Homeಚಳವಳಿಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

- Advertisement -
- Advertisement -

ಮುಂದಿನ ತಿಂಗಳು ತನ್ನ ತಾಯಿಯ ಮೊದಲ ವರ್ಷದ ಪುಣ್ಯತಿಥಿಯ ಕೆಲವು ಆಚರಣೆಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಸಾಮಾಜಿಕ ಹೋರಾಟಗಾರ, ಎಲ್ಗರ್ ಪರಿಷತ್ (ಭೀಮಾ ಕೋರೆಗಾಂವ್‌) ಪ್ರಕರಣದ ಆರೋಪಿಯಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್‌ ಮಂಗಳವಾರ ಒತ್ತಾಯಿಸಿದ್ದಾರೆ.

ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ವಕೀಲ ಆರ್. ಸತ್ಯನಾರಾಯಣ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, 2020 ರ ವಿಶೇಷ ನ್ಯಾಯಾಲಯ,ತನ್ನ ತಾಯಿಯ ಕೊನೆಯ ವಿಧಿವಿಧಾನಗಳಲ್ಲಿ ಹಾಜರಾಗಲು ತಾತ್ಕಾಲಿಕ ಜಾಮೀನು ನೀಡುವ ಮನವಿಯನ್ನು ತಿರಸ್ಕರಿಸಿದ್ದ ಆದೇಶವನ್ನು ಪ್ರಶ್ನಿಸಿದ್ದಾರೆ. ಜಾಮೀನು ಕೋರಿ ಗಾಡ್ಲಿಂಗ್ ಕಳೆದ ವರ್ಷ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆಗಸ್ಟ್ 15, 2020 ರಂದು ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ತಾಯಿ ನಾಗ್ಪುರದಲ್ಲಿ ನಿಧನರಾದರು.

ಸಾಮಾಜಿಕ ಹೋರಾಟಗಾರ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಪುಣೆ ಪೊಲೀಸರು 2018 ರ ಜೂನ್‌ನಲ್ಲಿ ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎ ವಹಿಸಿಕೊಂಡಿದೆ. ವಿಚಾರಣೆ ಹಂತದಿಂದಲು ಅವರನ್ನು ನವೀ ಮುಂಬೈನ ತಾಲೋಜಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ; ಬಂಧನದಲ್ಲೂ ಕಾನೂನು ನೆರವು ನೀಡುವುದನ್ನು ಮುಂದುವರೆಸಿರುವ ಸುರೇಂದ್ರ ಗಾಡ್ಲಿಂಗ್

ತಾತ್ಕಾಲಿಕ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ತನ್ನ ತಾಯಿಯ ಕೊನೆಯ ವಿಧಿಗಳನ್ನು ನಿರ್ವಹಿಸಲು ಮೂರು ವಾರಗಳ ಕಾಲ ಜೈಲಿನಿಂದ ಬಿಡುಗಡೆಯಾಗಬೇಕೆಂದು ಕೋರಿದರು, ಆದರೆ ಅವರ ಅರ್ಜಿಯನ್ನು ತಿರಸ್ಕರಿಸಲಾಯಿತು. ನಂತರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅಲ್ಲಿಯೂ ಅವರ ಮನವಿಯನ್ನು ಹಲವಾರು ಬಾರಿ ಮುಂದೂಡಲಾಗಿತ್ತು.

“ತಾಯಿಯ ಅಂತ್ಯಕ್ರಿಯೆಯ ವಿಧಿಗಳನ್ನು ಇಲ್ಲಿಯವರೆಗೆ ನಡೆಸಲಾಗಿಲ್ಲ ಮತ್ತು ಅವುಗಳನ್ನು ಮೊದಲ ಪುಣ್ಯತಿಥಿಯಂದು ಆಗಸ್ಟ್ 15, 2021 ರಂದು ಯೋಜಿಸಲಾಗಿದೆ” ಎಂದು ಇಂದಿರಾ ಜೈಸಿಂಗ್ ಹೈಕೋರ್ಟ್‌ಗೆ ತಿಳಿಸಿ, ಗಾಡ್ಲಿಂಗ್‌ ಅವರಿಗೆ ತಾತ್ಕಾಲಿಕ ಜಾಮೀನು ನೀಡುವಂತೆ ಒತ್ತಾಯಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಹೈಕೋರ್ಟ್ ಜುಲೈ 22 ಕ್ಕೆ ಮುಂದೂಡಲಾಗಿದೆ.

