Homeಕರ್ನಾಟಕದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ಎರಡು ವರ್ಷದ ಹಿಂದಿನ ಕಾರ್ಯಕ್ರಮದ ಶುಲ್ಕ ಪಾವತಿಸುವಂತೆ ಈಗ ಸೂಚಿಸಿದ ಕಾಲೇಜು

- Advertisement -
- Advertisement -

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ,ಈಗ ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಇದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

2022ರ ನವೆಂಬರ್ 4 ಮತ್ತು 5ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು (ಕೆಎಸ್‌ಹೆಚ್‌ಇಸಿ) ಮತ್ತು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ಜಂಟಿಯಾಗಿ ‘Financial Education and Investment Awareness Course’ವಿಷಯಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನಡೆಸಿತ್ತು. ಅದರ ಶುಲ್ಕ 150 ರೂಪಾಯಿಯನ್ನು ಪಾವತಿಸುವಂತೆ ಈಗ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

2021-22ನೇ ಸಾಲಿನಲ್ಲಿ ಪ್ರವೇಶ ಪಡೆದು ಪ್ರಸ್ತುತ 6ನೇ ಸೆಮಿಸ್ಟರ್‌ ಬಿಎ, ಬಿಕಾಂ ಮತ್ತು ಬಿಎಸ್ಸಿ ತರಗತಿಗಳನ್ನು ವ್ಯಾಸಂಗ ಮಾಡುತ್ತಿರುವ (ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳಿಗೆ 150 ರೂ. ಪಾವತಿಸುವಂತೆ ಪ್ರಾಂಶುಪಾಲರ ಕಚೇರಿಯಿಂದ 26 ಜೂನ್ 2024ರಂದು ಆದೇಶ ಹೊರಡಿಸಲಾಗಿದೆ.

ಪ್ರಸ್ತುತ ವಿದ್ಯಾರ್ಥಿಗಳು 6ನೇ ಸೆಮಿಸ್ಟರ್‌ ಪರೀಕ್ಷೆಗೆ ಅಣಿಯಾಗಿದ್ದು, ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಹಾಲ್‌ ಟಿಕೆಟ್ ತಡೆ ಹಿಡಿಯುವ ಎಚ್ಚರಿಕೆ ನೀಡಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಬಿಎಸ್ಸಿ ಕೊನೆಯ ಸೆಮಿಸ್ಟರ್ ವಿದ್ಯಾರ್ಥಿ ವಿನಾಯಕ್ ” ಖಾಸಗಿ ಕಾಲೇಜುಗಳಲ್ಲಿ ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ನಾವು ಸರ್ಕಾರಿ ಕಾಲೇಜಿಗೆ ಸೇರಿದ್ದೇವೆ. ಇಲ್ಲೂ ಈ ರೀತಿ ಹೆಚ್ಚುವರಿ ಹಣ ಪಾವತಿಸಲು ಸೂಚಿಸಿದರೆ ಬಡ ವಿದ್ಯಾರ್ಥಿಗಳಾದ ನಾವು ಏನು ಮಾಡುವುದು? ಎಂದು ಅಳಲು ತೋಡಿಕೊಂಡಿದ್ದಾರೆ.

