Homeಕರ್ನಾಟಕದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

ದೊರೆಸ್ವಾಮಿಯವರು ದಾಖಲೆ ಕೊಡಬೇಕಾದ ದುಸ್ಥಿತಿ ಈ ದೇಶಕ್ಕೆ ಬರಬಾರದಿತ್ತು

- Advertisement -
- Advertisement -

ಸಂಪಾದಕೀಯ..

ಈ ವಾರ ನಾವು ಮಹಾದಾಯಿ ವಿಚಾರದ ಕುರಿತು ಆಗಿರುವ ಹೊಸ ಬೆಳವಣಿಗೆಗಳ ಕುರಿತು ಬರೆಯಬೇಕಿತ್ತು. ನೀರಿಗಾಗಿ ಬಾಯಾರಿ ಕೂತಿರುವ ಮುಂಬೈ ಕರ್ನಾಟಕದ ಕೆಲವು ಭಾಗಗಳ ರೈತರಿಗೆ ಅನುಕೂಲವೆಷ್ಟು? ವೋಟಿಗಾಗಿ ಬಾಯ್ದೆರೆದು ಕೂತಿರುವ ರಾಜಕಾರಣಿಗಳಿಗೆ ಲಾಭವೆಷ್ಟು ಎನ್ನುವುದನ್ನು ಬಿಡಿಸಿಡುವ ಕರ್ತವ್ಯ ನಮ್ಮ ಮೇಲಿತ್ತು. ಹಾಗೆಯೇ ಕೆಲವು ವಿವಾದಾಸ್ಪದ ತೀರ್ಮಾನಗಳನ್ನು ನೀಡುತ್ತಿರುವ ಸುಪ್ರೀಂಕೋರ್ಟು ಮಹಿಳೆಯರಿಗೆ ಸೇನಾ ಕಮ್ಯಾಂಡ್‌ಅನ್ನು ತೆರೆದಿಡುವ ಮಹತ್ವದ ಸಕಾರಾತ್ಮಕ ತೀರ್ಪು ನೀಡಿದೆ. ಇದರ ಕುರಿತು ಒಂದು ವರದಿ ನಮ್ಮಲ್ಲಿ ಬರಬೇಕಿತ್ತು. ಹಾಗೆಯೇ ಮೊನ್ನೆ ಮೊನ್ನೆ ತಾನೇ ದೆಹಲಿಯಲ್ಲಿ ಜನರ ಬಹುಮತದ ತೀರ್ಪಿನಿಂದ ಮತ್ತೆ ಗದ್ದುಗೆಗೇರಿದ ಕೇಜ್ರಿವಾಲ್, ಕೋಮುಗಲಭೆಯ ಸಂದರ್ಭದಲ್ಲಿ ನಿಷ್ಕಿçಯವಾಗಿದ್ದ ಕುರಿತು ಬರೆಯಬೇಕಿತ್ತು. ಯಾವ ಕಡೆಯೂ ‘ಪಕ್ಷಪಾತ’ (ಸತ್ಯದ ಕಡೆಯೂ!) ಮಾಡದೇ, ರಾಜ್‌ಘಾಟ್‌ನಲ್ಲಿ ಉಪವಾಸ ಕುಳಿತು ತಮ್ಮೆಲ್ಲಾ ಕಾರ್ಯಕರ್ತರು ಹೊಸ ಎಂಎಲ್‌ಎಗಳ ನೇತೃತ್ವದಲ್ಲಿ ಕೋಮು ಹಿಂಸೆ ತಡೆಯಲು ಮುಂದಾಗಬೇಕು ಎಂದೂ ಹೇಳಲಾಗದ ನಿಲುವಿನ ಕುರಿತು ಟಿಪ್ಪಣಿ ಬರೆಯುವ ಅಗತ್ಯವಿತ್ತು.

