Homeಕರೋನಾ ತಲ್ಲಣಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ನಮ್ಮ ಪ್ರತಿಭಟನೆ ಆಯುರ್ವೇದ ಚಿಕಿತ್ಸಾ ಪದ್ಧತಿಯ ವಿರುದ್ಧವಲ್ಲ. ಪದೇ ಪದೇ ವೈದ್ಯ ಸಮೂಹವನ್ನು ಅವಮಾನಿಸುತ್ತಿರುವ ಬಾಬಾ ರಾಮ್‌ ದೇವ್‌ ವಿರುದ್ಧ...

- Advertisement -
- Advertisement -

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿದೆ. ಬಾಬಾ ರಾಮ್‌ ದೇವ್‌ ಅವರ ಇಂಗ್ಲೀಷ್‌ ಮೆಡಿಸಿನ್‌ ಎಂಬ ಆಧುನಿಕ ವೈದ್ಯ ಪದ್ಧತಿ ಬೋಗಸ್‌ ಹೇಳಿಕೆಗೆ ದೇಶಾದ್ಯಂತ ನೂರಾರು ಸಂಖ್ಯೆಯ ವೈದ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ದೆಹಲಿ ನಗರದಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಇಂದು ಕಪ್ಪು ರಿಬ್ಬನ್‌ ಧರಿಸಿ ಕರ್ತವ್ಯಕ್ಕೆ ಹಾಜಾರಾಗುವ ಮೂಲಕ ಪ್ರತಿಭಟನೆಯನ್ನು ಆರಂಭಿಸಿದ್ದಾರೆ.

ದೆಹಲಿಯ ರೆಸಿಡೆಂಟ್ ಡಾಕ್ಟರ್ಸ್‌ ಅಸೋಸಿಯೇಷನ್‌ ಈ ಪ್ರತಿಭಟನೆಗೆ ಕರೆಕೊಟ್ಟಿದ್ದು ಸಂಘಟನೆಗೆ ಸೇರಿದ ಸರಿ ಸುಮಾರು 20 ಸಾವಿರ ವೈದ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಎಲ್ಲಾ ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದದ್ದು ಜೂನ್‌ 1 ಮಂಗಳವಾರ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಎಂದಿನಂತೆ ನಾವು ಕರ್ತವ್ಯಕ್ಕೆ ಹಾಜರಾಗುತ್ತೇವೆ. ನಮ್ಮ ಕರ್ತವ್ಯವನ್ನು ಮುಂದುವರೆಸುತ್ತೇವೆ. ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ದೇಶಾದ್ಯಂತ ಸಾವಿರಕ್ಕೂ ಹೆಚ್ಚು ವೈದ್ಯರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರ ತ್ಯಾಗಕ್ಕೆ ದೇಶದ ಸೇವೆಗೆ ಅವಮಾನ ಮಾಡುವಂತಹ ವರ್ತನೆ ವಿರುದ್ಧ ನಮ್ಮ ಶಾಂತಿಯುತ ಪ್ರತಿಭಟನೆ ಮುಂದುವರೆಯುತ್ತದೆ. ಲಕ್ಷಕ್ಕೂ ಅಧಿಕ ವೈದ್ಯರು ತಮ್ಮ ಜೀವವನ್ನೂ ಲೆಕ್ಕಿಸದೇ ಜನರಿಗೆ ಚಿಕಿತ್ಸೆ ನೀಡುತ್ತಿರುವ ಈ ಸಂದರ್ಭದಲ್ಲಿ ವೈದ್ಯರ ಮತ್ತು ವೈದ್ಯಕೀಯ ವ್ಯವಸ್ಥೆಯ ಮೇಲೆ ಅಪನಂಬಿಕೆ ಹುಟ್ಟಿಸುವ ಹೇಳಿಕೆ ಮತ್ತು ವರ್ತನೆಗಳನ್ನು ಸಹಿಸಲು ಸಾಧ್ಯವಿಲ್ಲ ಹಾಗಾಗಿ ನಾವು ಕಪ್ಪು ಪಟ್ಟಿ ಧರಿಸಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದೇವೆ ಎಂದು ದೆಹಲಿಯ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

ನಮ್ಮ ಪ್ರತಿಭಟನೆ ಆಯುರ್ವೇದ ಚಿಕಿತ್ಸಾ ಪದ್ಧತಿಯ ವಿರುದ್ಧವಲ್ಲ. ಪದೇ ಪದೇ ವೈದ್ಯ ಸಮೂಹವನ್ನು ಅವಮಾನಿಸುತ್ತಿರುವ ಬಾಬಾ ರಾಮ್‌ ದೇವ್‌ ವಿರುದ್ಧ ನಮ್ಮ ಪ್ರತಿಭಟನೆ ಎಂದು ದೆಹಲಿ ರೆಸಿಡೆಂಟ್‌ ಡಾಕ್ಟರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಡಾ. ಮನಿಶ್‌ ಕುಮಾರ್‌ ತಿಳಿಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘ (IMA) ಮತ್ತು IMA ಕಿರಿಯ ವೈದ್ಯರ ಸಮೂಹ ಸಹ ಈ ಪ್ರತಿಭಟನೆಗೆ ಬೆಂಬಲಿಸಿದೆ. ಕಳೆದ ಮಂಗಳವಾರವೇ ವೈದ್ಯಕೀಯ ಸಂಘಗಳು ತಮ್ಮ ಸದಸ್ಯರಿಗೆ ಪ್ರತಿಭಟನೆ ಕುರಿತು ಮಾಹಿತಿ ನೀಡಿದ್ದವು. ಅಖಿಲ ಭಾರತ ವೈದ್ಯಕೀಯ ಸಂಸ್ಥೆ(AIIMS) ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದೆ. AIIMS ನ ವೈದ್ಯರು ಕೆಲವು ದಿನಗಳ ಹಿಂದೆ ಕೂಡ ಬಾಬಾ ರಾಮದೇವ್‌ ವಿರುದ್ಧ ಪ್ರತಿಭಟನೆ ಕೈಗೊಂಡಿದ್ದರು.

AIIMS ಹೃಷಿಕೇಶ್‌, IMA ರಾಜಸ್ಥಾನ್‌, ಮಹರಾಷ್ಟ್ರ ಸ್ಟೇಟ್‌ ರೆಸಿಡೆಂಟ್‌ ಡಾಕ್ಟರ್ಸ್‌ ಅಸೋಸಿಯೇಶನ್‌, (MARD) ಕರ್ನಾಟಕ ಅಸೋಸಿಯೇಶನ್‌ ಆಫ್‌ ರೆಸಿಡೆಂಟ್‌ ಡಾಕ್ಟರ್ಸ್‌ (KARD) ಸೇರಿ ದೇಶಾದ್ಯಂತ ಹಲವಾರು ವೈದ್ಯಕೀಯ ಸಂಘಟನೆಗಳು ಬಾಬಾ ರಾಮದೇವ್‌ ಹೇಳಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿವೆ.


ಇದನ್ನೂ ಓದಿ; ಯಾರು ಈ ಬಾಬಾ ರಾಮದೇವ್? ಏನು ಈ ಪತಂಜಲಿ?: ಆಧ್ಯಾತ್ಮಿಕ ಬಂಡವಾಳಶಾಹಿಯ ಸಂಪೂರ್ಣ ಡಿಟೇಲ್ಸ್….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...