Homeಕರ್ನಾಟಕದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ಎರಡು ವರ್ಷದ ಹಿಂದಿನ ಕಾರ್ಯಕ್ರಮದ ಶುಲ್ಕ ಪಾವತಿಸುವಂತೆ ಈಗ ಸೂಚಿಸಿದ ಕಾಲೇಜು

- Advertisement -
- Advertisement -

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ,ಈಗ ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಇದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

2022ರ ನವೆಂಬರ್ 4 ಮತ್ತು 5ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು (ಕೆಎಸ್‌ಹೆಚ್‌ಇಸಿ) ಮತ್ತು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ಜಂಟಿಯಾಗಿ ‘Financial Education and Investment Awareness Course’ವಿಷಯಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನಡೆಸಿತ್ತು. ಅದರ ಶುಲ್ಕ 150 ರೂಪಾಯಿಯನ್ನು ಪಾವತಿಸುವಂತೆ ಈಗ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

2021-22ನೇ ಸಾಲಿನಲ್ಲಿ ಪ್ರವೇಶ ಪಡೆದು ಪ್ರಸ್ತುತ 6ನೇ ಸೆಮಿಸ್ಟರ್‌ ಬಿಎ, ಬಿಕಾಂ ಮತ್ತು ಬಿಎಸ್ಸಿ ತರಗತಿಗಳನ್ನು ವ್ಯಾಸಂಗ ಮಾಡುತ್ತಿರುವ (ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳಿಗೆ 150 ರೂ. ಪಾವತಿಸುವಂತೆ ಪ್ರಾಂಶುಪಾಲರ ಕಚೇರಿಯಿಂದ 26 ಜೂನ್ 2024ರಂದು ಆದೇಶ ಹೊರಡಿಸಲಾಗಿದೆ.

ಪ್ರಸ್ತುತ ವಿದ್ಯಾರ್ಥಿಗಳು 6ನೇ ಸೆಮಿಸ್ಟರ್‌ ಪರೀಕ್ಷೆಗೆ ಅಣಿಯಾಗಿದ್ದು, ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಹಾಲ್‌ ಟಿಕೆಟ್ ತಡೆ ಹಿಡಿಯುವ ಎಚ್ಚರಿಕೆ ನೀಡಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಬಿಎಸ್ಸಿ ಕೊನೆಯ ಸೆಮಿಸ್ಟರ್ ವಿದ್ಯಾರ್ಥಿ ವಿನಾಯಕ್ ” ಖಾಸಗಿ ಕಾಲೇಜುಗಳಲ್ಲಿ ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ನಾವು ಸರ್ಕಾರಿ ಕಾಲೇಜಿಗೆ ಸೇರಿದ್ದೇವೆ. ಇಲ್ಲೂ ಈ ರೀತಿ ಹೆಚ್ಚುವರಿ ಹಣ ಪಾವತಿಸಲು ಸೂಚಿಸಿದರೆ ಬಡ ವಿದ್ಯಾರ್ಥಿಗಳಾದ ನಾವು ಏನು ಮಾಡುವುದು? ಎಂದು ಅಳಲು ತೋಡಿಕೊಂಡಿದ್ದಾರೆ.