ಹಾಗೆಯೇ ದೆಹಲಿ ಹೈಕೋರ್ಟ್ನಲ್ಲಿ ಸಂವಿಧಾನ ಪಾಲಿಸಲು ಕಟಿಬದ್ಧರಾಗಿ ಕೂತಿರುವ ಮುರಳೀಧರ್ ‘ಹಿಂಸೆಯಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಕೊಂಡೊಯ್ಯುವ ಆಂಬುಲೆನ್ಸ್ಗಳಿಗೆ ರಕ್ಷಣೆ ನೀಡಿ’ ಎಂದು ದೆಹಲಿ ಪೊಲೀಸರಿಗೆ ತಾಕೀತು ಮಾಡಿದ್ದರು; ಅದರ ಮರುದಿನವೇ ಅವರನ್ನು ಪಂಜಾಬಿಗೆ ವರ್ಗಾವಣೆ ಮಾಡಿದ್ದುದರ ಕುರಿತು ವಿವರವಾಗಿ ದಾಖಲಿಸಬೇಕಿತ್ತು.

ಅದ್ಯಾವುದನ್ನೂ ಬರೆಯಲಾಗಿಲ್ಲ. ಏಕೆಂದರೆ ಈ ವಾರ ನಾಡಿನ ಸಾಕ್ಷಿಪ್ರಜ್ಞೆ, ಧೀಮಂತ ವ್ಯಕ್ತಿತ್ವದ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರನ್ನು ಕೀಳುಮಟ್ಟದಲ್ಲಿ ನಿಂದಿಸಲು ಒಬ್ಬ ಶಾಸಕನಿಂದ ಹಿಡಿದು ಒಂದಿಡೀ ಪರಿವಾರ ತೊಡೆ ತಟ್ಟಿ ನಿಂತಿತು. ಸ್ವತಃ ದೊರೆಸ್ವಾಮಿಯವರೇ ‘ನನ್ನ ವಿಚಾರ ಬಿಡಿ, ಜನರ ಸಮಸ್ಯೆಗಳನ್ನಿಟ್ಟುಕೊಂಡು ಬೀದಿಯಲ್ಲಿ ಹೋರಾಟ ಮಾಡಿ’ ಎಂದು ಕರೆ ನೀಡುವ ಔನ್ನತ್ಯ ಇರುವವರು. ಆದರೆ, ಈ ನೆಲದಲ್ಲಿ ಸ್ವತಂತ್ರ ನಾಗರಿಕರಾಗಿ ಬದುಕುತ್ತಿರುವ ಎಲ್ಲರೂ ಅವರ ಋಣದಲ್ಲಿದ್ದೇವೆ ಎಂಬುದನ್ನು ಮರೆಯಲಾದೀತೇ? ಸ್ವತಃ ಪತ್ರಕರ್ತರೂ ಆಗಿ ಬ್ರಿಟಿಷರಿಗೂ ಸೆಡ್ಡು ಹೊಡೆದಿದ್ದಲ್ಲದೇ, ತುರ್ತು ಪರಿಸ್ಥಿತಿಯಲ್ಲಿ ಸರ್ವಾಧಿಕಾರ ತೋರಿದ ಇಂದಿರಾಗಾಂಧಿಯವರಿಗೆ ನೇರ ಪತ್ರ ಬರೆದು ಕಾರ್ಯಕ್ರಮ ಸಂಘಟಿಸಿದವರು. ಅದಕ್ಕಾಗಿ ಜೈಲಿಗೆ ಹೋದವರು.

