Homeಕರ್ನಾಟಕದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

ದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

- Advertisement -
- Advertisement -

ಸಂಪಾದಕೀಯ..

ಈ ವಾರ ನಾವು ಮಹಾದಾಯಿ ವಿಚಾರದ ಕುರಿತು ಆಗಿರುವ ಹೊಸ ಬೆಳವಣಿಗೆಗಳ ಕುರಿತು ಬರೆಯಬೇಕಿತ್ತು. ನೀರಿಗಾಗಿ ಬಾಯಾರಿ ಕೂತಿರುವ ಮುಂಬೈ ಕರ್ನಾಟಕದ ಕೆಲವು ಭಾಗಗಳ ರೈತರಿಗೆ ಅನುಕೂಲವೆಷ್ಟು? ವೋಟಿಗಾಗಿ ಬಾಯ್ದೆರೆದು ಕೂತಿರುವ ರಾಜಕಾರಣಿಗಳಿಗೆ ಲಾಭವೆಷ್ಟು ಎನ್ನುವುದನ್ನು ಬಿಡಿಸಿಡುವ ಕರ್ತವ್ಯ ನಮ್ಮ ಮೇಲಿತ್ತು. ಹಾಗೆಯೇ ಕೆಲವು ವಿವಾದಾಸ್ಪದ ತೀರ್ಮಾನಗಳನ್ನು ನೀಡುತ್ತಿರುವ ಸುಪ್ರೀಂಕೋರ್ಟು ಮಹಿಳೆಯರಿಗೆ ಸೇನಾ ಕಮ್ಯಾಂಡ್‌ಅನ್ನು ತೆರೆದಿಡುವ ಮಹತ್ವದ ಸಕಾರಾತ್ಮಕ ತೀರ್ಪು ನೀಡಿದೆ. ಇದರ ಕುರಿತು ಒಂದು ವರದಿ ನಮ್ಮಲ್ಲಿ ಬರಬೇಕಿತ್ತು. ಹಾಗೆಯೇ ಮೊನ್ನೆ ಮೊನ್ನೆ ತಾನೇ ದೆಹಲಿಯಲ್ಲಿ ಜನರ ಬಹುಮತದ ತೀರ್ಪಿನಿಂದ ಮತ್ತೆ ಗದ್ದುಗೆಗೇರಿದ ಕೇಜ್ರಿವಾಲ್, ಕೋಮುಗಲಭೆಯ ಸಂದರ್ಭದಲ್ಲಿ ನಿಷ್ಕಿçಯವಾಗಿದ್ದ ಕುರಿತು ಬರೆಯಬೇಕಿತ್ತು. ಯಾವ ಕಡೆಯೂ ‘ಪಕ್ಷಪಾತ’ (ಸತ್ಯದ ಕಡೆಯೂ!) ಮಾಡದೇ, ರಾಜ್‌ಘಾಟ್‌ನಲ್ಲಿ ಉಪವಾಸ ಕುಳಿತು ತಮ್ಮೆಲ್ಲಾ ಕಾರ್ಯಕರ್ತರು ಹೊಸ ಎಂಎಲ್‌ಎಗಳ ನೇತೃತ್ವದಲ್ಲಿ ಕೋಮು ಹಿಂಸೆ ತಡೆಯಲು ಮುಂದಾಗಬೇಕು ಎಂದೂ ಹೇಳಲಾಗದ ನಿಲುವಿನ ಕುರಿತು ಟಿಪ್ಪಣಿ ಬರೆಯುವ ಅಗತ್ಯವಿತ್ತು.

ಹಾಗೆಯೇ ದೆಹಲಿ ಹೈಕೋರ್ಟ್ನಲ್ಲಿ ಸಂವಿಧಾನ ಪಾಲಿಸಲು ಕಟಿಬದ್ಧರಾಗಿ ಕೂತಿರುವ ಮುರಳೀಧರ್ ‘ಹಿಂಸೆಯಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಕೊಂಡೊಯ್ಯುವ ಆಂಬುಲೆನ್ಸ್ಗಳಿಗೆ ರಕ್ಷಣೆ ನೀಡಿ’ ಎಂದು ದೆಹಲಿ ಪೊಲೀಸರಿಗೆ ತಾಕೀತು ಮಾಡಿದ್ದರು; ಅದರ ಮರುದಿನವೇ ಅವರನ್ನು ಪಂಜಾಬಿಗೆ ವರ್ಗಾವಣೆ ಮಾಡಿದ್ದುದರ ಕುರಿತು ವಿವರವಾಗಿ ದಾಖಲಿಸಬೇಕಿತ್ತು.

