Homeಕರ್ನಾಟಕದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

ದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

- Advertisement -
- Advertisement -

ಸಂಪಾದಕೀಯ..

ಈ ವಾರ ನಾವು ಮಹಾದಾಯಿ ವಿಚಾರದ ಕುರಿತು ಆಗಿರುವ ಹೊಸ ಬೆಳವಣಿಗೆಗಳ ಕುರಿತು ಬರೆಯಬೇಕಿತ್ತು. ನೀರಿಗಾಗಿ ಬಾಯಾರಿ ಕೂತಿರುವ ಮುಂಬೈ ಕರ್ನಾಟಕದ ಕೆಲವು ಭಾಗಗಳ ರೈತರಿಗೆ ಅನುಕೂಲವೆಷ್ಟು? ವೋಟಿಗಾಗಿ ಬಾಯ್ದೆರೆದು ಕೂತಿರುವ ರಾಜಕಾರಣಿಗಳಿಗೆ ಲಾಭವೆಷ್ಟು ಎನ್ನುವುದನ್ನು ಬಿಡಿಸಿಡುವ ಕರ್ತವ್ಯ ನಮ್ಮ ಮೇಲಿತ್ತು. ಹಾಗೆಯೇ ಕೆಲವು ವಿವಾದಾಸ್ಪದ ತೀರ್ಮಾನಗಳನ್ನು ನೀಡುತ್ತಿರುವ ಸುಪ್ರೀಂಕೋರ್ಟು ಮಹಿಳೆಯರಿಗೆ ಸೇನಾ ಕಮ್ಯಾಂಡ್‌ಅನ್ನು ತೆರೆದಿಡುವ ಮಹತ್ವದ ಸಕಾರಾತ್ಮಕ ತೀರ್ಪು ನೀಡಿದೆ. ಇದರ ಕುರಿತು ಒಂದು ವರದಿ ನಮ್ಮಲ್ಲಿ ಬರಬೇಕಿತ್ತು. ಹಾಗೆಯೇ ಮೊನ್ನೆ ಮೊನ್ನೆ ತಾನೇ ದೆಹಲಿಯಲ್ಲಿ ಜನರ ಬಹುಮತದ ತೀರ್ಪಿನಿಂದ ಮತ್ತೆ ಗದ್ದುಗೆಗೇರಿದ ಕೇಜ್ರಿವಾಲ್, ಕೋಮುಗಲಭೆಯ ಸಂದರ್ಭದಲ್ಲಿ ನಿಷ್ಕಿçಯವಾಗಿದ್ದ ಕುರಿತು ಬರೆಯಬೇಕಿತ್ತು. ಯಾವ ಕಡೆಯೂ ‘ಪಕ್ಷಪಾತ’ (ಸತ್ಯದ ಕಡೆಯೂ!) ಮಾಡದೇ, ರಾಜ್‌ಘಾಟ್‌ನಲ್ಲಿ ಉಪವಾಸ ಕುಳಿತು ತಮ್ಮೆಲ್ಲಾ ಕಾರ್ಯಕರ್ತರು ಹೊಸ ಎಂಎಲ್‌ಎಗಳ ನೇತೃತ್ವದಲ್ಲಿ ಕೋಮು ಹಿಂಸೆ ತಡೆಯಲು ಮುಂದಾಗಬೇಕು ಎಂದೂ ಹೇಳಲಾಗದ ನಿಲುವಿನ ಕುರಿತು ಟಿಪ್ಪಣಿ ಬರೆಯುವ ಅಗತ್ಯವಿತ್ತು.

ಹಾಗೆಯೇ ದೆಹಲಿ ಹೈಕೋರ್ಟ್ನಲ್ಲಿ ಸಂವಿಧಾನ ಪಾಲಿಸಲು ಕಟಿಬದ್ಧರಾಗಿ ಕೂತಿರುವ ಮುರಳೀಧರ್ ‘ಹಿಂಸೆಯಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಕೊಂಡೊಯ್ಯುವ ಆಂಬುಲೆನ್ಸ್ಗಳಿಗೆ ರಕ್ಷಣೆ ನೀಡಿ’ ಎಂದು ದೆಹಲಿ ಪೊಲೀಸರಿಗೆ ತಾಕೀತು ಮಾಡಿದ್ದರು; ಅದರ ಮರುದಿನವೇ ಅವರನ್ನು ಪಂಜಾಬಿಗೆ ವರ್ಗಾವಣೆ ಮಾಡಿದ್ದುದರ ಕುರಿತು ವಿವರವಾಗಿ ದಾಖಲಿಸಬೇಕಿತ್ತು.

