Homeಚಳವಳಿರೈತ ಹೋರಾಟ ಕುರಿತ ಸಾಕ್ಷ್ಯಚಿತ್ರ ಬಿಡುಗಡೆಗೆ ಆರ್ಥಿಕ ನೆರವು ಬೇಕಿದೆ: ಕೇಸರಿ ಹರವು

ರೈತ ಹೋರಾಟ ಕುರಿತ ಸಾಕ್ಷ್ಯಚಿತ್ರ ಬಿಡುಗಡೆಗೆ ಆರ್ಥಿಕ ನೆರವು ಬೇಕಿದೆ: ಕೇಸರಿ ಹರವು

ಐತಿಹಾಸಿಕ ಹೋರಾಟವೊಂದರ ಸಮಗ್ರ ದಾಖಲೆಯಾಗಿ ಉಳಿಯಲಿರುವ ಈ ಸಾಕ್ಷ್ಯಚಿತ್ರಕ್ಕೆ ಆರ್ಥಿಕ ನೆರವು ಲಭ್ಯವಾದರೆ ಮಹತ್ವದ ಪ್ರಯತ್ನಕ್ಕೆ ಜೊತೆಯಾದ ಎಲ್ಲರಿಗೂ ಒಂದು ಸಾರ್ಥಕ ಭಾವ ಉಳಿಯುತ್ತದೆ.

- Advertisement -
- Advertisement -

ಕಳೆದ ಒಂಬತ್ತು ತಿಂಗಳುಗಳಿಂದ ನಡೆಯುತ್ತಿರುವ ರೈತ ಹೋರಾಟ ಐತಿಹಾಸಿಕ ಎಂದೇ ಪರಿಗಣಿಸಲಾಗಿದೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಈ ರೀತಿಯ ಸಂಘಟಿತವಾದ, ಅಹಿಂಸಾತ್ಮಕವಾದ, ಇಷ್ಟು ದೊಡ್ಡ ಹೋರಾಟ ದೀರ್ಘಕಾಲ ನಡೆದ ಇನ್ನೊಂದು ಉದಾಹರಣೆ ಇಲ್ಲ.

ಇಂಥ ಹೋರಾಟವನ್ನು ದಾಖಲಿಸುವ ಮಹತ್ವದ ಕೆಲಸಕ್ಕೆ ಮುಂದಾದ ಕನ್ನಡದ ಸಿನಿಮಾ ನಿರ್ದೇಶಕ ಕೇಸರಿ ಹರವು ಅವರು ದೆಹಲಿ ರೈತ ಹೋರಾಟ ಕುರಿತು ಸಾಕ್ಷ್ಯಚಿತ್ರವನ್ನು ನಿರ್ಮಿಸುತ್ತಿದ್ದು, ಈ ಸಾಕ್ಷ್ಯಚಿತ್ರ ಪೂರೈಸಲು ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದ್ದಾರೆ.

ಇದುವರೆಗೂ ಮೂರು ಬಾರಿ ದೆಹಲಿಗೆ ತೆರಳಿ 18 ದಿನಗಳ ಕಾಲ ದೆಹಲಿಯ ಗಡಿಗಳಲ್ಲಿ ರೈತ ಹೋರಾಟಗಾರರೊಂದಿಗೆ ನೆಲೆಸಿ ಅಲ್ಲಿನ ಹೋರಾಟದ ದೃಶ್ಯಗಳನ್ನು ಸೆರೆಹಿಡಿದಿರುವ ಹರವು ಅವರು, ನಂತರದಲ್ಲಿ ಪಂಜಾಬ್‌ ಮತ್ತು ಹರ್ಯಾಣಗಳಲ್ಲಿ ಓಡಾಡಿ, ಅಲ್ಲಿನ ರೈತರು, ಕೃಷಿ ಪರಿಸ್ಥಿತಿಗಳನ್ನು ಚಿತ್ರಿಸಿಕೊಂಡು ಬಂದಿದ್ದಾರೆ. ಕರ್ನಾಟಕದ ಹೋರಾಟಗಳು ಸೇರಿದಂತೆ ಸುಮಾರು 28 ದಿನಗಳ ಕಾಲ ಮೂರು ಕೃಷಿ ಕಾಯ್ದೆ ವಿರುದ್ಧದ ಹೋರಾಟ ಬಹುಮುಖ್ಯ ಸಂಗತಿಗಳನ್ನು ತಮ್ಮ ಕೆಮೆರಾ ಮೂಲಕ ಸೆರೆಹಿಡಿದಿದ್ದಾರೆ.

ಮೂಲತಃ ಸಿನಿಮಾ ನಿರ್ದೇಶಕರಾದ ಅವರು ‘ಭೂಮಿಗೀತ’, ‘ಒಳ್ಳೆಯವನು’ ಚಿತ್ರಗಳನ್ನು, 12 ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ.