ಅದ್ಯಾವುದನ್ನೂ ಬರೆಯಲಾಗಿಲ್ಲ. ಏಕೆಂದರೆ ಈ ವಾರ ನಾಡಿನ ಸಾಕ್ಷಿಪ್ರಜ್ಞೆ, ಧೀಮಂತ ವ್ಯಕ್ತಿತ್ವದ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರನ್ನು ಕೀಳುಮಟ್ಟದಲ್ಲಿ ನಿಂದಿಸಲು ಒಬ್ಬ ಶಾಸಕನಿಂದ ಹಿಡಿದು ಒಂದಿಡೀ ಪರಿವಾರ ತೊಡೆ ತಟ್ಟಿ ನಿಂತಿತು. ಸ್ವತಃ ದೊರೆಸ್ವಾಮಿಯವರೇ ‘ನನ್ನ ವಿಚಾರ ಬಿಡಿ, ಜನರ ಸಮಸ್ಯೆಗಳನ್ನಿಟ್ಟುಕೊಂಡು ಬೀದಿಯಲ್ಲಿ ಹೋರಾಟ ಮಾಡಿ’ ಎಂದು ಕರೆ ನೀಡುವ ಔನ್ನತ್ಯ ಇರುವವರು. ಆದರೆ, ಈ ನೆಲದಲ್ಲಿ ಸ್ವತಂತ್ರ ನಾಗರಿಕರಾಗಿ ಬದುಕುತ್ತಿರುವ ಎಲ್ಲರೂ ಅವರ ಋಣದಲ್ಲಿದ್ದೇವೆ ಎಂಬುದನ್ನು ಮರೆಯಲಾದೀತೇ? ಸ್ವತಃ ಪತ್ರಕರ್ತರೂ ಆಗಿ ಬ್ರಿಟಿಷರಿಗೂ ಸೆಡ್ಡು ಹೊಡೆದಿದ್ದಲ್ಲದೇ, ತುರ್ತು ಪರಿಸ್ಥಿತಿಯಲ್ಲಿ ಸರ್ವಾಧಿಕಾರ ತೋರಿದ ಇಂದಿರಾಗಾಂಧಿಯವರಿಗೆ ನೇರ ಪತ್ರ ಬರೆದು ಕಾರ್ಯಕ್ರಮ ಸಂಘಟಿಸಿದವರು. ಅದಕ್ಕಾಗಿ ಜೈಲಿಗೆ ಹೋದವರು.

