Homeಮುಖಪುಟಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

2002ರ ಗುಜರಾತ್ ಗಲಭೆ ಕುರಿತ ಎರಡು ಭಾಗಗಳ ಸಾಕ್ಷ್ಯಚಿತ್ರದಿಂದ ಭಾರತ, ನ್ಯಾಯಾಂಗ ವ್ಯವಸ್ಥೆಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸೋಮವಾರ ಬಿಬಿಸಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಜಸ್ಟಿಸ್ ಆನ್ ಟ್ರಯಲ್ ಎಂಬ ಗುಜರಾತ್ ಮೂಲದ ಸರ್ಕಾರೇತರ ಸಂಸ್ಥೆ ಈ ಪ್ರಕರಣವನ್ನು ದಾಖಲಿಸಿದೆ. ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಸೆಪ್ಟೆಂಬರ್‌ನಲ್ಲಿ ವಿಚಾರಣೆಗೆ ಪಟ್ಟಿ ಮಾಡಿದ್ದಾರೆ. ಇದೀಗ ದೆಹಲಿ ಹೈಕೋರ್ಟ್‌ ಬ್ರಿಟನ್‌ನ ಬಿಬಿಸಿ ಸಂಸ್ಥೆಗೆ ಸಮನ್ಸ್‌ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಬಿಬಿಸಿಯು ‘ಭಾರತ: ಮೋದಿ ಪ್ರಶ್ನೆ’ ಎನ್ನುವ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಜನವರಿ 17 ರಂದು ಬಿಡುಗಡೆ ಮಾಡಿತು. ಆಗ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು, ಆ ಹತ್ಯಾಕಾಂಡದ ವಾತಾವರಣಕ್ಕೆ ನೇರ ಹೊಣೆಗಾರರಾಗಿದ್ದಾರೆ. 2002ರ ಗಲಭೆಗಳು ಮತ್ತು ಅವರು ಮಧ್ಯಪ್ರವೇಶಿಸದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದರು ಎಂದು ಆ ಸಾಕ್ಷ್ಯ ಚಿತ್ರ ಹೇಳುತ್ತದೆ.

ಈ ಗಲಭೆಯಲ್ಲಿ 1,000 ಕ್ಕೂ ಹೆಚ್ಚು ಜನರು ಮುತ್ತಪಟ್ಟರು ಅವರಲ್ಲಿ ಹೆಚ್ಚಿನವರು ಮುಸ್ಲಿಂರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಈ ಸಾಕ್ಷ್ಯಚಿತ್ರವು ಮಾನಹಾನಿಕರವಾದ ಆರೋಪವನ್ನು ಮಾಡುತ್ತದೆ. ದೇಶ ಮತ್ತು ನ್ಯಾಯಾಂಗದ ಪ್ರತಿಷ್ಠೆಯ ಮೇಲೆ ಮತ್ತು ಪ್ರಧಾನ ಮಂತ್ರಿಯ ವಿರುದ್ಧ ನಿಂದನೆಗಳನ್ನು ಮಾಡುತ್ತದೆ ಎಂದು ವಾದಿಸಲಾಗಿದೆ. ಹೀಗಾಗಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಕೋರ್ಟ್‌ ತಿಳಿಸಿದೆ. ಎನ್‌ಜಿಒ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದಾರೆ. ಎರಡು ಭಾಗಗಳಲ್ಲಿರುವ ಸಾಕ್ಷ್ಯಚಿತ್ರವು ನ್ಯಾಯಾಂಗ ಸೇರಿದಂತೆ ದೇಶವನ್ನು ದೂಷಿಸಿದೆ ಎಂದು ಅವರು ಪ್ರತಿಪಾದಿಸಿದರು.

ಇತ್ತೀಚೆಗೆ ಇಲ್ಲಿನ ವಿಚಾರಣಾ ನ್ಯಾಯಾಲಯವು ಬಿಬಿಸಿ, ವಿಕಿಮೀಡಿಯಾ ಫೌಂಡೇಶನ್ ಮತ್ತು ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್‌ ನೀಡಿತ್ತು. ಆರ್‌ಎಸ್‌ಎಸ್ ಮತ್ತು ವಿಶ್ವ ಹಿಂದೂ ಪರಿಷತ್‌ಗೆ ಸಂಬಂಧಪಟ್ಟಂತೆ ಯಾವುದೇ ಸಾಕ್ಷ್ಯಚಿತ್ರ ಪ್ರಕಟಿಸದಂತೆ ತಡೆಯಬೇಕೆಂದು ಬಿಜೆಪಿ ನಾಯಕ ಬಿನಯ್ ಕುಮಾರ್ ಸಿಂಗ್ ಅವರು ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಪ್ರಕರಣ ವಿಚಾರಣೆ ಮಾಡಿದ ಬಳಿಕ ವಿಚಾರಣಾ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿತ್ತು.