ಜನ-ಜೀವನಕ್ಕೆ ಸಂಬಂಧಿಸಿದ ವಿಷಯಗಳಿಗೆ ಸ್ಪಂದಿಸುವ ಕೇಸರಿ ಹರವು ಅವರು ನಿರ್ಮಿಸಿದ ‘ಅಘನಾಶಿನಿ ಮತ್ತು ಮಕ್ಕಳು’, ‘ನಗರ ಮತ್ತು ನಗರ ಕಣಿವ’ ಸಾಕ್ಷ್ಯಚಿತ್ರಗಳು ಹೋರಾಟದ ಭಾಗವಾಗಿ ರೂಪುಗೊಂಡ ಸಾಕ್ಷ್ಯಚಿತ್ರಗಳು.

ಅಘನಾಶಿನಿ ಮತ್ತು ಮಕ್ಕಳು, ಸಾಕ್ಷ್ಯಚಿತ್ರದಲ್ಲಿ ತದಡಿ ಬಳಿ ಉಷ್ಣಸ್ಥಾವರ ನಿರ್ಮಿಸುವ ಕುರಿತು ಮಾಡಿದೆವು. ಅದರ ವಿರುದ್ಧ ನಡೆದ ಹೋರಾಟವನ್ನು ಸಾಕ್ಷ್ಯಚಿತ್ರದಲ್ಲಿ ತಂದೆ. ಪರಿಸರ ಮತ್ತು ಸಾಮಾಜಿಕ, ಸ್ಥಳೀಯ ಆರ್ಥಿಕತೆಯ ಉಳಿಯುವ ಪ್ರಶ್ನೆಯಾಗಿ ಈ ಸಾಕ್ಷ್ಯಚಿತ್ರದಲ್ಲಿ ಮಹತ್ವದ ಸಂಗತಿಗಳನ್ನು ದಾಖಲಿಸುವ ಪ್ರಯತ್ನ ಮಾಡಿದೆ.

ನಗರ ಮತ್ತು ನದಿ ಕಣಿವೆ ಸಾಕ್ಷ್ಯಚಿತ್ರದಲ್ಲಿ ಗೊಂಡ್ಯಾ ಜಲವಿದ್ಯುತ್‌ ಯೋಜನೆ ಜಾರಿಗೆ ಬರುತ್ತಿತ್ತು. ಪಶ್ಚಿಮ ಘಟ್ಟದಲ್ಲಿ ತನ್ನದೇ ಮಹತ್ವ ಹೊಂದಿರುವ ಗೊಂಡ್ಯಾ ಕಾಡಿನ ಬಗ್ಗೆ, ಅಲ್ಲಿನ ಜೀವವೈವಿಧ್ಯದ ಬಗ್ಗೆ, ಅದನ್ನು ಸಂರಕ್ಷಿಸುವ ಕುರಿತು ಸಾಕ್ಷ್ಯಚಿತ್ರದಲ್ಲಿ ದಾಖಲಿಸಿದ್ದಾರೆ.

ಅವರ ತುಡಿತ ರೈತ ಪರ ವಿಚಾರಗಳಲ್ಲೂ ಎದ್ದು ಕಾಣುವುದು ರೈತ ನಾಯಕ ಕೆ ಎಸ್‌ ಪುಟ್ಟಣ್ಣಯ್ಯ ಅವರ ನೆನಪಿನಲ್ಲಿ ನಿರ್ಮಿಸಿದ ಸಾಕ್ಷ್ಯಚಿತ್ರದಲ್ಲಿ. ಪುಟ್ಟಣ್ಣಯ್ಯ ಜೀವನ ಮತ್ತು ಹೋರಾಟದ ಜೊತೆಗೆ ರೈತ ಹೋರಾಟ, ರೈತ ಸಮಸ್ಯೆಗಳನ್ನು ಬಿಂಬಿಸಿದರು. ಇದರ ವಿಸ್ತರಣೆಯಂತೆಯೇ ದೆಹಲಿ ಹೋರಾಟದ ಸಾಕ್ಷ್ಯಚಿತ್ರದ ಆಲೋಚನೆ ಅವರನ್ನು ಕಾಡಿದ್ದು.

