Homeಕರ್ನಾಟಕದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

- Advertisement -
- Advertisement -

ಹಾದ್ರಿಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾದ ಹಾದ್ರಿಪುರ ಗ್ರಾಮದಲ್ಲಿ ಚರಂಡಿ ನಿರ್ಮಿಸಿ ಎರಡೂವರೆ ದಶಕಕ್ಕೂ ಹೆಚ್ಚಿನ ಕಾಲವಾಗಿದ್ದು, ಅಧಿಕಾರಿಗಳು ಮತ್ತು ಸ್ಥಳೀಯ ಸದಸ್ಯರ ನಿರ್ಲಕ್ಷ್ಯದಿಂದ ದಲಿತರು ವಾಸಿಸುವ ಪ್ರದೇಶದಲ್ಲಿ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದರೂ, ದಲಿತರು ವಾಸಿಸುವ ಪ್ರದೇಶ ಎಂಬ ಕಾರಣಕ್ಕೆ ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ದಲಿತ ನಿವಾಸಿಗಳು ಆರೋಪಿಸಿದ್ದಾರೆ. ದಲಿತರು ವಾಸಿಸುವ

ರಾಜ್ಯ ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಹಾದ್ರಿಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ಸುಮಾರು 150ಕ್ಕೂ ಹೆಚ್ಚು ಮನೆಗಳಿವೆ. 25 ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ತಾತ್ಕಾಲಿಕವಾಗಿ ‘ವಿ’ ಆಕಾರದಲ್ಲಿ ಚರಂಡಿ ನಿರ್ಮಿಸಲಾಗಿತ್ತು. ಗ್ರಾಮ ಪಂಚಾಯಿತಿಯಿಂದ ಸೂಕ್ತ ನಿರ್ವಹಣೆ ಇಲ್ಲದ ಕಾರಣಕ್ಕೆ ಬಹುತೇಕ ಕಡೆ ಹೂಳು ತುಂಬಿಕೊಂಡಿದೆ. ಇದರಿಂದಾಗಿ, ಚರಂಡಿಗಳು ಕಟ್ಟಿಕೊಂಡು ಸೊಳ್ಳೆಗಳ ಹೆಚ್ಳಳಕ್ಕೆ ಕಾರಣವಾಗಿದೆ. ಕೆಲವೆಡೆ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ನಿವಾಸಿಗಳು ಮೂಗು ಮುಚ್ಚಿಕೊಂಡು ಸಹಿಸಿಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಂಚಾಯಿತಿ ಅಧಿಕಾರಿಗಳು-ಅಧ್ಯಕ್ಷರ ನಿರ್ಲಕ್ಷ್ಯ; ಡೆಂಗ್ಯೂ-ಮಲೇರಿಯಾಕ್ಕೆ ಆಹ್ವಾನ

‘ಚರಂಡಿ ನಿರ್ಮಿಸಿ ಹಲವು ವರ್ಷಗಳೆ ಕಳೆದಿವೆ, ಹೊಸ ಚರಂಡಿ ನಿರ್ಮಿಸಿ’ ಎಂದು ಜನರು ಹಲವು ಭಾರಿ ಪಂಚಾಯಿತಿಯಲ್ಲಿ ಮನವಿ ಮಾಡಿದ್ದಾರೆ ಎಂದು ಹಾದ್ರಿಪುರ ನಿವಾಸಿ ಮಂಜುಳ ಅವರು ಹೇಳಿದರು. “ಆದರೆ, ಈವರೆಗೆ ಸಂಬಂಧಪಟ್ಟವರಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ  ಬಂದಿಲ್ಲ. ಹೊಸ ಚರಂಡಿ ನಿರ್ಮಿಸುವುದಿರಲಿ, ಹಳೆ ಚರಂಡಿಗಳ ಹೂಳನ್ನೂ ತೆಗೆದಿಲ್ಲ. ಇದರಿಂದಾಗಿ ಕಳೆದ ವರ್ಷ ಹಲವು ಸಣ್ಣ ಮಕ್ಕಳು ಡೆಂಗ್ಯೂ, ಟೈಪಾಯ್ಡ್‌ನಂತಹ ಜ್ವರಕ್ಕೆ ಒಳಗಾಗಿದ್ದರು. ಈ ಬಗ್ಗೆ ಸಹ ಪಂಚಾಯಿತಿ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ” ಎಂದು ಅವರು ಹೇಳಿದರು. ದಲಿತರು ವಾಸಿಸುವ