ಇದನ್ನೂ ಓದಿ: ಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಆಗ ಗಲಭೆಯನ್ನು ಹತ್ತಿಕ್ಕುವಲ್ಲಿ ಮೋದಿ ನಿರ್ವಹಿಸಿದ್ದ ಪಾತ್ರ ಅನುಮಾನಾಸ್ಪದವಾಗಿದೆ ಎಂದು ಬಿಬಿಸಿಯ ಸಾಕ್ಷ್ಯಚಿತ್ರದಲ್ಲಿ ಆರೋಪಿಸಲಾಗಿತ್ತು. ಈ ಸಾಕ್ಷ್ಯಚಿತ್ರವನ್ನು ದೇಶದಲ್ಲಿ ಪ್ರಸಾರ ಆಗದಂತೆ ಮೋದಿ ಸರ್ಕಾರ ನಿಯಂತ್ರ ಹೇರಿತ್ತು. ಮಾಹಿತಿ ತಂತ್ರಜ್ಞಾನ ನಿಯಮಗಳು, 2021ರ ಅಡಿಯಲ್ಲಿ ಲಭ್ಯವಿರುವ ತುರ್ತು ಅಧಿಕಾರವನ್ನು ಬಳಸಿ, ಅದರ ಕ್ಲಿಪ್‌ಗಳನ್ನು ಹಂಚಿಕೊಳ್ಳದಂತೆ ತಡೆಯಲು ನಿರ್ದೇಶನಗಳನ್ನು ನೀಡಿತು.

ಇದಕ್ಕೂ ಮೊದಲು ಮೇ 3 ರಂದು, ಬಿಜೆಪಿ ಸದಸ್ಯ ಬಿನಯ್ ಕುಮಾರ್ ಸಿಂಗ್ ಅವರು ಸಲ್ಲಿಸಿದ ಮಾನನಷ್ಟ ದೂರಿನ ಮೇರೆಗೆ ದೆಹಲಿ ನ್ಯಾಯಾಲಯವು BBC, ಲಾಭರಹಿತ ಸಂಸ್ಥೆ ವಿಕಿಮೀಡಿಯಾ ಮತ್ತು ಡಿಜಿಟಲ್ ಲೈಬ್ರರಿ ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್ ಜಾರಿ ಮಾಡಿತ್ತು.

ವಿಶ್ವ ಹಿಂದೂ ಪರಿಷತ್ ಮತ್ತು ಮೋದಿ ವಿರುದ್ಧ ಮಾನಹಾನಿಕರ ಮತ್ತು ಆಧಾರರಹಿತ ಆರೋಪಗಳನ್ನು ಸಾಕ್ಷ್ಯಚಿತ್ರ ಒಳಗೊಂಡಿದೆ. ಹಾಗಾಗಿ ಈ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಬಿಬಿಸಿ, ವಿಕಿಪೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಅನ್ನು ನಿರ್ಬಂಧಿಸಲು ಸಿಂಗ್ ಅವರು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಿದರು.

ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದಾಗಿನಿಂದ BBC ಬೆದರಿಕೆಗಳನ್ನು ಎದುರಿಸುತ್ತಿದೆ. ಬಿಡುಗಡೆಯಾದ ಕೇವಲ ಒಂದು ತಿಂಗಳ ನಂತರ, ಭಾರತದಲ್ಲಿರುವ ಅವರ ಕಛೇರಿಗಳ ಮೇಲೆ ಐಟಿ ದಾಳಿ ನಡೆಸಿತು. ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಸಮೀಕ್ಷೆ ಹೆಸರಿನಲ್ಲಿ ದಾಳಿ ನಡೆಸಿತು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಹೊಂದಾಣಿಕೆಯಾಗಿಲ್ಲ ಎಂದು ತೆರಿಗೆ ಇಲಾಖೆ ಹೇಳಿಕೊಂಡಿದೆ.

ಕಳೆದ ತಿಂಗಳು, ಜಾರಿ ನಿರ್ದೇಶನಾಲಯವು (ಇಡಿ) ಬಿಬಿಸಿ ಇಂಡಿಯಾ ವಿರುದ್ಧ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆಯ ಪ್ರಕರಣವನ್ನು ದಾಖಲಿಸಿದೆ. ಬ್ರಿಟಿಷ್ ಬ್ರಾಡ್‌ಕಾಸ್ಟರ್‌ನ ಭಾರತ ಘಟಕದ ವಿದೇಶಿ ರವಾನೆಗಳನ್ನು ಪರಿಶೀಲಿಸಿದ ನಂತರ ಕೇಂದ್ರೀಯ ಏಜೆನ್ಸಿಯು ಮಾಧ್ಯಮ ಕಂಪನಿಯನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...