Homeಮುಖಪುಟಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

2002ರ ಗುಜರಾತ್ ಗಲಭೆ ಕುರಿತ ಎರಡು ಭಾಗಗಳ ಸಾಕ್ಷ್ಯಚಿತ್ರದಿಂದ ಭಾರತ, ನ್ಯಾಯಾಂಗ ವ್ಯವಸ್ಥೆಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸೋಮವಾರ ಬಿಬಿಸಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಜಸ್ಟಿಸ್ ಆನ್ ಟ್ರಯಲ್ ಎಂಬ ಗುಜರಾತ್ ಮೂಲದ ಸರ್ಕಾರೇತರ ಸಂಸ್ಥೆ ಈ ಪ್ರಕರಣವನ್ನು ದಾಖಲಿಸಿದೆ. ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಸೆಪ್ಟೆಂಬರ್‌ನಲ್ಲಿ ವಿಚಾರಣೆಗೆ ಪಟ್ಟಿ ಮಾಡಿದ್ದಾರೆ. ಇದೀಗ ದೆಹಲಿ ಹೈಕೋರ್ಟ್‌ ಬ್ರಿಟನ್‌ನ ಬಿಬಿಸಿ ಸಂಸ್ಥೆಗೆ ಸಮನ್ಸ್‌ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಬಿಬಿಸಿಯು ‘ಭಾರತ: ಮೋದಿ ಪ್ರಶ್ನೆ’ ಎನ್ನುವ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಜನವರಿ 17 ರಂದು ಬಿಡುಗಡೆ ಮಾಡಿತು. ಆಗ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು, ಆ ಹತ್ಯಾಕಾಂಡದ ವಾತಾವರಣಕ್ಕೆ ನೇರ ಹೊಣೆಗಾರರಾಗಿದ್ದಾರೆ. 2002ರ ಗಲಭೆಗಳು ಮತ್ತು ಅವರು ಮಧ್ಯಪ್ರವೇಶಿಸದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದರು ಎಂದು ಆ ಸಾಕ್ಷ್ಯ ಚಿತ್ರ ಹೇಳುತ್ತದೆ.

ಈ ಗಲಭೆಯಲ್ಲಿ 1,000 ಕ್ಕೂ ಹೆಚ್ಚು ಜನರು ಮುತ್ತಪಟ್ಟರು ಅವರಲ್ಲಿ ಹೆಚ್ಚಿನವರು ಮುಸ್ಲಿಂರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಈ ಸಾಕ್ಷ್ಯಚಿತ್ರವು ಮಾನಹಾನಿಕರವಾದ ಆರೋಪವನ್ನು ಮಾಡುತ್ತದೆ. ದೇಶ ಮತ್ತು ನ್ಯಾಯಾಂಗದ ಪ್ರತಿಷ್ಠೆಯ ಮೇಲೆ ಮತ್ತು ಪ್ರಧಾನ ಮಂತ್ರಿಯ ವಿರುದ್ಧ ನಿಂದನೆಗಳನ್ನು ಮಾಡುತ್ತದೆ ಎಂದು ವಾದಿಸಲಾಗಿದೆ. ಹೀಗಾಗಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಕೋರ್ಟ್‌ ತಿಳಿಸಿದೆ. ಎನ್‌ಜಿಒ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದಾರೆ. ಎರಡು ಭಾಗಗಳಲ್ಲಿರುವ ಸಾಕ್ಷ್ಯಚಿತ್ರವು ನ್ಯಾಯಾಂಗ ಸೇರಿದಂತೆ ದೇಶವನ್ನು ದೂಷಿಸಿದೆ ಎಂದು ಅವರು ಪ್ರತಿಪಾದಿಸಿದರು.

ಇತ್ತೀಚೆಗೆ ಇಲ್ಲಿನ ವಿಚಾರಣಾ ನ್ಯಾಯಾಲಯವು ಬಿಬಿಸಿ, ವಿಕಿಮೀಡಿಯಾ ಫೌಂಡೇಶನ್ ಮತ್ತು ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್‌ ನೀಡಿತ್ತು. ಆರ್‌ಎಸ್‌ಎಸ್ ಮತ್ತು ವಿಶ್ವ ಹಿಂದೂ ಪರಿಷತ್‌ಗೆ ಸಂಬಂಧಪಟ್ಟಂತೆ ಯಾವುದೇ ಸಾಕ್ಷ್ಯಚಿತ್ರ ಪ್ರಕಟಿಸದಂತೆ ತಡೆಯಬೇಕೆಂದು ಬಿಜೆಪಿ ನಾಯಕ ಬಿನಯ್ ಕುಮಾರ್ ಸಿಂಗ್ ಅವರು ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಪ್ರಕರಣ ವಿಚಾರಣೆ ಮಾಡಿದ ಬಳಿಕ ವಿಚಾರಣಾ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿತ್ತು.

