Homeಮುಖಪುಟಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

2002ರ ಗುಜರಾತ್ ಗಲಭೆ ಕುರಿತ ಎರಡು ಭಾಗಗಳ ಸಾಕ್ಷ್ಯಚಿತ್ರದಿಂದ ಭಾರತ, ನ್ಯಾಯಾಂಗ ವ್ಯವಸ್ಥೆಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸೋಮವಾರ ಬಿಬಿಸಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಜಸ್ಟಿಸ್ ಆನ್ ಟ್ರಯಲ್ ಎಂಬ ಗುಜರಾತ್ ಮೂಲದ ಸರ್ಕಾರೇತರ ಸಂಸ್ಥೆ ಈ ಪ್ರಕರಣವನ್ನು ದಾಖಲಿಸಿದೆ. ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಸೆಪ್ಟೆಂಬರ್‌ನಲ್ಲಿ ವಿಚಾರಣೆಗೆ ಪಟ್ಟಿ ಮಾಡಿದ್ದಾರೆ. ಇದೀಗ ದೆಹಲಿ ಹೈಕೋರ್ಟ್‌ ಬ್ರಿಟನ್‌ನ ಬಿಬಿಸಿ ಸಂಸ್ಥೆಗೆ ಸಮನ್ಸ್‌ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಬಿಬಿಸಿಯು ‘ಭಾರತ: ಮೋದಿ ಪ್ರಶ್ನೆ’ ಎನ್ನುವ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಜನವರಿ 17 ರಂದು ಬಿಡುಗಡೆ ಮಾಡಿತು. ಆಗ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು, ಆ ಹತ್ಯಾಕಾಂಡದ ವಾತಾವರಣಕ್ಕೆ ನೇರ ಹೊಣೆಗಾರರಾಗಿದ್ದಾರೆ. 2002ರ ಗಲಭೆಗಳು ಮತ್ತು ಅವರು ಮಧ್ಯಪ್ರವೇಶಿಸದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದರು ಎಂದು ಆ ಸಾಕ್ಷ್ಯ ಚಿತ್ರ ಹೇಳುತ್ತದೆ.

ಈ ಗಲಭೆಯಲ್ಲಿ 1,000 ಕ್ಕೂ ಹೆಚ್ಚು ಜನರು ಮುತ್ತಪಟ್ಟರು ಅವರಲ್ಲಿ ಹೆಚ್ಚಿನವರು ಮುಸ್ಲಿಂರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಈ ಸಾಕ್ಷ್ಯಚಿತ್ರವು ಮಾನಹಾನಿಕರವಾದ ಆರೋಪವನ್ನು ಮಾಡುತ್ತದೆ. ದೇಶ ಮತ್ತು ನ್ಯಾಯಾಂಗದ ಪ್ರತಿಷ್ಠೆಯ ಮೇಲೆ ಮತ್ತು ಪ್ರಧಾನ ಮಂತ್ರಿಯ ವಿರುದ್ಧ ನಿಂದನೆಗಳನ್ನು ಮಾಡುತ್ತದೆ ಎಂದು ವಾದಿಸಲಾಗಿದೆ. ಹೀಗಾಗಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಕೋರ್ಟ್‌ ತಿಳಿಸಿದೆ. ಎನ್‌ಜಿಒ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದಾರೆ. ಎರಡು ಭಾಗಗಳಲ್ಲಿರುವ ಸಾಕ್ಷ್ಯಚಿತ್ರವು ನ್ಯಾಯಾಂಗ ಸೇರಿದಂತೆ ದೇಶವನ್ನು ದೂಷಿಸಿದೆ ಎಂದು ಅವರು ಪ್ರತಿಪಾದಿಸಿದರು.

ಇತ್ತೀಚೆಗೆ ಇಲ್ಲಿನ ವಿಚಾರಣಾ ನ್ಯಾಯಾಲಯವು ಬಿಬಿಸಿ, ವಿಕಿಮೀಡಿಯಾ ಫೌಂಡೇಶನ್ ಮತ್ತು ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್‌ ನೀಡಿತ್ತು. ಆರ್‌ಎಸ್‌ಎಸ್ ಮತ್ತು ವಿಶ್ವ ಹಿಂದೂ ಪರಿಷತ್‌ಗೆ ಸಂಬಂಧಪಟ್ಟಂತೆ ಯಾವುದೇ ಸಾಕ್ಷ್ಯಚಿತ್ರ ಪ್ರಕಟಿಸದಂತೆ ತಡೆಯಬೇಕೆಂದು ಬಿಜೆಪಿ ನಾಯಕ ಬಿನಯ್ ಕುಮಾರ್ ಸಿಂಗ್ ಅವರು ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಪ್ರಕರಣ ವಿಚಾರಣೆ ಮಾಡಿದ ಬಳಿಕ ವಿಚಾರಣಾ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿತ್ತು.

