Homeಕರ್ನಾಟಕದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

ದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

- Advertisement -
- Advertisement -

ಸಂಪಾದಕೀಯ..

ಈ ವಾರ ನಾವು ಮಹಾದಾಯಿ ವಿಚಾರದ ಕುರಿತು ಆಗಿರುವ ಹೊಸ ಬೆಳವಣಿಗೆಗಳ ಕುರಿತು ಬರೆಯಬೇಕಿತ್ತು. ನೀರಿಗಾಗಿ ಬಾಯಾರಿ ಕೂತಿರುವ ಮುಂಬೈ ಕರ್ನಾಟಕದ ಕೆಲವು ಭಾಗಗಳ ರೈತರಿಗೆ ಅನುಕೂಲವೆಷ್ಟು? ವೋಟಿಗಾಗಿ ಬಾಯ್ದೆರೆದು ಕೂತಿರುವ ರಾಜಕಾರಣಿಗಳಿಗೆ ಲಾಭವೆಷ್ಟು ಎನ್ನುವುದನ್ನು ಬಿಡಿಸಿಡುವ ಕರ್ತವ್ಯ ನಮ್ಮ ಮೇಲಿತ್ತು. ಹಾಗೆಯೇ ಕೆಲವು ವಿವಾದಾಸ್ಪದ ತೀರ್ಮಾನಗಳನ್ನು ನೀಡುತ್ತಿರುವ ಸುಪ್ರೀಂಕೋರ್ಟು ಮಹಿಳೆಯರಿಗೆ ಸೇನಾ ಕಮ್ಯಾಂಡ್‌ಅನ್ನು ತೆರೆದಿಡುವ ಮಹತ್ವದ ಸಕಾರಾತ್ಮಕ ತೀರ್ಪು ನೀಡಿದೆ. ಇದರ ಕುರಿತು ಒಂದು ವರದಿ ನಮ್ಮಲ್ಲಿ ಬರಬೇಕಿತ್ತು. ಹಾಗೆಯೇ ಮೊನ್ನೆ ಮೊನ್ನೆ ತಾನೇ ದೆಹಲಿಯಲ್ಲಿ ಜನರ ಬಹುಮತದ ತೀರ್ಪಿನಿಂದ ಮತ್ತೆ ಗದ್ದುಗೆಗೇರಿದ ಕೇಜ್ರಿವಾಲ್, ಕೋಮುಗಲಭೆಯ ಸಂದರ್ಭದಲ್ಲಿ ನಿಷ್ಕಿçಯವಾಗಿದ್ದ ಕುರಿತು ಬರೆಯಬೇಕಿತ್ತು. ಯಾವ ಕಡೆಯೂ ‘ಪಕ್ಷಪಾತ’ (ಸತ್ಯದ ಕಡೆಯೂ!) ಮಾಡದೇ, ರಾಜ್‌ಘಾಟ್‌ನಲ್ಲಿ ಉಪವಾಸ ಕುಳಿತು ತಮ್ಮೆಲ್ಲಾ ಕಾರ್ಯಕರ್ತರು ಹೊಸ ಎಂಎಲ್‌ಎಗಳ ನೇತೃತ್ವದಲ್ಲಿ ಕೋಮು ಹಿಂಸೆ ತಡೆಯಲು ಮುಂದಾಗಬೇಕು ಎಂದೂ ಹೇಳಲಾಗದ ನಿಲುವಿನ ಕುರಿತು ಟಿಪ್ಪಣಿ ಬರೆಯುವ ಅಗತ್ಯವಿತ್ತು.

ಹಾಗೆಯೇ ದೆಹಲಿ ಹೈಕೋರ್ಟ್ನಲ್ಲಿ ಸಂವಿಧಾನ ಪಾಲಿಸಲು ಕಟಿಬದ್ಧರಾಗಿ ಕೂತಿರುವ ಮುರಳೀಧರ್ ‘ಹಿಂಸೆಯಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಕೊಂಡೊಯ್ಯುವ ಆಂಬುಲೆನ್ಸ್ಗಳಿಗೆ ರಕ್ಷಣೆ ನೀಡಿ’ ಎಂದು ದೆಹಲಿ ಪೊಲೀಸರಿಗೆ ತಾಕೀತು ಮಾಡಿದ್ದರು; ಅದರ ಮರುದಿನವೇ ಅವರನ್ನು ಪಂಜಾಬಿಗೆ ವರ್ಗಾವಣೆ ಮಾಡಿದ್ದುದರ ಕುರಿತು ವಿವರವಾಗಿ ದಾಖಲಿಸಬೇಕಿತ್ತು.

