Homeಕರ್ನಾಟಕದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ಎರಡು ವರ್ಷದ ಹಿಂದಿನ ಕಾರ್ಯಕ್ರಮದ ಶುಲ್ಕ ಪಾವತಿಸುವಂತೆ ಈಗ ಸೂಚಿಸಿದ ಕಾಲೇಜು

- Advertisement -
- Advertisement -

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ,ಈಗ ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಇದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

2022ರ ನವೆಂಬರ್ 4 ಮತ್ತು 5ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು (ಕೆಎಸ್‌ಹೆಚ್‌ಇಸಿ) ಮತ್ತು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ಜಂಟಿಯಾಗಿ ‘Financial Education and Investment Awareness Course’ವಿಷಯಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನಡೆಸಿತ್ತು. ಅದರ ಶುಲ್ಕ 150 ರೂಪಾಯಿಯನ್ನು ಪಾವತಿಸುವಂತೆ ಈಗ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

2021-22ನೇ ಸಾಲಿನಲ್ಲಿ ಪ್ರವೇಶ ಪಡೆದು ಪ್ರಸ್ತುತ 6ನೇ ಸೆಮಿಸ್ಟರ್‌ ಬಿಎ, ಬಿಕಾಂ ಮತ್ತು ಬಿಎಸ್ಸಿ ತರಗತಿಗಳನ್ನು ವ್ಯಾಸಂಗ ಮಾಡುತ್ತಿರುವ (ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳಿಗೆ 150 ರೂ. ಪಾವತಿಸುವಂತೆ ಪ್ರಾಂಶುಪಾಲರ ಕಚೇರಿಯಿಂದ 26 ಜೂನ್ 2024ರಂದು ಆದೇಶ ಹೊರಡಿಸಲಾಗಿದೆ.

ಪ್ರಸ್ತುತ ವಿದ್ಯಾರ್ಥಿಗಳು 6ನೇ ಸೆಮಿಸ್ಟರ್‌ ಪರೀಕ್ಷೆಗೆ ಅಣಿಯಾಗಿದ್ದು, ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಹಾಲ್‌ ಟಿಕೆಟ್ ತಡೆ ಹಿಡಿಯುವ ಎಚ್ಚರಿಕೆ ನೀಡಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಬಿಎಸ್ಸಿ ಕೊನೆಯ ಸೆಮಿಸ್ಟರ್ ವಿದ್ಯಾರ್ಥಿ ವಿನಾಯಕ್ ” ಖಾಸಗಿ ಕಾಲೇಜುಗಳಲ್ಲಿ ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ನಾವು ಸರ್ಕಾರಿ ಕಾಲೇಜಿಗೆ ಸೇರಿದ್ದೇವೆ. ಇಲ್ಲೂ ಈ ರೀತಿ ಹೆಚ್ಚುವರಿ ಹಣ ಪಾವತಿಸಲು ಸೂಚಿಸಿದರೆ ಬಡ ವಿದ್ಯಾರ್ಥಿಗಳಾದ ನಾವು ಏನು ಮಾಡುವುದು? ಎಂದು ಅಳಲು ತೋಡಿಕೊಂಡಿದ್ದಾರೆ.

