Homeಚಳವಳಿರೈತ ಹೋರಾಟ ಕುರಿತ ಸಾಕ್ಷ್ಯಚಿತ್ರ ಬಿಡುಗಡೆಗೆ ಆರ್ಥಿಕ ನೆರವು ಬೇಕಿದೆ: ಕೇಸರಿ ಹರವು

ರೈತ ಹೋರಾಟ ಕುರಿತ ಸಾಕ್ಷ್ಯಚಿತ್ರ ಬಿಡುಗಡೆಗೆ ಆರ್ಥಿಕ ನೆರವು ಬೇಕಿದೆ: ಕೇಸರಿ ಹರವು

ಐತಿಹಾಸಿಕ ಹೋರಾಟವೊಂದರ ಸಮಗ್ರ ದಾಖಲೆಯಾಗಿ ಉಳಿಯಲಿರುವ ಈ ಸಾಕ್ಷ್ಯಚಿತ್ರಕ್ಕೆ ಆರ್ಥಿಕ ನೆರವು ಲಭ್ಯವಾದರೆ ಮಹತ್ವದ ಪ್ರಯತ್ನಕ್ಕೆ ಜೊತೆಯಾದ ಎಲ್ಲರಿಗೂ ಒಂದು ಸಾರ್ಥಕ ಭಾವ ಉಳಿಯುತ್ತದೆ.

- Advertisement -
- Advertisement -

ಕಳೆದ ಒಂಬತ್ತು ತಿಂಗಳುಗಳಿಂದ ನಡೆಯುತ್ತಿರುವ ರೈತ ಹೋರಾಟ ಐತಿಹಾಸಿಕ ಎಂದೇ ಪರಿಗಣಿಸಲಾಗಿದೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಈ ರೀತಿಯ ಸಂಘಟಿತವಾದ, ಅಹಿಂಸಾತ್ಮಕವಾದ, ಇಷ್ಟು ದೊಡ್ಡ ಹೋರಾಟ ದೀರ್ಘಕಾಲ ನಡೆದ ಇನ್ನೊಂದು ಉದಾಹರಣೆ ಇಲ್ಲ.

ಇಂಥ ಹೋರಾಟವನ್ನು ದಾಖಲಿಸುವ ಮಹತ್ವದ ಕೆಲಸಕ್ಕೆ ಮುಂದಾದ ಕನ್ನಡದ ಸಿನಿಮಾ ನಿರ್ದೇಶಕ ಕೇಸರಿ ಹರವು ಅವರು ದೆಹಲಿ ರೈತ ಹೋರಾಟ ಕುರಿತು ಸಾಕ್ಷ್ಯಚಿತ್ರವನ್ನು ನಿರ್ಮಿಸುತ್ತಿದ್ದು, ಈ ಸಾಕ್ಷ್ಯಚಿತ್ರ ಪೂರೈಸಲು ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದ್ದಾರೆ.

ಇದುವರೆಗೂ ಮೂರು ಬಾರಿ ದೆಹಲಿಗೆ ತೆರಳಿ 18 ದಿನಗಳ ಕಾಲ ದೆಹಲಿಯ ಗಡಿಗಳಲ್ಲಿ ರೈತ ಹೋರಾಟಗಾರರೊಂದಿಗೆ ನೆಲೆಸಿ ಅಲ್ಲಿನ ಹೋರಾಟದ ದೃಶ್ಯಗಳನ್ನು ಸೆರೆಹಿಡಿದಿರುವ ಹರವು ಅವರು, ನಂತರದಲ್ಲಿ ಪಂಜಾಬ್‌ ಮತ್ತು ಹರ್ಯಾಣಗಳಲ್ಲಿ ಓಡಾಡಿ, ಅಲ್ಲಿನ ರೈತರು, ಕೃಷಿ ಪರಿಸ್ಥಿತಿಗಳನ್ನು ಚಿತ್ರಿಸಿಕೊಂಡು ಬಂದಿದ್ದಾರೆ. ಕರ್ನಾಟಕದ ಹೋರಾಟಗಳು ಸೇರಿದಂತೆ ಸುಮಾರು 28 ದಿನಗಳ ಕಾಲ ಮೂರು ಕೃಷಿ ಕಾಯ್ದೆ ವಿರುದ್ಧದ ಹೋರಾಟ ಬಹುಮುಖ್ಯ ಸಂಗತಿಗಳನ್ನು ತಮ್ಮ ಕೆಮೆರಾ ಮೂಲಕ ಸೆರೆಹಿಡಿದಿದ್ದಾರೆ.

ಮೂಲತಃ ಸಿನಿಮಾ ನಿರ್ದೇಶಕರಾದ ಅವರು ‘ಭೂಮಿಗೀತ’, ‘ಒಳ್ಳೆಯವನು’ ಚಿತ್ರಗಳನ್ನು, 12 ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ.

