Homeಚಳವಳಿಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

- Advertisement -
- Advertisement -

ಮುಂದಿನ ತಿಂಗಳು ತನ್ನ ತಾಯಿಯ ಮೊದಲ ವರ್ಷದ ಪುಣ್ಯತಿಥಿಯ ಕೆಲವು ಆಚರಣೆಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಸಾಮಾಜಿಕ ಹೋರಾಟಗಾರ, ಎಲ್ಗರ್ ಪರಿಷತ್ (ಭೀಮಾ ಕೋರೆಗಾಂವ್‌) ಪ್ರಕರಣದ ಆರೋಪಿಯಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್‌ ಮಂಗಳವಾರ ಒತ್ತಾಯಿಸಿದ್ದಾರೆ.

ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ವಕೀಲ ಆರ್. ಸತ್ಯನಾರಾಯಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, 2020 ರ ವಿಶೇಷ ನ್ಯಾಯಾಲಯ,ತನ್ನ ತಾಯಿಯ ಕೊನೆಯ ವಿಧಿವಿಧಾನಗಳಲ್ಲಿ ಹಾಜರಾಗಲು ತಾತ್ಕಾಲಿಕ ಜಾಮೀನು ನೀಡುವ ಮನವಿಯನ್ನು ತಿರಸ್ಕರಿಸಿದ್ದ ಆದೇಶವನ್ನು ಪ್ರಶ್ನಿಸಿದ್ದಾರೆ. ಜಾಮೀನು ಕೋರಿ ಗಾಡ್ಲಿಂಗ್ ಕಳೆದ ವರ್ಷ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆಗಸ್ಟ್ 15, 2020 ರಂದು ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ತಾಯಿ ನಾಗ್ಪುರದಲ್ಲಿ ನಿಧನರಾದರು.

ಸಾಮಾಜಿಕ ಹೋರಾಟಗಾರ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಪುಣೆ ಪೊಲೀಸರು 2018 ರ ಜೂನ್‌ನಲ್ಲಿ ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದೆ. ವಿಚಾರಣೆ ಹಂತದಿಂದಲು ಅವರನ್ನು ನವೀ ಮುಂಬೈನ ತಾಲೋಜಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ; ಬಂಧನದಲ್ಲೂ ಕಾನೂನು ನೆರವು ನೀಡುವುದನ್ನು ಮುಂದುವರೆಸಿರುವ ಸುರೇಂದ್ರ ಗಾಡ್ಲಿಂಗ್

ತಾತ್ಕಾಲಿಕ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ತನ್ನ ತಾಯಿಯ ಕೊನೆಯ ವಿಧಿಗಳನ್ನು ನಿರ್ವಹಿಸಲು ಮೂರು ವಾರಗಳ ಕಾಲ ಜೈಲಿನಿಂದ ಬಿಡುಗಡೆಯಾಗಬೇಕೆಂದು ಕೋರಿದರು, ಆದರೆ ಅವರ ಅರ್ಜಿಯನ್ನು ತಿರಸ್ಕರಿಸಲಾಯಿತು. ನಂತರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅಲ್ಲಿಯೂ ಅವರ ಮನವಿಯನ್ನು ಹಲವಾರು ಬಾರಿ ಮುಂದೂಡಲಾಗಿತ್ತು.

“ತಾಯಿಯ ಅಂತ್ಯಕ್ರಿಯೆಯ ವಿಧಿಗಳನ್ನು ಇಲ್ಲಿಯವರೆಗೆ ನಡೆಸಲಾಗಿಲ್ಲ ಮತ್ತು ಅವುಗಳನ್ನು ಮೊದಲ ಪುಣ್ಯತಿಥಿಯಂದು ಆಗಸ್ಟ್ 15, 2021 ರಂದು ಯೋಜಿಸಲಾಗಿದೆ” ಎಂದು ಇಂದಿರಾ ಜೈಸಿಂಗ್ ಹೈಕೋರ್ಟ್‌ಗೆ ತಿಳಿಸಿ, ಗಾಡ್ಲಿಂಗ್‌ ಅವರಿಗೆ ತಾತ್ಕಾಲಿಕ ಜಾಮೀನು ನೀಡುವಂತೆ ಒತ್ತಾಯಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಹೈಕೋರ್ಟ್ ಜುಲೈ 22 ಕ್ಕೆ ಮುಂದೂಡಲಾಗಿದೆ.