“ಪ್ರಸ್ತುತ 6ನೇ ಸೆಮಿಸ್ಟರ್ ಪರೀಕ್ಷೆ ಹತ್ತಿರ ಬಂದಿದೆ. ಆದರೆ, ನಮಗೆ 5ನೇ ಸೆಮಿಸ್ಟರ್ ಫಲಿತಾಂಶವನ್ನೇ ತಿಳಿಸಿಲ್ಲ. 6ನೇ ಸೆಮಿಸ್ಟರ್ ಪರೀಕ್ಷೆ ಕೂಡ ತಡವಾಗಿ ನಡೆಸಲಾಗ್ತಿದೆ. ಇದರಿಂದ ಸ್ನಾತಕ್ಕೋತ್ತರ ತರಗತಿಗೆ ಪ್ರವೇಶ ಪಡೆಯಲು ನಮಗೆ ಸಮಸ್ಯೆಯಾಗ್ತಿದೆ” ಎಂದಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿ ಮನೋಜ್ ಮಾತನಾಡಿ “ವರ್ಷಕ್ಕೆ 2,700 ರೂಪಾಯಿ ಕಾಲೇಜು ಶುಲ್ಕ ಪಾವತಿಸಿದ್ದೇವೆ. 5ನೇ ಸೆಮಿಸ್ಟರ್ ಪರೀಕ್ಷೆಗೆ 750 ರೂ. ಶುಲ್ಕ ಪಾವತಿಸಿದ್ದೇವೆ. ಈಗ 6ನೇ ಸೆಮಿಸ್ಟರ್‌ಗೆ ಶುಲ್ಕ ಹೆಚ್ಚಿಸಿ 950 ರೂ. ಮಾಡಲಾಗಿದೆ. ಅದರ ಜೊತೆಗೆ ಹೆಚ್ಚುವರಿಯಾಗಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇದು ನಮಗೆ ಬಹಳ ಹೊರೆಯಾಗ್ತಿದೆ. 150 ರೂ. ಪಾವತಿಸದಿದ್ದರೆ ಹಾಲ್ ಟಿಕೆಟ್ ನೀಡುವುದಿಲ್ಲ ಎಂದು ಹೆದರಿಸಿದ್ದಾರೆ. ಇದರಿಂದ ನಾವು ಇಕ್ಕಟ್ಟಿನ ಪರಿಸ್ಥಿಗೆ ಸಿಲುಕಿದ್ದೇವೆ” ಎಂದು ತಿಳಿಸಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಸ್ನೇಹಾ ಮಾತನಾಡಿ, “ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ ಈಗ ನಮ್ಮಿಂದ ಶುಲ್ಕ ವಸೂಲಿ ಮಾಡಲಾಗ್ತಿದೆ. ಗ್ರಾಮೀಣ ಬಡ ವಿದ್ಯಾರ್ಥಿಗಳಾದ ನಮಗೆ ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ ಹಣ ಪಾವತಿಸಲು ಸಾಧ್ಯವಿಲ್ಲ. ನಾವು ಹೆಚ್ಚುವರಿ ಹಣ ಪಾವತಿಸುವುದೂ ಇಲ್ಲ. ಯಾವುದೇ ವಿದ್ಯಾರ್ಥಿಯೂ ಹಣ ಪಾವತಿಸಿಲ್ಲ. ಮುಂದಿನ ನಡೆಯ ಬಗ್ಗೆ ನಾವು ಚರ್ಚಿಸುತಿದ್ದೇವೆ” ಎಂದಿದ್ದಾರೆ.

ದೂರವಾಣಿ ಮೂಲಕ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಮೂವರೂ ಕೂಡ “ನಮ್ಮಂತೆ ನೂರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಅವರು “ಇದರಲ್ಲಿ ನಮ್ಮ ಪಾತ್ರವೇನು ಇಲ್ಲ. ವಿಶ್ವವಿದ್ಯಾನಿಲಯದ ಆದೇಶವನ್ನು ನಾವು ಪಾಲಿಸಿದ್ದೇವೆ. ಕೆಎಸ್‌ಹೆಚ್‌ಇಸಿ ಮತ್ತು ವಿವಿ ತರಬೇತಿ ನಡೆಸಿತ್ತು. ಈಗ ಶುಲ್ಕ ವಸೂಲಿ ಮಾಡುವಂತೆ ನಮಗೆ ಸೂಚಿಸಿದೆ. ನಾವು ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ. ಈ ಬಗ್ಗೆ ವಿವಿಯನ್ನೇ ವಿಚಾರಿಸಬೇಕಿದೆ” ಎಂದು ಹೇಳಿದ್ದಾರೆ.

5ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿಲ್ಲ ಎಂಬ ವಿದ್ಯಾರ್ಥಿಗಳ ಆರೋಪದ ಬಗ್ಗೆ ಮಾತನಾಡಿದ ಅವರು ” ಕೋವಿಡ್ ಬಳಿಕ ಶೈಕ್ಷಣಿಕ ವರ್ಷ ಇನ್ನೂ ಹಳಿಗೆ ಬಂದಿಲ್ಲ. ಮುಂದಿನ ವರ್ಷದಿಂದ ಎಲ್ಲವೂ ಹಿಂದಿನ ರೀತಿಗೆ ಮರಳಲಿದೆ. ಜುಲೈ ತಿಂಗಳಲ್ಲಿ ಈ ಶೈಕ್ಷಣಿಕ ವರ್ಷ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನ ವಿದ್ಯಾರ್ಥಿಗಳ ಎಲ್ಲಾ ಫಲಿತಾಂಶ ಪ್ರಕಟಗೊಳ್ಳಲಿದೆ. ಸ್ನಾತಕ್ಕೋತ್ತರ ಪದವಿ ಪ್ರವೇಶಕ್ಕೆ ಯಾವುದೇ ಅಡಚಣೆಯಾಗುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : 7ನೇ ತರಗತಿ ಮಕ್ಕಳಿಗೆ ನಟಿ ತಮನ್ನಾ ಕುರಿತ ಪಾಠ : ಪೋಷಕರಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...