ಜನ-ಜೀವನಕ್ಕೆ ಸಂಬಂಧಿಸಿದ ವಿಷಯಗಳಿಗೆ ಸ್ಪಂದಿಸುವ ಕೇಸರಿ ಹರವು ಅವರು ನಿರ್ಮಿಸಿದ ‘ಅಘನಾಶಿನಿ ಮತ್ತು ಮಕ್ಕಳು’, ‘ನಗರ ಮತ್ತು ನಗರ ಕಣಿವ’ ಸಾಕ್ಷ್ಯಚಿತ್ರಗಳು ಹೋರಾಟದ ಭಾಗವಾಗಿ ರೂಪುಗೊಂಡ ಸಾಕ್ಷ್ಯಚಿತ್ರಗಳು.

ಅಘನಾಶಿನಿ ಮತ್ತು ಮಕ್ಕಳು, ಸಾಕ್ಷ್ಯಚಿತ್ರದಲ್ಲಿ ತದಡಿ ಬಳಿ ಉಷ್ಣಸ್ಥಾವರ ನಿರ್ಮಿಸುವ ಕುರಿತು ಮಾಡಿದೆವು. ಅದರ ವಿರುದ್ಧ ನಡೆದ ಹೋರಾಟವನ್ನು ಸಾಕ್ಷ್ಯಚಿತ್ರದಲ್ಲಿ ತಂದೆ. ಪರಿಸರ ಮತ್ತು ಸಾಮಾಜಿಕ, ಸ್ಥಳೀಯ ಆರ್ಥಿಕತೆಯ ಉಳಿಯುವ ಪ್ರಶ್ನೆಯಾಗಿ ಈ ಸಾಕ್ಷ್ಯಚಿತ್ರದಲ್ಲಿ ಮಹತ್ವದ ಸಂಗತಿಗಳನ್ನು ದಾಖಲಿಸುವ ಪ್ರಯತ್ನ ಮಾಡಿದೆ.

ನಗರ ಮತ್ತು ನದಿ ಕಣಿವೆ ಸಾಕ್ಷ್ಯಚಿತ್ರದಲ್ಲಿ ಗೊಂಡ್ಯಾ ಜಲವಿದ್ಯುತ್‌ ಯೋಜನೆ ಜಾರಿಗೆ ಬರುತ್ತಿತ್ತು. ಪಶ್ಚಿಮ ಘಟ್ಟದಲ್ಲಿ ತನ್ನದೇ ಮಹತ್ವ ಹೊಂದಿರುವ ಗೊಂಡ್ಯಾ ಕಾಡಿನ ಬಗ್ಗೆ, ಅಲ್ಲಿನ ಜೀವವೈವಿಧ್ಯದ ಬಗ್ಗೆ, ಅದನ್ನು ಸಂರಕ್ಷಿಸುವ ಕುರಿತು ಸಾಕ್ಷ್ಯಚಿತ್ರದಲ್ಲಿ ದಾಖಲಿಸಿದ್ದಾರೆ.

ಅವರ ತುಡಿತ ರೈತ ಪರ ವಿಚಾರಗಳಲ್ಲೂ ಎದ್ದು ಕಾಣುವುದು ರೈತ ನಾಯಕ ಕೆ ಎಸ್‌ ಪುಟ್ಟಣ್ಣಯ್ಯ ಅವರ ನೆನಪಿನಲ್ಲಿ ನಿರ್ಮಿಸಿದ ಸಾಕ್ಷ್ಯಚಿತ್ರದಲ್ಲಿ. ಪುಟ್ಟಣ್ಣಯ್ಯ ಜೀವನ ಮತ್ತು ಹೋರಾಟದ ಜೊತೆಗೆ ರೈತ ಹೋರಾಟ, ರೈತ ಸಮಸ್ಯೆಗಳನ್ನು ಬಿಂಬಿಸಿದರು. ಇದರ ವಿಸ್ತರಣೆಯಂತೆಯೇ ದೆಹಲಿ ಹೋರಾಟದ ಸಾಕ್ಷ್ಯಚಿತ್ರದ ಆಲೋಚನೆ ಅವರನ್ನು ಕಾಡಿದ್ದು.

