Homeಕರ್ನಾಟಕದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

ದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

- Advertisement -
- Advertisement -

ಸಂಪಾದಕೀಯ..

ಈ ವಾರ ನಾವು ಮಹಾದಾಯಿ ವಿಚಾರದ ಕುರಿತು ಆಗಿರುವ ಹೊಸ ಬೆಳವಣಿಗೆಗಳ ಕುರಿತು ಬರೆಯಬೇಕಿತ್ತು. ನೀರಿಗಾಗಿ ಬಾಯಾರಿ ಕೂತಿರುವ ಮುಂಬೈ ಕರ್ನಾಟಕದ ಕೆಲವು ಭಾಗಗಳ ರೈತರಿಗೆ ಅನುಕೂಲವೆಷ್ಟು? ವೋಟಿಗಾಗಿ ಬಾಯ್ದೆರೆದು ಕೂತಿರುವ ರಾಜಕಾರಣಿಗಳಿಗೆ ಲಾಭವೆಷ್ಟು ಎನ್ನುವುದನ್ನು ಬಿಡಿಸಿಡುವ ಕರ್ತವ್ಯ ನಮ್ಮ ಮೇಲಿತ್ತು. ಹಾಗೆಯೇ ಕೆಲವು ವಿವಾದಾಸ್ಪದ ತೀರ್ಮಾನಗಳನ್ನು ನೀಡುತ್ತಿರುವ ಸುಪ್ರೀಂಕೋರ್ಟು ಮಹಿಳೆಯರಿಗೆ ಸೇನಾ ಕಮ್ಯಾಂಡ್‌ಅನ್ನು ತೆರೆದಿಡುವ ಮಹತ್ವದ ಸಕಾರಾತ್ಮಕ ತೀರ್ಪು ನೀಡಿದೆ. ಇದರ ಕುರಿತು ಒಂದು ವರದಿ ನಮ್ಮಲ್ಲಿ ಬರಬೇಕಿತ್ತು. ಹಾಗೆಯೇ ಮೊನ್ನೆ ಮೊನ್ನೆ ತಾನೇ ದೆಹಲಿಯಲ್ಲಿ ಜನರ ಬಹುಮತದ ತೀರ್ಪಿನಿಂದ ಮತ್ತೆ ಗದ್ದುಗೆಗೇರಿದ ಕೇಜ್ರಿವಾಲ್, ಕೋಮುಗಲಭೆಯ ಸಂದರ್ಭದಲ್ಲಿ ನಿಷ್ಕಿçಯವಾಗಿದ್ದ ಕುರಿತು ಬರೆಯಬೇಕಿತ್ತು. ಯಾವ ಕಡೆಯೂ ‘ಪಕ್ಷಪಾತ’ (ಸತ್ಯದ ಕಡೆಯೂ!) ಮಾಡದೇ, ರಾಜ್‌ಘಾಟ್‌ನಲ್ಲಿ ಉಪವಾಸ ಕುಳಿತು ತಮ್ಮೆಲ್ಲಾ ಕಾರ್ಯಕರ್ತರು ಹೊಸ ಎಂಎಲ್‌ಎಗಳ ನೇತೃತ್ವದಲ್ಲಿ ಕೋಮು ಹಿಂಸೆ ತಡೆಯಲು ಮುಂದಾಗಬೇಕು ಎಂದೂ ಹೇಳಲಾಗದ ನಿಲುವಿನ ಕುರಿತು ಟಿಪ್ಪಣಿ ಬರೆಯುವ ಅಗತ್ಯವಿತ್ತು.

ಹಾಗೆಯೇ ದೆಹಲಿ ಹೈಕೋರ್ಟ್ನಲ್ಲಿ ಸಂವಿಧಾನ ಪಾಲಿಸಲು ಕಟಿಬದ್ಧರಾಗಿ ಕೂತಿರುವ ಮುರಳೀಧರ್ ‘ಹಿಂಸೆಯಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಕೊಂಡೊಯ್ಯುವ ಆಂಬುಲೆನ್ಸ್ಗಳಿಗೆ ರಕ್ಷಣೆ ನೀಡಿ’ ಎಂದು ದೆಹಲಿ ಪೊಲೀಸರಿಗೆ ತಾಕೀತು ಮಾಡಿದ್ದರು; ಅದರ ಮರುದಿನವೇ ಅವರನ್ನು ಪಂಜಾಬಿಗೆ ವರ್ಗಾವಣೆ ಮಾಡಿದ್ದುದರ ಕುರಿತು ವಿವರವಾಗಿ ದಾಖಲಿಸಬೇಕಿತ್ತು.