ಹಲವು ಪ್ರಶಸ್ತಿಗಳು ಅವರನ್ನು ಹುಡುಕಿ ಬಂದವು; ಲಕ್ಷಾಂತರ ಅಭಿಮಾನಿಗಳು ಇದ್ದಾರೆ; ಸರ್ಕಾರ ನಡೆಸುವವರೂ ಇವರಿಗೆ ಸಹಾಯ ಮಾಡಲು ಹಾತೊರೆಯುತ್ತಾರೆ. ಆದರೆ ಇಂದಿಗೂ ಬಾಡಿಗೆ ಮನೆಯಲ್ಲಿರುವ, ತನ್ನ ಕನಿಷ್ಠ ಅಗತ್ಯಕ್ಕಿಂತ ಹೆಚ್ಚಿನ ಹಣ ಯಾವುದಾದರೂ ಪ್ರಶಸ್ತಿಯಿಂದ ಬಂದರೆ ಅದನ್ನು ಸಾಮಾನ್ಯ ಜನರ ಹೋರಾಟಕ್ಕೆ ನೀಡಿಬಿಡುವ ದೊರೆಸ್ವಾಮಿಯವರ ಮೇಲೆ ನೀಚ ಆರೋಪಗಳನ್ನು ಮಾಡಲಾಗುತ್ತಿದೆ. ಬಹುಶಃ ಇದು ಈ ಕಾಲಧರ್ಮವೇ ಇರಬಹುದು. ಸಾರ್ವಜನಿಕ ಜೀವನದಲ್ಲಿ ಘನತೆಯನ್ನು ಇಟ್ಟುಕೊಂಡಿದ್ದಾರೆ ಎಂದು ಭಾವಿಸಲಾದ ಸುರೇಶ್ ಕುಮಾರ್ ಅವರು ಸಜ್ಜನಿಕೆಯ ಸೋಗನ್ನು ಇಲ್ಲೂ ಪ್ರದರ್ಶಿಸಿ ಬೆತ್ತಲಾಗಿದ್ದಾರೆ. ಹಿಂಸೆ, ದ್ವೇಷ, ಅಧರ್ಮ ಮತ್ತು ಸುಳ್ಳಿನ ಬುನಾದಿಯ ಮೇಲೆ ನಿಂತಿರುವ ಸೌಧದ ನಿವಾಸಿಗಳೆಲ್ಲರೂ ಒಟ್ಟಾಗಿದ್ದಾರೆ.

ಇಂತಹವರು ಹರಿಬಿಡುವ ಸುಳ್ಳಿನ ಸರಮಾಲೆಗೆ ಉತ್ತರವಾಗಿ ದೊರೆಸ್ವಾಮಿಯವರ ಬಳಿ ‘ಜೈಲಿನಲ್ಲಿದ್ದಕ್ಕೆ ಪುರಾವೆ ಕೇಳಿ’ ಅದನ್ನು ಪ್ರಕಟಿಸುವ ಸ್ಥಿತಿಗೆ ಇಂದಿನ ಪತ್ರಿಕೋದ್ಯಮ ಇಳಿದಿದೆ. ಎರಡು ಟಿವಿ ಚಾನೆಲ್‌ಗಳು ಯತ್ನಾಳ್‌ಗಿಂತಲೂ ನೀಚ ಮಟ್ಟಕ್ಕೆ ಇಳಿದುಬಿಟ್ಟವು. ಯಾವುದಕ್ಕೂ ದಾಖಲೆಯಿಲ್ಲದ, ದಾಖಲೆ ಮಟ್ಟದ ಹಿಂಸೆ ಮತ್ತು ಸುಳ್ಳಿನ ಖ್ಯಾತಿ ಹೊಂದಿರುವ ಪ್ರಧಾನಿಯ ಆಡಳಿತದಲ್ಲಿ ದೊರೆಸ್ವಾಮಿಯವರೂ ದಾಖಲೆ ತೋರಿಸಬೇಕಾದ ಪರಿಸ್ಥಿತಿ ಬಂದಿದೆಯೆಂದರೆ ಅಲ್ಲಿಗೆ ಸಮಾಜ ಎಷ್ಟು ಕೊಳೆದಿದೆ ಎಂಬುದನ್ನು ಊಹಿಸಬಹುದು.

ಇಂತಹ ದುಸ್ಥಿತಿಯಲ್ಲೂ ನಮಗೆ ಆಶಾವಾದ ಹುಟ್ಟಿಸುವುದು ದೊರೆಸ್ವಾಮಿಯವರೇ. ಈ ಬೆಳವಣಿಗೆ ಸಂಭವಿಸಿದ ಹೊತ್ತಿನಲ್ಲೂ ತಮ್ಮ ವ್ಯಕ್ತಿತ್ವದ ಘನತೆಯನ್ನು ಉಳಿಸಿಕೊಂಡು ನಾಡಿನ ಬಗ್ಗೆ, ಜನಸಾಮಾನ್ಯರ ಬಗ್ಗೆ ಚಿಂತಿಸುವ ಅವರು ನಮಗೆ ಮಾದರಿ; ನಮ್ಮ ಪತ್ರಿಕೆಯಲ್ಲಿ ಅವರ ಅಂಕಣ ಪ್ರಕಟವಾಗುವುದು ನಮಗೆ ಹೆಮ್ಮೆಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...