಿನ್‌ ಎಂಬ ಆಧುನಿಕ ವೈದ್ಯ ಪದ್ಧತಿ ಬೋಗಸ್‌ ಹೇಳಿಕೆಗೆ ದೇಶಾದ್ಯಂತ ನೂರಾರು ಸಂಖ್ಯೆಯ ವೈದ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ದೆಹಲಿ ನಗರದಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಇಂದು ಕಪ್ಪು ರಿಬ್ಬನ್‌ ಧರಿಸಿ ಕರ್ತವ್ಯಕ್ಕೆ ಹಾಜಾರಾಗುವ ಮೂಲಕ ಪ್ರತಿಭಟನೆಯನ್ನು ಆರಂಭಿಸಿದ್ದಾರೆ.

ದೆಹಲಿಯ ರೆಸಿಡೆಂಟ್ ಡಾಕ್ಟರ್ಸ್‌ ಅಸೋಸಿಯೇಷನ್‌ ಈ ಪ್ರತಿಭಟನೆಗೆ ಕರೆಕೊಟ್ಟಿದ್ದು ಸಂಘಟನೆಗೆ ಸೇರಿದ ಸರಿ ಸುಮಾರು 20 ಸಾವಿರ ವೈದ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಎಲ್ಲಾ ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದದ್ದು ಜೂನ್‌ 1 ಮಂಗಳವಾರ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಎಂದಿನಂತೆ ನಾವು ಕರ್ತವ್ಯಕ್ಕೆ ಹಾಜರಾಗುತ್ತೇವೆ. ನಮ್ಮ ಕರ್ತವ್ಯವನ್ನು ಮುಂದುವರೆಸುತ್ತೇವೆ. ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ದೇಶಾದ್ಯಂತ ಸಾವಿರಕ್ಕೂ ಹೆಚ್ಚು ವೈದ್ಯರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರ ತ್ಯಾಗಕ್ಕೆ ದೇಶದ ಸೇವೆಗೆ ಅವಮಾನ ಮಾಡುವಂತಹ ವರ್ತನೆ ವಿರುದ್ಧ ನಮ್ಮ ಶಾಂತಿಯುತ ಪ್ರತಿಭಟನೆ ಮುಂದುವರೆಯುತ್ತದೆ. ಲಕ್ಷಕ್ಕೂ ಅಧಿಕ ವೈದ್ಯರು ತಮ್ಮ ಜೀವವನ್ನೂ ಲೆಕ್ಕಿಸದೇ ಜನರಿಗೆ ಚಿಕಿತ್ಸೆ ನೀಡುತ್ತಿರುವ ಈ ಸಂದರ್ಭದಲ್ಲಿ ವೈದ್ಯರ ಮತ್ತು ವೈದ್ಯಕೀಯ ವ್ಯವಸ್ಥೆಯ ಮೇಲೆ ಅಪನಂಬಿಕೆ ಹುಟ್ಟಿಸುವ ಹೇಳಿಕೆ ಮತ್ತು ವರ್ತನೆಗಳನ್ನು ಸಹಿಸಲು ಸಾಧ್ಯವಿಲ್ಲ ಹಾಗಾಗಿ ನಾವು ಕಪ್ಪು ಪಟ್ಟಿ ಧರಿಸಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದೇವೆ ಎಂದು ದೆಹಲಿಯ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

ನಮ್ಮ ಪ್ರತಿಭಟನೆ ಆಯುರ್ವೇದ ಚಿಕಿತ್ಸಾ ಪದ್ಧತಿಯ ವಿರುದ್ಧವಲ್ಲ. ಪದೇ ಪದೇ ವೈದ್ಯ ಸಮೂಹವನ್ನು ಅವಮಾನಿಸುತ್ತಿರುವ ಬಾಬಾ ರಾಮ್‌ ದೇವ್‌ ವಿರುದ್ಧ ನಮ್ಮ ಪ್ರತಿಭಟನೆ ಎಂದು ದೆಹಲಿ ರೆಸಿಡೆಂಟ್‌ ಡಾಕ್ಟರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಡಾ. ಮನಿಶ್‌ ಕುಮಾರ್‌ ತಿಳಿಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘ (IMA) ಮತ್ತು IMA ಕಿರಿಯ ವೈದ್ಯರ ಸಮೂಹ ಸಹ ಈ ಪ್ರತಿಭಟನೆಗೆ ಬೆಂಬಲಿಸಿದೆ. ಕಳೆದ ಮಂಗಳವಾರವೇ ವೈದ್ಯಕೀಯ ಸಂಘಗಳು ತಮ್ಮ ಸದಸ್ಯರಿಗೆ ಪ್ರತಿಭಟನೆ ಕುರಿತು ಮಾಹಿತಿ ನೀಡಿದ್ದವು. ಅಖಿಲ ಭಾರತ ವೈದ್ಯಕೀಯ ಸಂಸ್ಥೆ(AIIMS) ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದೆ. AIIMS ನ ವೈದ್ಯರು ಕೆಲವು ದಿನಗಳ ಹಿಂದೆ ಕೂಡ ಬಾಬಾ ರಾಮದೇವ್‌ ವಿರುದ್ಧ ಪ್ರತಿಭಟನೆ ಕೈಗೊಂಡಿದ್ದರು.

AIIMS ಹೃಷಿಕೇಶ್‌, IMA ರಾಜಸ್ಥಾನ್‌, ಮಹರಾಷ್ಟ್ರ ಸ್ಟೇಟ್‌ ರೆಸಿಡೆಂಟ್‌ ಡಾಕ್ಟರ್ಸ್‌ ಅಸೋಸಿಯೇಶನ್‌, (MARD) ಕರ್ನಾಟಕ ಅಸೋಸಿಯೇಶನ್‌ ಆಫ್‌ ರೆಸಿಡೆಂಟ್‌ ಡಾಕ್ಟರ್ಸ್‌ (KARD) ಸೇರಿ ದೇಶಾದ್ಯಂತ ಹಲವಾರು ವೈದ್ಯಕೀಯ ಸಂಘಟನೆಗಳು ಬಾಬಾ ರಾಮದೇವ್‌ ಹೇಳಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿವೆ.


ಇದನ್ನೂ ಓದಿ; ಯಾರು ಈ ಬಾಬಾ ರಾಮದೇವ್? ಏನು ಈ ಪತಂಜಲಿ?: ಆಧ್ಯಾತ್ಮಿಕ ಬಂಡವಾಳಶಾಹಿಯ ಸಂಪೂರ್ಣ ಡಿಟೇಲ್ಸ್….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...