ಈ ಬಗ್ಗೆ ಮಾತನಾಡಿದ ಗ್ರಾಮದ ನಿವಾಸಿ ರವಿಕುಮಾರ್, “ಕಳೆದ ಒಂದು ವರ್ಷದಿಂದ ನಮ್ಮ ಮನೆ ಮುಂದೆ ಚರಂಡಿ ನೀರು ಕಟ್ಟಿಕೊಂಡು ರಸ್ತೆಗೆ ಬರುತ್ತಿದೆ. ಹಲವರು ತಾವು ಮನೆ ನಿರ್ಮಿಸುವ ಸಮಯದಲ್ಲಿ ಚರಂಡಿಯನ್ನು ನೆಲಸಮ ಮಾಡಿದ್ದಾರೆ. ಮಳೆ ಬಂದರೆ ಮೊಳಕಾಲುದ್ದ ನೀರು ನಿಲ್ಲುತ್ತದೆ. ಇದೇ ಪ್ರದೇಶದಲ್ಲಿ ಸುಮಾರು 10ಕ್ಕೂ ಹೆಚ್ಚು ಜನ ಸಣ್ಣಸಣ್ಣ ಮಕ್ಕಳು ಹಾಗೂ ವೃದ್ಧರಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಅಧ್ಯಕ್ಷರ ಗಮನಕ್ಕೆ ತಂದಿದ್ದು, ವಾಟ್ಸಾಪ್ ಮೂಲಕ ಸಮಸ್ಯೆಯ ಫೋಟೋ ಕಳುಹಿಸಿದ್ದೇನೆ. ಇಬ್ಬರೂ ಸಹ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಗ್ರಾಮ ಪಂಚಾಯಿಯಲ್ಲಿ ‘ಇ’ ಖಾತೆ ಹಾಗೂ ಕಂದಾಯ ಸಂಗ್ರಹ ಬಿಟ್ಟು ಬೇರೆ ಕೆಲಸಗಳೇ ಆಗುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಅಧ್ಯಕ್ಷರು ‘ನಮ್ಮ ಬಳಿ ಚರಂಡಿ ನಿರ್ಮಿಸುವಷ್ಟು ಅನುದಾನ ಇಲ್ಲ’ ಎಂದು ಗದರಿಸಿ ಕಳುಹಿಸುತ್ತಾರೆ” ಎಂದು ತಮ್ಮ ಅಸಹಾಯಕತೆ ತೋಡಿಕೊಂಡರು.

“ನಮ್ಮದೇ ಪಂಚಾಯಿತಿಯ ಬೇರೆ ಊರಿನ ಸದಸ್ಯರು ಅನುದಾನ ಬಿಡುಗಡೆ ಮಾಡಿಸಿಕೊಂಡು ಅಭಿವೃದ್ಧಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ, ನಮ್ಮ ಊರಿನ ಮೂವರು ಸದಸ್ಯರಿಗೆ ಗ್ರಾಮದ ಮೇಲೆ ಕಾಳಜಿ ಇಲ್ಲ. ನಮ್ಮ ಊರಿನ ಸದಸ್ಯರೇ ಈಗ ಅಧ್ಯಕ್ಷರಾಗಿದ್ದರೂ ಪ್ರಯೋಜನವಾಗುತ್ತಿಲ್ಲ. ಮುಖ್ಯವಾಗಿ, ಪ್ರಬಲ ಜಾತಿಗೆ ಸೇರಿದ ಸದಸ್ಯರು ದಲಿತರ ಪ್ರದೇಶವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ” ಎಂದು ಹೇಳಿದರು.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಪಿಡಿಒ ಶಿವಾನಂದ್, ”ಅಲ್ಲಿ ಚರಂಡಿ ಮಾಡಿದರೆ ಸಮಸ್ಯೆ ಪರಿಹಾರ ಆಗುತ್ತದೆ. ಈಗಿರುವ ಚರಂಡಿ ಮೇಲೆ ಕೆಲ ನಿವಾಸಿಗಳು ಕಲ್ಲಿನ ಚಪ್ಪಡಿ ಕಲ್ಲು ಹಾಕಿದ್ದಾರೆ. ಅಲ್ಲಿ ಸ್ವಚ್ಛತೆ ಮಾಡಲು ನಮಗೆ ಅವಕಾಶ ಸಿಗುವುದಿಲ್ಲ. ಅವರವರ ಮನೆ ಮುಂದಿನ ಚಪ್ಪಡಿ ತೆರವುಗೊಳಿಸಕೊಟ್ಟರೆ ನಾವು ಕೆಲಸ ಮಾಡಲು ಸಾಧ್ಯ. ಚಪ್ಪಡಿ ಇಲ್ಲದಿರುವ ಕಡೆ ನಾವು ಸ್ವಚ್ಛ ಮಾಡುತ್ತಿದ್ದೇವೆ. ಚಪ್ಪಡಿ ಇರುವ ಕಡೆ ನಿವಾಸಿಗಳೆ ನಮಗೆ ಸಹಾಯ ಮಾಡಬೇಕು” ಎಂದು ಹೇಳಿದರು.

