Homeಚಳವಳಿರೈತ ಹೋರಾಟ ಕುರಿತ ಸಾಕ್ಷ್ಯಚಿತ್ರ ಬಿಡುಗಡೆಗೆ ಆರ್ಥಿಕ ನೆರವು ಬೇಕಿದೆ: ಕೇಸರಿ ಹರವು

ರೈತ ಹೋರಾಟ ಕುರಿತ ಸಾಕ್ಷ್ಯಚಿತ್ರ ಬಿಡುಗಡೆಗೆ ಆರ್ಥಿಕ ನೆರವು ಬೇಕಿದೆ: ಕೇಸರಿ ಹರವು

ಐತಿಹಾಸಿಕ ಹೋರಾಟವೊಂದರ ಸಮಗ್ರ ದಾಖಲೆಯಾಗಿ ಉಳಿಯಲಿರುವ ಈ ಸಾಕ್ಷ್ಯಚಿತ್ರಕ್ಕೆ ಆರ್ಥಿಕ ನೆರವು ಲಭ್ಯವಾದರೆ ಮಹತ್ವದ ಪ್ರಯತ್ನಕ್ಕೆ ಜೊತೆಯಾದ ಎಲ್ಲರಿಗೂ ಒಂದು ಸಾರ್ಥಕ ಭಾವ ಉಳಿಯುತ್ತದೆ.

- Advertisement -
- Advertisement -

ಕಳೆದ ಒಂಬತ್ತು ತಿಂಗಳುಗಳಿಂದ ನಡೆಯುತ್ತಿರುವ ರೈತ ಹೋರಾಟ ಐತಿಹಾಸಿಕ ಎಂದೇ ಪರಿಗಣಿಸಲಾಗಿದೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಈ ರೀತಿಯ ಸಂಘಟಿತವಾದ, ಅಹಿಂಸಾತ್ಮಕವಾದ, ಇಷ್ಟು ದೊಡ್ಡ ಹೋರಾಟ ದೀರ್ಘಕಾಲ ನಡೆದ ಇನ್ನೊಂದು ಉದಾಹರಣೆ ಇಲ್ಲ.

ಇಂಥ ಹೋರಾಟವನ್ನು ದಾಖಲಿಸುವ ಮಹತ್ವದ ಕೆಲಸಕ್ಕೆ ಮುಂದಾದ ಕನ್ನಡದ ಸಿನಿಮಾ ನಿರ್ದೇಶಕ ಕೇಸರಿ ಹರವು ಅವರು ದೆಹಲಿ ರೈತ ಹೋರಾಟ ಕುರಿತು ಸಾಕ್ಷ್ಯಚಿತ್ರವನ್ನು ನಿರ್ಮಿಸುತ್ತಿದ್ದು, ಈ ಸಾಕ್ಷ್ಯಚಿತ್ರ ಪೂರೈಸಲು ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದ್ದಾರೆ.

ಇದುವರೆಗೂ ಮೂರು ಬಾರಿ ದೆಹಲಿಗೆ ತೆರಳಿ 18 ದಿನಗಳ ಕಾಲ ದೆಹಲಿಯ ಗಡಿಗಳಲ್ಲಿ ರೈತ ಹೋರಾಟಗಾರರೊಂದಿಗೆ ನೆಲೆಸಿ ಅಲ್ಲಿನ ಹೋರಾಟದ ದೃಶ್ಯಗಳನ್ನು ಸೆರೆಹಿಡಿದಿರುವ ಹರವು ಅವರು, ನಂತರದಲ್ಲಿ ಪಂಜಾಬ್‌ ಮತ್ತು ಹರ್ಯಾಣಗಳಲ್ಲಿ ಓಡಾಡಿ, ಅಲ್ಲಿನ ರೈತರು, ಕೃಷಿ ಪರಿಸ್ಥಿತಿಗಳನ್ನು ಚಿತ್ರಿಸಿಕೊಂಡು ಬಂದಿದ್ದಾರೆ. ಕರ್ನಾಟಕದ ಹೋರಾಟಗಳು ಸೇರಿದಂತೆ ಸುಮಾರು 28 ದಿನಗಳ ಕಾಲ ಮೂರು ಕೃಷಿ ಕಾಯ್ದೆ ವಿರುದ್ಧದ ಹೋರಾಟ ಬಹುಮುಖ್ಯ ಸಂಗತಿಗಳನ್ನು ತಮ್ಮ ಕೆಮೆರಾ ಮೂಲಕ ಸೆರೆಹಿಡಿದಿದ್ದಾರೆ.

ಮೂಲತಃ ಸಿನಿಮಾ ನಿರ್ದೇಶಕರಾದ ಅವರು ‘ಭೂಮಿಗೀತ’, ‘ಒಳ್ಳೆಯವನು’ ಚಿತ್ರಗಳನ್ನು, 12 ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ.

