Homeಕರ್ನಾಟಕದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

ದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

- Advertisement -
- Advertisement -

ಸಂಪಾದಕೀಯ..

ಈ ವಾರ ನಾವು ಮಹಾದಾಯಿ ವಿಚಾರದ ಕುರಿತು ಆಗಿರುವ ಹೊಸ ಬೆಳವಣಿಗೆಗಳ ಕುರಿತು ಬರೆಯಬೇಕಿತ್ತು. ನೀರಿಗಾಗಿ ಬಾಯಾರಿ ಕೂತಿರುವ ಮುಂಬೈ ಕರ್ನಾಟಕದ ಕೆಲವು ಭಾಗಗಳ ರೈತರಿಗೆ ಅನುಕೂಲವೆಷ್ಟು? ವೋಟಿಗಾಗಿ ಬಾಯ್ದೆರೆದು ಕೂತಿರುವ ರಾಜಕಾರಣಿಗಳಿಗೆ ಲಾಭವೆಷ್ಟು ಎನ್ನುವುದನ್ನು ಬಿಡಿಸಿಡುವ ಕರ್ತವ್ಯ ನಮ್ಮ ಮೇಲಿತ್ತು. ಹಾಗೆಯೇ ಕೆಲವು ವಿವಾದಾಸ್ಪದ ತೀರ್ಮಾನಗಳನ್ನು ನೀಡುತ್ತಿರುವ ಸುಪ್ರೀಂಕೋರ್ಟು ಮಹಿಳೆಯರಿಗೆ ಸೇನಾ ಕಮ್ಯಾಂಡ್‌ಅನ್ನು ತೆರೆದಿಡುವ ಮಹತ್ವದ ಸಕಾರಾತ್ಮಕ ತೀರ್ಪು ನೀಡಿದೆ. ಇದರ ಕುರಿತು ಒಂದು ವರದಿ ನಮ್ಮಲ್ಲಿ ಬರಬೇಕಿತ್ತು. ಹಾಗೆಯೇ ಮೊನ್ನೆ ಮೊನ್ನೆ ತಾನೇ ದೆಹಲಿಯಲ್ಲಿ ಜನರ ಬಹುಮತದ ತೀರ್ಪಿನಿಂದ ಮತ್ತೆ ಗದ್ದುಗೆಗೇರಿದ ಕೇಜ್ರಿವಾಲ್, ಕೋಮುಗಲಭೆಯ ಸಂದರ್ಭದಲ್ಲಿ ನಿಷ್ಕಿçಯವಾಗಿದ್ದ ಕುರಿತು ಬರೆಯಬೇಕಿತ್ತು. ಯಾವ ಕಡೆಯೂ ‘ಪಕ್ಷಪಾತ’ (ಸತ್ಯದ ಕಡೆಯೂ!) ಮಾಡದೇ, ರಾಜ್‌ಘಾಟ್‌ನಲ್ಲಿ ಉಪವಾಸ ಕುಳಿತು ತಮ್ಮೆಲ್ಲಾ ಕಾರ್ಯಕರ್ತರು ಹೊಸ ಎಂಎಲ್‌ಎಗಳ ನೇತೃತ್ವದಲ್ಲಿ ಕೋಮು ಹಿಂಸೆ ತಡೆಯಲು ಮುಂದಾಗಬೇಕು ಎಂದೂ ಹೇಳಲಾಗದ ನಿಲುವಿನ ಕುರಿತು ಟಿಪ್ಪಣಿ ಬರೆಯುವ ಅಗತ್ಯವಿತ್ತು.

ಹಾಗೆಯೇ ದೆಹಲಿ ಹೈಕೋರ್ಟ್ನಲ್ಲಿ ಸಂವಿಧಾನ ಪಾಲಿಸಲು ಕಟಿಬದ್ಧರಾಗಿ ಕೂತಿರುವ ಮುರಳೀಧರ್ ‘ಹಿಂಸೆಯಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಕೊಂಡೊಯ್ಯುವ ಆಂಬುಲೆನ್ಸ್ಗಳಿಗೆ ರಕ್ಷಣೆ ನೀಡಿ’ ಎಂದು ದೆಹಲಿ ಪೊಲೀಸರಿಗೆ ತಾಕೀತು ಮಾಡಿದ್ದರು; ಅದರ ಮರುದಿನವೇ ಅವರನ್ನು ಪಂಜಾಬಿಗೆ ವರ್ಗಾವಣೆ ಮಾಡಿದ್ದುದರ ಕುರಿತು ವಿವರವಾಗಿ ದಾಖಲಿಸಬೇಕಿತ್ತು.