”ಕೊರೊನಾ ಬಿಕ್ಕಟ್ಟಿನ ನಡುವೆ ಕೇಂದ್ರವು ಸುಗ್ರೀವಾಜ್ಞೆ ಮೂಲಕ ಬಹಳ ಅಸಂವಿಧಾನಿಕವಾಗಿ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಯಿತು. ಇದನ್ನು ವಿರೋಧಿಸಿ ಪಂಜಾಬಿ ರೈತರು ಒಗ್ಗಟ್ಟಾಗಿ ಪ್ರತಿಭಟಿಸಿದ ರೀತಿ, ಕಾಯ್ದೆಗಳನ್ನು ಅರ್ಥ ಮಾಡಿಕೊಂಡ ರೀತಿ, ರೈತರಿಗೆ ಮಾರಕ ಎಂಬುದನ್ನ ಗ್ರಹಿಸಿದ ರೀತಿಯನ್ನು ನಾನು ತಿಳಿದುಕೊಳ್ಳುತ್ತಿದ್ದೆ. ನವೆಂಬರ್‌ನಲ್ಲಿ 26ಕ್ಕೆ ದೆಹಲಿ ಚಲೋಗೆ ನಿರ್ಧರಿಸಿದರೊ, ಆಗ ಈ ಚಳವಳಿ ದೊಡ್ಡದಾಗಿ ಬೆಳೆಯುತ್ತದೆ. ಇದನ್ನು ಸಾಕ್ಷ್ಯಚಿತ್ರ ಮಾಡಬೇಕೆಂದು ಅನ್ನಿಸಿತು” ಎಂದು ರೈತ ಹೋರಾಟದ ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಪ್ರೇರಣೆಯ ಸಂದರ್ಭವನ್ನು ಅವರು ‘ಅನ್ನದ ಋಣ’ ವೆಬ್ ಸೈಟ್ ನೊಂದಿಗೆ ಹಂಚಿಕೊಂಡಿದ್ದಾರೆ.

ಈ ಎಲ್ಲ ಚಿತ್ರೀಕರಣವೂ ಹಲವು ಸಮಾನ ಆಸಕ್ತ, ಸಮಾನ ಮನಸ್ಕರ ನೆರವಿನೊಂದಿಗೆ ಕೈಗೊಂಡ ಕೇಸರಿ ಹರವು ಅವರು ಇನ್ನಷ್ಟು ಮಹತ್ವದ ಸಂಗತಿಗಳನ್ನು ದಾಖಲಿಸಬೇಕೆಂಬ ಇಚ್ಚೆ ಹೊಂದಿದ್ದಾರೆ.

”ಬಿಹಾರ್‌ ಮತ್ತು ಕೇರಳದಲ್ಲಿ ಎಪಿಎಂಸಿಗಳಿಲ್ಲ. ಬಿಹಾರದಲ್ಲಿ ರೈತ ಉತ್ಪನ್ನಗಳ ಮಾರುಕಟ್ಟೆಯದ್ದು ಅತ್ಯಂತ ದಾರುಣ ಸ್ಥಿತಿ. ಆದರೆ ಕೇರಳದಲ್ಲಿ ಎಪಿಎಂಸಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇವೆರಡನ್ನೂ ಅಧ್ಯಯನ ಮಾಡಬೇಕು. ಅಲ್ಲಿನ ರೈತರನ್ನು ಮಾತನಾಡಿಸಬೇಕು. ದೆಹಲಿ ಹೋರಾಟಕ್ಕೆ ಸಂಬಂಧಿಸಿದ ಅಲ್ಲಿನ ಕೆಲ ತಜ್ಞ-ಚಿಂತಕರ ಮಾತುಗಳನ್ನು ಸೆರೆಹಿಡಿಯಬೇಕು. ಇದು ಸಾಧ್ಯವಾಗುವುದಾದರೆ, ಇಲ್ಲಿಯವರೆಗಿನ ಶ್ರಮ ಸಾರ್ಥಕವಾಗುತ್ತದೆ” ಎನ್ನುತ್ತಾರೆ ಕೇಸರಿ ಹರವು.