ಅದ್ಯಾವುದನ್ನೂ ಬರೆಯಲಾಗಿಲ್ಲ. ಏಕೆಂದರೆ ಈ ವಾರ ನಾಡಿನ ಸಾಕ್ಷಿಪ್ರಜ್ಞೆ, ಧೀಮಂತ ವ್ಯಕ್ತಿತ್ವದ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರನ್ನು ಕೀಳುಮಟ್ಟದಲ್ಲಿ ನಿಂದಿಸಲು ಒಬ್ಬ ಶಾಸಕನಿಂದ ಹಿಡಿದು ಒಂದಿಡೀ ಪರಿವಾರ ತೊಡೆ ತಟ್ಟಿ ನಿಂತಿತು. ಸ್ವತಃ ದೊರೆಸ್ವಾಮಿಯವರೇ ‘ನನ್ನ ವಿಚಾರ ಬಿಡಿ, ಜನರ ಸಮಸ್ಯೆಗಳನ್ನಿಟ್ಟುಕೊಂಡು ಬೀದಿಯಲ್ಲಿ ಹೋರಾಟ ಮಾಡಿ’ ಎಂದು ಕರೆ ನೀಡುವ ಔನ್ನತ್ಯ ಇರುವವರು. ಆದರೆ, ಈ ನೆಲದಲ್ಲಿ ಸ್ವತಂತ್ರ ನಾಗರಿಕರಾಗಿ ಬದುಕುತ್ತಿರುವ ಎಲ್ಲರೂ ಅವರ ಋಣದಲ್ಲಿದ್ದೇವೆ ಎಂಬುದನ್ನು ಮರೆಯಲಾದೀತೇ? ಸ್ವತಃ ಪತ್ರಕರ್ತರೂ ಆಗಿ ಬ್ರಿಟಿಷರಿಗೂ ಸೆಡ್ಡು ಹೊಡೆದಿದ್ದಲ್ಲದೇ, ತುರ್ತು ಪರಿಸ್ಥಿತಿಯಲ್ಲಿ ಸರ್ವಾಧಿಕಾರ ತೋರಿದ ಇಂದಿರಾಗಾಂಧಿಯವರಿಗೆ ನೇರ ಪತ್ರ ಬರೆದು ಕಾರ್ಯಕ್ರಮ ಸಂಘಟಿಸಿದವರು. ಅದಕ್ಕಾಗಿ ಜೈಲಿಗೆ ಹೋದವರು.