ಜನ-ಜೀವನಕ್ಕೆ ಸಂಬಂಧಿಸಿದ ವಿಷಯಗಳಿಗೆ ಸ್ಪಂದಿಸುವ ಕೇಸರಿ ಹರವು ಅವರು ನಿರ್ಮಿಸಿದ ‘ಅಘನಾಶಿನಿ ಮತ್ತು ಮಕ್ಕಳು’, ‘ನಗರ ಮತ್ತು ನಗರ ಕಣಿವ’ ಸಾಕ್ಷ್ಯಚಿತ್ರಗಳು ಹೋರಾಟದ ಭಾಗವಾಗಿ ರೂಪುಗೊಂಡ ಸಾಕ್ಷ್ಯಚಿತ್ರಗಳು.

ಅಘನಾಶಿನಿ ಮತ್ತು ಮಕ್ಕಳು, ಸಾಕ್ಷ್ಯಚಿತ್ರದಲ್ಲಿ ತದಡಿ ಬಳಿ ಉಷ್ಣಸ್ಥಾವರ ನಿರ್ಮಿಸುವ ಕುರಿತು ಮಾಡಿದೆವು. ಅದರ ವಿರುದ್ಧ ನಡೆದ ಹೋರಾಟವನ್ನು ಸಾಕ್ಷ್ಯಚಿತ್ರದಲ್ಲಿ ತಂದೆ. ಪರಿಸರ ಮತ್ತು ಸಾಮಾಜಿಕ, ಸ್ಥಳೀಯ ಆರ್ಥಿಕತೆಯ ಉಳಿಯುವ ಪ್ರಶ್ನೆಯಾಗಿ ಈ ಸಾಕ್ಷ್ಯಚಿತ್ರದಲ್ಲಿ ಮಹತ್ವದ ಸಂಗತಿಗಳನ್ನು ದಾಖಲಿಸುವ ಪ್ರಯತ್ನ ಮಾಡಿದೆ.

ನಗರ ಮತ್ತು ನದಿ ಕಣಿವೆ ಸಾಕ್ಷ್ಯಚಿತ್ರದಲ್ಲಿ ಗೊಂಡ್ಯಾ ಜಲವಿದ್ಯುತ್‌ ಯೋಜನೆ ಜಾರಿಗೆ ಬರುತ್ತಿತ್ತು. ಪಶ್ಚಿಮ ಘಟ್ಟದಲ್ಲಿ ತನ್ನದೇ ಮಹತ್ವ ಹೊಂದಿರುವ ಗೊಂಡ್ಯಾ ಕಾಡಿನ ಬಗ್ಗೆ, ಅಲ್ಲಿನ ಜೀವವೈವಿಧ್ಯದ ಬಗ್ಗೆ, ಅದನ್ನು ಸಂರಕ್ಷಿಸುವ ಕುರಿತು ಸಾಕ್ಷ್ಯಚಿತ್ರದಲ್ಲಿ ದಾಖಲಿಸಿದ್ದಾರೆ.

ಅವರ ತುಡಿತ ರೈತ ಪರ ವಿಚಾರಗಳಲ್ಲೂ ಎದ್ದು ಕಾಣುವುದು ರೈತ ನಾಯಕ ಕೆ ಎಸ್‌ ಪುಟ್ಟಣ್ಣಯ್ಯ ಅವರ ನೆನಪಿನಲ್ಲಿ ನಿರ್ಮಿಸಿದ ಸಾಕ್ಷ್ಯಚಿತ್ರದಲ್ಲಿ. ಪುಟ್ಟಣ್ಣಯ್ಯ ಜೀವನ ಮತ್ತು ಹೋರಾಟದ ಜೊತೆಗೆ ರೈತ ಹೋರಾಟ, ರೈತ ಸಮಸ್ಯೆಗಳನ್ನು ಬಿಂಬಿಸಿದರು. ಇದರ ವಿಸ್ತರಣೆಯಂತೆಯೇ ದೆಹಲಿ ಹೋರಾಟದ ಸಾಕ್ಷ್ಯಚಿತ್ರದ ಆಲೋಚನೆ ಅವರನ್ನು ಕಾಡಿದ್ದು.