ಅದ್ಯಾವುದನ್ನೂ ಬರೆಯಲಾಗಿಲ್ಲ. ಏಕೆಂದರೆ ಈ ವಾರ ನಾಡಿನ ಸಾಕ್ಷಿಪ್ರಜ್ಞೆ, ಧೀಮಂತ ವ್ಯಕ್ತಿತ್ವದ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರನ್ನು ಕೀಳುಮಟ್ಟದಲ್ಲಿ ನಿಂದಿಸಲು ಒಬ್ಬ ಶಾಸಕನಿಂದ ಹಿಡಿದು ಒಂದಿಡೀ ಪರಿವಾರ ತೊಡೆ ತಟ್ಟಿ ನಿಂತಿತು. ಸ್ವತಃ ದೊರೆಸ್ವಾಮಿಯವರೇ ‘ನನ್ನ ವಿಚಾರ ಬಿಡಿ, ಜನರ ಸಮಸ್ಯೆಗಳನ್ನಿಟ್ಟುಕೊಂಡು ಬೀದಿಯಲ್ಲಿ ಹೋರಾಟ ಮಾಡಿ’ ಎಂದು ಕರೆ ನೀಡುವ ಔನ್ನತ್ಯ ಇರುವವರು. ಆದರೆ, ಈ ನೆಲದಲ್ಲಿ ಸ್ವತಂತ್ರ ನಾಗರಿಕರಾಗಿ ಬದುಕುತ್ತಿರುವ ಎಲ್ಲರೂ ಅವರ ಋಣದಲ್ಲಿದ್ದೇವೆ ಎಂಬುದನ್ನು ಮರೆಯಲಾದೀತೇ? ಸ್ವತಃ ಪತ್ರಕರ್ತರೂ ಆಗಿ ಬ್ರಿಟಿಷರಿಗೂ ಸೆಡ್ಡು ಹೊಡೆದಿದ್ದಲ್ಲದೇ, ತುರ್ತು ಪರಿಸ್ಥಿತಿಯಲ್ಲಿ ಸರ್ವಾಧಿಕಾರ ತೋರಿದ ಇಂದಿರಾಗಾಂಧಿಯವರಿಗೆ ನೇರ ಪತ್ರ ಬರೆದು ಕಾರ್ಯಕ್ರಮ ಸಂಘಟಿಸಿದವರು. ಅದಕ್ಕಾಗಿ ಜೈಲಿಗೆ ಹೋದವರು.

