Homeಮುಖಪುಟಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

2002ರ ಗುಜರಾತ್ ಗಲಭೆ ಕುರಿತ ಎರಡು ಭಾಗಗಳ ಸಾಕ್ಷ್ಯಚಿತ್ರದಿಂದ ಭಾರತ, ನ್ಯಾಯಾಂಗ ವ್ಯವಸ್ಥೆಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸೋಮವಾರ ಬಿಬಿಸಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಜಸ್ಟಿಸ್ ಆನ್ ಟ್ರಯಲ್ ಎಂಬ ಗುಜರಾತ್ ಮೂಲದ ಸರ್ಕಾರೇತರ ಸಂಸ್ಥೆ ಈ ಪ್ರಕರಣವನ್ನು ದಾಖಲಿಸಿದೆ. ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಸೆಪ್ಟೆಂಬರ್‌ನಲ್ಲಿ ವಿಚಾರಣೆಗೆ ಪಟ್ಟಿ ಮಾಡಿದ್ದಾರೆ. ಇದೀಗ ದೆಹಲಿ ಹೈಕೋರ್ಟ್‌ ಬ್ರಿಟನ್‌ನ ಬಿಬಿಸಿ ಸಂಸ್ಥೆಗೆ ಸಮನ್ಸ್‌ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಬಿಬಿಸಿಯು ‘ಭಾರತ: ಮೋದಿ ಪ್ರಶ್ನೆ’ ಎನ್ನುವ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಜನವರಿ 17 ರಂದು ಬಿಡುಗಡೆ ಮಾಡಿತು. ಆಗ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು, ಆ ಹತ್ಯಾಕಾಂಡದ ವಾತಾವರಣಕ್ಕೆ ನೇರ ಹೊಣೆಗಾರರಾಗಿದ್ದಾರೆ. 2002ರ ಗಲಭೆಗಳು ಮತ್ತು ಅವರು ಮಧ್ಯಪ್ರವೇಶಿಸದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದರು ಎಂದು ಆ ಸಾಕ್ಷ್ಯ ಚಿತ್ರ ಹೇಳುತ್ತದೆ.

ಈ ಗಲಭೆಯಲ್ಲಿ 1,000 ಕ್ಕೂ ಹೆಚ್ಚು ಜನರು ಮುತ್ತಪಟ್ಟರು ಅವರಲ್ಲಿ ಹೆಚ್ಚಿನವರು ಮುಸ್ಲಿಂರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಈ ಸಾಕ್ಷ್ಯಚಿತ್ರವು ಮಾನಹಾನಿಕರವಾದ ಆರೋಪವನ್ನು ಮಾಡುತ್ತದೆ. ದೇಶ ಮತ್ತು ನ್ಯಾಯಾಂಗದ ಪ್ರತಿಷ್ಠೆಯ ಮೇಲೆ ಮತ್ತು ಪ್ರಧಾನ ಮಂತ್ರಿಯ ವಿರುದ್ಧ ನಿಂದನೆಗಳನ್ನು ಮಾಡುತ್ತದೆ ಎಂದು ವಾದಿಸಲಾಗಿದೆ. ಹೀಗಾಗಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಕೋರ್ಟ್‌ ತಿಳಿಸಿದೆ. ಎನ್‌ಜಿಒ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದಾರೆ. ಎರಡು ಭಾಗಗಳಲ್ಲಿರುವ ಸಾಕ್ಷ್ಯಚಿತ್ರವು ನ್ಯಾಯಾಂಗ ಸೇರಿದಂತೆ ದೇಶವನ್ನು ದೂಷಿಸಿದೆ ಎಂದು ಅವರು ಪ್ರತಿಪಾದಿಸಿದರು.

ಇತ್ತೀಚೆಗೆ ಇಲ್ಲಿನ ವಿಚಾರಣಾ ನ್ಯಾಯಾಲಯವು ಬಿಬಿಸಿ, ವಿಕಿಮೀಡಿಯಾ ಫೌಂಡೇಶನ್ ಮತ್ತು ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್‌ ನೀಡಿತ್ತು. ಆರ್‌ಎಸ್‌ಎಸ್ ಮತ್ತು ವಿಶ್ವ ಹಿಂದೂ ಪರಿಷತ್‌ಗೆ ಸಂಬಂಧಪಟ್ಟಂತೆ ಯಾವುದೇ ಸಾಕ್ಷ್ಯಚಿತ್ರ ಪ್ರಕಟಿಸದಂತೆ ತಡೆಯಬೇಕೆಂದು ಬಿಜೆಪಿ ನಾಯಕ ಬಿನಯ್ ಕುಮಾರ್ ಸಿಂಗ್ ಅವರು ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಪ್ರಕರಣ ವಿಚಾರಣೆ ಮಾಡಿದ ಬಳಿಕ ವಿಚಾರಣಾ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿತ್ತು.

