Homeಕರ್ನಾಟಕದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ಎರಡು ವರ್ಷದ ಹಿಂದಿನ ಕಾರ್ಯಕ್ರಮದ ಶುಲ್ಕ ಪಾವತಿಸುವಂತೆ ಈಗ ಸೂಚಿಸಿದ ಕಾಲೇಜು

- Advertisement -
- Advertisement -

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ,ಈಗ ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಇದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

2022ರ ನವೆಂಬರ್ 4 ಮತ್ತು 5ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು (ಕೆಎಸ್‌ಹೆಚ್‌ಇಸಿ) ಮತ್ತು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ಜಂಟಿಯಾಗಿ ‘Financial Education and Investment Awareness Course’ವಿಷಯಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನಡೆಸಿತ್ತು. ಅದರ ಶುಲ್ಕ 150 ರೂಪಾಯಿಯನ್ನು ಪಾವತಿಸುವಂತೆ ಈಗ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

2021-22ನೇ ಸಾಲಿನಲ್ಲಿ ಪ್ರವೇಶ ಪಡೆದು ಪ್ರಸ್ತುತ 6ನೇ ಸೆಮಿಸ್ಟರ್‌ ಬಿಎ, ಬಿಕಾಂ ಮತ್ತು ಬಿಎಸ್ಸಿ ತರಗತಿಗಳನ್ನು ವ್ಯಾಸಂಗ ಮಾಡುತ್ತಿರುವ (ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳಿಗೆ 150 ರೂ. ಪಾವತಿಸುವಂತೆ ಪ್ರಾಂಶುಪಾಲರ ಕಚೇರಿಯಿಂದ 26 ಜೂನ್ 2024ರಂದು ಆದೇಶ ಹೊರಡಿಸಲಾಗಿದೆ.

ಪ್ರಸ್ತುತ ವಿದ್ಯಾರ್ಥಿಗಳು 6ನೇ ಸೆಮಿಸ್ಟರ್‌ ಪರೀಕ್ಷೆಗೆ ಅಣಿಯಾಗಿದ್ದು, ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಹಾಲ್‌ ಟಿಕೆಟ್ ತಡೆ ಹಿಡಿಯುವ ಎಚ್ಚರಿಕೆ ನೀಡಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಬಿಎಸ್ಸಿ ಕೊನೆಯ ಸೆಮಿಸ್ಟರ್ ವಿದ್ಯಾರ್ಥಿ ವಿನಾಯಕ್ ” ಖಾಸಗಿ ಕಾಲೇಜುಗಳಲ್ಲಿ ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ನಾವು ಸರ್ಕಾರಿ ಕಾಲೇಜಿಗೆ ಸೇರಿದ್ದೇವೆ. ಇಲ್ಲೂ ಈ ರೀತಿ ಹೆಚ್ಚುವರಿ ಹಣ ಪಾವತಿಸಲು ಸೂಚಿಸಿದರೆ ಬಡ ವಿದ್ಯಾರ್ಥಿಗಳಾದ ನಾವು ಏನು ಮಾಡುವುದು? ಎಂದು ಅಳಲು ತೋಡಿಕೊಂಡಿದ್ದಾರೆ.