ಅದ್ಯಾವುದನ್ನೂ ಬರೆಯಲಾಗಿಲ್ಲ. ಏಕೆಂದರೆ ಈ ವಾರ ನಾಡಿನ ಸಾಕ್ಷಿಪ್ರಜ್ಞೆ, ಧೀಮಂತ ವ್ಯಕ್ತಿತ್ವದ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರನ್ನು ಕೀಳುಮಟ್ಟದಲ್ಲಿ ನಿಂದಿಸಲು ಒಬ್ಬ ಶಾಸಕನಿಂದ ಹಿಡಿದು ಒಂದಿಡೀ ಪರಿವಾರ ತೊಡೆ ತಟ್ಟಿ ನಿಂತಿತು. ಸ್ವತಃ ದೊರೆಸ್ವಾಮಿಯವರೇ ‘ನನ್ನ ವಿಚಾರ ಬಿಡಿ, ಜನರ ಸಮಸ್ಯೆಗಳನ್ನಿಟ್ಟುಕೊಂಡು ಬೀದಿಯಲ್ಲಿ ಹೋರಾಟ ಮಾಡಿ’ ಎಂದು ಕರೆ ನೀಡುವ ಔನ್ನತ್ಯ ಇರುವವರು. ಆದರೆ, ಈ ನೆಲದಲ್ಲಿ ಸ್ವತಂತ್ರ ನಾಗರಿಕರಾಗಿ ಬದುಕುತ್ತಿರುವ ಎಲ್ಲರೂ ಅವರ ಋಣದಲ್ಲಿದ್ದೇವೆ ಎಂಬುದನ್ನು ಮರೆಯಲಾದೀತೇ? ಸ್ವತಃ ಪತ್ರಕರ್ತರೂ ಆಗಿ ಬ್ರಿಟಿಷರಿಗೂ ಸೆಡ್ಡು ಹೊಡೆದಿದ್ದಲ್ಲದೇ, ತುರ್ತು ಪರಿಸ್ಥಿತಿಯಲ್ಲಿ ಸರ್ವಾಧಿಕಾರ ತೋರಿದ ಇಂದಿರಾಗಾಂಧಿಯವರಿಗೆ ನೇರ ಪತ್ರ ಬರೆದು ಕಾರ್ಯಕ್ರಮ ಸಂಘಟಿಸಿದವರು. ಅದಕ್ಕಾಗಿ ಜೈಲಿಗೆ ಹೋದವರು.