ಅದ್ಯಾವುದನ್ನೂ ಬರೆಯಲಾಗಿಲ್ಲ. ಏಕೆಂದರೆ ಈ ವಾರ ನಾಡಿನ ಸಾಕ್ಷಿಪ್ರಜ್ಞೆ, ಧೀಮಂತ ವ್ಯಕ್ತಿತ್ವದ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರನ್ನು ಕೀಳುಮಟ್ಟದಲ್ಲಿ ನಿಂದಿಸಲು ಒಬ್ಬ ಶಾಸಕನಿಂದ ಹಿಡಿದು ಒಂದಿಡೀ ಪರಿವಾರ ತೊಡೆ ತಟ್ಟಿ ನಿಂತಿತು. ಸ್ವತಃ ದೊರೆಸ್ವಾಮಿಯವರೇ ‘ನನ್ನ ವಿಚಾರ ಬಿಡಿ, ಜನರ ಸಮಸ್ಯೆಗಳನ್ನಿಟ್ಟುಕೊಂಡು ಬೀದಿಯಲ್ಲಿ ಹೋರಾಟ ಮಾಡಿ’ ಎಂದು ಕರೆ ನೀಡುವ ಔನ್ನತ್ಯ ಇರುವವರು. ಆದರೆ, ಈ ನೆಲದಲ್ಲಿ ಸ್ವತಂತ್ರ ನಾಗರಿಕರಾಗಿ ಬದುಕುತ್ತಿರುವ ಎಲ್ಲರೂ ಅವರ ಋಣದಲ್ಲಿದ್ದೇವೆ ಎಂಬುದನ್ನು ಮರೆಯಲಾದೀತೇ? ಸ್ವತಃ ಪತ್ರಕರ್ತರೂ ಆಗಿ ಬ್ರಿಟಿಷರಿಗೂ ಸೆಡ್ಡು ಹೊಡೆದಿದ್ದಲ್ಲದೇ, ತುರ್ತು ಪರಿಸ್ಥಿತಿಯಲ್ಲಿ ಸರ್ವಾಧಿಕಾರ ತೋರಿದ ಇಂದಿರಾಗಾಂಧಿಯವರಿಗೆ ನೇರ ಪತ್ರ ಬರೆದು ಕಾರ್ಯಕ್ರಮ ಸಂಘಟಿಸಿದವರು. ಅದಕ್ಕಾಗಿ ಜೈಲಿಗೆ ಹೋದವರು.