ಇದನ್ನೂ ಓದಿ: ಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಆಗ ಗಲಭೆಯನ್ನು ಹತ್ತಿಕ್ಕುವಲ್ಲಿ ಮೋದಿ ನಿರ್ವಹಿಸಿದ್ದ ಪಾತ್ರ ಅನುಮಾನಾಸ್ಪದವಾಗಿದೆ ಎಂದು ಬಿಬಿಸಿಯ ಸಾಕ್ಷ್ಯಚಿತ್ರದಲ್ಲಿ ಆರೋಪಿಸಲಾಗಿತ್ತು. ಈ ಸಾಕ್ಷ್ಯಚಿತ್ರವನ್ನು ದೇಶದಲ್ಲಿ ಪ್ರಸಾರ ಆಗದಂತೆ ಮೋದಿ ಸರ್ಕಾರ ನಿಯಂತ್ರ ಹೇರಿತ್ತು. ಮಾಹಿತಿ ತಂತ್ರಜ್ಞಾನ ನಿಯಮಗಳು, 2021ರ ಅಡಿಯಲ್ಲಿ ಲಭ್ಯವಿರುವ ತುರ್ತು ಅಧಿಕಾರವನ್ನು ಬಳಸಿ, ಅದರ ಕ್ಲಿಪ್‌ಗಳನ್ನು ಹಂಚಿಕೊಳ್ಳದಂತೆ ತಡೆಯಲು ನಿರ್ದೇಶನಗಳನ್ನು ನೀಡಿತು.

ಇದಕ್ಕೂ ಮೊದಲು ಮೇ 3 ರಂದು, ಬಿಜೆಪಿ ಸದಸ್ಯ ಬಿನಯ್ ಕುಮಾರ್ ಸಿಂಗ್ ಅವರು ಸಲ್ಲಿಸಿದ ಮಾನನಷ್ಟ ದೂರಿನ ಮೇರೆಗೆ ದೆಹಲಿ ನ್ಯಾಯಾಲಯವು BBC, ಲಾಭರಹಿತ ಸಂಸ್ಥೆ ವಿಕಿಮೀಡಿಯಾ ಮತ್ತು ಡಿಜಿಟಲ್ ಲೈಬ್ರರಿ ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್ ಜಾರಿ ಮಾಡಿತ್ತು.

ವಿಶ್ವ ಹಿಂದೂ ಪರಿಷತ್ ಮತ್ತು ಮೋದಿ ವಿರುದ್ಧ ಮಾನಹಾನಿಕರ ಮತ್ತು ಆಧಾರರಹಿತ ಆರೋಪಗಳನ್ನು ಸಾಕ್ಷ್ಯಚಿತ್ರ ಒಳಗೊಂಡಿದೆ. ಹಾಗಾಗಿ ಈ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಬಿಬಿಸಿ, ವಿಕಿಪೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಅನ್ನು ನಿರ್ಬಂಧಿಸಲು ಸಿಂಗ್ ಅವರು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಿದರು.

ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದಾಗಿನಿಂದ BBC ಬೆದರಿಕೆಗಳನ್ನು ಎದುರಿಸುತ್ತಿದೆ. ಬಿಡುಗಡೆಯಾದ ಕೇವಲ ಒಂದು ತಿಂಗಳ ನಂತರ, ಭಾರತದಲ್ಲಿರುವ ಅವರ ಕಛೇರಿಗಳ ಮೇಲೆ ಐಟಿ ದಾಳಿ ನಡೆಸಿತು. ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಸಮೀಕ್ಷೆ ಹೆಸರಿನಲ್ಲಿ ದಾಳಿ ನಡೆಸಿತು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಹೊಂದಾಣಿಕೆಯಾಗಿಲ್ಲ ಎಂದು ತೆರಿಗೆ ಇಲಾಖೆ ಹೇಳಿಕೊಂಡಿದೆ.

ಕಳೆದ ತಿಂಗಳು, ಜಾರಿ ನಿರ್ದೇಶನಾಲಯವು (ಇಡಿ) ಬಿಬಿಸಿ ಇಂಡಿಯಾ ವಿರುದ್ಧ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆಯ ಪ್ರಕರಣವನ್ನು ದಾಖಲಿಸಿದೆ. ಬ್ರಿಟಿಷ್ ಬ್ರಾಡ್‌ಕಾಸ್ಟರ್‌ನ ಭಾರತ ಘಟಕದ ವಿದೇಶಿ ರವಾನೆಗಳನ್ನು ಪರಿಶೀಲಿಸಿದ ನಂತರ ಕೇಂದ್ರೀಯ ಏಜೆನ್ಸಿಯು ಮಾಧ್ಯಮ ಕಂಪನಿಯನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...