Homeಚಳವಳಿಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

- Advertisement -
- Advertisement -

ಮುಂದಿನ ತಿಂಗಳು ತನ್ನ ತಾಯಿಯ ಮೊದಲ ವರ್ಷದ ಪುಣ್ಯತಿಥಿಯ ಕೆಲವು ಆಚರಣೆಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಸಾಮಾಜಿಕ ಹೋರಾಟಗಾರ, ಎಲ್ಗರ್ ಪರಿಷತ್ (ಭೀಮಾ ಕೋರೆಗಾಂವ್‌) ಪ್ರಕರಣದ ಆರೋಪಿಯಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್‌ ಮಂಗಳವಾರ ಒತ್ತಾಯಿಸಿದ್ದಾರೆ.

ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ವಕೀಲ ಆರ್. ಸತ್ಯನಾರಾಯಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, 2020 ರ ವಿಶೇಷ ನ್ಯಾಯಾಲಯ,ತನ್ನ ತಾಯಿಯ ಕೊನೆಯ ವಿಧಿವಿಧಾನಗಳಲ್ಲಿ ಹಾಜರಾಗಲು ತಾತ್ಕಾಲಿಕ ಜಾಮೀನು ನೀಡುವ ಮನವಿಯನ್ನು ತಿರಸ್ಕರಿಸಿದ್ದ ಆದೇಶವನ್ನು ಪ್ರಶ್ನಿಸಿದ್ದಾರೆ. ಜಾಮೀನು ಕೋರಿ ಗಾಡ್ಲಿಂಗ್ ಕಳೆದ ವರ್ಷ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆಗಸ್ಟ್ 15, 2020 ರಂದು ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ತಾಯಿ ನಾಗ್ಪುರದಲ್ಲಿ ನಿಧನರಾದರು.

ಸಾಮಾಜಿಕ ಹೋರಾಟಗಾರ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಪುಣೆ ಪೊಲೀಸರು 2018 ರ ಜೂನ್‌ನಲ್ಲಿ ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದೆ. ವಿಚಾರಣೆ ಹಂತದಿಂದಲು ಅವರನ್ನು ನವೀ ಮುಂಬೈನ ತಾಲೋಜಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ; ಬಂಧನದಲ್ಲೂ ಕಾನೂನು ನೆರವು ನೀಡುವುದನ್ನು ಮುಂದುವರೆಸಿರುವ ಸುರೇಂದ್ರ ಗಾಡ್ಲಿಂಗ್

ತಾತ್ಕಾಲಿಕ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ತನ್ನ ತಾಯಿಯ ಕೊನೆಯ ವಿಧಿಗಳನ್ನು ನಿರ್ವಹಿಸಲು ಮೂರು ವಾರಗಳ ಕಾಲ ಜೈಲಿನಿಂದ ಬಿಡುಗಡೆಯಾಗಬೇಕೆಂದು ಕೋರಿದರು, ಆದರೆ ಅವರ ಅರ್ಜಿಯನ್ನು ತಿರಸ್ಕರಿಸಲಾಯಿತು. ನಂತರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅಲ್ಲಿಯೂ ಅವರ ಮನವಿಯನ್ನು ಹಲವಾರು ಬಾರಿ ಮುಂದೂಡಲಾಗಿತ್ತು.

“ತಾಯಿಯ ಅಂತ್ಯಕ್ರಿಯೆಯ ವಿಧಿಗಳನ್ನು ಇಲ್ಲಿಯವರೆಗೆ ನಡೆಸಲಾಗಿಲ್ಲ ಮತ್ತು ಅವುಗಳನ್ನು ಮೊದಲ ಪುಣ್ಯತಿಥಿಯಂದು ಆಗಸ್ಟ್ 15, 2021 ರಂದು ಯೋಜಿಸಲಾಗಿದೆ” ಎಂದು ಇಂದಿರಾ ಜೈಸಿಂಗ್ ಹೈಕೋರ್ಟ್‌ಗೆ ತಿಳಿಸಿ, ಗಾಡ್ಲಿಂಗ್‌ ಅವರಿಗೆ ತಾತ್ಕಾಲಿಕ ಜಾಮೀನು ನೀಡುವಂತೆ ಒತ್ತಾಯಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಹೈಕೋರ್ಟ್ ಜುಲೈ 22 ಕ್ಕೆ ಮುಂದೂಡಲಾಗಿದೆ.