ಇದನ್ನೂ ಓದಿ: ಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಆಗ ಗಲಭೆಯನ್ನು ಹತ್ತಿಕ್ಕುವಲ್ಲಿ ಮೋದಿ ನಿರ್ವಹಿಸಿದ್ದ ಪಾತ್ರ ಅನುಮಾನಾಸ್ಪದವಾಗಿದೆ ಎಂದು ಬಿಬಿಸಿಯ ಸಾಕ್ಷ್ಯಚಿತ್ರದಲ್ಲಿ ಆರೋಪಿಸಲಾಗಿತ್ತು. ಈ ಸಾಕ್ಷ್ಯಚಿತ್ರವನ್ನು ದೇಶದಲ್ಲಿ ಪ್ರಸಾರ ಆಗದಂತೆ ಮೋದಿ ಸರ್ಕಾರ ನಿಯಂತ್ರ ಹೇರಿತ್ತು. ಮಾಹಿತಿ ತಂತ್ರಜ್ಞಾನ ನಿಯಮಗಳು, 2021ರ ಅಡಿಯಲ್ಲಿ ಲಭ್ಯವಿರುವ ತುರ್ತು ಅಧಿಕಾರವನ್ನು ಬಳಸಿ, ಅದರ ಕ್ಲಿಪ್‌ಗಳನ್ನು ಹಂಚಿಕೊಳ್ಳದಂತೆ ತಡೆಯಲು ನಿರ್ದೇಶನಗಳನ್ನು ನೀಡಿತು.

ಇದಕ್ಕೂ ಮೊದಲು ಮೇ 3 ರಂದು, ಬಿಜೆಪಿ ಸದಸ್ಯ ಬಿನಯ್ ಕುಮಾರ್ ಸಿಂಗ್ ಅವರು ಸಲ್ಲಿಸಿದ ಮಾನನಷ್ಟ ದೂರಿನ ಮೇರೆಗೆ ದೆಹಲಿ ನ್ಯಾಯಾಲಯವು BBC, ಲಾಭರಹಿತ ಸಂಸ್ಥೆ ವಿಕಿಮೀಡಿಯಾ ಮತ್ತು ಡಿಜಿಟಲ್ ಲೈಬ್ರರಿ ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್ ಜಾರಿ ಮಾಡಿತ್ತು.

ವಿಶ್ವ ಹಿಂದೂ ಪರಿಷತ್ ಮತ್ತು ಮೋದಿ ವಿರುದ್ಧ ಮಾನಹಾನಿಕರ ಮತ್ತು ಆಧಾರರಹಿತ ಆರೋಪಗಳನ್ನು ಸಾಕ್ಷ್ಯಚಿತ್ರ ಒಳಗೊಂಡಿದೆ. ಹಾಗಾಗಿ ಈ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಬಿಬಿಸಿ, ವಿಕಿಪೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಅನ್ನು ನಿರ್ಬಂಧಿಸಲು ಸಿಂಗ್ ಅವರು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಿದರು.

ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದಾಗಿನಿಂದ BBC ಬೆದರಿಕೆಗಳನ್ನು ಎದುರಿಸುತ್ತಿದೆ. ಬಿಡುಗಡೆಯಾದ ಕೇವಲ ಒಂದು ತಿಂಗಳ ನಂತರ, ಭಾರತದಲ್ಲಿರುವ ಅವರ ಕಛೇರಿಗಳ ಮೇಲೆ ಐಟಿ ದಾಳಿ ನಡೆಸಿತು. ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಸಮೀಕ್ಷೆ ಹೆಸರಿನಲ್ಲಿ ದಾಳಿ ನಡೆಸಿತು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಹೊಂದಾಣಿಕೆಯಾಗಿಲ್ಲ ಎಂದು ತೆರಿಗೆ ಇಲಾಖೆ ಹೇಳಿಕೊಂಡಿದೆ.

ಕಳೆದ ತಿಂಗಳು, ಜಾರಿ ನಿರ್ದೇಶನಾಲಯವು (ಇಡಿ) ಬಿಬಿಸಿ ಇಂಡಿಯಾ ವಿರುದ್ಧ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆಯ ಪ್ರಕರಣವನ್ನು ದಾಖಲಿಸಿದೆ. ಬ್ರಿಟಿಷ್ ಬ್ರಾಡ್‌ಕಾಸ್ಟರ್‌ನ ಭಾರತ ಘಟಕದ ವಿದೇಶಿ ರವಾನೆಗಳನ್ನು ಪರಿಶೀಲಿಸಿದ ನಂತರ ಕೇಂದ್ರೀಯ ಏಜೆನ್ಸಿಯು ಮಾಧ್ಯಮ ಕಂಪನಿಯನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...