Homeಕರೋನಾ ತಲ್ಲಣಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ನಮ್ಮ ಪ್ರತಿಭಟನೆ ಆಯುರ್ವೇದ ಚಿಕಿತ್ಸಾ ಪದ್ಧತಿಯ ವಿರುದ್ಧವಲ್ಲ. ಪದೇ ಪದೇ ವೈದ್ಯ ಸಮೂಹವನ್ನು ಅವಮಾನಿಸುತ್ತಿರುವ ಬಾಬಾ ರಾಮ್‌ ದೇವ್‌ ವಿರುದ್ಧ...

- Advertisement -
- Advertisement -

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿದೆ. ಬಾಬಾ ರಾಮ್‌ ದೇವ್‌ ಅವರ ಇಂಗ್ಲೀಷ್‌ ಮೆಡಿಸಿನ್‌ ಎಂಬ ಆಧುನಿಕ ವೈದ್ಯ ಪದ್ಧತಿ ಬೋಗಸ್‌ ಹೇಳಿಕೆಗೆ ದೇಶಾದ್ಯಂತ ನೂರಾರು ಸಂಖ್ಯೆಯ ವೈದ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ದೆಹಲಿ ನಗರದಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಇಂದು ಕಪ್ಪು ರಿಬ್ಬನ್‌ ಧರಿಸಿ ಕರ್ತವ್ಯಕ್ಕೆ ಹಾಜಾರಾಗುವ ಮೂಲಕ ಪ್ರತಿಭಟನೆಯನ್ನು ಆರಂಭಿಸಿದ್ದಾರೆ.

ದೆಹಲಿಯ ರೆಸಿಡೆಂಟ್ ಡಾಕ್ಟರ್ಸ್‌ ಅಸೋಸಿಯೇಷನ್‌ ಈ ಪ್ರತಿಭಟನೆಗೆ ಕರೆಕೊಟ್ಟಿದ್ದು ಸಂಘಟನೆಗೆ ಸೇರಿದ ಸರಿ ಸುಮಾರು 20 ಸಾವಿರ ವೈದ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಎಲ್ಲಾ ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದದ್ದು ಜೂನ್‌ 1 ಮಂಗಳವಾರ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಎಂದಿನಂತೆ ನಾವು ಕರ್ತವ್ಯಕ್ಕೆ ಹಾಜರಾಗುತ್ತೇವೆ. ನಮ್ಮ ಕರ್ತವ್ಯವನ್ನು ಮುಂದುವರೆಸುತ್ತೇವೆ. ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ದೇಶಾದ್ಯಂತ ಸಾವಿರಕ್ಕೂ ಹೆಚ್ಚು ವೈದ್ಯರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರ ತ್ಯಾಗಕ್ಕೆ ದೇಶದ ಸೇವೆಗೆ ಅವಮಾನ ಮಾಡುವಂತಹ ವರ್ತನೆ ವಿರುದ್ಧ ನಮ್ಮ ಶಾಂತಿಯುತ ಪ್ರತಿಭಟನೆ ಮುಂದುವರೆಯುತ್ತದೆ. ಲಕ್ಷಕ್ಕೂ ಅಧಿಕ ವೈದ್ಯರು ತಮ್ಮ ಜೀವವನ್ನೂ ಲೆಕ್ಕಿಸದೇ ಜನರಿಗೆ ಚಿಕಿತ್ಸೆ ನೀಡುತ್ತಿರುವ ಈ ಸಂದರ್ಭದಲ್ಲಿ ವೈದ್ಯರ ಮತ್ತು ವೈದ್ಯಕೀಯ ವ್ಯವಸ್ಥೆಯ ಮೇಲೆ ಅಪನಂಬಿಕೆ ಹುಟ್ಟಿಸುವ ಹೇಳಿಕೆ ಮತ್ತು ವರ್ತನೆಗಳನ್ನು ಸಹಿಸಲು ಸಾಧ್ಯವಿಲ್ಲ ಹಾಗಾಗಿ ನಾವು ಕಪ್ಪು ಪಟ್ಟಿ ಧರಿಸಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದೇವೆ ಎಂದು ದೆಹಲಿಯ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

ನಮ್ಮ ಪ್ರತಿಭಟನೆ ಆಯುರ್ವೇದ ಚಿಕಿತ್ಸಾ ಪದ್ಧತಿಯ ವಿರುದ್ಧವಲ್ಲ. ಪದೇ ಪದೇ ವೈದ್ಯ ಸಮೂಹವನ್ನು ಅವಮಾನಿಸುತ್ತಿರುವ ಬಾಬಾ ರಾಮ್‌ ದೇವ್‌ ವಿರುದ್ಧ ನಮ್ಮ ಪ್ರತಿಭಟನೆ ಎಂದು ದೆಹಲಿ ರೆಸಿಡೆಂಟ್‌ ಡಾಕ್ಟರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಡಾ. ಮನಿಶ್‌ ಕುಮಾರ್‌ ತಿಳಿಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘ (IMA) ಮತ್ತು IMA ಕಿರಿಯ ವೈದ್ಯರ ಸಮೂಹ ಸಹ ಈ ಪ್ರತಿಭಟನೆಗೆ ಬೆಂಬಲಿಸಿದೆ. ಕಳೆದ ಮಂಗಳವಾರವೇ ವೈದ್ಯಕೀಯ ಸಂಘಗಳು ತಮ್ಮ ಸದಸ್ಯರಿಗೆ ಪ್ರತಿಭಟನೆ ಕುರಿತು ಮಾಹಿತಿ ನೀಡಿದ್ದವು. ಅಖಿಲ ಭಾರತ ವೈದ್ಯಕೀಯ ಸಂಸ್ಥೆ(AIIMS) ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದೆ. AIIMS ನ ವೈದ್ಯರು ಕೆಲವು ದಿನಗಳ ಹಿಂದೆ ಕೂಡ ಬಾಬಾ ರಾಮದೇವ್‌ ವಿರುದ್ಧ ಪ್ರತಿಭಟನೆ ಕೈಗೊಂಡಿದ್ದರು.

AIIMS ಹೃಷಿಕೇಶ್‌, IMA ರಾಜಸ್ಥಾನ್‌, ಮಹರಾಷ್ಟ್ರ ಸ್ಟೇಟ್‌ ರೆಸಿಡೆಂಟ್‌ ಡಾಕ್ಟರ್ಸ್‌ ಅಸೋಸಿಯೇಶನ್‌, (MARD) ಕರ್ನಾಟಕ ಅಸೋಸಿಯೇಶನ್‌ ಆಫ್‌ ರೆಸಿಡೆಂಟ್‌ ಡಾಕ್ಟರ್ಸ್‌ (KARD) ಸೇರಿ ದೇಶಾದ್ಯಂತ ಹಲವಾರು ವೈದ್ಯಕೀಯ ಸಂಘಟನೆಗಳು ಬಾಬಾ ರಾಮದೇವ್‌ ಹೇಳಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿವೆ.


ಇದನ್ನೂ ಓದಿ; ಯಾರು ಈ ಬಾಬಾ ರಾಮದೇವ್? ಏನು ಈ ಪತಂಜಲಿ?: ಆಧ್ಯಾತ್ಮಿಕ ಬಂಡವಾಳಶಾಹಿಯ ಸಂಪೂರ್ಣ ಡಿಟೇಲ್ಸ್….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...