“ಪ್ರಸ್ತುತ 6ನೇ ಸೆಮಿಸ್ಟರ್ ಪರೀಕ್ಷೆ ಹತ್ತಿರ ಬಂದಿದೆ. ಆದರೆ, ನಮಗೆ 5ನೇ ಸೆಮಿಸ್ಟರ್ ಫಲಿತಾಂಶವನ್ನೇ ತಿಳಿಸಿಲ್ಲ. 6ನೇ ಸೆಮಿಸ್ಟರ್ ಪರೀಕ್ಷೆ ಕೂಡ ತಡವಾಗಿ ನಡೆಸಲಾಗ್ತಿದೆ. ಇದರಿಂದ ಸ್ನಾತಕ್ಕೋತ್ತರ ತರಗತಿಗೆ ಪ್ರವೇಶ ಪಡೆಯಲು ನಮಗೆ ಸಮಸ್ಯೆಯಾಗ್ತಿದೆ” ಎಂದಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿ ಮನೋಜ್ ಮಾತನಾಡಿ “ವರ್ಷಕ್ಕೆ 2,700 ರೂಪಾಯಿ ಕಾಲೇಜು ಶುಲ್ಕ ಪಾವತಿಸಿದ್ದೇವೆ. 5ನೇ ಸೆಮಿಸ್ಟರ್ ಪರೀಕ್ಷೆಗೆ 750 ರೂ. ಶುಲ್ಕ ಪಾವತಿಸಿದ್ದೇವೆ. ಈಗ 6ನೇ ಸೆಮಿಸ್ಟರ್‌ಗೆ ಶುಲ್ಕ ಹೆಚ್ಚಿಸಿ 950 ರೂ. ಮಾಡಲಾಗಿದೆ. ಅದರ ಜೊತೆಗೆ ಹೆಚ್ಚುವರಿಯಾಗಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇದು ನಮಗೆ ಬಹಳ ಹೊರೆಯಾಗ್ತಿದೆ. 150 ರೂ. ಪಾವತಿಸದಿದ್ದರೆ ಹಾಲ್ ಟಿಕೆಟ್ ನೀಡುವುದಿಲ್ಲ ಎಂದು ಹೆದರಿಸಿದ್ದಾರೆ. ಇದರಿಂದ ನಾವು ಇಕ್ಕಟ್ಟಿನ ಪರಿಸ್ಥಿಗೆ ಸಿಲುಕಿದ್ದೇವೆ” ಎಂದು ತಿಳಿಸಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಸ್ನೇಹಾ ಮಾತನಾಡಿ, “ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ ಈಗ ನಮ್ಮಿಂದ ಶುಲ್ಕ ವಸೂಲಿ ಮಾಡಲಾಗ್ತಿದೆ. ಗ್ರಾಮೀಣ ಬಡ ವಿದ್ಯಾರ್ಥಿಗಳಾದ ನಮಗೆ ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ ಹಣ ಪಾವತಿಸಲು ಸಾಧ್ಯವಿಲ್ಲ. ನಾವು ಹೆಚ್ಚುವರಿ ಹಣ ಪಾವತಿಸುವುದೂ ಇಲ್ಲ. ಯಾವುದೇ ವಿದ್ಯಾರ್ಥಿಯೂ ಹಣ ಪಾವತಿಸಿಲ್ಲ. ಮುಂದಿನ ನಡೆಯ ಬಗ್ಗೆ ನಾವು ಚರ್ಚಿಸುತಿದ್ದೇವೆ” ಎಂದಿದ್ದಾರೆ.

ದೂರವಾಣಿ ಮೂಲಕ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಮೂವರೂ ಕೂಡ “ನಮ್ಮಂತೆ ನೂರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಅವರು “ಇದರಲ್ಲಿ ನಮ್ಮ ಪಾತ್ರವೇನು ಇಲ್ಲ. ವಿಶ್ವವಿದ್ಯಾನಿಲಯದ ಆದೇಶವನ್ನು ನಾವು ಪಾಲಿಸಿದ್ದೇವೆ. ಕೆಎಸ್‌ಹೆಚ್‌ಇಸಿ ಮತ್ತು ವಿವಿ ತರಬೇತಿ ನಡೆಸಿತ್ತು. ಈಗ ಶುಲ್ಕ ವಸೂಲಿ ಮಾಡುವಂತೆ ನಮಗೆ ಸೂಚಿಸಿದೆ. ನಾವು ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ. ಈ ಬಗ್ಗೆ ವಿವಿಯನ್ನೇ ವಿಚಾರಿಸಬೇಕಿದೆ” ಎಂದು ಹೇಳಿದ್ದಾರೆ.

5ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿಲ್ಲ ಎಂಬ ವಿದ್ಯಾರ್ಥಿಗಳ ಆರೋಪದ ಬಗ್ಗೆ ಮಾತನಾಡಿದ ಅವರು ” ಕೋವಿಡ್ ಬಳಿಕ ಶೈಕ್ಷಣಿಕ ವರ್ಷ ಇನ್ನೂ ಹಳಿಗೆ ಬಂದಿಲ್ಲ. ಮುಂದಿನ ವರ್ಷದಿಂದ ಎಲ್ಲವೂ ಹಿಂದಿನ ರೀತಿಗೆ ಮರಳಲಿದೆ. ಜುಲೈ ತಿಂಗಳಲ್ಲಿ ಈ ಶೈಕ್ಷಣಿಕ ವರ್ಷ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನ ವಿದ್ಯಾರ್ಥಿಗಳ ಎಲ್ಲಾ ಫಲಿತಾಂಶ ಪ್ರಕಟಗೊಳ್ಳಲಿದೆ. ಸ್ನಾತಕ್ಕೋತ್ತರ ಪದವಿ ಪ್ರವೇಶಕ್ಕೆ ಯಾವುದೇ ಅಡಚಣೆಯಾಗುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : 7ನೇ ತರಗತಿ ಮಕ್ಕಳಿಗೆ ನಟಿ ತಮನ್ನಾ ಕುರಿತ ಪಾಠ : ಪೋಷಕರಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಅಳವಂಡಿ ತಾಲೂಕಿನ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...