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಮಾನವ ಹಕ್ಕುಗಳ ಹೋರಾಟಗಾರರಲ್ಲಿ ಒಬ್ಬರಾದ 84 ವರ್ಷದ ಫಾದರ್ ಸ್ಟಾನ್ ಸ್ವಾಮಿ ಸೋಮವಾರ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರು ಸೇರಿದಂತೆ ಹೋರಾಟಗಾರರು, ಚಿಂತಕರು, ಮಾಣವ ಹಕ್ಕುಗಳ ಹೋರಾಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

ಖೈರ್ಲಾಂಜಿ ಹತ್ಯಾಕಾಂಡ, ಜಾವಖೇಡ ಹತ್ಯಾಕಾಂಡ, ಮನೋರಮಾ ಕಾಂಬ್ಳೆ ಹತ್ಯಾಕಾಂಡ, ಕಾವಲೇವಾಡ ಸಂಜಯ್ ಕೋಬ್ರಗಾಡೆ ಕೊಲೆ ಪ್ರಕರಣ, ರಾಮಾಬಾಯಿ ಅಂಬೇಡ್ಕರ್ ನಗರ ಹತ್ಯಾಕಾಂಡ ಪ್ರತಿಭಟನೆ ಪ್ರಕರಣಗಳು, ನಕಲಿ ಎನ್‌ಕೌಂಟರ್‌ಗಳಂತಹ ಪ್ರಕರಣಗಳಲ್ಲಿ ಗಾಡ್ಲಿಂಗ್ ಮುಂಚೂಣಿಯ ನ್ಯಾಯವಾದಿಯಾಗಿದ್ದರು.

ಮಂಗಳವಾರ, ಅಮೆರಿಕದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯೊಂದು ವರದಿಯನ್ನು ಬಿಡುಗಡೆ ಮಾಡಿದ್ದು, ಗಾಡ್ಲಿಂಗ್‌ ಅವರ ಕಂಪ್ಯೂಟರ್‌ನಲ್ಲಿ ಕಂಡುಬರುವ ‘ಸಾಕ್ಷ್ಯಗಳು’ ಸೈಬರ್ ದಾಳಿಕೋರರಿಂದ ಸೇರಿಸಲ್ಪಟ್ಟಿದೆ. ಹ್ಯಾಕರ್‌ಗಳಿ ದೀರ್ಘಕಾಲದವರೆಗೆ ವಕೀಲರ ಕಂಪ್ಯೂಟರ್‌ಗೆ ಹದಿನಾಲ್ಕು ಮಹತ್ವದ ದಾಖಲೆಗಳ ಫೈಲ್‌ಗಳನ್ನು ಸೇರಿಸಿದ್ದಾರೆ ಎಂದಿದೆ.

ಈ ಸಾಕ್ಷ್ಯಗಳ ಅದರ ಆಧಾರದ ಮೇಲೆ ಎನ್‌ಐಎ ಸುರೇಂದ್ರ ಗಾಡ್ಲಿಂಗ್‌ ಅವರನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿರಿಸಿದೆ. malware NetWire ಬಳಸಿ ಅವರ ಕಂಪ್ಯೂಟರ್‌ನಲ್ಲಿ ಸೇರಿಸಲಾಗಿದೆ ಎಂದು ಆರ್ಸೆನಲ್ ಕನ್ಸಲ್ಟಿಂಗ್ ಕಂಡುಹಿಡಿದಿದೆ.

ವಿಧಿವಿಜ್ಞಾನ ಸಂಸ್ಥೆ ಕಳೆದ ತಿಂಗಳುಗಳಲ್ಲಿ ಪ್ರಕಟಿಸಿದ ಮೂರನೇ ವರದಿ ಇದಾಗಿದೆ. ಫೆಬ್ರವರಿ 8, 2021 ಮತ್ತು ಮಾರ್ಚ್ 27, 2021 ರಲ್ಲಿ ಮೊದಲ ಎರಡು ವರದಿಗಳು ಪ್ರಕಟವಾಗಿದ್ದವು.


ಇದನ್ನೂ ಓ‌ದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...