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಮಾನವ ಹಕ್ಕುಗಳ ಹೋರಾಟಗಾರರಲ್ಲಿ ಒಬ್ಬರಾದ 84 ವರ್ಷದ ಫಾದರ್ ಸ್ಟಾನ್ ಸ್ವಾಮಿ ಸೋಮವಾರ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರು ಸೇರಿದಂತೆ ಹೋರಾಟಗಾರರು, ಚಿಂತಕರು, ಮಾಣವ ಹಕ್ಕುಗಳ ಹೋರಾಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

ಖೈರ್ಲಾಂಜಿ ಹತ್ಯಾಕಾಂಡ, ಜಾವಖೇಡ ಹತ್ಯಾಕಾಂಡ, ಮನೋರಮಾ ಕಾಂಬ್ಳೆ ಹತ್ಯಾಕಾಂಡ, ಕಾವಲೇವಾಡ ಸಂಜಯ್ ಕೋಬ್ರಗಾಡೆ ಕೊಲೆ ಪ್ರಕರಣ, ರಾಮಾಬಾಯಿ ಅಂಬೇಡ್ಕರ್ ನಗರ ಹತ್ಯಾಕಾಂಡ ಪ್ರತಿಭಟನೆ ಪ್ರಕರಣಗಳು, ನಕಲಿ ಎನ್‌ಕೌಂಟರ್‌ಗಳಂತಹ ಪ್ರಕರಣಗಳಲ್ಲಿ ಗಾಡ್ಲಿಂಗ್ ಮುಂಚೂಣಿಯ ನ್ಯಾಯವಾದಿಯಾಗಿದ್ದರು.

ಮಂಗಳವಾರ, ಅಮೆರಿಕದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯೊಂದು ವರದಿಯನ್ನು ಬಿಡುಗಡೆ ಮಾಡಿದ್ದು, ಗಾಡ್ಲಿಂಗ್‌ ಅವರ ಕಂಪ್ಯೂಟರ್‌ನಲ್ಲಿ ಕಂಡುಬರುವ ‘ಸಾಕ್ಷ್ಯಗಳು’ ಸೈಬರ್ ದಾಳಿಕೋರರಿಂದ ಸೇರಿಸಲ್ಪಟ್ಟಿದೆ. ಹ್ಯಾಕರ್‌ಗಳಿ ದೀರ್ಘಕಾಲದವರೆಗೆ ವಕೀಲರ ಕಂಪ್ಯೂಟರ್‌ಗೆ ಹದಿನಾಲ್ಕು ಮಹತ್ವದ ದಾಖಲೆಗಳ ಫೈಲ್‌ಗಳನ್ನು ಸೇರಿಸಿದ್ದಾರೆ ಎಂದಿದೆ.

ಈ ಸಾಕ್ಷ್ಯಗಳ ಅದರ ಆಧಾರದ ಮೇಲೆ ಎನ್‌ಐಎ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿರಿಸಿದೆ. malware NetWire ಬಳಸಿ ಅವರ ಕಂಪ್ಯೂಟರ್‌ನಲ್ಲಿ ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಕಂಡುಹಿಡಿದಿದೆ.

ವಿಧಿವಿಜ್ಞಾನ ಸಂಸ್ಥೆ ಕಳೆದ ತಿಂಗಳುಗಳಲ್ಲಿ ಪ್ರಕಟಿಸಿದ ಮೂರನೇ ವರದಿ ಇದಾಗಿದೆ. ಫೆಬ್ರವರಿ 8, 2021 ಮತ್ತು ಮಾರ್ಚ್ 27, 2021 ರಲ್ಲಿ ಮೊದಲ ಎರಡು ವರದಿಗಳು ಪ್ರಕಟವಾಗಿದ್ದವು.


ಇದನ್ನೂ ಓ‌ದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...