”ಕೊರೊನಾ ಬಿಕ್ಕಟ್ಟಿನ ನಡುವೆ ಕೇಂದ್ರವು ಸುಗ್ರೀವಾಜ್ಞೆ ಮೂಲಕ ಬಹಳ ಅಸಂವಿಧಾನಿಕವಾಗಿ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಯಿತು. ಇದನ್ನು ವಿರೋಧಿಸಿ ಪಂಜಾಬಿ ರೈತರು ಒಗ್ಗಟ್ಟಾಗಿ ಪ್ರತಿಭಟಿಸಿದ ರೀತಿ, ಕಾಯ್ದೆಗಳನ್ನು ಅರ್ಥ ಮಾಡಿಕೊಂಡ ರೀತಿ, ರೈತರಿಗೆ ಮಾರಕ ಎಂಬುದನ್ನ ಗ್ರಹಿಸಿದ ರೀತಿಯನ್ನು ನಾನು ತಿಳಿದುಕೊಳ್ಳುತ್ತಿದ್ದೆ. ನವೆಂಬರ್‌ನಲ್ಲಿ 26ಕ್ಕೆ ದೆಹಲಿ ಚಲೋಗೆ ನಿರ್ಧರಿಸಿದರೊ, ಆಗ ಈ ಚಳವಳಿ ದೊಡ್ಡದಾಗಿ ಬೆಳೆಯುತ್ತದೆ. ಇದನ್ನು ಸಾಕ್ಷ್ಯಚಿತ್ರ ಮಾಡಬೇಕೆಂದು ಅನ್ನಿಸಿತು” ಎಂದು ರೈತ ಹೋರಾಟದ ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಪ್ರೇರಣೆಯ ಸಂದರ್ಭವನ್ನು ಅವರು ‘ಅನ್ನದ ಋಣ’ ವೆಬ್ ಸೈಟ್ ನೊಂದಿಗೆ ಹಂಚಿಕೊಂಡಿದ್ದಾರೆ.

ಈ ಎಲ್ಲ ಚಿತ್ರೀಕರಣವೂ ಹಲವು ಸಮಾನ ಆಸಕ್ತ, ಸಮಾನ ಮನಸ್ಕರ ನೆರವಿನೊಂದಿಗೆ ಕೈಗೊಂಡ ಕೇಸರಿ ಹರವು ಅವರು ಇನ್ನಷ್ಟು ಮಹತ್ವದ ಸಂಗತಿಗಳನ್ನು ದಾಖಲಿಸಬೇಕೆಂಬ ಇಚ್ಚೆ ಹೊಂದಿದ್ದಾರೆ.

”ಬಿಹಾರ್‌ ಮತ್ತು ಕೇರಳದಲ್ಲಿ ಎಪಿಎಂಸಿಗಳಿಲ್ಲ. ಬಿಹಾರದಲ್ಲಿ ರೈತ ಉತ್ಪನ್ನಗಳ ಮಾರುಕಟ್ಟೆಯದ್ದು ಅತ್ಯಂತ ದಾರುಣ ಸ್ಥಿತಿ. ಆದರೆ ಕೇರಳದಲ್ಲಿ ಎಪಿಎಂಸಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇವೆರಡನ್ನೂ ಅಧ್ಯಯನ ಮಾಡಬೇಕು. ಅಲ್ಲಿನ ರೈತರನ್ನು ಮಾತನಾಡಿಸಬೇಕು. ದೆಹಲಿ ಹೋರಾಟಕ್ಕೆ ಸಂಬಂಧಿಸಿದ ಅಲ್ಲಿನ ಕೆಲ ತಜ್ಞ-ಚಿಂತಕರ ಮಾತುಗಳನ್ನು ಸೆರೆಹಿಡಿಯಬೇಕು. ಇದು ಸಾಧ್ಯವಾಗುವುದಾದರೆ, ಇಲ್ಲಿಯವರೆಗಿನ ಶ್ರಮ ಸಾರ್ಥಕವಾಗುತ್ತದೆ” ಎನ್ನುತ್ತಾರೆ ಕೇಸರಿ ಹರವು.