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಮಾನವ ಹಕ್ಕುಗಳ ಹೋರಾಟಗಾರರಲ್ಲಿ ಒಬ್ಬರಾದ 84 ವರ್ಷದ ಫಾದರ್ ಸ್ಟಾನ್ ಸ್ವಾಮಿ ಸೋಮವಾರ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರು ಸೇರಿದಂತೆ ಹೋರಾಟಗಾರರು, ಚಿಂತಕರು, ಮಾಣವ ಹಕ್ಕುಗಳ ಹೋರಾಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

ಖೈರ್ಲಾಂಜಿ ಹತ್ಯಾಕಾಂಡ, ಜಾವಖೇಡ ಹತ್ಯಾಕಾಂಡ, ಮನೋರಮಾ ಕಾಂಬ್ಳೆ ಹತ್ಯಾಕಾಂಡ, ಕಾವಲೇವಾಡ ಸಂಜಯ್ ಕೋಬ್ರಗಾಡೆ ಕೊಲೆ ಪ್ರಕರಣ, ರಾಮಾಬಾಯಿ ಅಂಬೇಡ್ಕರ್ ನಗರ ಹತ್ಯಾಕಾಂಡ ಪ್ರತಿಭಟನೆ ಪ್ರಕರಣಗಳು, ನಕಲಿ ಎನ್‌ಕೌಂಟರ್‌ಗಳಂತಹ ಪ್ರಕರಣಗಳಲ್ಲಿ ಗಾಡ್ಲಿಂಗ್ ಮುಂಚೂಣಿಯ ನ್ಯಾಯವಾದಿಯಾಗಿದ್ದರು.

ಮಂಗಳವಾರ, ಅಮೆರಿಕದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯೊಂದು ವರದಿಯನ್ನು ಬಿಡುಗಡೆ ಮಾಡಿದ್ದು, ಗಾಡ್ಲಿಂಗ್‌ ಅವರ ಕಂಪ್ಯೂಟರ್‌ನಲ್ಲಿ ಕಂಡುಬರುವ ‘ಸಾಕ್ಷ್ಯಗಳು’ ಸೈಬರ್ ದಾಳಿಕೋರರಿಂದ ಸೇರಿಸಲ್ಪಟ್ಟಿದೆ. ಹ್ಯಾಕರ್‌ಗಳಿ ದೀರ್ಘಕಾಲದವರೆಗೆ ವಕೀಲರ ಕಂಪ್ಯೂಟರ್‌ಗೆ ಹದಿನಾಲ್ಕು ಮಹತ್ವದ ದಾಖಲೆಗಳ ಫೈಲ್‌ಗಳನ್ನು ಸೇರಿಸಿದ್ದಾರೆ ಎಂದಿದೆ.

ಈ ಸಾಕ್ಷ್ಯಗಳ ಅದರ ಆಧಾರದ ಮೇಲೆ ಎನ್‌ಐಎ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿರಿಸಿದೆ. malware NetWire ಬಳಸಿ ಅವರ ಕಂಪ್ಯೂಟರ್‌ನಲ್ಲಿ ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಕಂಡುಹಿಡಿದಿದೆ.

ವಿಧಿವಿಜ್ಞಾನ ಸಂಸ್ಥೆ ಕಳೆದ ತಿಂಗಳುಗಳಲ್ಲಿ ಪ್ರಕಟಿಸಿದ ಮೂರನೇ ವರದಿ ಇದಾಗಿದೆ. ಫೆಬ್ರವರಿ 8, 2021 ಮತ್ತು ಮಾರ್ಚ್ 27, 2021 ರಲ್ಲಿ ಮೊದಲ ಎರಡು ವರದಿಗಳು ಪ್ರಕಟವಾಗಿದ್ದವು.


ಇದನ್ನೂ ಓ‌ದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಪ್ರಾಧಿಕಾರ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...