Homeಚಳವಳಿಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

- Advertisement -
- Advertisement -

ಮುಂದಿನ ತಿಂಗಳು ತನ್ನ ತಾಯಿಯ ಮೊದಲ ವರ್ಷದ ಪುಣ್ಯತಿಥಿಯ ಕೆಲವು ಆಚರಣೆಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಸಾಮಾಜಿಕ ಹೋರಾಟಗಾರ, ಎಲ್ಗರ್ ಪರಿಷತ್ (ಭೀಮಾ ಕೋರೆಗಾಂವ್‌) ಪ್ರಕರಣದ ಆರೋಪಿಯಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್‌ ಮಂಗಳವಾರ ಒತ್ತಾಯಿಸಿದ್ದಾರೆ.

ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ವಕೀಲ ಆರ್. ಸತ್ಯನಾರಾಯಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, 2020 ರ ವಿಶೇಷ ನ್ಯಾಯಾಲಯ,ತನ್ನ ತಾಯಿಯ ಕೊನೆಯ ವಿಧಿವಿಧಾನಗಳಲ್ಲಿ ಹಾಜರಾಗಲು ತಾತ್ಕಾಲಿಕ ಜಾಮೀನು ನೀಡುವ ಮನವಿಯನ್ನು ತಿರಸ್ಕರಿಸಿದ್ದ ಆದೇಶವನ್ನು ಪ್ರಶ್ನಿಸಿದ್ದಾರೆ. ಜಾಮೀನು ಕೋರಿ ಗಾಡ್ಲಿಂಗ್ ಕಳೆದ ವರ್ಷ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆಗಸ್ಟ್ 15, 2020 ರಂದು ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ತಾಯಿ ನಾಗ್ಪುರದಲ್ಲಿ ನಿಧನರಾದರು.

ಸಾಮಾಜಿಕ ಹೋರಾಟಗಾರ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಪುಣೆ ಪೊಲೀಸರು 2018 ರ ಜೂನ್‌ನಲ್ಲಿ ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದೆ. ವಿಚಾರಣೆ ಹಂತದಿಂದಲು ಅವರನ್ನು ನವೀ ಮುಂಬೈನ ತಾಲೋಜಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ; ಬಂಧನದಲ್ಲೂ ಕಾನೂನು ನೆರವು ನೀಡುವುದನ್ನು ಮುಂದುವರೆಸಿರುವ ಸುರೇಂದ್ರ ಗಾಡ್ಲಿಂಗ್

ತಾತ್ಕಾಲಿಕ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ತನ್ನ ತಾಯಿಯ ಕೊನೆಯ ವಿಧಿಗಳನ್ನು ನಿರ್ವಹಿಸಲು ಮೂರು ವಾರಗಳ ಕಾಲ ಜೈಲಿನಿಂದ ಬಿಡುಗಡೆಯಾಗಬೇಕೆಂದು ಕೋರಿದರು, ಆದರೆ ಅವರ ಅರ್ಜಿಯನ್ನು ತಿರಸ್ಕರಿಸಲಾಯಿತು. ನಂತರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅಲ್ಲಿಯೂ ಅವರ ಮನವಿಯನ್ನು ಹಲವಾರು ಬಾರಿ ಮುಂದೂಡಲಾಗಿತ್ತು.

“ತಾಯಿಯ ಅಂತ್ಯಕ್ರಿಯೆಯ ವಿಧಿಗಳನ್ನು ಇಲ್ಲಿಯವರೆಗೆ ನಡೆಸಲಾಗಿಲ್ಲ ಮತ್ತು ಅವುಗಳನ್ನು ಮೊದಲ ಪುಣ್ಯತಿಥಿಯಂದು ಆಗಸ್ಟ್ 15, 2021 ರಂದು ಯೋಜಿಸಲಾಗಿದೆ” ಎಂದು ಇಂದಿರಾ ಜೈಸಿಂಗ್ ಹೈಕೋರ್ಟ್‌ಗೆ ತಿಳಿಸಿ, ಗಾಡ್ಲಿಂಗ್‌ ಅವರಿಗೆ ತಾತ್ಕಾಲಿಕ ಜಾಮೀನು ನೀಡುವಂತೆ ಒತ್ತಾಯಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಹೈಕೋರ್ಟ್ ಜುಲೈ 22 ಕ್ಕೆ ಮುಂದೂಡಲಾಗಿದೆ.