”ಈ ಸಾಕ್ಷ್ಯಚಿತ್ರದಲ್ಲಿರುವುದು ಕೇವಲ ರೈತ ಸಮಸ್ಯೆಗಳನ್ನು ಬಿಂಬಿಸುವ ಪ್ರಯತ್ನವಷ್ಟೇ ಅಲ್ಲ, ದೇಶದ ಸಾರ್ವಭೌಮತ್ವ, ಸಾಮಾಜಿಕ ಸಾರ್ವಭೌಮತ್ವ ಮತ್ತು ಪರಿಸರದ ಅಂಶಗಳನ್ನು ಈ ರೈತರ ಹೋರಾಟ ಹೊಂದಿದೆ ಎಂಬುದನ್ನೂ ದಾಖಲಿಸುತ್ತದೆ. ಇದು ರೈತರಿಗಷ್ಟೇ ಅಲ್ಲ, ಎಲ್ಲರಿಗೂ ಸಂಬಂಧಿಸಿದ್ದು. ಈ ಮೂರು ಕಾಯ್ದೆಗಳಿಂದ ಖಾಸಗೀಕರಣಕ್ಕೆ ಅನುಕೂಲವಾಗುತ್ತದೆ. ಇದರಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಾರ್ವಭೌಮತ್ವವನ್ನು ಕಳೆದುಕೊಳ್ಳುವ ಅಪಾಯವಿದೆ. ಹಾಗಾಗಿ ಇದು ರೈತರ ಸಮಸ್ಯೆಯಲ್ಲ, ಪ್ರತಿಯೊಬ್ಬರ ಸಮಸ್ಯೆಯಾಗಲಿದೆ, ಪ್ರತಿಯೊಂದು ಕಸುಬಿನ ಸಮಸ್ಯೆಯಾಗಲಿದೆ. ಇದು ದೇಶವ್ಯಾಪಿ ಹರಡುತ್ತಿದೆ. ಹರಡಬೇಕು. ಆದರೆ ಈ ವರೆಗೆ ರೈತರು ಮಾತ್ರ ಹೋರಾಟದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಮಿಕ್ಕೆಲ್ಲರೂ ಈ ಹೊರಾಟದಲ್ಲಿ ಪಾಲ್ಗೊಳ್ಳಬೇಕು ಎಂಬುದನ್ನು ಮನವರಿಕೆ ಮಾಡಿಕೊಳ್ಳುತ್ತದೆ” ಎಂದು ಸಾಕ್ಷ್ಯಚಿತ್ರದ ಆಶಯ ಮತ್ತು ಅಗತ್ಯಗಳನ್ನು ಹರವು ಅವರು ವಿವರಿಸುತ್ತಾರೆ.

ಇದನ್ನೂ ಓದಿ: ಸೆ.13ಕ್ಕೆ ವಿಧಾನಸೌಧ ಮುತ್ತಿಗೆ, ಸೆ. 17ಕ್ಕೆ ಕರ್ನಾಟಕ ಬಂದ್: ಕೋಡಿಹಳ್ಳಿ ಚಂದ್ರಶೇಖರ್‌

ಐತಿಹಾಸಿಕ ಹೋರಾಟವೊಂದರ ಸಮಗ್ರ ದಾಖಲೆಯಾಗಿ ಉಳಿಯಲಿರುವ ಈ ಸಾಕ್ಷ್ಯಚಿತ್ರಕ್ಕೆ ಆರ್ಥಿಕ ನೆರವು ಲಭ್ಯವಾದರೆ ಮಹತ್ವದ ಪ್ರಯತ್ನಕ್ಕೆ ಜೊತೆಯಾದ ಎಲ್ಲರಿಗೂ ಒಂದು ಸಾರ್ಥಕ ಭಾವ ಉಳಿಯುತ್ತದೆ. ರೈತ ಹೋರಾಟ ಕುರಿತ ಗೊಂದಲ, ಅಪಪ್ರಚಾರಗಳಿಗೆ ತೆರೆ ಎಳೆಯುವ, ಕಾರ್ಪೊರೆಟ್‌ ವ್ಯವಸ್ಥೆಯೊಂದರ ಸಂಚುಗಳು, ರೈತ ಹೋರಾಟ ಇಡೀ ದೇಶದ ಹೋರಾಟವೆಂಬುದನ್ನು ಹೇಳುವ ಎಲ್ಲ ಅಂಶಗಳೂ ಈ ಸಾಕ್ಷ್ಯಚಿತ್ರ ಅನಾವರಣ ಮಾಡುವ ಉದ್ದೇಶ ಮತ್ತು ಬದ್ಧತೆಯನ್ನು ಹೊಂದಿದೆ ಎಂಬುದು ಹರವು ಅವರ ವಿಶ್ವಾಸದ ಮಾತು. ಈ ಸಾಕ್ಷ್ಯಚಿತ್ರ ಪೂರ್ಣಗೊಳಿಸಲು ಅಗತ್ಯವಿರುವ ಆರ್ಥಿಕ ನೆರವಿಗೆ ಎಲ್ಲ ಸದಾಶಯವುಳ್ಳ ಸಹೃದಯರು ಮುಂದಾಗಬಹುದು. ಈ ಕೆಳಗಿನ ಹರವು ಅವರ ಬ್ಯಾಂಕ್‌ ಖಾತೆ ಮತ್ತು ಯುಪಿಐ ವಿವರಗಳಿವೆ. ಸೂಕ್ತ ರೀತಿಯಲ್ಲಿ ನೆರವಾಗುವ ಮೂಲಕ ಸಾಕ್ಷ್ಯಚಿತ್ರ ಪೂರ್ಣಗೊಳ್ಳಲು ಸಹಕರಿಸಬೇಕು.

UPI: kesari.haravoo@oksbi
Kesari Haravu: Bank details:
Kesari Harvoo
Ac. No. 30260889394
SBI, Nagarabhavi (AED) Branch
IFSC: SBIN0009050

ವರದಿ ಕೃಪೆ: ಅನ್ನದ ಋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...