“ಪ್ರಸ್ತುತ 6ನೇ ಸೆಮಿಸ್ಟರ್ ಪರೀಕ್ಷೆ ಹತ್ತಿರ ಬಂದಿದೆ. ಆದರೆ, ನಮಗೆ 5ನೇ ಸೆಮಿಸ್ಟರ್ ಫಲಿತಾಂಶವನ್ನೇ ತಿಳಿಸಿಲ್ಲ. 6ನೇ ಸೆಮಿಸ್ಟರ್ ಪರೀಕ್ಷೆ ಕೂಡ ತಡವಾಗಿ ನಡೆಸಲಾಗ್ತಿದೆ. ಇದರಿಂದ ಸ್ನಾತಕ್ಕೋತ್ತರ ತರಗತಿಗೆ ಪ್ರವೇಶ ಪಡೆಯಲು ನಮಗೆ ಸಮಸ್ಯೆಯಾಗ್ತಿದೆ” ಎಂದಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿ ಮನೋಜ್ ಮಾತನಾಡಿ “ವರ್ಷಕ್ಕೆ 2,700 ರೂಪಾಯಿ ಕಾಲೇಜು ಶುಲ್ಕ ಪಾವತಿಸಿದ್ದೇವೆ. 5ನೇ ಸೆಮಿಸ್ಟರ್ ಪರೀಕ್ಷೆಗೆ 750 ರೂ. ಶುಲ್ಕ ಪಾವತಿಸಿದ್ದೇವೆ. ಈಗ 6ನೇ ಸೆಮಿಸ್ಟರ್‌ಗೆ ಶುಲ್ಕ ಹೆಚ್ಚಿಸಿ 950 ರೂ. ಮಾಡಲಾಗಿದೆ. ಅದರ ಜೊತೆಗೆ ಹೆಚ್ಚುವರಿಯಾಗಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇದು ನಮಗೆ ಬಹಳ ಹೊರೆಯಾಗ್ತಿದೆ. 150 ರೂ. ಪಾವತಿಸದಿದ್ದರೆ ಹಾಲ್ ಟಿಕೆಟ್ ನೀಡುವುದಿಲ್ಲ ಎಂದು ಹೆದರಿಸಿದ್ದಾರೆ. ಇದರಿಂದ ನಾವು ಇಕ್ಕಟ್ಟಿನ ಪರಿಸ್ಥಿಗೆ ಸಿಲುಕಿದ್ದೇವೆ” ಎಂದು ತಿಳಿಸಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಸ್ನೇಹಾ ಮಾತನಾಡಿ, “ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ ಈಗ ನಮ್ಮಿಂದ ಶುಲ್ಕ ವಸೂಲಿ ಮಾಡಲಾಗ್ತಿದೆ. ಗ್ರಾಮೀಣ ಬಡ ವಿದ್ಯಾರ್ಥಿಗಳಾದ ನಮಗೆ ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ ಹಣ ಪಾವತಿಸಲು ಸಾಧ್ಯವಿಲ್ಲ. ನಾವು ಹೆಚ್ಚುವರಿ ಹಣ ಪಾವತಿಸುವುದೂ ಇಲ್ಲ. ಯಾವುದೇ ವಿದ್ಯಾರ್ಥಿಯೂ ಹಣ ಪಾವತಿಸಿಲ್ಲ. ಮುಂದಿನ ನಡೆಯ ಬಗ್ಗೆ ನಾವು ಚರ್ಚಿಸುತಿದ್ದೇವೆ” ಎಂದಿದ್ದಾರೆ.

ದೂರವಾಣಿ ಮೂಲಕ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಮೂವರೂ ಕೂಡ “ನಮ್ಮಂತೆ ನೂರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಅವರು “ಇದರಲ್ಲಿ ನಮ್ಮ ಪಾತ್ರವೇನು ಇಲ್ಲ. ವಿಶ್ವವಿದ್ಯಾನಿಲಯದ ಆದೇಶವನ್ನು ನಾವು ಪಾಲಿಸಿದ್ದೇವೆ. ಕೆಎಸ್‌ಹೆಚ್‌ಇಸಿ ಮತ್ತು ವಿವಿ ತರಬೇತಿ ನಡೆಸಿತ್ತು. ಈಗ ಶುಲ್ಕ ವಸೂಲಿ ಮಾಡುವಂತೆ ನಮಗೆ ಸೂಚಿಸಿದೆ. ನಾವು ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ. ಈ ಬಗ್ಗೆ ವಿವಿಯನ್ನೇ ವಿಚಾರಿಸಬೇಕಿದೆ” ಎಂದು ಹೇಳಿದ್ದಾರೆ.

5ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿಲ್ಲ ಎಂಬ ವಿದ್ಯಾರ್ಥಿಗಳ ಆರೋಪದ ಬಗ್ಗೆ ಮಾತನಾಡಿದ ಅವರು ” ಕೋವಿಡ್ ಬಳಿಕ ಶೈಕ್ಷಣಿಕ ವರ್ಷ ಇನ್ನೂ ಹಳಿಗೆ ಬಂದಿಲ್ಲ. ಮುಂದಿನ ವರ್ಷದಿಂದ ಎಲ್ಲವೂ ಹಿಂದಿನ ರೀತಿಗೆ ಮರಳಲಿದೆ. ಜುಲೈ ತಿಂಗಳಲ್ಲಿ ಈ ಶೈಕ್ಷಣಿಕ ವರ್ಷ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನ ವಿದ್ಯಾರ್ಥಿಗಳ ಎಲ್ಲಾ ಫಲಿತಾಂಶ ಪ್ರಕಟಗೊಳ್ಳಲಿದೆ. ಸ್ನಾತಕ್ಕೋತ್ತರ ಪದವಿ ಪ್ರವೇಶಕ್ಕೆ ಯಾವುದೇ ಅಡಚಣೆಯಾಗುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : 7ನೇ ತರಗತಿ ಮಕ್ಕಳಿಗೆ ನಟಿ ತಮನ್ನಾ ಕುರಿತ ಪಾಠ : ಪೋಷಕರಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...