Homeಕರ್ನಾಟಕದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ದೊಡ್ಡಬಳ್ಳಾಪುರ| ಸಿಬ್ಬಂದಿ ತರಬೇತಿಗೆ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ: ಆಕ್ರೋಶಕ್ಕೆ ಕಾರಣವಾದ ಪ್ರಾಂಶುಪಾಲರ ಆದೇಶ

ಎರಡು ವರ್ಷದ ಹಿಂದಿನ ಕಾರ್ಯಕ್ರಮದ ಶುಲ್ಕ ಪಾವತಿಸುವಂತೆ ಈಗ ಸೂಚಿಸಿದ ಕಾಲೇಜು

- Advertisement -
- Advertisement -

ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ,ಈಗ ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಇದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

2022ರ ನವೆಂಬರ್ 4 ಮತ್ತು 5ರಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು (ಕೆಎಸ್‌ಹೆಚ್‌ಇಸಿ) ಮತ್ತು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ಜಂಟಿಯಾಗಿ ‘Financial Education and Investment Awareness Course’ವಿಷಯಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನಡೆಸಿತ್ತು. ಅದರ ಶುಲ್ಕ 150 ರೂಪಾಯಿಯನ್ನು ಪಾವತಿಸುವಂತೆ ಈಗ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

2021-22ನೇ ಸಾಲಿನಲ್ಲಿ ಪ್ರವೇಶ ಪಡೆದು ಪ್ರಸ್ತುತ 6ನೇ ಸೆಮಿಸ್ಟರ್‌ ಬಿಎ, ಬಿಕಾಂ ಮತ್ತು ಬಿಎಸ್ಸಿ ತರಗತಿಗಳನ್ನು ವ್ಯಾಸಂಗ ಮಾಡುತ್ತಿರುವ (ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳಿಗೆ 150 ರೂ. ಪಾವತಿಸುವಂತೆ ಪ್ರಾಂಶುಪಾಲರ ಕಚೇರಿಯಿಂದ 26 ಜೂನ್ 2024ರಂದು ಆದೇಶ ಹೊರಡಿಸಲಾಗಿದೆ.

ಪ್ರಸ್ತುತ ವಿದ್ಯಾರ್ಥಿಗಳು 6ನೇ ಸೆಮಿಸ್ಟರ್‌ ಪರೀಕ್ಷೆಗೆ ಅಣಿಯಾಗಿದ್ದು, ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಹಾಲ್‌ ಟಿಕೆಟ್ ತಡೆ ಹಿಡಿಯುವ ಎಚ್ಚರಿಕೆ ನೀಡಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಬಿಎಸ್ಸಿ ಕೊನೆಯ ಸೆಮಿಸ್ಟರ್ ವಿದ್ಯಾರ್ಥಿ ವಿನಾಯಕ್ ” ಖಾಸಗಿ ಕಾಲೇಜುಗಳಲ್ಲಿ ಶುಲ್ಕ ಪಾವತಿಸಲು ಸಾಧ್ಯವಿಲ್ಲ ಎಂದು ನಾವು ಸರ್ಕಾರಿ ಕಾಲೇಜಿಗೆ ಸೇರಿದ್ದೇವೆ. ಇಲ್ಲೂ ಈ ರೀತಿ ಹೆಚ್ಚುವರಿ ಹಣ ಪಾವತಿಸಲು ಸೂಚಿಸಿದರೆ ಬಡ ವಿದ್ಯಾರ್ಥಿಗಳಾದ ನಾವು ಏನು ಮಾಡುವುದು? ಎಂದು ಅಳಲು ತೋಡಿಕೊಂಡಿದ್ದಾರೆ.

“ಪ್ರಸ್ತುತ 6ನೇ ಸೆಮಿಸ್ಟರ್ ಪರೀಕ್ಷೆ ಹತ್ತಿರ ಬಂದಿದೆ. ಆದರೆ, ನಮಗೆ 5ನೇ ಸೆಮಿಸ್ಟರ್ ಫಲಿತಾಂಶವನ್ನೇ ತಿಳಿಸಿಲ್ಲ. 6ನೇ ಸೆಮಿಸ್ಟರ್ ಪರೀಕ್ಷೆ ಕೂಡ ತಡವಾಗಿ ನಡೆಸಲಾಗ್ತಿದೆ. ಇದರಿಂದ ಸ್ನಾತಕ್ಕೋತ್ತರ ತರಗತಿಗೆ ಪ್ರವೇಶ ಪಡೆಯಲು ನಮಗೆ ಸಮಸ್ಯೆಯಾಗ್ತಿದೆ” ಎಂದಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿ ಮನೋಜ್ ಮಾತನಾಡಿ “ವರ್ಷಕ್ಕೆ 2,700 ರೂಪಾಯಿ ಕಾಲೇಜು ಶುಲ್ಕ ಪಾವತಿಸಿದ್ದೇವೆ. 5ನೇ ಸೆಮಿಸ್ಟರ್ ಪರೀಕ್ಷೆಗೆ 750 ರೂ. ಶುಲ್ಕ ಪಾವತಿಸಿದ್ದೇವೆ. ಈಗ 6ನೇ ಸೆಮಿಸ್ಟರ್‌ಗೆ ಶುಲ್ಕ ಹೆಚ್ಚಿಸಿ 950 ರೂ. ಮಾಡಲಾಗಿದೆ. ಅದರ ಜೊತೆಗೆ ಹೆಚ್ಚುವರಿಯಾಗಿ 150 ರೂ. ಪಾವತಿಸುವಂತೆ ಸೂಚಿಸಲಾಗಿದೆ. ಇದು ನಮಗೆ ಬಹಳ ಹೊರೆಯಾಗ್ತಿದೆ. 150 ರೂ. ಪಾವತಿಸದಿದ್ದರೆ ಹಾಲ್ ಟಿಕೆಟ್ ನೀಡುವುದಿಲ್ಲ ಎಂದು ಹೆದರಿಸಿದ್ದಾರೆ. ಇದರಿಂದ ನಾವು ಇಕ್ಕಟ್ಟಿನ ಪರಿಸ್ಥಿಗೆ ಸಿಲುಕಿದ್ದೇವೆ” ಎಂದು ತಿಳಿಸಿದ್ದಾರೆ.