”ಕೊರೊನಾ ಬಿಕ್ಕಟ್ಟಿನ ನಡುವೆ ಕೇಂದ್ರವು ಸುಗ್ರೀವಾಜ್ಞೆ ಮೂಲಕ ಬಹಳ ಅಸಂವಿಧಾನಿಕವಾಗಿ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಯಿತು. ಇದನ್ನು ವಿರೋಧಿಸಿ ಪಂಜಾಬಿ ರೈತರು ಒಗ್ಗಟ್ಟಾಗಿ ಪ್ರತಿಭಟಿಸಿದ ರೀತಿ, ಕಾಯ್ದೆಗಳನ್ನು ಅರ್ಥ ಮಾಡಿಕೊಂಡ ರೀತಿ, ರೈತರಿಗೆ ಮಾರಕ ಎಂಬುದನ್ನ ಗ್ರಹಿಸಿದ ರೀತಿಯನ್ನು ನಾನು ತಿಳಿದುಕೊಳ್ಳುತ್ತಿದ್ದೆ. ನವೆಂಬರ್‌ನಲ್ಲಿ 26ಕ್ಕೆ ದೆಹಲಿ ಚಲೋಗೆ ನಿರ್ಧರಿಸಿದರೊ, ಆಗ ಈ ಚಳವಳಿ ದೊಡ್ಡದಾಗಿ ಬೆಳೆಯುತ್ತದೆ. ಇದನ್ನು ಸಾಕ್ಷ್ಯಚಿತ್ರ ಮಾಡಬೇಕೆಂದು ಅನ್ನಿಸಿತು” ಎಂದು ರೈತ ಹೋರಾಟದ ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಪ್ರೇರಣೆಯ ಸಂದರ್ಭವನ್ನು ಅವರು ‘ಅನ್ನದ ಋಣ’ ವೆಬ್ ಸೈಟ್ ನೊಂದಿಗೆ ಹಂಚಿಕೊಂಡಿದ್ದಾರೆ.

ಈ ಎಲ್ಲ ಚಿತ್ರೀಕರಣವೂ ಹಲವು ಸಮಾನ ಆಸಕ್ತ, ಸಮಾನ ಮನಸ್ಕರ ನೆರವಿನೊಂದಿಗೆ ಕೈಗೊಂಡ ಕೇಸರಿ ಹರವು ಅವರು ಇನ್ನಷ್ಟು ಮಹತ್ವದ ಸಂಗತಿಗಳನ್ನು ದಾಖಲಿಸಬೇಕೆಂಬ ಇಚ್ಚೆ ಹೊಂದಿದ್ದಾರೆ.

”ಬಿಹಾರ್‌ ಮತ್ತು ಕೇರಳದಲ್ಲಿ ಎಪಿಎಂಸಿಗಳಿಲ್ಲ. ಬಿಹಾರದಲ್ಲಿ ರೈತ ಉತ್ಪನ್ನಗಳ ಮಾರುಕಟ್ಟೆಯದ್ದು ಅತ್ಯಂತ ದಾರುಣ ಸ್ಥಿತಿ. ಆದರೆ ಕೇರಳದಲ್ಲಿ ಎಪಿಎಂಸಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇವೆರಡನ್ನೂ ಅಧ್ಯಯನ ಮಾಡಬೇಕು. ಅಲ್ಲಿನ ರೈತರನ್ನು ಮಾತನಾಡಿಸಬೇಕು. ದೆಹಲಿ ಹೋರಾಟಕ್ಕೆ ಸಂಬಂಧಿಸಿದ ಅಲ್ಲಿನ ಕೆಲ ತಜ್ಞ-ಚಿಂತಕರ ಮಾತುಗಳನ್ನು ಸೆರೆಹಿಡಿಯಬೇಕು. ಇದು ಸಾಧ್ಯವಾಗುವುದಾದರೆ, ಇಲ್ಲಿಯವರೆಗಿನ ಶ್ರಮ ಸಾರ್ಥಕವಾಗುತ್ತದೆ” ಎನ್ನುತ್ತಾರೆ ಕೇಸರಿ ಹರವು.