ಹಲವು ಪ್ರಶಸ್ತಿಗಳು ಅವರನ್ನು ಹುಡುಕಿ ಬಂದವು; ಲಕ್ಷಾಂತರ ಅಭಿಮಾನಿಗಳು ಇದ್ದಾರೆ; ಸರ್ಕಾರ ನಡೆಸುವವರೂ ಇವರಿಗೆ ಸಹಾಯ ಮಾಡಲು ಹಾತೊರೆಯುತ್ತಾರೆ. ಆದರೆ ಇಂದಿಗೂ ಬಾಡಿಗೆ ಮನೆಯಲ್ಲಿರುವ, ತನ್ನ ಕನಿಷ್ಠ ಅಗತ್ಯಕ್ಕಿಂತ ಹೆಚ್ಚಿನ ಹಣ ಯಾವುದಾದರೂ ಪ್ರಶಸ್ತಿಯಿಂದ ಬಂದರೆ ಅದನ್ನು ಸಾಮಾನ್ಯ ಜನರ ಹೋರಾಟಕ್ಕೆ ನೀಡಿಬಿಡುವ ದೊರೆಸ್ವಾಮಿಯವರ ಮೇಲೆ ನೀಚ ಆರೋಪಗಳನ್ನು ಮಾಡಲಾಗುತ್ತಿದೆ. ಬಹುಶಃ ಇದು ಈ ಕಾಲಧರ್ಮವೇ ಇರಬಹುದು. ಸಾರ್ವಜನಿಕ ಜೀವನದಲ್ಲಿ ಘನತೆಯನ್ನು ಇಟ್ಟುಕೊಂಡಿದ್ದಾರೆ ಎಂದು ಭಾವಿಸಲಾದ ಸುರೇಶ್ ಕುಮಾರ್ ಅವರು ಸಜ್ಜನಿಕೆಯ ಸೋಗನ್ನು ಇಲ್ಲೂ ಪ್ರದರ್ಶಿಸಿ ಬೆತ್ತಲಾಗಿದ್ದಾರೆ. ಹಿಂಸೆ, ದ್ವೇಷ, ಅಧರ್ಮ ಮತ್ತು ಸುಳ್ಳಿನ ಬುನಾದಿಯ ಮೇಲೆ ನಿಂತಿರುವ ಸೌಧದ ನಿವಾಸಿಗಳೆಲ್ಲರೂ ಒಟ್ಟಾಗಿದ್ದಾರೆ.

ಇಂತಹವರು ಹರಿಬಿಡುವ ಸುಳ್ಳಿನ ಸರಮಾಲೆಗೆ ಉತ್ತರವಾಗಿ ದೊರೆಸ್ವಾಮಿಯವರ ಬಳಿ ‘ಜೈಲಿನಲ್ಲಿದ್ದಕ್ಕೆ ಪುರಾವೆ ಕೇಳಿ’ ಅದನ್ನು ಪ್ರಕಟಿಸುವ ಸ್ಥಿತಿಗೆ ಇಂದಿನ ಪತ್ರಿಕೋದ್ಯಮ ಇಳಿದಿದೆ. ಎರಡು ಟಿವಿ ಚಾನೆಲ್‌ಗಳು ಯತ್ನಾಳ್‌ಗಿಂತಲೂ ನೀಚ ಮಟ್ಟಕ್ಕೆ ಇಳಿದುಬಿಟ್ಟವು. ಯಾವುದಕ್ಕೂ ದಾಖಲೆಯಿಲ್ಲದ, ದಾಖಲೆ ಮಟ್ಟದ ಹಿಂಸೆ ಮತ್ತು ಸುಳ್ಳಿನ ಖ್ಯಾತಿ ಹೊಂದಿರುವ ಪ್ರಧಾನಿಯ ಆಡಳಿತದಲ್ಲಿ ದೊರೆಸ್ವಾಮಿಯವರೂ ದಾಖಲೆ ತೋರಿಸಬೇಕಾದ ಪರಿಸ್ಥಿತಿ ಬಂದಿದೆಯೆಂದರೆ ಅಲ್ಲಿಗೆ ಸಮಾಜ ಎಷ್ಟು ಕೊಳೆದಿದೆ ಎಂಬುದನ್ನು ಊಹಿಸಬಹುದು.

ಇಂತಹ ದುಸ್ಥಿತಿಯಲ್ಲೂ ನಮಗೆ ಆಶಾವಾದ ಹುಟ್ಟಿಸುವುದು ದೊರೆಸ್ವಾಮಿಯವರೇ. ಈ ಬೆಳವಣಿಗೆ ಸಂಭವಿಸಿದ ಹೊತ್ತಿನಲ್ಲೂ ತಮ್ಮ ವ್ಯಕ್ತಿತ್ವದ ಘನತೆಯನ್ನು ಉಳಿಸಿಕೊಂಡು ನಾಡಿನ ಬಗ್ಗೆ, ಜನಸಾಮಾನ್ಯರ ಬಗ್ಗೆ ಚಿಂತಿಸುವ ಅವರು ನಮಗೆ ಮಾದರಿ; ನಮ್ಮ ಪತ್ರಿಕೆಯಲ್ಲಿ ಅವರ ಅಂಕಣ ಪ್ರಕಟವಾಗುವುದು ನಮಗೆ ಹೆಮ್ಮೆಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...