Homeಚಳವಳಿಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

- Advertisement -
- Advertisement -

ಮುಂದಿನ ತಿಂಗಳು ತನ್ನ ತಾಯಿಯ ಮೊದಲ ವರ್ಷದ ಪುಣ್ಯತಿಥಿಯ ಕೆಲವು ಆಚರಣೆಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಸಾಮಾಜಿಕ ಹೋರಾಟಗಾರ, ಎಲ್ಗರ್ ಪರಿಷತ್ (ಭೀಮಾ ಕೋರೆಗಾಂವ್‌) ಪ್ರಕರಣದ ಆರೋಪಿಯಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್‌ ಮಂಗಳವಾರ ಒತ್ತಾಯಿಸಿದ್ದಾರೆ.

ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ವಕೀಲ ಆರ್. ಸತ್ಯನಾರಾಯಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, 2020 ರ ವಿಶೇಷ ನ್ಯಾಯಾಲಯ,ತನ್ನ ತಾಯಿಯ ಕೊನೆಯ ವಿಧಿವಿಧಾನಗಳಲ್ಲಿ ಹಾಜರಾಗಲು ತಾತ್ಕಾಲಿಕ ಜಾಮೀನು ನೀಡುವ ಮನವಿಯನ್ನು ತಿರಸ್ಕರಿಸಿದ್ದ ಆದೇಶವನ್ನು ಪ್ರಶ್ನಿಸಿದ್ದಾರೆ. ಜಾಮೀನು ಕೋರಿ ಗಾಡ್ಲಿಂಗ್ ಕಳೆದ ವರ್ಷ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆಗಸ್ಟ್ 15, 2020 ರಂದು ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ತಾಯಿ ನಾಗ್ಪುರದಲ್ಲಿ ನಿಧನರಾದರು.

ಸಾಮಾಜಿಕ ಹೋರಾಟಗಾರ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಪುಣೆ ಪೊಲೀಸರು 2018 ರ ಜೂನ್‌ನಲ್ಲಿ ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದೆ. ವಿಚಾರಣೆ ಹಂತದಿಂದಲು ಅವರನ್ನು ನವೀ ಮುಂಬೈನ ತಾಲೋಜಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ; ಬಂಧನದಲ್ಲೂ ಕಾನೂನು ನೆರವು ನೀಡುವುದನ್ನು ಮುಂದುವರೆಸಿರುವ ಸುರೇಂದ್ರ ಗಾಡ್ಲಿಂಗ್

ತಾತ್ಕಾಲಿಕ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ತನ್ನ ತಾಯಿಯ ಕೊನೆಯ ವಿಧಿಗಳನ್ನು ನಿರ್ವಹಿಸಲು ಮೂರು ವಾರಗಳ ಕಾಲ ಜೈಲಿನಿಂದ ಬಿಡುಗಡೆಯಾಗಬೇಕೆಂದು ಕೋರಿದರು, ಆದರೆ ಅವರ ಅರ್ಜಿಯನ್ನು ತಿರಸ್ಕರಿಸಲಾಯಿತು. ನಂತರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅಲ್ಲಿಯೂ ಅವರ ಮನವಿಯನ್ನು ಹಲವಾರು ಬಾರಿ ಮುಂದೂಡಲಾಗಿತ್ತು.

“ತಾಯಿಯ ಅಂತ್ಯಕ್ರಿಯೆಯ ವಿಧಿಗಳನ್ನು ಇಲ್ಲಿಯವರೆಗೆ ನಡೆಸಲಾಗಿಲ್ಲ ಮತ್ತು ಅವುಗಳನ್ನು ಮೊದಲ ಪುಣ್ಯತಿಥಿಯಂದು ಆಗಸ್ಟ್ 15, 2021 ರಂದು ಯೋಜಿಸಲಾಗಿದೆ” ಎಂದು ಇಂದಿರಾ ಜೈಸಿಂಗ್ ಹೈಕೋರ್ಟ್‌ಗೆ ತಿಳಿಸಿ, ಗಾಡ್ಲಿಂಗ್‌ ಅವರಿಗೆ ತಾತ್ಕಾಲಿಕ ಜಾಮೀನು ನೀಡುವಂತೆ ಒತ್ತಾಯಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಹೈಕೋರ್ಟ್ ಜುಲೈ 22 ಕ್ಕೆ ಮುಂದೂಡಲಾಗಿದೆ.