“ಪ್ರಸ್ತುತ 6ನೇ ಸೆಮಿಸ್ಟರ್ ಪರೀಕ್ಷೆ ಹತ್ತಿರ ಬಂದಿದೆ. ಆದರೆ, ನಮಗೆ 5ನೇ ಸೆಮಿಸ್ಟರ್ ಫಲಿತಾಂಶವನ್ನೇ ತಿಳಿಸಿಲ್ಲ. 6ನೇ ಸೆಮಿಸ್ಟರ್ ಪರೀಕ್ಷೆ ಕೂಡ ತಡವಾಗಿ ನಡೆಸಲಾಗ್ತಿದೆ. ಇದರಿಂದ ಸ್ನಾತಕ್ಕೋತ್ತರ ತರಗತಿಗೆ ಪ್ರವೇಶ ಪಡೆಯಲು ನಮಗೆ ಸಮಸ್ಯೆಯಾಗ್ತಿದೆ” ಎಂದಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿ ಮನೋಜ್ ಮಾತನಾಡಿ “ವರ್ಷಕ್ಕೆ 2,700 ರೂಪಾಯಿ ಕಾಲೇಜು ಶುಲ್ಕ ಪಾವತಿಸಿದ್ದೇವೆ. 5ನೇ ಸೆಮಿಸ್ಟರ್ ಪರೀಕ್ಷೆಗೆ 750 ರೂ. ಶುಲ್ಕ ಪಾವತಿಸಿದ್ದೇವೆ. ಈಗ 6ನೇ ಸೆಮಿಸ್ಟರ್‌ಗೆ ಶುಲ್ಕ ಹೆಚ್ಚಿಸಿ 950 ರೂ. ಮಾಡಲಾಗಿದೆ. ಅದರ ಜೊತೆಗೆ ಹೆಚ್ಚುವರಿಯಾಗಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇದು ನಮಗೆ ಬಹಳ ಹೊರೆಯಾಗ್ತಿದೆ. 150 ರೂ. ಪಾವತಿಸದಿದ್ದರೆ ಹಾಲ್ ಟಿಕೆಟ್ ನೀಡುವುದಿಲ್ಲ ಎಂದು ಹೆದರಿಸಿದ್ದಾರೆ. ಇದರಿಂದ ನಾವು ಇಕ್ಕಟ್ಟಿನ ಪರಿಸ್ಥಿಗೆ ಸಿಲುಕಿದ್ದೇವೆ” ಎಂದು ತಿಳಿಸಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಸ್ನೇಹಾ ಮಾತನಾಡಿ, “ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ ಈಗ ನಮ್ಮಿಂದ ಶುಲ್ಕ ವಸೂಲಿ ಮಾಡಲಾಗ್ತಿದೆ. ಗ್ರಾಮೀಣ ಬಡ ವಿದ್ಯಾರ್ಥಿಗಳಾದ ನಮಗೆ ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ ಹಣ ಪಾವತಿಸಲು ಸಾಧ್ಯವಿಲ್ಲ. ನಾವು ಹೆಚ್ಚುವರಿ ಹಣ ಪಾವತಿಸುವುದೂ ಇಲ್ಲ. ಯಾವುದೇ ವಿದ್ಯಾರ್ಥಿಯೂ ಹಣ ಪಾವತಿಸಿಲ್ಲ. ಮುಂದಿನ ನಡೆಯ ಬಗ್ಗೆ ನಾವು ಚರ್ಚಿಸುತಿದ್ದೇವೆ” ಎಂದಿದ್ದಾರೆ.

ದೂರವಾಣಿ ಮೂಲಕ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಮೂವರೂ ಕೂಡ “ನಮ್ಮಂತೆ ನೂರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಅವರು “ಇದರಲ್ಲಿ ನಮ್ಮ ಪಾತ್ರವೇನು ಇಲ್ಲ. ವಿಶ್ವವಿದ್ಯಾನಿಲಯದ ಆದೇಶವನ್ನು ನಾವು ಪಾಲಿಸಿದ್ದೇವೆ. ಕೆಎಸ್‌ಹೆಚ್‌ಇಸಿ ಮತ್ತು ವಿವಿ ತರಬೇತಿ ನಡೆಸಿತ್ತು. ಈಗ ಶುಲ್ಕ ವಸೂಲಿ ಮಾಡುವಂತೆ ನಮಗೆ ಸೂಚಿಸಿದೆ. ನಾವು ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ. ಈ ಬಗ್ಗೆ ವಿವಿಯನ್ನೇ ವಿಚಾರಿಸಬೇಕಿದೆ” ಎಂದು ಹೇಳಿದ್ದಾರೆ.

5ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿಲ್ಲ ಎಂಬ ವಿದ್ಯಾರ್ಥಿಗಳ ಆರೋಪದ ಬಗ್ಗೆ ಮಾತನಾಡಿದ ಅವರು ” ಕೋವಿಡ್ ಬಳಿಕ ಶೈಕ್ಷಣಿಕ ವರ್ಷ ಇನ್ನೂ ಹಳಿಗೆ ಬಂದಿಲ್ಲ. ಮುಂದಿನ ವರ್ಷದಿಂದ ಎಲ್ಲವೂ ಹಿಂದಿನ ರೀತಿಗೆ ಮರಳಲಿದೆ. ಜುಲೈ ತಿಂಗಳಲ್ಲಿ ಈ ಶೈಕ್ಷಣಿಕ ವರ್ಷ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನ ವಿದ್ಯಾರ್ಥಿಗಳ ಎಲ್ಲಾ ಫಲಿತಾಂಶ ಪ್ರಕಟಗೊಳ್ಳಲಿದೆ. ಸ್ನಾತಕ್ಕೋತ್ತರ ಪದವಿ ಪ್ರವೇಶಕ್ಕೆ ಯಾವುದೇ ಅಡಚಣೆಯಾಗುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : 7ನೇ ತರಗತಿ ಮಕ್ಕಳಿಗೆ ನಟಿ ತಮನ್ನಾ ಕುರಿತ ಪಾಠ : ಪೋಷಕರಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...