ಹಲವು ಪ್ರಶಸ್ತಿಗಳು ಅವರನ್ನು ಹುಡುಕಿ ಬಂದವು; ಲಕ್ಷಾಂತರ ಅಭಿಮಾನಿಗಳು ಇದ್ದಾರೆ; ಸರ್ಕಾರ ನಡೆಸುವವರೂ ಇವರಿಗೆ ಸಹಾಯ ಮಾಡಲು ಹಾತೊರೆಯುತ್ತಾರೆ. ಆದರೆ ಇಂದಿಗೂ ಬಾಡಿಗೆ ಮನೆಯಲ್ಲಿರುವ, ತನ್ನ ಕನಿಷ್ಠ ಅಗತ್ಯಕ್ಕಿಂತ ಹೆಚ್ಚಿನ ಹಣ ಯಾವುದಾದರೂ ಪ್ರಶಸ್ತಿಯಿಂದ ಬಂದರೆ ಅದನ್ನು ಸಾಮಾನ್ಯ ಜನರ ಹೋರಾಟಕ್ಕೆ ನೀಡಿಬಿಡುವ ದೊರೆಸ್ವಾಮಿಯವರ ಮೇಲೆ ನೀಚ ಆರೋಪಗಳನ್ನು ಮಾಡಲಾಗುತ್ತಿದೆ. ಬಹುಶಃ ಇದು ಈ ಕಾಲಧರ್ಮವೇ ಇರಬಹುದು. ಸಾರ್ವಜನಿಕ ಜೀವನದಲ್ಲಿ ಘನತೆಯನ್ನು ಇಟ್ಟುಕೊಂಡಿದ್ದಾರೆ ಎಂದು ಭಾವಿಸಲಾದ ಸುರೇಶ್ ಕುಮಾರ್ ಅವರು ಸಜ್ಜನಿಕೆಯ ಸೋಗನ್ನು ಇಲ್ಲೂ ಪ್ರದರ್ಶಿಸಿ ಬೆತ್ತಲಾಗಿದ್ದಾರೆ. ಹಿಂಸೆ, ದ್ವೇಷ, ಅಧರ್ಮ ಮತ್ತು ಸುಳ್ಳಿನ ಬುನಾದಿಯ ಮೇಲೆ ನಿಂತಿರುವ ಸೌಧದ ನಿವಾಸಿಗಳೆಲ್ಲರೂ ಒಟ್ಟಾಗಿದ್ದಾರೆ.

ಇಂತಹವರು ಹರಿಬಿಡುವ ಸುಳ್ಳಿನ ಸರಮಾಲೆಗೆ ಉತ್ತರವಾಗಿ ದೊರೆಸ್ವಾಮಿಯವರ ಬಳಿ ‘ಜೈಲಿನಲ್ಲಿದ್ದಕ್ಕೆ ಪುರಾವೆ ಕೇಳಿ’ ಅದನ್ನು ಪ್ರಕಟಿಸುವ ಸ್ಥಿತಿಗೆ ಇಂದಿನ ಪತ್ರಿಕೋದ್ಯಮ ಇಳಿದಿದೆ. ಎರಡು ಟಿವಿ ಚಾನೆಲ್‌ಗಳು ಯತ್ನಾಳ್‌ಗಿಂತಲೂ ನೀಚ ಮಟ್ಟಕ್ಕೆ ಇಳಿದುಬಿಟ್ಟವು. ಯಾವುದಕ್ಕೂ ದಾಖಲೆಯಿಲ್ಲದ, ದಾಖಲೆ ಮಟ್ಟದ ಹಿಂಸೆ ಮತ್ತು ಸುಳ್ಳಿನ ಖ್ಯಾತಿ ಹೊಂದಿರುವ ಪ್ರಧಾನಿಯ ಆಡಳಿತದಲ್ಲಿ ದೊರೆಸ್ವಾಮಿಯವರೂ ದಾಖಲೆ ತೋರಿಸಬೇಕಾದ ಪರಿಸ್ಥಿತಿ ಬಂದಿದೆಯೆಂದರೆ ಅಲ್ಲಿಗೆ ಸಮಾಜ ಎಷ್ಟು ಕೊಳೆದಿದೆ ಎಂಬುದನ್ನು ಊಹಿಸಬಹುದು.

ಇಂತಹ ದುಸ್ಥಿತಿಯಲ್ಲೂ ನಮಗೆ ಆಶಾವಾದ ಹುಟ್ಟಿಸುವುದು ದೊರೆಸ್ವಾಮಿಯವರೇ. ಈ ಬೆಳವಣಿಗೆ ಸಂಭವಿಸಿದ ಹೊತ್ತಿನಲ್ಲೂ ತಮ್ಮ ವ್ಯಕ್ತಿತ್ವದ ಘನತೆಯನ್ನು ಉಳಿಸಿಕೊಂಡು ನಾಡಿನ ಬಗ್ಗೆ, ಜನಸಾಮಾನ್ಯರ ಬಗ್ಗೆ ಚಿಂತಿಸುವ ಅವರು ನಮಗೆ ಮಾದರಿ; ನಮ್ಮ ಪತ್ರಿಕೆಯಲ್ಲಿ ಅವರ ಅಂಕಣ ಪ್ರಕಟವಾಗುವುದು ನಮಗೆ ಹೆಮ್ಮೆಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...