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಮಾನವ ಹಕ್ಕುಗಳ ಹೋರಾಟಗಾರರಲ್ಲಿ ಒಬ್ಬರಾದ 84 ವರ್ಷದ ಫಾದರ್ ಸ್ಟಾನ್ ಸ್ವಾಮಿ ಸೋಮವಾರ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರು ಸೇರಿದಂತೆ ಹೋರಾಟಗಾರರು, ಚಿಂತಕರು, ಮಾಣವ ಹಕ್ಕುಗಳ ಹೋರಾಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

ಖೈರ್ಲಾಂಜಿ ಹತ್ಯಾಕಾಂಡ, ಜಾವಖೇಡ ಹತ್ಯಾಕಾಂಡ, ಮನೋರಮಾ ಕಾಂಬ್ಳೆ ಹತ್ಯಾಕಾಂಡ, ಕಾವಲೇವಾಡ ಸಂಜಯ್ ಕೋಬ್ರಗಾಡೆ ಕೊಲೆ ಪ್ರಕರಣ, ರಾಮಾಬಾಯಿ ಅಂಬೇಡ್ಕರ್ ನಗರ ಹತ್ಯಾಕಾಂಡ ಪ್ರತಿಭಟನೆ ಪ್ರಕರಣಗಳು, ನಕಲಿ ಎನ್‌ಕೌಂಟರ್‌ಗಳಂತಹ ಪ್ರಕರಣಗಳಲ್ಲಿ ಗಾಡ್ಲಿಂಗ್ ಮುಂಚೂಣಿಯ ನ್ಯಾಯವಾದಿಯಾಗಿದ್ದರು.

ಮಂಗಳವಾರ, ಅಮೆರಿಕದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯೊಂದು ವರದಿಯನ್ನು ಬಿಡುಗಡೆ ಮಾಡಿದ್ದು, ಗಾಡ್ಲಿಂಗ್‌ ಅವರ ಕಂಪ್ಯೂಟರ್‌ನಲ್ಲಿ ಕಂಡುಬರುವ ‘ಸಾಕ್ಷ್ಯಗಳು’ ಸೈಬರ್ ದಾಳಿಕೋರರಿಂದ ಸೇರಿಸಲ್ಪಟ್ಟಿದೆ. ಹ್ಯಾಕರ್‌ಗಳಿ ದೀರ್ಘಕಾಲದವರೆಗೆ ವಕೀಲರ ಕಂಪ್ಯೂಟರ್‌ಗೆ ಹದಿನಾಲ್ಕು ಮಹತ್ವದ ದಾಖಲೆಗಳ ಫೈಲ್‌ಗಳನ್ನು ಸೇರಿಸಿದ್ದಾರೆ ಎಂದಿದೆ.

ಈ ಸಾಕ್ಷ್ಯಗಳ ಅದರ ಆಧಾರದ ಮೇಲೆ ಎನ್‌ಐಎ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿರಿಸಿದೆ. malware NetWire ಬಳಸಿ ಅವರ ಕಂಪ್ಯೂಟರ್‌ನಲ್ಲಿ ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಕಂಡುಹಿಡಿದಿದೆ.

ವಿಧಿವಿಜ್ಞಾನ ಸಂಸ್ಥೆ ಕಳೆದ ತಿಂಗಳುಗಳಲ್ಲಿ ಪ್ರಕಟಿಸಿದ ಮೂರನೇ ವರದಿ ಇದಾಗಿದೆ. ಫೆಬ್ರವರಿ 8, 2021 ಮತ್ತು ಮಾರ್ಚ್ 27, 2021 ರಲ್ಲಿ ಮೊದಲ ಎರಡು ವರದಿಗಳು ಪ್ರಕಟವಾಗಿದ್ದವು.


ಇದನ್ನೂ ಓ‌ದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...