ಬಿಎ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಸ್ನೇಹಾ ಮಾತನಾಡಿ, “ಎರಡು ವರ್ಷದ ಹಿಂದೆ ಸಿಬ್ಬಂದಿಗೆ ತರಬೇತಿ ನಡೆಸಿದ್ದಕ್ಕೆ ಈಗ ನಮ್ಮಿಂದ ಶುಲ್ಕ ವಸೂಲಿ ಮಾಡಲಾಗ್ತಿದೆ. ಗ್ರಾಮೀಣ ಬಡ ವಿದ್ಯಾರ್ಥಿಗಳಾದ ನಮಗೆ ಪರೀಕ್ಷಾ ಶುಲ್ಕದ ಜೊತೆಗೆ ಹೆಚ್ಚುವರಿ ಹಣ ಪಾವತಿಸಲು ಸಾಧ್ಯವಿಲ್ಲ. ನಾವು ಹೆಚ್ಚುವರಿ ಹಣ ಪಾವತಿಸುವುದೂ ಇಲ್ಲ. ಯಾವುದೇ ವಿದ್ಯಾರ್ಥಿಯೂ ಹಣ ಪಾವತಿಸಿಲ್ಲ. ಮುಂದಿನ ನಡೆಯ ಬಗ್ಗೆ ನಾವು ಚರ್ಚಿಸುತಿದ್ದೇವೆ” ಎಂದಿದ್ದಾರೆ.

ದೂರವಾಣಿ ಮೂಲಕ ನಾನುಗೌರಿ.ಕಾಂ ಜೊತೆ ಮಾತನಾಡಿರುವ ಮೂವರೂ ಕೂಡ “ನಮ್ಮಂತೆ ನೂರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಲೇಜಿನ ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಅವರು “ಇದರಲ್ಲಿ ನಮ್ಮ ಪಾತ್ರವೇನು ಇಲ್ಲ. ವಿಶ್ವವಿದ್ಯಾನಿಲಯದ ಆದೇಶವನ್ನು ನಾವು ಪಾಲಿಸಿದ್ದೇವೆ. ಕೆಎಸ್‌ಹೆಚ್‌ಇಸಿ ಮತ್ತು ವಿವಿ ತರಬೇತಿ ನಡೆಸಿತ್ತು. ಈಗ ಶುಲ್ಕ ವಸೂಲಿ ಮಾಡುವಂತೆ ನಮಗೆ ಸೂಚಿಸಿದೆ. ನಾವು ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ. ಈ ಬಗ್ಗೆ ವಿವಿಯನ್ನೇ ವಿಚಾರಿಸಬೇಕಿದೆ” ಎಂದು ಹೇಳಿದ್ದಾರೆ.

5ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿಲ್ಲ ಎಂಬ ವಿದ್ಯಾರ್ಥಿಗಳ ಆರೋಪದ ಬಗ್ಗೆ ಮಾತನಾಡಿದ ಅವರು ” ಕೋವಿಡ್ ಬಳಿಕ ಶೈಕ್ಷಣಿಕ ವರ್ಷ ಇನ್ನೂ ಹಳಿಗೆ ಬಂದಿಲ್ಲ. ಮುಂದಿನ ವರ್ಷದಿಂದ ಎಲ್ಲವೂ ಹಿಂದಿನ ರೀತಿಗೆ ಮರಳಲಿದೆ. ಜುಲೈ ತಿಂಗಳಲ್ಲಿ ಈ ಶೈಕ್ಷಣಿಕ ವರ್ಷ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನ ವಿದ್ಯಾರ್ಥಿಗಳ ಎಲ್ಲಾ ಫಲಿತಾಂಶ ಪ್ರಕಟಗೊಳ್ಳಲಿದೆ. ಸ್ನಾತಕ್ಕೋತ್ತರ ಪದವಿ ಪ್ರವೇಶಕ್ಕೆ ಯಾವುದೇ ಅಡಚಣೆಯಾಗುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : 7ನೇ ತರಗತಿ ಮಕ್ಕಳಿಗೆ ನಟಿ ತಮನ್ನಾ ಕುರಿತ ಪಾಠ : ಪೋಷಕರಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...