ಇದನ್ನೂ ಓದಿ: ಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಆಗ ಗಲಭೆಯನ್ನು ಹತ್ತಿಕ್ಕುವಲ್ಲಿ ಮೋದಿ ನಿರ್ವಹಿಸಿದ್ದ ಪಾತ್ರ ಅನುಮಾನಾಸ್ಪದವಾಗಿದೆ ಎಂದು ಬಿಬಿಸಿಯ ಸಾಕ್ಷ್ಯಚಿತ್ರದಲ್ಲಿ ಆರೋಪಿಸಲಾಗಿತ್ತು. ಈ ಸಾಕ್ಷ್ಯಚಿತ್ರವನ್ನು ದೇಶದಲ್ಲಿ ಪ್ರಸಾರ ಆಗದಂತೆ ಮೋದಿ ಸರ್ಕಾರ ನಿಯಂತ್ರ ಹೇರಿತ್ತು. ಮಾಹಿತಿ ತಂತ್ರಜ್ಞಾನ ನಿಯಮಗಳು, 2021ರ ಅಡಿಯಲ್ಲಿ ಲಭ್ಯವಿರುವ ತುರ್ತು ಅಧಿಕಾರವನ್ನು ಬಳಸಿ, ಅದರ ಕ್ಲಿಪ್‌ಗಳನ್ನು ಹಂಚಿಕೊಳ್ಳದಂತೆ ತಡೆಯಲು ನಿರ್ದೇಶನಗಳನ್ನು ನೀಡಿತು.

ಇದಕ್ಕೂ ಮೊದಲು ಮೇ 3 ರಂದು, ಬಿಜೆಪಿ ಸದಸ್ಯ ಬಿನಯ್ ಕುಮಾರ್ ಸಿಂಗ್ ಅವರು ಸಲ್ಲಿಸಿದ ಮಾನನಷ್ಟ ದೂರಿನ ಮೇರೆಗೆ ದೆಹಲಿ ನ್ಯಾಯಾಲಯವು BBC, ಲಾಭರಹಿತ ಸಂಸ್ಥೆ ವಿಕಿಮೀಡಿಯಾ ಮತ್ತು ಡಿಜಿಟಲ್ ಲೈಬ್ರರಿ ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್ ಜಾರಿ ಮಾಡಿತ್ತು.

ವಿಶ್ವ ಹಿಂದೂ ಪರಿಷತ್ ಮತ್ತು ಮೋದಿ ವಿರುದ್ಧ ಮಾನಹಾನಿಕರ ಮತ್ತು ಆಧಾರರಹಿತ ಆರೋಪಗಳನ್ನು ಸಾಕ್ಷ್ಯಚಿತ್ರ ಒಳಗೊಂಡಿದೆ. ಹಾಗಾಗಿ ಈ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಬಿಬಿಸಿ, ವಿಕಿಪೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಅನ್ನು ನಿರ್ಬಂಧಿಸಲು ಸಿಂಗ್ ಅವರು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಿದರು.

ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದಾಗಿನಿಂದ BBC ಬೆದರಿಕೆಗಳನ್ನು ಎದುರಿಸುತ್ತಿದೆ. ಬಿಡುಗಡೆಯಾದ ಕೇವಲ ಒಂದು ತಿಂಗಳ ನಂತರ, ಭಾರತದಲ್ಲಿರುವ ಅವರ ಕಛೇರಿಗಳ ಮೇಲೆ ಐಟಿ ದಾಳಿ ನಡೆಸಿತು. ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಸಮೀಕ್ಷೆ ಹೆಸರಿನಲ್ಲಿ ದಾಳಿ ನಡೆಸಿತು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಹೊಂದಾಣಿಕೆಯಾಗಿಲ್ಲ ಎಂದು ತೆರಿಗೆ ಇಲಾಖೆ ಹೇಳಿಕೊಂಡಿದೆ.

ಕಳೆದ ತಿಂಗಳು, ಜಾರಿ ನಿರ್ದೇಶನಾಲಯವು (ಇಡಿ) ಬಿಬಿಸಿ ಇಂಡಿಯಾ ವಿರುದ್ಧ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆಯ ಪ್ರಕರಣವನ್ನು ದಾಖಲಿಸಿದೆ. ಬ್ರಿಟಿಷ್ ಬ್ರಾಡ್‌ಕಾಸ್ಟರ್‌ನ ಭಾರತ ಘಟಕದ ವಿದೇಶಿ ರವಾನೆಗಳನ್ನು ಪರಿಶೀಲಿಸಿದ ನಂತರ ಕೇಂದ್ರೀಯ ಏಜೆನ್ಸಿಯು ಮಾಧ್ಯಮ ಕಂಪನಿಯನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...