Homeಕರೋನಾ ತಲ್ಲಣಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ನಮ್ಮ ಪ್ರತಿಭಟನೆ ಆಯುರ್ವೇದ ಚಿಕಿತ್ಸಾ ಪದ್ಧತಿಯ ವಿರುದ್ಧವಲ್ಲ. ಪದೇ ಪದೇ ವೈದ್ಯ ಸಮೂಹವನ್ನು ಅವಮಾನಿಸುತ್ತಿರುವ ಬಾಬಾ ರಾಮ್‌ ದೇವ್‌ ವಿರುದ್ಧ...

- Advertisement -
- Advertisement -

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿದೆ. ಬಾಬಾ ರಾಮ್‌ ದೇವ್‌ ಅವರ ಇಂಗ್ಲೀಷ್‌ ಮೆಡಿಸಿನ್‌ ಎಂಬ ಆಧುನಿಕ ವೈದ್ಯ ಪದ್ಧತಿ ಬೋಗಸ್‌ ಹೇಳಿಕೆಗೆ ದೇಶಾದ್ಯಂತ ನೂರಾರು ಸಂಖ್ಯೆಯ ವೈದ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ದೆಹಲಿ ನಗರದಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಇಂದು ಕಪ್ಪು ರಿಬ್ಬನ್‌ ಧರಿಸಿ ಕರ್ತವ್ಯಕ್ಕೆ ಹಾಜಾರಾಗುವ ಮೂಲಕ ಪ್ರತಿಭಟನೆಯನ್ನು ಆರಂಭಿಸಿದ್ದಾರೆ.

ದೆಹಲಿಯ ರೆಸಿಡೆಂಟ್ ಡಾಕ್ಟರ್ಸ್‌ ಅಸೋಸಿಯೇಷನ್‌ ಈ ಪ್ರತಿಭಟನೆಗೆ ಕರೆಕೊಟ್ಟಿದ್ದು ಸಂಘಟನೆಗೆ ಸೇರಿದ ಸರಿ ಸುಮಾರು 20 ಸಾವಿರ ವೈದ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಎಲ್ಲಾ ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದದ್ದು ಜೂನ್‌ 1 ಮಂಗಳವಾರ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಎಂದಿನಂತೆ ನಾವು ಕರ್ತವ್ಯಕ್ಕೆ ಹಾಜರಾಗುತ್ತೇವೆ. ನಮ್ಮ ಕರ್ತವ್ಯವನ್ನು ಮುಂದುವರೆಸುತ್ತೇವೆ. ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ದೇಶಾದ್ಯಂತ ಸಾವಿರಕ್ಕೂ ಹೆಚ್ಚು ವೈದ್ಯರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರ ತ್ಯಾಗಕ್ಕೆ ದೇಶದ ಸೇವೆಗೆ ಅವಮಾನ ಮಾಡುವಂತಹ ವರ್ತನೆ ವಿರುದ್ಧ ನಮ್ಮ ಶಾಂತಿಯುತ ಪ್ರತಿಭಟನೆ ಮುಂದುವರೆಯುತ್ತದೆ. ಲಕ್ಷಕ್ಕೂ ಅಧಿಕ ವೈದ್ಯರು ತಮ್ಮ ಜೀವವನ್ನೂ ಲೆಕ್ಕಿಸದೇ ಜನರಿಗೆ ಚಿಕಿತ್ಸೆ ನೀಡುತ್ತಿರುವ ಈ ಸಂದರ್ಭದಲ್ಲಿ ವೈದ್ಯರ ಮತ್ತು ವೈದ್ಯಕೀಯ ವ್ಯವಸ್ಥೆಯ ಮೇಲೆ ಅಪನಂಬಿಕೆ ಹುಟ್ಟಿಸುವ ಹೇಳಿಕೆ ಮತ್ತು ವರ್ತನೆಗಳನ್ನು ಸಹಿಸಲು ಸಾಧ್ಯವಿಲ್ಲ ಹಾಗಾಗಿ ನಾವು ಕಪ್ಪು ಪಟ್ಟಿ ಧರಿಸಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದೇವೆ ಎಂದು ದೆಹಲಿಯ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

ನಮ್ಮ ಪ್ರತಿಭಟನೆ ಆಯುರ್ವೇದ ಚಿಕಿತ್ಸಾ ಪದ್ಧತಿಯ ವಿರುದ್ಧವಲ್ಲ. ಪದೇ ಪದೇ ವೈದ್ಯ ಸಮೂಹವನ್ನು ಅವಮಾನಿಸುತ್ತಿರುವ ಬಾಬಾ ರಾಮ್‌ ದೇವ್‌ ವಿರುದ್ಧ ನಮ್ಮ ಪ್ರತಿಭಟನೆ ಎಂದು ದೆಹಲಿ ರೆಸಿಡೆಂಟ್‌ ಡಾಕ್ಟರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಡಾ. ಮನಿಶ್‌ ಕುಮಾರ್‌ ತಿಳಿಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘ (IMA) ಮತ್ತು IMA ಕಿರಿಯ ವೈದ್ಯರ ಸಮೂಹ ಸಹ ಈ ಪ್ರತಿಭಟನೆಗೆ ಬೆಂಬಲಿಸಿದೆ. ಕಳೆದ ಮಂಗಳವಾರವೇ ವೈದ್ಯಕೀಯ ಸಂಘಗಳು ತಮ್ಮ ಸದಸ್ಯರಿಗೆ ಪ್ರತಿಭಟನೆ ಕುರಿತು ಮಾಹಿತಿ ನೀಡಿದ್ದವು. ಅಖಿಲ ಭಾರತ ವೈದ್ಯಕೀಯ ಸಂಸ್ಥೆ(AIIMS) ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದೆ. AIIMS ನ ವೈದ್ಯರು ಕೆಲವು ದಿನಗಳ ಹಿಂದೆ ಕೂಡ ಬಾಬಾ ರಾಮದೇವ್‌ ವಿರುದ್ಧ ಪ್ರತಿಭಟನೆ ಕೈಗೊಂಡಿದ್ದರು.

AIIMS ಹೃಷಿಕೇಶ್‌, IMA ರಾಜಸ್ಥಾನ್‌, ಮಹರಾಷ್ಟ್ರ ಸ್ಟೇಟ್‌ ರೆಸಿಡೆಂಟ್‌ ಡಾಕ್ಟರ್ಸ್‌ ಅಸೋಸಿಯೇಶನ್‌, (MARD) ಕರ್ನಾಟಕ ಅಸೋಸಿಯೇಶನ್‌ ಆಫ್‌ ರೆಸಿಡೆಂಟ್‌ ಡಾಕ್ಟರ್ಸ್‌ (KARD) ಸೇರಿ ದೇಶಾದ್ಯಂತ ಹಲವಾರು ವೈದ್ಯಕೀಯ ಸಂಘಟನೆಗಳು ಬಾಬಾ ರಾಮದೇವ್‌ ಹೇಳಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿವೆ.


ಇದನ್ನೂ ಓದಿ; ಯಾರು ಈ ಬಾಬಾ ರಾಮದೇವ್? ಏನು ಈ ಪತಂಜಲಿ?: ಆಧ್ಯಾತ್ಮಿಕ ಬಂಡವಾಳಶಾಹಿಯ ಸಂಪೂರ್ಣ ಡಿಟೇಲ್ಸ್….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...