ಹಲವು ಪ್ರಶಸ್ತಿಗಳು ಅವರನ್ನು ಹುಡುಕಿ ಬಂದವು; ಲಕ್ಷಾಂತರ ಅಭಿಮಾನಿಗಳು ಇದ್ದಾರೆ; ಸರ್ಕಾರ ನಡೆಸುವವರೂ ಇವರಿಗೆ ಸಹಾಯ ಮಾಡಲು ಹಾತೊರೆಯುತ್ತಾರೆ. ಆದರೆ ಇಂದಿಗೂ ಬಾಡಿಗೆ ಮನೆಯಲ್ಲಿರುವ, ತನ್ನ ಕನಿಷ್ಠ ಅಗತ್ಯಕ್ಕಿಂತ ಹೆಚ್ಚಿನ ಹಣ ಯಾವುದಾದರೂ ಪ್ರಶಸ್ತಿಯಿಂದ ಬಂದರೆ ಅದನ್ನು ಸಾಮಾನ್ಯ ಜನರ ಹೋರಾಟಕ್ಕೆ ನೀಡಿಬಿಡುವ ದೊರೆಸ್ವಾಮಿಯವರ ಮೇಲೆ ನೀಚ ಆರೋಪಗಳನ್ನು ಮಾಡಲಾಗುತ್ತಿದೆ. ಬಹುಶಃ ಇದು ಈ ಕಾಲಧರ್ಮವೇ ಇರಬಹುದು. ಸಾರ್ವಜನಿಕ ಜೀವನದಲ್ಲಿ ಘನತೆಯನ್ನು ಇಟ್ಟುಕೊಂಡಿದ್ದಾರೆ ಎಂದು ಭಾವಿಸಲಾದ ಸುರೇಶ್ ಕುಮಾರ್ ಅವರು ಸಜ್ಜನಿಕೆಯ ಸೋಗನ್ನು ಇಲ್ಲೂ ಪ್ರದರ್ಶಿಸಿ ಬೆತ್ತಲಾಗಿದ್ದಾರೆ. ಹಿಂಸೆ, ದ್ವೇಷ, ಅಧರ್ಮ ಮತ್ತು ಸುಳ್ಳಿನ ಬುನಾದಿಯ ಮೇಲೆ ನಿಂತಿರುವ ಸೌಧದ ನಿವಾಸಿಗಳೆಲ್ಲರೂ ಒಟ್ಟಾಗಿದ್ದಾರೆ.

ಇಂತಹವರು ಹರಿಬಿಡುವ ಸುಳ್ಳಿನ ಸರಮಾಲೆಗೆ ಉತ್ತರವಾಗಿ ದೊರೆಸ್ವಾಮಿಯವರ ಬಳಿ ‘ಜೈಲಿನಲ್ಲಿದ್ದಕ್ಕೆ ಪುರಾವೆ ಕೇಳಿ’ ಅದನ್ನು ಪ್ರಕಟಿಸುವ ಸ್ಥಿತಿಗೆ ಇಂದಿನ ಪತ್ರಿಕೋದ್ಯಮ ಇಳಿದಿದೆ. ಎರಡು ಟಿವಿ ಚಾನೆಲ್‌ಗಳು ಯತ್ನಾಳ್‌ಗಿಂತಲೂ ನೀಚ ಮಟ್ಟಕ್ಕೆ ಇಳಿದುಬಿಟ್ಟವು. ಯಾವುದಕ್ಕೂ ದಾಖಲೆಯಿಲ್ಲದ, ದಾಖಲೆ ಮಟ್ಟದ ಹಿಂಸೆ ಮತ್ತು ಸುಳ್ಳಿನ ಖ್ಯಾತಿ ಹೊಂದಿರುವ ಪ್ರಧಾನಿಯ ಆಡಳಿತದಲ್ಲಿ ದೊರೆಸ್ವಾಮಿಯವರೂ ದಾಖಲೆ ತೋರಿಸಬೇಕಾದ ಪರಿಸ್ಥಿತಿ ಬಂದಿದೆಯೆಂದರೆ ಅಲ್ಲಿಗೆ ಸಮಾಜ ಎಷ್ಟು ಕೊಳೆದಿದೆ ಎಂಬುದನ್ನು ಊಹಿಸಬಹುದು.

ಇಂತಹ ದುಸ್ಥಿತಿಯಲ್ಲೂ ನಮಗೆ ಆಶಾವಾದ ಹುಟ್ಟಿಸುವುದು ದೊರೆಸ್ವಾಮಿಯವರೇ. ಈ ಬೆಳವಣಿಗೆ ಸಂಭವಿಸಿದ ಹೊತ್ತಿನಲ್ಲೂ ತಮ್ಮ ವ್ಯಕ್ತಿತ್ವದ ಘನತೆಯನ್ನು ಉಳಿಸಿಕೊಂಡು ನಾಡಿನ ಬಗ್ಗೆ, ಜನಸಾಮಾನ್ಯರ ಬಗ್ಗೆ ಚಿಂತಿಸುವ ಅವರು ನಮಗೆ ಮಾದರಿ; ನಮ್ಮ ಪತ್ರಿಕೆಯಲ್ಲಿ ಅವರ ಅಂಕಣ ಪ್ರಕಟವಾಗುವುದು ನಮಗೆ ಹೆಮ್ಮೆಯ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...