ಹಲವು ಪ್ರಶಸ್ತಿಗಳು ಅವರನ್ನು ಹುಡುಕಿ ಬಂದವು; ಲಕ್ಷಾಂತರ ಅಭಿಮಾನಿಗಳು ಇದ್ದಾರೆ; ಸರ್ಕಾರ ನಡೆಸುವವರೂ ಇವರಿಗೆ ಸಹಾಯ ಮಾಡಲು ಹಾತೊರೆಯುತ್ತಾರೆ. ಆದರೆ ಇಂದಿಗೂ ಬಾಡಿಗೆ ಮನೆಯಲ್ಲಿರುವ, ತನ್ನ ಕನಿಷ್ಠ ಅಗತ್ಯಕ್ಕಿಂತ ಹೆಚ್ಚಿನ ಹಣ ಯಾವುದಾದರೂ ಪ್ರಶಸ್ತಿಯಿಂದ ಬಂದರೆ ಅದನ್ನು ಸಾಮಾನ್ಯ ಜನರ ಹೋರಾಟಕ್ಕೆ ನೀಡಿಬಿಡುವ ದೊರೆಸ್ವಾಮಿಯವರ ಮೇಲೆ ನೀಚ ಆರೋಪಗಳನ್ನು ಮಾಡಲಾಗುತ್ತಿದೆ. ಬಹುಶಃ ಇದು ಈ ಕಾಲಧರ್ಮವೇ ಇರಬಹುದು. ಸಾರ್ವಜನಿಕ ಜೀವನದಲ್ಲಿ ಘನತೆಯನ್ನು ಇಟ್ಟುಕೊಂಡಿದ್ದಾರೆ ಎಂದು ಭಾವಿಸಲಾದ ಸುರೇಶ್ ಕುಮಾರ್ ಅವರು ಸಜ್ಜನಿಕೆಯ ಸೋಗನ್ನು ಇಲ್ಲೂ ಪ್ರದರ್ಶಿಸಿ ಬೆತ್ತಲಾಗಿದ್ದಾರೆ. ಹಿಂಸೆ, ದ್ವೇಷ, ಅಧರ್ಮ ಮತ್ತು ಸುಳ್ಳಿನ ಬುನಾದಿಯ ಮೇಲೆ ನಿಂತಿರುವ ಸೌಧದ ನಿವಾಸಿಗಳೆಲ್ಲರೂ ಒಟ್ಟಾಗಿದ್ದಾರೆ.

ಇಂತಹವರು ಹರಿಬಿಡುವ ಸುಳ್ಳಿನ ಸರಮಾಲೆಗೆ ಉತ್ತರವಾಗಿ ದೊರೆಸ್ವಾಮಿಯವರ ಬಳಿ ‘ಜೈಲಿನಲ್ಲಿದ್ದಕ್ಕೆ ಪುರಾವೆ ಕೇಳಿ’ ಅದನ್ನು ಪ್ರಕಟಿಸುವ ಸ್ಥಿತಿಗೆ ಇಂದಿನ ಪತ್ರಿಕೋದ್ಯಮ ಇಳಿದಿದೆ. ಎರಡು ಟಿವಿ ಚಾನೆಲ್‌ಗಳು ಯತ್ನಾಳ್‌ಗಿಂತಲೂ ನೀಚ ಮಟ್ಟಕ್ಕೆ ಇಳಿದುಬಿಟ್ಟವು. ಯಾವುದಕ್ಕೂ ದಾಖಲೆಯಿಲ್ಲದ, ದಾಖಲೆ ಮಟ್ಟದ ಹಿಂಸೆ ಮತ್ತು ಸುಳ್ಳಿನ ಖ್ಯಾತಿ ಹೊಂದಿರುವ ಪ್ರಧಾನಿಯ ಆಡಳಿತದಲ್ಲಿ ದೊರೆಸ್ವಾಮಿಯವರೂ ದಾಖಲೆ ತೋರಿಸಬೇಕಾದ ಪರಿಸ್ಥಿತಿ ಬಂದಿದೆಯೆಂದರೆ ಅಲ್ಲಿಗೆ ಸಮಾಜ ಎಷ್ಟು ಕೊಳೆದಿದೆ ಎಂಬುದನ್ನು ಊಹಿಸಬಹುದು.

ಇಂತಹ ದುಸ್ಥಿತಿಯಲ್ಲೂ ನಮಗೆ ಆಶಾವಾದ ಹುಟ್ಟಿಸುವುದು ದೊರೆಸ್ವಾಮಿಯವರೇ. ಈ ಬೆಳವಣಿಗೆ ಸಂಭವಿಸಿದ ಹೊತ್ತಿನಲ್ಲೂ ತಮ್ಮ ವ್ಯಕ್ತಿತ್ವದ ಘನತೆಯನ್ನು ಉಳಿಸಿಕೊಂಡು ನಾಡಿನ ಬಗ್ಗೆ, ಜನಸಾಮಾನ್ಯರ ಬಗ್ಗೆ ಚಿಂತಿಸುವ ಅವರು ನಮಗೆ ಮಾದರಿ; ನಮ್ಮ ಪತ್ರಿಕೆಯಲ್ಲಿ ಅವರ ಅಂಕಣ ಪ್ರಕಟವಾಗುವುದು ನಮಗೆ ಹೆಮ್ಮೆಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...