”ಈ ಸಾಕ್ಷ್ಯಚಿತ್ರದಲ್ಲಿರುವುದು ಕೇವಲ ರೈತ ಸಮಸ್ಯೆಗಳನ್ನು ಬಿಂಬಿಸುವ ಪ್ರಯತ್ನವಷ್ಟೇ ಅಲ್ಲ, ದೇಶದ ಸಾರ್ವಭೌಮತ್ವ, ಸಾಮಾಜಿಕ ಸಾರ್ವಭೌಮತ್ವ ಮತ್ತು ಪರಿಸರದ ಅಂಶಗಳನ್ನು ಈ ರೈತರ ಹೋರಾಟ ಹೊಂದಿದೆ ಎಂಬುದನ್ನೂ ದಾಖಲಿಸುತ್ತದೆ. ಇದು ರೈತರಿಗಷ್ಟೇ ಅಲ್ಲ, ಎಲ್ಲರಿಗೂ ಸಂಬಂಧಿಸಿದ್ದು. ಈ ಮೂರು ಕಾಯ್ದೆಗಳಿಂದ ಖಾಸಗೀಕರಣಕ್ಕೆ ಅನುಕೂಲವಾಗುತ್ತದೆ. ಇದರಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಾರ್ವಭೌಮತ್ವವನ್ನು ಕಳೆದುಕೊಳ್ಳುವ ಅಪಾಯವಿದೆ. ಹಾಗಾಗಿ ಇದು ರೈತರ ಸಮಸ್ಯೆಯಲ್ಲ, ಪ್ರತಿಯೊಬ್ಬರ ಸಮಸ್ಯೆಯಾಗಲಿದೆ, ಪ್ರತಿಯೊಂದು ಕಸುಬಿನ ಸಮಸ್ಯೆಯಾಗಲಿದೆ. ಇದು ದೇಶವ್ಯಾಪಿ ಹರಡುತ್ತಿದೆ. ಹರಡಬೇಕು. ಆದರೆ ಈ ವರೆಗೆ ರೈತರು ಮಾತ್ರ ಹೋರಾಟದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಮಿಕ್ಕೆಲ್ಲರೂ ಈ ಹೊರಾಟದಲ್ಲಿ ಪಾಲ್ಗೊಳ್ಳಬೇಕು ಎಂಬುದನ್ನು ಮನವರಿಕೆ ಮಾಡಿಕೊಳ್ಳುತ್ತದೆ” ಎಂದು ಸಾಕ್ಷ್ಯಚಿತ್ರದ ಆಶಯ ಮತ್ತು ಅಗತ್ಯಗಳನ್ನು ಹರವು ಅವರು ವಿವರಿಸುತ್ತಾರೆ.

ಇದನ್ನೂ ಓದಿ: ಸೆ.13ಕ್ಕೆ ವಿಧಾನಸೌಧ ಮುತ್ತಿಗೆ, ಸೆ. 17ಕ್ಕೆ ಕರ್ನಾಟಕ ಬಂದ್: ಕೋಡಿಹಳ್ಳಿ ಚಂದ್ರಶೇಖರ್‌

ಐತಿಹಾಸಿಕ ಹೋರಾಟವೊಂದರ ಸಮಗ್ರ ದಾಖಲೆಯಾಗಿ ಉಳಿಯಲಿರುವ ಈ ಸಾಕ್ಷ್ಯಚಿತ್ರಕ್ಕೆ ಆರ್ಥಿಕ ನೆರವು ಲಭ್ಯವಾದರೆ ಮಹತ್ವದ ಪ್ರಯತ್ನಕ್ಕೆ ಜೊತೆಯಾದ ಎಲ್ಲರಿಗೂ ಒಂದು ಸಾರ್ಥಕ ಭಾವ ಉಳಿಯುತ್ತದೆ. ರೈತ ಹೋರಾಟ ಕುರಿತ ಗೊಂದಲ, ಅಪಪ್ರಚಾರಗಳಿಗೆ ತೆರೆ ಎಳೆಯುವ, ಕಾರ್ಪೊರೆಟ್‌ ವ್ಯವಸ್ಥೆಯೊಂದರ ಸಂಚುಗಳು, ರೈತ ಹೋರಾಟ ಇಡೀ ದೇಶದ ಹೋರಾಟವೆಂಬುದನ್ನು ಹೇಳುವ ಎಲ್ಲ ಅಂಶಗಳೂ ಈ ಸಾಕ್ಷ್ಯಚಿತ್ರ ಅನಾವರಣ ಮಾಡುವ ಉದ್ದೇಶ ಮತ್ತು ಬದ್ಧತೆಯನ್ನು ಹೊಂದಿದೆ ಎಂಬುದು ಹರವು ಅವರ ವಿಶ್ವಾಸದ ಮಾತು. ಈ ಸಾಕ್ಷ್ಯಚಿತ್ರ ಪೂರ್ಣಗೊಳಿಸಲು ಅಗತ್ಯವಿರುವ ಆರ್ಥಿಕ ನೆರವಿಗೆ ಎಲ್ಲ ಸದಾಶಯವುಳ್ಳ ಸಹೃದಯರು ಮುಂದಾಗಬಹುದು. ಈ ಕೆಳಗಿನ ಹರವು ಅವರ ಬ್ಯಾಂಕ್‌ ಖಾತೆ ಮತ್ತು ಯುಪಿಐ ವಿವರಗಳಿವೆ. ಸೂಕ್ತ ರೀತಿಯಲ್ಲಿ ನೆರವಾಗುವ ಮೂಲಕ ಸಾಕ್ಷ್ಯಚಿತ್ರ ಪೂರ್ಣಗೊಳ್ಳಲು ಸಹಕರಿಸಬೇಕು.

UPI: kesari.haravoo@oksbi
Kesari Haravu: Bank details:
Kesari Harvoo
Ac. No. 30260889394
SBI, Nagarabhavi (AED) Branch
IFSC: SBIN0009050

ವರದಿ ಕೃಪೆ: ಅನ್ನದ ಋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...