ಹಲವು ಪ್ರಶಸ್ತಿಗಳು ಅವರನ್ನು ಹುಡುಕಿ ಬಂದವು; ಲಕ್ಷಾಂತರ ಅಭಿಮಾನಿಗಳು ಇದ್ದಾರೆ; ಸರ್ಕಾರ ನಡೆಸುವವರೂ ಇವರಿಗೆ ಸಹಾಯ ಮಾಡಲು ಹಾತೊರೆಯುತ್ತಾರೆ. ಆದರೆ ಇಂದಿಗೂ ಬಾಡಿಗೆ ಮನೆಯಲ್ಲಿರುವ, ತನ್ನ ಕನಿಷ್ಠ ಅಗತ್ಯಕ್ಕಿಂತ ಹೆಚ್ಚಿನ ಹಣ ಯಾವುದಾದರೂ ಪ್ರಶಸ್ತಿಯಿಂದ ಬಂದರೆ ಅದನ್ನು ಸಾಮಾನ್ಯ ಜನರ ಹೋರಾಟಕ್ಕೆ ನೀಡಿಬಿಡುವ ದೊರೆಸ್ವಾಮಿಯವರ ಮೇಲೆ ನೀಚ ಆರೋಪಗಳನ್ನು ಮಾಡಲಾಗುತ್ತಿದೆ. ಬಹುಶಃ ಇದು ಈ ಕಾಲಧರ್ಮವೇ ಇರಬಹುದು. ಸಾರ್ವಜನಿಕ ಜೀವನದಲ್ಲಿ ಘನತೆಯನ್ನು ಇಟ್ಟುಕೊಂಡಿದ್ದಾರೆ ಎಂದು ಭಾವಿಸಲಾದ ಸುರೇಶ್ ಕುಮಾರ್ ಅವರು ಸಜ್ಜನಿಕೆಯ ಸೋಗನ್ನು ಇಲ್ಲೂ ಪ್ರದರ್ಶಿಸಿ ಬೆತ್ತಲಾಗಿದ್ದಾರೆ. ಹಿಂಸೆ, ದ್ವೇಷ, ಅಧರ್ಮ ಮತ್ತು ಸುಳ್ಳಿನ ಬುನಾದಿಯ ಮೇಲೆ ನಿಂತಿರುವ ಸೌಧದ ನಿವಾಸಿಗಳೆಲ್ಲರೂ ಒಟ್ಟಾಗಿದ್ದಾರೆ.

ಇಂತಹವರು ಹರಿಬಿಡುವ ಸುಳ್ಳಿನ ಸರಮಾಲೆಗೆ ಉತ್ತರವಾಗಿ ದೊರೆಸ್ವಾಮಿಯವರ ಬಳಿ ‘ಜೈಲಿನಲ್ಲಿದ್ದಕ್ಕೆ ಪುರಾವೆ ಕೇಳಿ’ ಅದನ್ನು ಪ್ರಕಟಿಸುವ ಸ್ಥಿತಿಗೆ ಇಂದಿನ ಪತ್ರಿಕೋದ್ಯಮ ಇಳಿದಿದೆ. ಎರಡು ಟಿವಿ ಚಾನೆಲ್‌ಗಳು ಯತ್ನಾಳ್‌ಗಿಂತಲೂ ನೀಚ ಮಟ್ಟಕ್ಕೆ ಇಳಿದುಬಿಟ್ಟವು. ಯಾವುದಕ್ಕೂ ದಾಖಲೆಯಿಲ್ಲದ, ದಾಖಲೆ ಮಟ್ಟದ ಹಿಂಸೆ ಮತ್ತು ಸುಳ್ಳಿನ ಖ್ಯಾತಿ ಹೊಂದಿರುವ ಪ್ರಧಾನಿಯ ಆಡಳಿತದಲ್ಲಿ ದೊರೆಸ್ವಾಮಿಯವರೂ ದಾಖಲೆ ತೋರಿಸಬೇಕಾದ ಪರಿಸ್ಥಿತಿ ಬಂದಿದೆಯೆಂದರೆ ಅಲ್ಲಿಗೆ ಸಮಾಜ ಎಷ್ಟು ಕೊಳೆದಿದೆ ಎಂಬುದನ್ನು ಊಹಿಸಬಹುದು.

ಇಂತಹ ದುಸ್ಥಿತಿಯಲ್ಲೂ ನಮಗೆ ಆಶಾವಾದ ಹುಟ್ಟಿಸುವುದು ದೊರೆಸ್ವಾಮಿಯವರೇ. ಈ ಬೆಳವಣಿಗೆ ಸಂಭವಿಸಿದ ಹೊತ್ತಿನಲ್ಲೂ ತಮ್ಮ ವ್ಯಕ್ತಿತ್ವದ ಘನತೆಯನ್ನು ಉಳಿಸಿಕೊಂಡು ನಾಡಿನ ಬಗ್ಗೆ, ಜನಸಾಮಾನ್ಯರ ಬಗ್ಗೆ ಚಿಂತಿಸುವ ಅವರು ನಮಗೆ ಮಾದರಿ; ನಮ್ಮ ಪತ್ರಿಕೆಯಲ್ಲಿ ಅವರ ಅಂಕಣ ಪ್ರಕಟವಾಗುವುದು ನಮಗೆ ಹೆಮ್ಮೆಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...