”ಈ ಸಾಕ್ಷ್ಯಚಿತ್ರದಲ್ಲಿರುವುದು ಕೇವಲ ರೈತ ಸಮಸ್ಯೆಗಳನ್ನು ಬಿಂಬಿಸುವ ಪ್ರಯತ್ನವಷ್ಟೇ ಅಲ್ಲ, ದೇಶದ ಸಾರ್ವಭೌಮತ್ವ, ಸಾಮಾಜಿಕ ಸಾರ್ವಭೌಮತ್ವ ಮತ್ತು ಪರಿಸರದ ಅಂಶಗಳನ್ನು ಈ ರೈತರ ಹೋರಾಟ ಹೊಂದಿದೆ ಎಂಬುದನ್ನೂ ದಾಖಲಿಸುತ್ತದೆ. ಇದು ರೈತರಿಗಷ್ಟೇ ಅಲ್ಲ, ಎಲ್ಲರಿಗೂ ಸಂಬಂಧಿಸಿದ್ದು. ಈ ಮೂರು ಕಾಯ್ದೆಗಳಿಂದ ಖಾಸಗೀಕರಣಕ್ಕೆ ಅನುಕೂಲವಾಗುತ್ತದೆ. ಇದರಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಾರ್ವಭೌಮತ್ವವನ್ನು ಕಳೆದುಕೊಳ್ಳುವ ಅಪಾಯವಿದೆ. ಹಾಗಾಗಿ ಇದು ರೈತರ ಸಮಸ್ಯೆಯಲ್ಲ, ಪ್ರತಿಯೊಬ್ಬರ ಸಮಸ್ಯೆಯಾಗಲಿದೆ, ಪ್ರತಿಯೊಂದು ಕಸುಬಿನ ಸಮಸ್ಯೆಯಾಗಲಿದೆ. ಇದು ದೇಶವ್ಯಾಪಿ ಹರಡುತ್ತಿದೆ. ಹರಡಬೇಕು. ಆದರೆ ಈ ವರೆಗೆ ರೈತರು ಮಾತ್ರ ಹೋರಾಟದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಮಿಕ್ಕೆಲ್ಲರೂ ಈ ಹೊರಾಟದಲ್ಲಿ ಪಾಲ್ಗೊಳ್ಳಬೇಕು ಎಂಬುದನ್ನು ಮನವರಿಕೆ ಮಾಡಿಕೊಳ್ಳುತ್ತದೆ” ಎಂದು ಸಾಕ್ಷ್ಯಚಿತ್ರದ ಆಶಯ ಮತ್ತು ಅಗತ್ಯಗಳನ್ನು ಹರವು ಅವರು ವಿವರಿಸುತ್ತಾರೆ.

ಇದನ್ನೂ ಓದಿ: ಸೆ.13ಕ್ಕೆ ವಿಧಾನಸೌಧ ಮುತ್ತಿಗೆ, ಸೆ. 17ಕ್ಕೆ ಕರ್ನಾಟಕ ಬಂದ್: ಕೋಡಿಹಳ್ಳಿ ಚಂದ್ರಶೇಖರ್‌

ಐತಿಹಾಸಿಕ ಹೋರಾಟವೊಂದರ ಸಮಗ್ರ ದಾಖಲೆಯಾಗಿ ಉಳಿಯಲಿರುವ ಈ ಸಾಕ್ಷ್ಯಚಿತ್ರಕ್ಕೆ ಆರ್ಥಿಕ ನೆರವು ಲಭ್ಯವಾದರೆ ಮಹತ್ವದ ಪ್ರಯತ್ನಕ್ಕೆ ಜೊತೆಯಾದ ಎಲ್ಲರಿಗೂ ಒಂದು ಸಾರ್ಥಕ ಭಾವ ಉಳಿಯುತ್ತದೆ. ರೈತ ಹೋರಾಟ ಕುರಿತ ಗೊಂದಲ, ಅಪಪ್ರಚಾರಗಳಿಗೆ ತೆರೆ ಎಳೆಯುವ, ಕಾರ್ಪೊರೆಟ್‌ ವ್ಯವಸ್ಥೆಯೊಂದರ ಸಂಚುಗಳು, ರೈತ ಹೋರಾಟ ಇಡೀ ದೇಶದ ಹೋರಾಟವೆಂಬುದನ್ನು ಹೇಳುವ ಎಲ್ಲ ಅಂಶಗಳೂ ಈ ಸಾಕ್ಷ್ಯಚಿತ್ರ ಅನಾವರಣ ಮಾಡುವ ಉದ್ದೇಶ ಮತ್ತು ಬದ್ಧತೆಯನ್ನು ಹೊಂದಿದೆ ಎಂಬುದು ಹರವು ಅವರ ವಿಶ್ವಾಸದ ಮಾತು. ಈ ಸಾಕ್ಷ್ಯಚಿತ್ರ ಪೂರ್ಣಗೊಳಿಸಲು ಅಗತ್ಯವಿರುವ ಆರ್ಥಿಕ ನೆರವಿಗೆ ಎಲ್ಲ ಸದಾಶಯವುಳ್ಳ ಸಹೃದಯರು ಮುಂದಾಗಬಹುದು. ಈ ಕೆಳಗಿನ ಹರವು ಅವರ ಬ್ಯಾಂಕ್‌ ಖಾತೆ ಮತ್ತು ಯುಪಿಐ ವಿವರಗಳಿವೆ. ಸೂಕ್ತ ರೀತಿಯಲ್ಲಿ ನೆರವಾಗುವ ಮೂಲಕ ಸಾಕ್ಷ್ಯಚಿತ್ರ ಪೂರ್ಣಗೊಳ್ಳಲು ಸಹಕರಿಸಬೇಕು.

UPI: kesari.haravoo@oksbi
Kesari Haravu: Bank details:
Kesari Harvoo
Ac. No. 30260889394
SBI, Nagarabhavi (AED) Branch
IFSC: SBIN0009050

ವರದಿ ಕೃಪೆ: ಅನ್ನದ ಋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...