“ಸಮಸ್ಯೆ ನಮಗೆ ಮನವರಿಕೆ ಆಗಿದೆ. ಮುಂದೆ ಅಲ್ಲಿ ಸಿಸಿ ಚರಂಡಿ ನಿರ್ಮಿಸಬೇಕು. ಮುಂದಿನ ದಿನಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ. ಆದರೆ, ರಸ್ರೆಗಳು ಅಲ್ಲಿ ಕಿರಿದಾಗಿದ್ದು ಸಿಸಿ ಚರಂಡಿ ನಿರ್ಮಿಸುವಷ್ಟು ಸ್ಥಳಾವಕಾಶವಿಲ್ಲ. ಸಮಸ್ಯೆ ಇರುವ ಜಾಗದಲ್ಲಿ ಚರಂಡಿ ನಿರ್ಮಿಸಬಹುದು. ಈ ಬಗ್ಗೆ ಸ್ಥಳೀಯ ನಿವಾಸಿಗಳ ಗಮನಕ್ಕೆ ತಂದಿದ್ದೇನೆ. ದಲಿತರ ಪ್ರದೇಶ ಎನ್ನುವ ಕಾರಣಕ್ಕೆ ನಿರ್ಲಕ್ಷ್ಯ ಮಾಡುತ್ತಿಲ್ಲ” ಎಂದು ನಾನುಗೌರಿ.ಕಾಂಗೆ ಅವರು ಹೇಳಿದರು.

ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಸ್ ಮಾತನಾಡಿ, “ಈ ಸಮಸ್ಯೆ ನಮ್ಮ ಗಮನಕ್ಕೆ ಬಂದಿವೆ. ಚರಂಡಿ ಮೇಲೆ ಚಪ್ಪಡಿ ಹಾಕಿರುವುದಕ್ಕೆ ಅದು ಬ್ಲಾಕ್ ಆಗಿದೆ. ನಾವು ಸ್ಕ್ಯಾವೆಜಿಂಗ್ ಮಿಷನ್ ಮೂಲಕ ಅದನ್ನು ಸ್ವಚ್ಛ ಮಾಡಲು ಯೋಜಿಸುತ್ತಾ ಇದ್ದೇವೆ. ಆದಷ್ಟು ಬೇಗನೆ ಸಮಸ್ಯೆಯನ್ನು ಬಗೆಹರಿಸುತ್ತೇವೆ. ನಮ್ಮದು ‘ಸಿ’ ಗ್ರೇಡ್ ಪಂಚಾಯತಿಯಾಗಿದ್ದು, ಸರ್ಕಾರದಿಂದ ಅನುದಾನ ಬರುತ್ತಿಲ್ಲ. ಅನುದಾನಗಳು ಬಂದರೆ ಹೊಸದಾಗಿ ಚರಂಡಿ ನಿರ್ಮಿಸಿ ಶಾಸ್ವತ ಪರಿಹಾರ ಮಾಡುತ್ತೇವೆ” ಎಂದು ಹೇಳಿದರು. ದಲಿತರು ವಾಸಿಸುವ ಪ್ರದೇಶ ಎನ್ನುವ ಕಾರಣಕ್ಕೆ ಯಾವುದೆ ನಿರ್ಲಕ್ಷ್ಯ ಮಾಡುತ್ತಿಲ್ಲ, ಅಂತಹ ಆರೋಪಗಳು ಸತ್ಯಕ್ಕೆ ದೂರವಾದ ಮಾತುಗಳಾಗಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: 7 ಶಿಶುಗಳನ್ನು ರಕ್ಷಿಸಿ, ತನ್ನದೇ ಅವಳಿ ಮಕ್ಕಳನ್ನು ಕಳೆದುಕೊಂಡ ಯಾಕೂಬ್ ಮನ್ಸೂರಿ

ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: 7 ಶಿಶುಗಳನ್ನು ರಕ್ಷಿಸಿ, ತನ್ನದೇ ಅವಳಿ ಮಕ್ಕಳನ್ನು ಕಳೆದುಕೊಂಡ ಯಾಕೂಬ್ ಮನ್ಸೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...