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಮಾನವ ಹಕ್ಕುಗಳ ಹೋರಾಟಗಾರರಲ್ಲಿ ಒಬ್ಬರಾದ 84 ವರ್ಷದ ಫಾದರ್ ಸ್ಟಾನ್ ಸ್ವಾಮಿ ಸೋಮವಾರ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರು ಸೇರಿದಂತೆ ಹೋರಾಟಗಾರರು, ಚಿಂತಕರು, ಮಾಣವ ಹಕ್ಕುಗಳ ಹೋರಾಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

ಖೈರ್ಲಾಂಜಿ ಹತ್ಯಾಕಾಂಡ, ಜಾವಖೇಡ ಹತ್ಯಾಕಾಂಡ, ಮನೋರಮಾ ಕಾಂಬ್ಳೆ ಹತ್ಯಾಕಾಂಡ, ಕಾವಲೇವಾಡ ಸಂಜಯ್ ಕೋಬ್ರಗಾಡೆ ಕೊಲೆ ಪ್ರಕರಣ, ರಾಮಾಬಾಯಿ ಅಂಬೇಡ್ಕರ್ ನಗರ ಹತ್ಯಾಕಾಂಡ ಪ್ರತಿಭಟನೆ ಪ್ರಕರಣಗಳು, ನಕಲಿ ಎನ್‌ಕೌಂಟರ್‌ಗಳಂತಹ ಪ್ರಕರಣಗಳಲ್ಲಿ ಗಾಡ್ಲಿಂಗ್ ಮುಂಚೂಣಿಯ ನ್ಯಾಯವಾದಿಯಾಗಿದ್ದರು.

ಮಂಗಳವಾರ, ಅಮೆರಿಕದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯೊಂದು ವರದಿಯನ್ನು ಬಿಡುಗಡೆ ಮಾಡಿದ್ದು, ಗಾಡ್ಲಿಂಗ್‌ ಅವರ ಕಂಪ್ಯೂಟರ್‌ನಲ್ಲಿ ಕಂಡುಬರುವ ‘ಸಾಕ್ಷ್ಯಗಳು’ ಸೈಬರ್ ದಾಳಿಕೋರರಿಂದ ಸೇರಿಸಲ್ಪಟ್ಟಿದೆ. ಹ್ಯಾಕರ್‌ಗಳಿ ದೀರ್ಘಕಾಲದವರೆಗೆ ವಕೀಲರ ಕಂಪ್ಯೂಟರ್‌ಗೆ ಹದಿನಾಲ್ಕು ಮಹತ್ವದ ದಾಖಲೆಗಳ ಫೈಲ್‌ಗಳನ್ನು ಸೇರಿಸಿದ್ದಾರೆ ಎಂದಿದೆ.

ಈ ಸಾಕ್ಷ್ಯಗಳ ಅದರ ಆಧಾರದ ಮೇಲೆ ಎನ್‌ಐಎ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿರಿಸಿದೆ. malware NetWire ಬಳಸಿ ಅವರ ಕಂಪ್ಯೂಟರ್‌ನಲ್ಲಿ ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಕಂಡುಹಿಡಿದಿದೆ.

ವಿಧಿವಿಜ್ಞಾನ ಸಂಸ್ಥೆ ಕಳೆದ ತಿಂಗಳುಗಳಲ್ಲಿ ಪ್ರಕಟಿಸಿದ ಮೂರನೇ ವರದಿ ಇದಾಗಿದೆ. ಫೆಬ್ರವರಿ 8, 2021 ಮತ್ತು ಮಾರ್ಚ್ 27, 2021 ರಲ್ಲಿ ಮೊದಲ ಎರಡು ವರದಿಗಳು ಪ್ರಕಟವಾಗಿದ್ದವು.


ಇದನ್ನೂ ಓ‌ದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...